ಮುಂಬೈ: ಬಿಜೆಪಿ ಸಂಸದೆ ಹಾಗೂ ಮಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಸಲ್ಲಿಸಿದ್ದ ಅರ್ಜಿಯನ್ನು ಎನ್ಐಎ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಸ್ಫೋಟದ ಕುರಿತು ವಿಚಾರಣೆ ಸಮಯದಲ್ಲಿ ಪ್ರತಿಬಾರಿಯೂ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ಎನ್ಐಎ ವಿಶೇಷ ನ್ಯಾಯಾಲಯ ತಿಸ್ಕರಿಸಿದೆ.
ಪ್ರಗ್ಯಾ ಸಿಂಗ್ ಠಾಕೂರ್ ಹಾಗೂ ಇತರ ಆರೋಪಿಗಳು ವಾರಕ್ಕೊಂದು ಬಾರಿ ಹಾಜರಿರುವಂತೆ ನ್ಯಾಯಾಲಯ ನಿರ್ದೇಶಿಸಿತ್ತು. ಆದ್ರೆ ಗುರುವಾರ ಮಾತ್ರ ಪ್ರಜ್ಞಾ ಸಿಂಗ್ ಹಾಜರಿಗೆ ನ್ಯಾಯಾಲಯ ವಿನಾಯ್ತಿಯನ್ನು ನೀಡಿತ್ತು.
ಅನಾರೋಗ್ಯ, ಭೋಪಾಲ್ನಿಂದ ಮುಂಬೈಗೆ ಪ್ರಯಾಣ ಮತ್ತು ಸಂಸದೆಯ ಭದ್ರತೆ ದೃಷ್ಟಯಿಂದ ವಿಚಾರಣೆಗೆ ಪ್ರತಿ ಬಾರಿ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಪ್ರಗ್ಯಾ ಅವರು ಅರ್ಜಿ ಸಲ್ಲಿಸಿದ್ದರು. ಸಂಸತ್ ಅಧಿವೇಶನ ನಡೆಯುತ್ತಿರುವ ಹಿನ್ನೆಲೆ ಅಧಿವೇಶನಕ್ಕೆ ಹಾಜರಾಗದಿದ್ದರೆ ವಿಪ್ ಜಾರಿಗೊಳಿಸಲಾಗುತ್ತದೆ. ಹೀಗಾಗಿ ಪ್ರತಿ ಬಾರಿ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಇದೇ ವೇಳೆ ಪ್ರಜ್ಯಾ ಸಿಂಗ್ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ನ್ಯಾಯಾಧೀಶರಾದ ವಿನೋದ್ ಪಡಾಲ್ಕರ್ ಪಕ್ಷದ ನಿಯಮ ಪಾಲಿಸುವುದು ಹಾಗೂ ಸಂಸತ್ಗೆ ಹಾಜರಾಗುವುದು ಅಗತ್ಯ. ಆದರೆ ಈ ಕುರಿತು ಯಾವುದೇ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ ಎಂದು ಹೇಳಿದರು. ಪ್ರಗ್ಯಾ ಸಿಂಗ್ ಠಾಕೂರ್ ಅವರು ಕಳೆದ ಬಾರಿ ನ್ಯಾಯಾಲಯಕ್ಕೆ ಹಾಜರಾದಾಗ ಯಾವುದೇ ಸ್ಫೋಟದ ಬಗ್ಗೆ ನನಗೆ ತಿಳಿದಿಲ್ಲ ಎಂದು ತಿಳಿಸಿದ್ದರು.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]