ಗ್ರಾಮವಾಸ್ತವ್ಯ ಮಾಡಿ ನಮ್ಮೂರಿನ ಯುವಕರಿಗೆ ಕಂಕಣ ಭಾಗ್ಯ ಕರುಣಿಸಿ – ಸಿಎಂ ಸ್ಪಂದನೆ

Public TV
1 Min Read
KWR 2

ಕಾರವಾರ: ತಮ್ಮ ಗ್ರಾಮಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಮಿಸಿ ವಾಸ್ತವ್ಯ ಮಾಡಿ ಇಲ್ಲಿನ ರಸ್ತೆ ಸಮಸ್ಯೆ ಬಗೆಹರಿಸಿ ತಮ್ಮೂರಿನ ಯುವಕರಿಗೆ ಕಂಕಣಭಾಗ್ಯ ಕರುಣಿಸಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೇದಿನಿ ಗ್ರಾಮ ಜನರು ಮನವಿ ಮಾಡಿದ್ದರು.

ಪಬ್ಲಿಕ್ ಟಿವಿ ಈ ವರದಿಯನ್ನು ಪ್ರಸಾರ ಮಾಡಿ ಗ್ರಾಮದ ಜನರ ಮನವಿಯನ್ನು ಮುಖ್ಯಮಂತ್ರಿಗಳಿಗೆ ತಲುಪಿಸಿತ್ತು. ಈ ವರದಿಯನ್ನು ಗಮನಸಿದ್ದ ಸಿಎಂ ಅವರು ವಾಸ್ತವ ಸ್ಥಿತಿ ತಿಳಿಯಲು ಜಿಲ್ಲಾಧಿಕಾರಿಗಳಿಗೆ ಆದೇಶ ಮಾಡಿದ್ದರು.

KWR

ಸಿಎಂ ಆದೇಶ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್, ಜಿಲ್ಲಾ ಪಂಚಾಯಿತಿ ಸಿ.ಐ.ಓ ರೋಷನ್ ರವರು ಏಳು ಕಿಲೋಮೀಟರ್ ರಸ್ತೆಯಲ್ಲಿ ನಡೆದು ಕುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಗ್ರಾಮ ಸಮಸ್ಯೆಗಳ ಬಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಗ್ರಾಮಸ್ಥರ ಬಹುದಿನಗಳ ಬೇಡಿಕೆ ಆಗಿರುವ ರಸ್ತೆ ಕಾಮಗಾರಿ ನಡೆಸಲು ಕೂಡ ಕ್ರಮಕೈಗೊಳ್ಳಲಾಗುವುದು. ತಕ್ಷಣದಲ್ಲಿ ರಸ್ತೆ ಮಾಡಿಕೊಡುವ ಬಗ್ಗೆ ಸರ್ಕಾರಕ್ಕೆ ವರಿದಿ ಸಲ್ಲಿಸುತ್ತೇವೆ. ಅಲ್ಲದೇ ವಿದ್ಯುತ್ ಸಮಸ್ಯೆಗೂ ಶೀಘ್ರ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

Share This Article
Leave a Comment

Leave a Reply

Your email address will not be published. Required fields are marked *