Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫಸ್ಟ್ ಟೈಂ, ಯುವಕ- ಯುವತಿಯರು ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಫಸ್ಟ್ ಟೈಂ, ಯುವಕ- ಯುವತಿಯರು ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು

Bengaluru City

ಫಸ್ಟ್ ಟೈಂ, ಯುವಕ- ಯುವತಿಯರು ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು

Public TV
Last updated: June 28, 2019 10:42 pm
Public TV
Share
2 Min Read
FARMER 1
SHARE

– ಜುಲೈ 12ರಿಂದ ಅಧಿವೇಶನ ಆರಂಭ
– ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ
– ಜುಲೈ ಎರಡನೇ ವಾರ ಮೋಡ ಬಿತ್ತನೆಗೆ ಸಿದ್ಧತೆ

ಬೆಂಗಳೂರು: ಮಳೆಗಾಲದ ಅಧಿವೇಶನ ಜುಲೈ 12 ರಿಂದ 26 ವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಅಧಿವೇಶನದ ದಿನಾಂಕವನ್ನು ಅಂತಿಮಗೊಳಿಸಲಾಗಿದೆ.

ಅಧಿವೇಶನ ಅಷ್ಟೇ ಅಲ್ಲದೆ ಹಲವು ಮಹತ್ವದ ವಿಚಾರಗಳಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಕಳೆದ ಎರಡು ವರ್ಷಗಳಿಂದ ನಡೆಸಲಾಗುತ್ತಿದ್ದ ಬೆಳೆ ಸಮೀಕ್ಷೆಯನ್ನು ಈ ಬಾರಿ ಅತ್ಯಾಧುನಿಕವಾಗಿ ನಡೆಸಲು ಸಂಪುಟ ಒಪ್ಪಿಗೆ ನೀಡಿದೆ. ರಾಜ್ಯದಲ್ಲಿ 2 ಕೋಟಿ 20 ತಾಕುಗಳಿವೆ. ಈ ತಾಕುಗಳಲ್ಲಿ ಯಾವ ಬೆಳೆ ಬೆಳೆಯಲಾಗಿದೆ ನೆನ್ನುವ ಸಮೀಕ್ಷೆ ಮಾಡಲಾಗುತ್ತದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

Women Farmers

ಈ ಬಾರಿ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆಗೆ ನಿರ್ಧಾರವನ್ನು ಸರ್ಕಾರ ನಿರ್ಧಾರ ಕೈಗೊಂಡಿದೆ. ಅಷ್ಟೇ ಅಲ್ಲದೆ ಮುಂಗಾರು, ಹಿಂಗಾರು ಬೆಳೆಗಳ ಸಮೀಕ್ಷೆ ಮಾಡಲಾಗುತ್ತದೆ. ಇದೇ ಮೊದಲ ಬಾರಿಗೆ ಖಾಸಗಿಯವರಿಂದ ಬೆಳೆ ಸಮೀಕ್ಷೆ ಮಾಡಿಸಲಾಗುತ್ತದೆ. ಗ್ರಾಮದ ಯುವಕ-ಯುವತಿಯರು ಬೆಳೆ ಸಮೀಕ್ಷೆ ಮಾಡಬಹುದಾಗಿದೆ. ಪ್ರತಿ ಬೆಳೆಗೆ 10 ರೂ. ಸಂಭಾವನೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಸಮೀಕ್ಷೆ ಮಾಡಲು ಇಚ್ಚಿಸುವವರು ಗ್ರಾಮ ಲೆಕ್ಕಿಗರ ಬಳಿ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ. ಸುಮಾರು 90 ಕೋಟಿ ವೆಚ್ಚದಲ್ಲಿ ಸಮೀಕ್ಷೆ ನಡೆಸುತ್ತಿದ್ದು, ದೇಶದಲ್ಲಿ ಇಂತಹ ಸಮೀಕ್ಷೆ ಇದೇ ಮೊದಲಾಗಿದೆ ಎಂದರು.

vlcsnap 2019 06 28 22h25m36s399

ಕರ್ನಾಟಕ ರೈತ ಸುರಕ್ಷಾ ಯೋಜನೆಯನ್ನು ಈ ವರ್ಷವೂ ಅಳವಡಿಸಿಕೊಳ್ಳಲು ನಿರ್ಧಾರ ಮಾಡಲಾಗಿದೆ. 10 ಕ್ಲಸ್ಟರ್ ಮಾಡಿ ಟೆಂಡರ್ ಕರೆಯಲು ಸಂಪುಟ ಒಪ್ಪಿಗೆ ನೀಡಿದೆ. ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಯೋಜನೆ ಜಾರಿಯಾಗುತ್ತಿದ್ದು, ರಾಜ್ಯ ಸರ್ಕಾರ 546 ಕೋಟಿ ರೂ. ಯೋಜನೆಗೆ ಭರಿಸಲಿದೆ. ರಾಜ್ಯದ 10 ತಾಲೂಕು ಆಸ್ಪತ್ರೆಯಲ್ಲಿ ಡಿಎನ್ಬಿ ಕೋರ್ಸ್ ಪ್ರಾರಂಭಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಕೋರ್ಸ್ ಮಾಡಿದವರು 3 ವರ್ಷ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ನಿಯಮ ಅಳವಡಿಕೆ ಮಾಡಿದ್ದು, ನೀಟ್ ಮೂಲಕ ಕೋರ್ಸ್ ದಾಖಲಾತಿ ಮಾಡಿಕೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಹೇಳಿದರು.

ಹೇಮಾವತಿ ಬಲದಂಡೆ ನಾಲೆ ನವೀಕರಣ ಸಂಪುಟ ಒಪ್ಪಿಗೆ ನೀಡಿದೆ. 72 ಕಿಲೋಮೀಟರ್ ನಾಲೆ ನವೀಕರಣಕ್ಕೆ ಒಪ್ಪಿಗೆ ನೀಡಿದ್ದು, ಸುಮಾರು 422 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡಲಾಗುತ್ತದೆ ಎಂದರು.

cloud seeding 1 3

ಮೋಡ ಬಿತ್ತನೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ. ಕೇಂದ್ರ ಸರ್ಕಾರ ಕೆಲವು ಅನುಮತಿ ನೀಡಬೇಕಾಗಿದೆ. ಕೇಂದ್ರದಿಂದ ಅನುಮತಿ ಸಿಕ್ಕ ಕೂಡಲೇ ಮೋಡ ಬಿತ್ತನೆ ಪ್ರಾರಂಭ ಮಾಡುತ್ತೇವೆ. ಜುಲೈ ಎರಡನೇ ವಾರದಲ್ಲಿ ಮೋಡ ಬಿತ್ತನೆ ಮಾಡುವ ಗುರಿ ಇದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು-ಹುಬ್ಬಳ್ಳಿ ಬದಲಾಗಿ ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಮೋಡ ಬಿತ್ತನೆ ನಿರ್ಧಾರ ಮಾಡಲಾಗಿದೆ. ಬೆಂಗಳೂರಿನಲ್ಲಿ ಹೆಚ್ಚು ವಾಯು ನೆಲೆ ಕೇಂದ್ರ ಇರುವುದರಿಂದ ಅನುಮತಿಯ ಸಮಸ್ಯೆ ಇದೆ. ಹೀಗಾಗಿ ಬೆಂಗಳೂರು ಬಿಟ್ಟು ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಮೋಡ ಬಿತ್ತನೆ ಮಾಡಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದರು.

cloud seeding

ಮೀಸಲಾತಿ ಹೆಚ್ಚಿಸುವ ಕುರಿತು ಸಂಪುಟದಲ್ಲಿ ಚರ್ಚೆ ಆಯಿತು. ಮೀಸಲಾತಿ ಶೇ.50 ಮೀರಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಈಗಿರುವ ಮೀಸಲಾತಿ ಹೇಗೆ ಬದಲಾವಣೆ ಮಾಡಬಹುದು ಎನ್ನುವ ಮಾಹಿತಿ ನೀಡುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ಮುಖ್ಯ ಕಾರ್ಯದರ್ಶಿಗಳು ವರದಿ ನೀಡಿದ ಬಳಿಕ ಕಮಿಟಿ ಮಾಡುವ ಕುರಿತು ತೀರ್ಮಾನ ಮಾಡಲಾಗುತ್ತದೆ. ಮುಂದಿನ ಕ್ಯಾಬಿನೆಟ್ ಕಮಿಟಿನಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

TAGGED:cabinet meetingCrop SurveykarnatakaMinister Krishna Byre GowdaPublic TVಅಧಿವೇಶನಕ್ಯಾಬಿನೆಟ್ಪಬ್ಲಿಕ್ ಟಿವಿಮೋಡ ಬಿತ್ತನೆಸಚಿವ ಕೃಷ್ಣಭೈರೇಗೌಡಸಿಎಂ
Share This Article
Facebook Whatsapp Whatsapp Telegram

Cinema news

Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories

You Might Also Like

Jammu Kashmir
Latest

ಜಮ್ಮು-ಕಾಶ್ಮೀರದಲ್ಲಿ ನಿರಂತರ ಹಿಮಪಾತ – ಶ್ರೀನಗರ ಏರ್‌ಪೋರ್ಟ್‌ನಲ್ಲಿ ಹಿಮ ತೆರವು ಕಾರ್ಯ

Public TV
By Public TV
8 minutes ago
shidlaghatta City Municipal Council Commissioner Amrutha Gowda receives death threat from Congress Leader Rajeev Gowda 1
Bengaluru City

ನಗರಸಭೆ ಪೌರಾಯುಕ್ತೆಗೆ ಬೆದರಿಕೆ – ರಾಜೀವ್ ಗೌಡ ನಿವಾಸದ ಮೇಲೆ ಪೊಲೀಸರ ದಾಳಿ

Public TV
By Public TV
21 minutes ago
Indian Man Shoot
Latest

ಅಮೆರಿಕದಲ್ಲಿ ಪತ್ನಿ, ಮೂವರು ಸಂಬಂಧಿಕರನ್ನ ಗುಂಡಿಟ್ಟು ಕೊಂದ ಭಾರತೀಯ ವ್ಯಕ್ತಿ – 12 ಕೇಸ್‌ ದಾಖಲು

Public TV
By Public TV
23 minutes ago
Seemanth kumar Singh Maheshwar Rao
Bengaluru City

77ನೇ ಗಣರಾಜ್ಯೋತ್ಸವ; ಸಾರ್ವಜನಿಕರಿಗೆ ಆನ್‌ಲೈನ್‌ನಲ್ಲಿ 2,000 ಇ-ಪಾಸ್ ವ್ಯವಸ್ಥೆ: ಸೀಮಂತ್ ಕುಮಾರ್ ಸಿಂಗ್

Public TV
By Public TV
45 minutes ago
Modi Trump
Latest

ಗುಡ್‌ ನ್ಯೂಸ್‌ – ಭಾರತದ ಮೇಲಿನ 25% ಹೆಚ್ಚುವರಿ ಸುಂಕ ತೆಗೆಯಲು ಟ್ರಂಪ್‌ ಸಿದ್ಧತೆ!

Public TV
By Public TV
1 hour ago
Ballari Janardhan Reddy Sriramulu Model House Fire
Bellary

ರೆಡ್ಡಿ, ರಾಮುಲುಗೆ ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ – ಇಬ್ಬರು ಅಪ್ರಾಪ್ತರು ಸೇರಿ 8 ಮಂದಿ ವಶಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?