ಕೆರೆ ಹೂಳೆತ್ತುವ ಕಾಯಕಕ್ಕೆ ಕಾರ್ಮಿಕರ ಜೊತೆ ಕೈ ಜೋಡಿಸಿದ ರೇಣುಕಾಚಾರ್ಯ

Public TV
1 Min Read
dvg renukacharya

ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದ ಕೆರೆ ಹೂಳೆತ್ತುವ ಕಾಯಕಕ್ಕೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕೂಲಿ ಕಾರ್ಮಿಕರ ಜೊತೆ ಕೈಜೋಡಿಸಿ ಕೆಲಸ ಮಾಡಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆಯಡಿ ಆರುಂಡಿ ಗ್ರಾಮದ ಕೆರೆ ಹೂಳೆತ್ತುವ ಕೆಲಸ ನಡೆಯುತಿತ್ತು. ಈ ವೇಳೆ ಸ್ವತಃ ತಾವೇ ಮುಂದೆ ಬಂದು ಹಾರೆ ಕೋಲು ಹಿಡಿದು ಮಣ್ಣನ್ನು ತೆಗೆದು ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿದರು.

dvg renukacharya 1

ಅಷ್ಟೇ ಅಲ್ಲದೆ ಯೋಗ ಮಾಡುವುದಕ್ಕಿಂತ 10 ನಿಮಿಷ ಕೂಲಿ ಮಾಡುವುದು ಆರೋಗ್ಯಕ್ಕೆ ಉತ್ತಮ ಎಂದು ಕೆಲಸ ಮಾಡುತ್ತ ತಮ್ಮ ಜೊತೆಗಿದ್ದವರಿಗೆ ಹೇಳಿದರು. ಸುಮಾರು ಒಂದು ಗಂಟೆಗಳ ಕಾಲ ಇತರೆ ಕೂಲಿ ಕಾರ್ಮಿಕರಂತೆ ಒಂದು ಕಡೆ ಹಾರೆಕೋಲಿನಿಂದ ಮಣ್ಣು ಬಗೆದು, ಇನ್ನೊಂದು ಕಡೆ ಚಲಕಿಯಿಂದ ಮಣ್ಣು ತೆಗೆದು ಹೂಳೆತ್ತೆ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *