Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ದೇವರ’ ಇಲಾಖೆಗೂ ಕೈ ಹಾಕಿದ ‘ಸೂಪರ್’ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘ದೇವರ’ ಇಲಾಖೆಗೂ ಕೈ ಹಾಕಿದ ‘ಸೂಪರ್’ ಸಿಎಂ

Bengaluru City

‘ದೇವರ’ ಇಲಾಖೆಗೂ ಕೈ ಹಾಕಿದ ‘ಸೂಪರ್’ ಸಿಎಂ

Public TV
Last updated: June 22, 2019 2:20 pm
Public TV
Share
3 Min Read
REVANNA
SHARE

ಬೆಂಗಳೂರು: `ದೇವರ’ ಇಲಾಖೆಗೂ ಸಿಎಂ ಹಿರಿಯ ಸಹೋದರ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಕೈ ಹಾಕಿದ್ದು, ಮುಜರಾಯಿ ಇಲಾಖೆ ವ್ಯವಹಾರದಲ್ಲೂ ಮಧ್ಯಪ್ರವೇಶ ಮಾಡಿದ್ದಾರೆ.

ಮುಜರಾಯಿ ಇಲಾಖೆಯನ್ನು ಕಾಂಗ್ರೆಸ್ಸಿನ ಪರಮೇಶ್ವರ್ ನಾಯ್ಕ್ ಅವರು ನಿರ್ವಹಿಸುತ್ತಿದ್ದಾರೆ. ಆದರೆ ಈಗ ಕಲ್ಯಾಣ ಮಂಟಪ ಒಂದರ ಗುತ್ತಿಗೆಯನ್ನು ಶೃಂಗೇರಿ ಮಠಕ್ಕೆ ಕೊಡುವಂತೆ ರೇವಣ್ಣ ಅವರು ಪತ್ರ ಬರೆದಿದ್ದಾರೆ. ಈ ರೀತಿ ಪತ್ರ ಬರೆದು ಕಾನೂನು ಮೀರಿ ಕಲ್ಯಾಣ ಮಂಟಪ ಗುತ್ತಿಗೆ ನೀಡಲು ಹೊರಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ರೇವಣ್ಣ ಅವರು ಧಾರ್ಮಿಕ ದತ್ತಿ ಇಲಾಖೆಗೆ ಪತ್ರ ಬರೆದು, ಬೆಂಗಳೂರಿನ ಕಲ್ಯಾಣ ಮಂಟಪವನ್ನು ಶೃಂಗೇರಿ ಪೀಠಕ್ಕೆ ಗುತ್ತಿಗೆ ಆಧಾರದಲ್ಲಿ ನೀಡಲು ತಿಳಿಸಿದ್ದಾರೆ.

revanna c copy

ಈ ಬಗ್ಗೆ ಸಚಿವರಿಂದ ಪತ್ರ ಪಡೆದಿರುವ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಈ ಪತ್ರ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಪತ್ರದಲ್ಲಿ ಕಲ್ಯಾಣ ಮಂಟಪ ನಿರ್ಮಾಣಕ್ಕೆ ದುಡ್ಡಿಲ್ಲ. ಆದ್ದರಿಂದ ಪೀಠಕ್ಕೆ ವರ್ಗಾಯಿಸುವಂತೆ ತಿಳಿಸಿದ್ದಾರೆ. ಈ ಹಿಂದೆ ಸಚಿವರ ಮನೆಯ ನವೀಕರಣಕ್ಕೆ ಕೋಟಿ ಕೋಟಿ ಖರ್ಚು ಮಾಡಿದ್ದ ಸರ್ಕಾರ ಇಂದು ಸಾರ್ವಜನಿಕರ ಉಪಯೋಗಕ್ಕೆ ಬರುವ ಕಲ್ಯಾಣ ಮಂಟಪಕ್ಕೆ ಹಣ ಇಲ್ಲ ಎಂದು ಹೇಳಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸಾರ್ವಜನಿಕರ ಉಪಯೋಗಕ್ಕೆ ಬರುವ ಈ ಯೋಜನೆಯನ್ನು ಪೀಠಕ್ಕೆ ವರ್ಗಾವಣೆ ಮಾಡುವ ಮೂಲಕ ಖಾಸಗೀಕರಣ ಗೊಳಿಸಿ ಹಣ ಮಾಡುವ ಉದ್ದೇಶ ಹೊಂದಿದ್ಯಾ ಎಂಬ ಶಂಕೆ ವ್ಯಕ್ತವಾಗಿದೆ.

revanna a copy

ಪತ್ರದಲ್ಲೇನಿದೆ:
ಬಸವನಗುಡಿಯಲ್ಲಿರುವ ಮುಜರಾಯಿಗೆ ಸೇರಿದ ಕಾರಂಜಿ ಅಂಜನೇಯ ದೇಗುಲದ ಅವರಣದಲ್ಲಿ ಕಲ್ಯಾಣ ಮಂಟಪ ಇದೆ. ಈ ಕಲ್ಯಾಣ ಮಂಟಪ ನಿರ್ಮಾಣ ಹಂತದಲ್ಲಿದೆ. ಪರಿಷ್ಕೃತ ದರ ಐದುಕೋಟಿಯಷ್ಟು ಆಗಲಿದೆ. ಆದರೆ ದೇಗುಲದ ಖರ್ಚಿನಲ್ಲಿ ಕೇವಲ 66 ಲಕ್ಷ ಭರಿಸಲು ಸಾಧ್ಯವಿದೆ. ಉಳಿದ ಖರ್ಚನ್ನು ಭರಿಸಲು ಸಾಧ್ಯವಿಲ್ಲ. ಅನುದಾನದ ಕೊರತೆ ಇದೆ. ಈ ಕಾರಣಕ್ಕೆ ಲೋಕೋಪಯೋಗಿ ಸಚಿವರು ಈ ಕಲ್ಯಾಣ ಮಂಟಪದ ಗುತ್ತಿಗೆಯನ್ನು ಶೃಂಗೇರಿ ಪೀಠ ಕ್ಕೆ ವರ್ಗಾಯಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ಸರ್ಕಾರ ಹಾಗೂ ಶೃಂಗೇರಿ ಪೀಠ ಎರಡು ನಿಭಾಯಿಸಿ ಕಲ್ಯಾಣ ಮಂಟಪದ ಲಾಭವನ್ನು ಸರ್ಕಾರ ಹಾಗೂ ಪೀಠ ಶೇ.50 ರಂತೆ ಹಂಚಿಕೊಳ್ಳುವ ಬಗ್ಗೆಯೂ ತಿಳಿಸಿದ್ದಾರೆ. ಹಾಗಾಗಿ ಈ ಮನವಿಯನ್ನು ಪರಿಗಣಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ರು ಸರ್ಕಾರದ ಪ್ರಧಾನ ಕಾರ್ಯದರ್ಶಿ ಗೆ ಪತ್ರ ಬರೆದಿದ್ದಾರೆ.

revanna b copy

ನಿಯಮ ಏನು ಹೇಳುತ್ತೆ?
ನಗರದ ಮುಜರಾಯಿ ಇಲಾಖೆ ಸೇರಿದ ದೇವಾಲಯದ ಈ ಕಲ್ಯಾಣ ಮಂಟಪ ನಿರ್ಮಾಣವನ್ನು ಮಾಡಲಾಗುತ್ತಿದೆ. ಮುಜರಾಯಿಗೆ ಸೇರಿದ ಕಟ್ಟಡ, ಆಸ್ತಿಯನ್ನು ಸಾರ್ವಜನಿಕ ಹರಾಜಿನ ಮೂಲಕವೇ ಗುತ್ತಿಗೆ ನೀಡಬೇಕ್ಕು ಎನ್ನುವ ನಿಯಮವಿದೆ.

ಈ ಹಿಂದೆ ಸಂಪಗಿರಾಮನಗರದ ದೇಗುಲದ ಜಾಗವನ್ನು ಗುತ್ತಿಗೆ ನೀಡುವ ವಿಚಾರದಲ್ಲಿ ತಗಾದೆಯಾದಾಗ ಮುಜರಾಯಿ ಇಲಾಖೆ ತನಗೆ ಸೇರಿದ ಜಾಗವನ್ನು ಗುತ್ತಿಗೆ ನೀಡುವಂತಿಲ್ಲ ಎಂದು ಹೇಳಿತ್ತು. ಕಾಯ್ದೆ ಹೀಗಿದ್ದರೂ ಧಾರ್ಮಿಕ ಇಲಾಖೆಯ ನಡೆ ಅಚ್ಚರಿ ಮೂಡಿಸಿದೆ. ಈ ಗುತ್ತಿಗೆ ನೀಡಲು ದೇವಾಲಯದ ಸಮಿತಿಯೇ ರೇವಣ್ಣ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದ್ದು, ಈ ಮನವಿ ಹಿನ್ನೆಲೆಯಲ್ಲಿ ಕಾನೂನು ಅಂಶಗಳನ್ನು ಪರಿಗಣನೆ ತೆಗೆದುಕೊಳ್ಳದ ಸಚಿವರು ನೇರ ಪತ್ರ ಬರೆದಿದ್ದಾರೆ.

revanna d copy

ಮುಜರಾಯಿ ಇಲಾಖೆ ಆಯುಕ್ತರು ಕೂಡ ಸಚಿವರ ಪತ್ರ ಬರುತ್ತಿದಂತೆ ನಿಯಮ ಮೀರಿ ಪತ್ರ ಬರೆದಿದ್ದಾರೆ. ಇತ್ತ ದೇವಸ್ಥಾನದ ಮುಂಭಾಗದಲ್ಲಿ “ಕಲ್ಯಾಣ ಮಂಟಪಕ್ಕಾಗಿ ದೇಣಿಗೆ ನೀಡಿ ರಸೀದಿ ಪಡೆದುಕೊಳ್ಳಿ” ಎಂದು ಬೋರ್ಡ್ ಹಾಕಲಾಗಿದೆ. ಹಾಗದರೆ ದೇವಾಲಯದ ಕಲ್ಯಾಣ ಮಂಟಪ ನಿರ್ಮಾಣ ಮಾಡುವಲ್ಲಿ ಜನ ಕೊಟ್ಟಿರುವ ದುಡ್ಡು ಎಲ್ಲಿಗೆ ಹೋಗುತ್ತೆ ಎಂಬ ಬಹುದೊಡ್ಡ ಅನುಮಾನವೂ ಮೂಡಿದೆ. ಇತ್ತ ಈ ಕುರಿತು ವರದಿ ಮಾಡಲು ತೆರಳಿದರೆ ದೇಗುಲದ ದೃಶ್ಯಾವಳಿ ತೆಗೆದುಕೊಳ್ಳಲು ಖಾಸಗಿ ವ್ಯಕ್ತಿಗಳು ಪಬ್ಲಿಕ್ ಟಿವಿ ಕ್ಯಾಮೆರಾಕ್ಕೆ ಅಡ್ಡಿ ಪಡಿಸಿದ್ದಾರೆ. ಅಲ್ಲದೇ ಕಲ್ಯಾಣ ಮಂಟಪ ಕಟ್ಟಲು ದುಡ್ಡಿಲ್ಲ ನೀವು ಹಣ ನೀಡುತ್ತೀರಾ ಎಂದು ಪಬ್ಲಿಕ್ ಟಿವಿ ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿದ್ದಾರೆ.

ಸಚಿವರು ಏನು ಹೇಳಿದ್ರು:
ಪಬ್ಲಿಕ್ ಟಿವಿ ನೇರ ಮುಜರಾಯಿ ಇಲಾಖೆ ಸಚಿವ ಪರಮೇಶ್ವರ್ ನಾಯಕ್ ರೊಂದಿಗೆ ಸಂಪರ್ಕ ಮಾಡಿದ್ದು, ಸಿಎಂ ಅವರ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ರಾಜ್ಯದ ಮುಖ್ಯ ದೇವಾಲಯದ ಅಭಿವೃದ್ಧಿಗೆ ನಮ್ಮ ಇಲಾಖೆಯಿಂದ ಹಣ ನೀಡಲಾಗಿತ್ತು. ಆದ್ದರಿಂದ ಸಭೆಯಲ್ಲಿ ಲೋಕೋಪಯೋಗಿ ಸಚಿವರು ಭಾಗವಹಿಸಿದ್ದರು. ಸದ್ಯ ಭಕ್ತರ ಆಶಯದೊಂದಿಗೆ ದೇವಾಲಯದ ಅಭಿವೃದ್ಧಿ ಮಾಡಲಾಗಿದೆ ಅಷ್ಟೇ. ಆದರೆ ನಾವು ಯಾರಿಗೂ ಗುತ್ತಿಗೆ ನೀಡುತ್ತಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಿದ್ದೇವೆ ಎಂದರು. ಕಲ್ಯಾಣ ಮಂಟಪದ ನಿರ್ಮಾಣಕ್ಕೆ ಹಣ ಇಲ್ಲವೇ ಎಂಬ ಪ್ರಶ್ನೆಗೆ ಗರಂ ಆದ ಸಚಿವರು ಕರೆ ಕಡಿತಗೊಳಿಸಿದ್ದಾರೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

TAGGED:bengaluruDepartment of Religious EndowmentMinister Parameshwar NayakMinister RevannaPublic TVPublic Works Departmentಧಾರ್ಮಿಕ ದತ್ತಿ ಇಲಾಖೆಪಬ್ಲಿಕ್ ಟಿವಿಬೆಂಗಳೂರುಲೋಕೋಪಯೋಗಿ ಇಲಾಖೆಸಚಿವ ಪರಮೇಶ್ವರ್ ನಾಯಕ್ಸಚಿವ ರೇವಣ್ಣ
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

bjp jds protest
Bengaluru City

ಅಬಕಾರಿ ಇಲಾಖೆ ಅವ್ಯವಹಾರದ ವಿರುದ್ಧ ‘ದೋಸ್ತಿ’ ಸಮರ; ಸದನದಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ

Public TV
By Public TV
7 hours ago
Delhi Capitals Women
Cricket

WPL 2026: ಗುಜರಾತ್‌ ವಿರುದ್ಧ 7 ವಿಕೆಟ್‌ಗಳ ಜಯ – ಫೈನಲ್‌ಗೆ ಡೆಲ್ಲಿ ಲಗ್ಗೆ

Public TV
By Public TV
7 hours ago
Residential School
Bengaluru City

ವಸತಿ ಶಾಲೆ ಅರ್ಜಿ ಸಲ್ಲಿಸಲು ಫೆ.7ರವರೆಗೆ ಅವಕಾಶ – ಕೆಇಎ

Public TV
By Public TV
7 hours ago
big bulletin 03 February 2026 part 1
Big Bulletin

ಬಿಗ್‌ ಬುಲೆಟಿನ್‌ 03 February 2026 ಭಾಗ-1

Public TV
By Public TV
8 hours ago
big bulletin 03 February 2026 part 2
Big Bulletin

ಬಿಗ್‌ ಬುಲೆಟಿನ್‌ 03 February 2026 ಭಾಗ-2

Public TV
By Public TV
8 hours ago
big bulletin 03 February 2026 part 3
Big Bulletin

ಬಿಗ್‌ ಬುಲೆಟಿನ್‌ 03 February 2026 ಭಾಗ-3

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?