Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿಯಿಂದ ಟ್ರೆಂಡ್ ಸೃಷ್ಟಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿಯಿಂದ ಟ್ರೆಂಡ್ ಸೃಷ್ಟಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು

Latest

ಮೋದಿಯಿಂದ ಟ್ರೆಂಡ್ ಸೃಷ್ಟಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು

Public TV
Last updated: June 22, 2019 1:40 pm
Public TV
Share
3 Min Read
modi cave
SHARE

ನವದೆಹಲಿ: ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.

ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ.

modi kedarnath

ಕೇದಾರನಾಥ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು www.gmvnl.in ಮೂಲಕ 1,500 ರೂ. ಪಾವತಿಸಿ ಬುಕ್ ಮಾಡಬೇಕು. ಬಳಿಕ ಗುಪ್ತಾಕ್ಷಿ ಹಾಗೂ ಕೇದಾರನಾಥದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ತದನಂತರ ಯಾತ್ರಿಕರು ಆರೋಗ್ಯವಾಗಿದ್ದರೆ ಮಾತ್ರ ಅವರಿಗೆ ಗುಹೆಯಲ್ಲಿ 24 ಗಂಟೆಗಳ ಕಾಲ ಏಕಾಂಗಿಯಾಗಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ. ಸದ್ಯ ಮುಂದಿನ 10 ದಿನಗಳ ತನಕ ಕೇದಾರನಾಥ ಗುಹೆ ಯಾತ್ರಿಕರ ಧ್ಯಾನಕ್ಕೆ ಬುಕ್ ಆಗಿದೆ.

kedarnath temple

ಪ್ರಧಾನಿ ಅವರು ಬಂದು ಹೋದ ಬಳಿಕ ಈ ಗುಹೆಯಲ್ಲಿ ಧ್ಯಾನ ಮಾಡಲು ಬರುವ ಯಾತ್ರಿಕರ ಸಂಖ್ಯೆ ಹೆಚ್ಚಾಗಿದೆ. ಈಗಾಗಲೇ ಸುಮಾರು 20 ಮಂದಿ ಇಲ್ಲಿ ಧ್ಯಾನ ಮಾಡಿದ್ದಾರೆ. ಅಲ್ಲದೆ ಆನ್‍ಲೈನ್ ಮೂಲಕ ನಾವು ಗುಹೆಯನ್ನು ಬುಕ್ ಮಾಡುವ ಸೌಲಭ್ಯ ಒದಗಿಸಿದ್ದೇವೆ. ಹೀಗಾಗಿ ದೇಶದೆಲ್ಲೆಡೆಯಿಂದ ಯಾತ್ರಿಕರು ಆನ್‍ಲೈನ್ ಬುಕ್ಕಿಂಗ್ ಮಾಡುತ್ತಿದ್ದಾರೆ ಎಂದು ಗರ್ವಾಲ್ ಮಂಡಲ್ ವಿಕಾಸ ನಿಗಮ(ಜಿಎಂವಿಎನ್) ಜನರೆಲ್ ಮ್ಯಾನೇಜರ್ ಬಿ.ಎಲ್ ರಾಣಾ ಅವರು ಹೇಳಿದ್ದಾರೆ.

modi cave 1

ಅಷ್ಟೇ ಅಲ್ಲದೆ ಎರಡನೇ ಧ್ಯಾನ ಗುಹೆಯನ್ನು ಕೂಡ ಕೇದಾರನಾಥದಲ್ಲಿ ನಿರ್ಮಿಸಲಾಗುತ್ತಿದೆ. ಇದು ನೈಸರ್ಗಿಕವಾಗಿ ಆದ ಗುಹೆಯಲ್ಲ. ಬದಲಾಗಿ ಬಂಡೆಯಲ್ಲಿ ಕೊರೆದು ಕೃತಕ ಗುಹೆಯನ್ನು ನಿರ್ಮಿಸುತ್ತಿದ್ದೇವೆ. ಆದರೆ ಇದು ಕಾರ್ಯ ರೂಪಕ್ಕೆ ಬರಲು ಕೊಂಚ ಸಮಯ ತೆಗೆದುಕೊಳ್ಳುತ್ತದೆ. ಕೇದಾರನಾಥ ದೇಗುಲದಿಂದ ಎಡಕ್ಕೆ ಸುಮಾರು 1 ಕಿ.ಮೀ ಅಂತರದಲ್ಲಿ ರುದ್ರಾ ಧ್ಯಾನ ಗುಹೆ ಇದ್ದು, ಇದರಲ್ಲಿ ಮೋದಿ ಅವರೇ ಮೊದಲು ಧ್ಯಾನ ಮಾಡಿದ್ದು ಎಂದು ರಾಣಾ ಅವರು ತಿಳಿಸಿದ್ದಾರೆ.

ರುದ್ರಾ ಗುಹೆಯಲ್ಲಿ ಧ್ಯಾನ ಮಾಡಲು ಆನ್‍ಲೈನ್‍ನಲ್ಲಿ ಬುಕ್ ಮಾಡಿದ ಯಾತ್ರಿಕರು ತಾವು ಬುಕ್ಕಿಂಗ್ ಮಾಡಿದ ದಿನಾಂಕಕ್ಕಿಂತ ಎರಡು ದಿನಗಳ ಮೊದಲೇ ಕೇದಾರನಾಥದ ಬೇಸ್ ಕ್ಯಾಂಪ್ ಆಗಿರುವ ಗುಪ್ತಾಕ್ಷಿಗೆ ತಲುಪಬೇಕು. ಅಲ್ಲಿ ಕೇದಾರನಾಥ ದೇಗುಲಕ್ಕೆ ಹೋದುವ ಎಲ್ಲಾ ಯಾತ್ರಿಕರಿಗೂ ವೈದ್ಯಕೀಯ ತಪಾಸಣೆ ಮಾಡಲಾಗುತ್ತದೆ. ಬಳಿಕ ಯಾತ್ರಿಕರು ಗುಪ್ತಾಕ್ಷಿಯಿಂದ ಕೇದಾರನಾಥ ದೇಗುಲ ತಲುಪಿದ ಬಳಿಕ ಮತ್ತೆ ಅಲ್ಲಿ ಅವರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಆ ನಂತರ ಯಾತ್ರಿಕರು ಆರೋಗ್ಯವಾಗಿದ್ದರೆ ಮಾತ್ರ ಅವರಿಗೆ ಗುಹೆ ಒಳಗೆ ಕಳುಹಿಸಲಾಗುತ್ತದೆ.

modi kedarnath cave

ಹಾಗೆಯೇ ಮೂರು ದಿನಕ್ಕಿಂತ ಹೆಚ್ಚು ದಿನಗಳ ಕಾಲ ಗುಹೆ ಬುಕ್ ಮಾಡುವಂತಿಲ್ಲ. ಒಂದು ಬಾರಿಗೆ ಕೇವಲ ಓರ್ವ ಯಾತ್ರಿಕರಿಗೆ ಮಾತ್ರ ಗುಹೆಗೆ ಪ್ರವೇಶ ನೀಡಲಾಗುತ್ತದೆ. ಜೊತೆಗೆ ಗುಹೆಯಲ್ಲಿ ಫೋನ್ ವ್ಯವಸ್ಥೆ ಕೂಡ ಇದೆ. ಒಂದು ವೇಳೆ ತುರ್ತು ಪರಿಸ್ಥಿತಿ ಎದುರಾದರೆ ಫೋನ್ ಮೂಲಕ ಜಿಎಂವಿಎನ್ ಸಿಬ್ಬಂದಿಯನ್ನು ಸಂಪರ್ಕಿಸಬಹುದು. ಇದೇ ರೀತಿ ಆಧುನಿಕ ಗುಹೆಗಳು ಕೂಡ ಕೇದಾರನಾಥ ಹಾಗೂ ಬದರಿನಾಥ ದೇಗುಲದ ಅಕ್ಕಪಕ್ಕದ ಪರ್ವತಗಳಲ್ಲಿ ನಿರ್ಮಾಣ ಮಾಡಲಾಗಿದೆ.

kedarnath cave 1

ಗುಹೆಗೆ ಬಂದ ಯಾತ್ರಿಕರಿಗೆ ಜಿಎಂವಿಎನ್ ಕುಡಿಯುವ ನೀರಿನ ವ್ಯವಸ್ಥೆ, ಊಟ, ಶೌಚಾಲಯ, ವಿದ್ಯುತ್ ಸಂಪರ್ಕ ಹಾಗೂ ಮಲಗಲು ಹಾಸಿಗೆ ಹೀಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸಿಕೊಡುತ್ತದೆ. ಆದರೆ ಒಂದು ಸಲ ಗುಹೆಯನ್ನು ಆನ್‍ಲೈನ್ ಬುಕ್ ಮಾಡಿದ ಬಳಿಕ ಬುಕ್ಕಿಂಗ್ ಅನ್ನು ರದ್ದು ಮಾಡಿದರೆ ಅಥವಾ ಕಾರಣಾಂತರಗಳಿಂದ ಗುಹೆಯಲ್ಲಿ ಇರಲು ಯಾತ್ರಿಕರು ನಿರಾಕರಿಸಿದರೆ ಪಾವತಿಸಿದ ಹಣವನ್ನು ವಾಪಸ್ ನೀಡುವುದಿಲ್ಲ. ಹಾಗೆಯೇ ಒಂದು ವೇಳೆ ಮಾಡಿದ್ದ ಬುಕ್ಕಿಂಗ್ ರದ್ದಾದಲ್ಲಿ ಆ ದಿನ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸ್ಥಳದಲ್ಲಿದ್ದ ಯಾತ್ರಿಕರಿಗೆ 990 ರೂಪಾಯಿಯಲ್ಲಿ ಗುಹೆಯಲ್ಲಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಅಲ್ಲಿನ ಆಡಳಿತ ಮಂಡಳಿ ತಿಳಿಸಿದೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

TAGGED:Kedarnath cavenarendra modinewdelhiOnline bookingPilgrimsPublic TVಆನ್‍ಲೈನ್ ಬುಕ್ಕಿಂಗ್ಕೇದಾರನಾಥ ಗುಹೆನರೇಂದ್ರ ಮೋದಿನವದೆಹಲಿಪಬ್ಲಿಕ್ ಟಿವಿಯಾತ್ರಿಕರು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

KSRTC bus lost control and crashed into a roadside hill SalemTamil Nadu
Bengaluru City

ಸೇಲಂ ಬಳಿ ತಪ್ಪಿದ ಭಾರೀ ಅನಾಹುತ: ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿತು KSRTC ಬಸ್‌

Public TV
By Public TV
2 minutes ago
daily horoscope dina bhavishya
Astrology

ದಿನ ಭವಿಷ್ಯ 29-04-2026

Public TV
By Public TV
25 minutes ago
soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
8 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
8 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
9 hours ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?