Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮೋದಿಯಿಂದ ಟ್ರೆಂಡ್ ಸೃಷ್ಟಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು

Public TV
Last updated: June 22, 2019 1:40 pm
Public TV
Share
3 Min Read
modi cave
SHARE

ನವದೆಹಲಿ: ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.

ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ.

modi kedarnath

ಕೇದಾರನಾಥ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು www.gmvnl.in ಮೂಲಕ 1,500 ರೂ. ಪಾವತಿಸಿ ಬುಕ್ ಮಾಡಬೇಕು. ಬಳಿಕ ಗುಪ್ತಾಕ್ಷಿ ಹಾಗೂ ಕೇದಾರನಾಥದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ತದನಂತರ ಯಾತ್ರಿಕರು ಆರೋಗ್ಯವಾಗಿದ್ದರೆ ಮಾತ್ರ ಅವರಿಗೆ ಗುಹೆಯಲ್ಲಿ 24 ಗಂಟೆಗಳ ಕಾಲ ಏಕಾಂಗಿಯಾಗಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ. ಸದ್ಯ ಮುಂದಿನ 10 ದಿನಗಳ ತನಕ ಕೇದಾರನಾಥ ಗುಹೆ ಯಾತ್ರಿಕರ ಧ್ಯಾನಕ್ಕೆ ಬುಕ್ ಆಗಿದೆ.

kedarnath temple

ಪ್ರಧಾನಿ ಅವರು ಬಂದು ಹೋದ ಬಳಿಕ ಈ ಗುಹೆಯಲ್ಲಿ ಧ್ಯಾನ ಮಾಡಲು ಬರುವ ಯಾತ್ರಿಕರ ಸಂಖ್ಯೆ ಹೆಚ್ಚಾಗಿದೆ. ಈಗಾಗಲೇ ಸುಮಾರು 20 ಮಂದಿ ಇಲ್ಲಿ ಧ್ಯಾನ ಮಾಡಿದ್ದಾರೆ. ಅಲ್ಲದೆ ಆನ್‍ಲೈನ್ ಮೂಲಕ ನಾವು ಗುಹೆಯನ್ನು ಬುಕ್ ಮಾಡುವ ಸೌಲಭ್ಯ ಒದಗಿಸಿದ್ದೇವೆ. ಹೀಗಾಗಿ ದೇಶದೆಲ್ಲೆಡೆಯಿಂದ ಯಾತ್ರಿಕರು ಆನ್‍ಲೈನ್ ಬುಕ್ಕಿಂಗ್ ಮಾಡುತ್ತಿದ್ದಾರೆ ಎಂದು ಗರ್ವಾಲ್ ಮಂಡಲ್ ವಿಕಾಸ ನಿಗಮ(ಜಿಎಂವಿಎನ್) ಜನರೆಲ್ ಮ್ಯಾನೇಜರ್ ಬಿ.ಎಲ್ ರಾಣಾ ಅವರು ಹೇಳಿದ್ದಾರೆ.

modi cave 1

ಅಷ್ಟೇ ಅಲ್ಲದೆ ಎರಡನೇ ಧ್ಯಾನ ಗುಹೆಯನ್ನು ಕೂಡ ಕೇದಾರನಾಥದಲ್ಲಿ ನಿರ್ಮಿಸಲಾಗುತ್ತಿದೆ. ಇದು ನೈಸರ್ಗಿಕವಾಗಿ ಆದ ಗುಹೆಯಲ್ಲ. ಬದಲಾಗಿ ಬಂಡೆಯಲ್ಲಿ ಕೊರೆದು ಕೃತಕ ಗುಹೆಯನ್ನು ನಿರ್ಮಿಸುತ್ತಿದ್ದೇವೆ. ಆದರೆ ಇದು ಕಾರ್ಯ ರೂಪಕ್ಕೆ ಬರಲು ಕೊಂಚ ಸಮಯ ತೆಗೆದುಕೊಳ್ಳುತ್ತದೆ. ಕೇದಾರನಾಥ ದೇಗುಲದಿಂದ ಎಡಕ್ಕೆ ಸುಮಾರು 1 ಕಿ.ಮೀ ಅಂತರದಲ್ಲಿ ರುದ್ರಾ ಧ್ಯಾನ ಗುಹೆ ಇದ್ದು, ಇದರಲ್ಲಿ ಮೋದಿ ಅವರೇ ಮೊದಲು ಧ್ಯಾನ ಮಾಡಿದ್ದು ಎಂದು ರಾಣಾ ಅವರು ತಿಳಿಸಿದ್ದಾರೆ.

ರುದ್ರಾ ಗುಹೆಯಲ್ಲಿ ಧ್ಯಾನ ಮಾಡಲು ಆನ್‍ಲೈನ್‍ನಲ್ಲಿ ಬುಕ್ ಮಾಡಿದ ಯಾತ್ರಿಕರು ತಾವು ಬುಕ್ಕಿಂಗ್ ಮಾಡಿದ ದಿನಾಂಕಕ್ಕಿಂತ ಎರಡು ದಿನಗಳ ಮೊದಲೇ ಕೇದಾರನಾಥದ ಬೇಸ್ ಕ್ಯಾಂಪ್ ಆಗಿರುವ ಗುಪ್ತಾಕ್ಷಿಗೆ ತಲುಪಬೇಕು. ಅಲ್ಲಿ ಕೇದಾರನಾಥ ದೇಗುಲಕ್ಕೆ ಹೋದುವ ಎಲ್ಲಾ ಯಾತ್ರಿಕರಿಗೂ ವೈದ್ಯಕೀಯ ತಪಾಸಣೆ ಮಾಡಲಾಗುತ್ತದೆ. ಬಳಿಕ ಯಾತ್ರಿಕರು ಗುಪ್ತಾಕ್ಷಿಯಿಂದ ಕೇದಾರನಾಥ ದೇಗುಲ ತಲುಪಿದ ಬಳಿಕ ಮತ್ತೆ ಅಲ್ಲಿ ಅವರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಆ ನಂತರ ಯಾತ್ರಿಕರು ಆರೋಗ್ಯವಾಗಿದ್ದರೆ ಮಾತ್ರ ಅವರಿಗೆ ಗುಹೆ ಒಳಗೆ ಕಳುಹಿಸಲಾಗುತ್ತದೆ.

modi kedarnath cave

ಹಾಗೆಯೇ ಮೂರು ದಿನಕ್ಕಿಂತ ಹೆಚ್ಚು ದಿನಗಳ ಕಾಲ ಗುಹೆ ಬುಕ್ ಮಾಡುವಂತಿಲ್ಲ. ಒಂದು ಬಾರಿಗೆ ಕೇವಲ ಓರ್ವ ಯಾತ್ರಿಕರಿಗೆ ಮಾತ್ರ ಗುಹೆಗೆ ಪ್ರವೇಶ ನೀಡಲಾಗುತ್ತದೆ. ಜೊತೆಗೆ ಗುಹೆಯಲ್ಲಿ ಫೋನ್ ವ್ಯವಸ್ಥೆ ಕೂಡ ಇದೆ. ಒಂದು ವೇಳೆ ತುರ್ತು ಪರಿಸ್ಥಿತಿ ಎದುರಾದರೆ ಫೋನ್ ಮೂಲಕ ಜಿಎಂವಿಎನ್ ಸಿಬ್ಬಂದಿಯನ್ನು ಸಂಪರ್ಕಿಸಬಹುದು. ಇದೇ ರೀತಿ ಆಧುನಿಕ ಗುಹೆಗಳು ಕೂಡ ಕೇದಾರನಾಥ ಹಾಗೂ ಬದರಿನಾಥ ದೇಗುಲದ ಅಕ್ಕಪಕ್ಕದ ಪರ್ವತಗಳಲ್ಲಿ ನಿರ್ಮಾಣ ಮಾಡಲಾಗಿದೆ.

kedarnath cave 1

ಗುಹೆಗೆ ಬಂದ ಯಾತ್ರಿಕರಿಗೆ ಜಿಎಂವಿಎನ್ ಕುಡಿಯುವ ನೀರಿನ ವ್ಯವಸ್ಥೆ, ಊಟ, ಶೌಚಾಲಯ, ವಿದ್ಯುತ್ ಸಂಪರ್ಕ ಹಾಗೂ ಮಲಗಲು ಹಾಸಿಗೆ ಹೀಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸಿಕೊಡುತ್ತದೆ. ಆದರೆ ಒಂದು ಸಲ ಗುಹೆಯನ್ನು ಆನ್‍ಲೈನ್ ಬುಕ್ ಮಾಡಿದ ಬಳಿಕ ಬುಕ್ಕಿಂಗ್ ಅನ್ನು ರದ್ದು ಮಾಡಿದರೆ ಅಥವಾ ಕಾರಣಾಂತರಗಳಿಂದ ಗುಹೆಯಲ್ಲಿ ಇರಲು ಯಾತ್ರಿಕರು ನಿರಾಕರಿಸಿದರೆ ಪಾವತಿಸಿದ ಹಣವನ್ನು ವಾಪಸ್ ನೀಡುವುದಿಲ್ಲ. ಹಾಗೆಯೇ ಒಂದು ವೇಳೆ ಮಾಡಿದ್ದ ಬುಕ್ಕಿಂಗ್ ರದ್ದಾದಲ್ಲಿ ಆ ದಿನ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸ್ಥಳದಲ್ಲಿದ್ದ ಯಾತ್ರಿಕರಿಗೆ 990 ರೂಪಾಯಿಯಲ್ಲಿ ಗುಹೆಯಲ್ಲಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಅಲ್ಲಿನ ಆಡಳಿತ ಮಂಡಳಿ ತಿಳಿಸಿದೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

TAGGED:Kedarnath cavenarendra modinewdelhiOnline bookingPilgrimsPublic TVಆನ್‍ಲೈನ್ ಬುಕ್ಕಿಂಗ್ಕೇದಾರನಾಥ ಗುಹೆನರೇಂದ್ರ ಮೋದಿನವದೆಹಲಿಪಬ್ಲಿಕ್ ಟಿವಿಯಾತ್ರಿಕರು
Share This Article
Facebook Whatsapp Whatsapp Telegram

Cinema Updates

Pavithra Gowda 1
ಇಂದು ಜಾಮೀನು ಭವಿಷ್ಯ; ಕೋರ್ಟ್‌ ತೀರ್ಪಿಗೂ ಮುನ್ನವೇ ರಾಯರ ಮೊರೆ ಹೋದ ಪವಿತ್ರಾಗೌಡ
Bengaluru City Cinema Latest Sandalwood Top Stories
darshan renukaswamy pavithra gowda
`ಡಿ’ ಗ್ಯಾಂಗ್‍ಗೆ ಢವಢವ – ದರ್ಶನ್ ಸೇರಿ 7 ಮಂದಿ ಜಾಮೀನು ಭವಿಷ್ಯ ಇಂದು?
Cinema Court Karnataka Latest Main Post Sandalwood States Top Stories
Harshika Poonacha Bhuvan Ponnanna toured 3 countries with Tridevi 1
ತ್ರೀದೇವಿ ಜೊತೆ 3 ದೇಶ ಸುತ್ತಿದ ಹರ್ಷಿಕಾ, ಭುವನ್
Cinema Latest Sandalwood
Darshan Thailand
ಥಾಯ್ಲೆಂಡ್‌ನಿಂದ ದರ್ಶನ್ ವಾಪಸ್ ಬರೋ ದಿನಾಂಕ ಫಿಕ್ಸ್
Cinema Latest Sandalwood Top Stories
B Saroja Devi
ಜು.25 ರಂದು 11ನೇ ದಿನದ ಕಾರ್ಯ – ಗಣ್ಯರಿಂದ ಸರೋಜಾದೇವಿ ಸ್ಮರಣೆ
Cinema Latest

You Might Also Like

Anil Ambani
Latest

3,000 ಕೋಟಿ ಸಾಲ ವಂಚನೆ ಕೇಸ್‌ – ಅನಿಲ್‌ ಅಂಬಾನಿಗೆ ಸೇರಿದ 50 ಕಂಪನಿಗಳ ಮೇಲೆ ED ದಾಳಿ

Public TV
By Public TV
13 minutes ago
Enforcement Directorate
Latest

ED ಭರ್ಜರಿ ಬೇಟೆ – ಟಿಎಂಸಿ ಮಾಜಿ ಸಂಸದನ ಪುತ್ರನಿಗೆ ಸೇರಿದ 127 ಕೋಟಿ ಮೌಲ್ಯದ ಷೇರು ಜಪ್ತಿ

Public TV
By Public TV
46 minutes ago
DK Shivakumar 2 3
Districts

ಸಿಎಂ ಕುರ್ಚಿ ಕದನದ ಮಧ್ಯೆ ಡಿಕೆಶಿ ಟೆಂಪನ್‌ ರನ್‌ – ನಾಗೇಶ್ವರ ದೇವಾಲಯಕ್ಕೆ ದಿಢೀರ್ ಭೇಟಿ

Public TV
By Public TV
49 minutes ago
Nandini Shop in Metro Stations
Bengaluru City

ನಮ್ಮ ಮೆಟ್ರೋ ಸ್ಟೇಷನ್‌ಗಳಲ್ಲಿ ನಂದಿನಿ ಮಳಿಗೆ ತೆರೆಯಲು ದಿನಾಂಕ ಫಿಕ್ಸ್‌

Public TV
By Public TV
1 hour ago
AshokNagara Police
Bengaluru City

ಇನ್‌ಸ್ಟಾದಲ್ಲಿ ಯುವತಿಯರ ಅಸಭ್ಯ ಫೋಟೋ, ವಿಡಿಯೋ ಪೋಸ್ಟ್ – ಕಾಮುಕ ಅರೆಸ್ಟ್

Public TV
By Public TV
2 hours ago
Lokayukta
Bengaluru City

ಸಚಿವ ಬೈರತಿ ಸುರೇಶ್ ಪಿಎಸ್ ಮನೆ ಮೇಲೆ ʻಲೋಕಾʼ ದಾಳಿ – ಭಾರೀ ಪ್ರಮಾಣದ ಆಸ್ತಿ ದಾಖಲೆ ವಶಕ್ಕೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?