ಶಿವಮೊಗ್ಗ: ವಿಧಾನಸಭಾ ಚುನಾವಣೆಯ ಬಳಿಕ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು, ಕಾಂಗ್ರೆಸ್ – ಜೆಡಿಎಸ್ ಗೆ ಬೆಂಬಲ ನೀಡಿಲ್ಲ. ಸಿದ್ದರಾಮಯ್ಯ ಸಿಎಂ ಆಗಲು ಆಗಲ್ಲಾ ಎಂದು ಜೆಡಿಎಸ್ ಗೆ ಬೆಂಬಲ ನೀಡಿದ್ದಾರೆ. ಆದರೆ ಈಗ ಮಧ್ಯಂತರ ಚುನಾವಣೆ ನಡೆದರೆ ಬಿಜೆಪಿ 150 ಸ್ಥಾನಗಳಲ್ಲಿ ಗೆಲ್ಲಲಿದೆ ಎಂಬ ನಿರೀಕ್ಷೆ ಇದ್ದು, ರಾಜ್ಯದ ಜನರು ಬಿಜೆಪಿಗೆ 180 ಸ್ಥಾನಗಳಲ್ಲಿ ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ಮೈತ್ರಿಯಲ್ಲಿ ಮುಖ್ಯಮಂತ್ರಿ ಆ ದಿನದಿಂದಲೂ ಇದೇ ರೀತಿ ನಡೆದುಕೊಂಡು ಬಂದಿದ್ದು, ಮೊದಲು ಬೇಷರತ್ ಬೆಂಬಲ ಎಂದಿದ್ದರು. ಆದರೆ ಈಗ ಸಿಎಂ ದಿನ ಕಣ್ಣೀರು ಹಾಕುವುದು ಬಿಟ್ಟರೆ ಬೇರೇನೂ ಮಾಡಿಲ್ಲ. ಈಗ ಷರತ್ತಿನ ಮೇಲೆ ಷರತ್ತನ್ನು ಕಾಂಗ್ರೆಸ್ ಹಾಕುತ್ತಿದ್ದಾರೆ ಎಂದು ದೇವೇಗೌಡರ ಮಾತಿಗೆ ಪ್ರತಿಕ್ರಿಯೆ ನೀಡಿದರು.
ದೇವೇಗೌಡರಿಗೆ ಈ ಬಾರಿ ಅಭಿನಂದನೆ ಸಲ್ಲಿಸುತ್ತೇನೆ. ಮೈತ್ರಿ ಸರ್ಕಾರದ ಬಗ್ಗೆ ಸಮಾಧಾನ ಇದೆ ಎಂದು ಹೇಳಿದ್ದಾರೆ. ಇದು ಅವರೊಬ್ಬರ ಅಭಿಪ್ರಾಯವಲ್ಲ ಇಡೀ ರಾಜ್ಯದ ಹಾಗೂ ಕಾಂಗ್ರೆಸ್, ಜೆಡಿಎಸ್ ಶಾಸಕರ ಅಸಮಾಧಾನ ಆಗಿದೆ. ಇದನ್ನು ಆರ್ಥೈಸಿಕೊಂಡು ದೇವೇಗೌಡರು ಹೇಳಿರುವುದರಿಂದ ಅವರನ್ನ ಅಭಿನಂದಿಸುತ್ತೇನೆ ಎಂದರು.
ರಾಜ್ಯದಲ್ಲಿ ಯಾವುದೇ ಸಮಯದಲ್ಲಿ ಚುನಾವಣೆ ಬಂದರೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ನಾವು ಜಾತಿ, ಹಣದ ಮೇಲೆ ಚುನಾವಣೆ ಮಾಡಲ್ಲ. ಪಕ್ಷದ ಸಂಘಟನೆಯಿಂದ ಚುನಾವಣೆ ಮಾಡುತ್ತೇವೆ. ರಾಜ್ಯದಲ್ಲಿ ದ್ರೋಹಿಗಳ ಸರ್ಕಾರ ಇದ್ದು, ದೇವೇಗೌಡರನ್ನು ಸೋಲಿಸಿದ್ದು ಯಾರು ಎಂಬುವುದು ಎಲ್ಲರಿಗೂ ತಿಳಿದಿದೆ. ಈಗ ಬಹಿರಂಗವಾಗಿ ಬಡಿದಾಡಿಕೊಳ್ಳುತ್ತಿದ್ದಾರೆ. ರಾಜ್ಯವನ್ನು ಲೂಟಿ ಮಾಡಲು ಎಲ್ಲರೂ ಒಟ್ಟಿಗೆ ನಿಂತಿದ್ದು, ದೇವೇಗೌಡರು ಯಾವಾಗ ಚುನಾವಣೆ ಬರುತ್ತೇ ಎಂದು ಹೇಳುವುದು ಅವಶ್ಯಕತೆ ಇಲ್ಲ. ರಾಜ್ಯದ ಜನರು ಚುನಾವಣೆ ಯಾವಾಗ ಬರುತ್ತೇ ಎಂದು ಕಾಯುತ್ತಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಬಹಳ ದಿನ ಬದುಕಲ್ಲ ಎಂದರು.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]