Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಂಬಿಪಿ ಸಿಎಂ ಆಗ್ಲಿ: ಗೋವಾ ಬಿಜೆಪಿ ನಾಯಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಎಂಬಿಪಿ ಸಿಎಂ ಆಗ್ಲಿ: ಗೋವಾ ಬಿಜೆಪಿ ನಾಯಕ

Karnataka

ಎಂಬಿಪಿ ಸಿಎಂ ಆಗ್ಲಿ: ಗೋವಾ ಬಿಜೆಪಿ ನಾಯಕ

Public TV
Last updated: July 2, 2019 9:10 pm
Public TV
Share
2 Min Read
mbpatil 1524321611
SHARE

-ಬಿಜೆಪಿ ನಾಯಕನಿಗೆ ಸಾಥ್ ನೀಡಿದ ಆರ್.ಶಂಕರ್
-ನಾನು ಸಿಎಂ ಆಗಬಾರದಾ? ಎಂಬಿಪಿ ಪ್ರಶ್ನೆ

ವಿಜಯಪುರ: ಇಂದು ತಿಕೋಟ ತಾಲೂಕಿನಲ್ಲಿ ನಡೆದ ದುರ್ಗಾದೇವಿ ಜಾತ್ರೆಯಲ್ಲಿ ಭಾಗಿಯಾಗಿದ್ದ ಗೋವಾ ಬಿಜೆಪಿ ಶಾಸಕ ಮೈಕಲ್ ಲೋಬೋ, ಮುಂದಿನ ದಿನಗಳಲ್ಲಿ ವಿಜಯಪುರ ಜಿಲ್ಲೆಯ ನಾಯಕ, ಗೃಹ ಸಚಿವರಾಗಿರುವ ಎಂ.ಬಿ.ಪಾಟೀಲ್ ಕರ್ನಾಟಕದ ಮುಖ್ಯಮಂತ್ರಿ ಆಗಲಿ ಎಂಬ ಇಂಗಿತವನ್ನು ಹೊರ ಹಾಕಿದರು.

ಜಾತ್ರೆಯ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಮೈಕಲ್ ಲೋಬೋ, ಸಚಿವರು ಮತ್ತು ನಾನು ಒಳ್ಳೆಯ ಸ್ನೇಹಿತರಾಗಿದ್ದು, ರಾಜ್ಯ, ದೇಶದ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಇವತ್ತು ಕಾಂಗ್ರೆಸ್ ನಲ್ಲಿದ್ದಾರೆ. ಮುಂದೆ ಎಲ್ಲಿ ಇರುತ್ತಾರೋ ಗೊತ್ತಿಲ್ಲ ಎಂದು ಹೇಳಿದರು.

mb patil main

ಮೈಕಲ್ ಲೋಬೋ ಅವರ ಬಳಿಕ ಮಾತನಾಡಿದ ಸಚಿವ ಆರ್.ಶಂಕರ್ ಸಹ ಎಂ.ಬಿ ಪಾಟೀಲ್ ಮುಖ್ಯಮಂತ್ರಿ ಆಗಲಿ ಎಂಬ ಇಚ್ಛೆಯನ್ನು ಹೊರ ಹಾಕಿದರು. ಪಾಟೀಲರು ಜಲಸಂಪನ್ಮೂಲ ಸಚಿವರಾಗಿದ್ದು ಬರಡು ಭೂಮಿಗೆ ನೀರು ಹರಿಸಿದ್ದಾರೆ. ಅಭಿವೃದ್ಧಿಪರ ಕೆಲಸಗಳಿಂದಲೇ ಕ್ಷೇತ್ರದಲ್ಲಿ ಬಹು ಮತಗಳ ಅಂತದರದಲ್ಲಿ ಗೆಲುವು ಕಾಣುತ್ತಾ ಬಂದಿದ್ದಾರೆ. ತಾಯಿ ದುರ್ಗಾದೇವಿಯ ಆಶೀರ್ವಾದ ಇದ್ದರೆ ಎಂ.ಬಿ.ಪಾಟೀಲರು ಸಹ ಮುಖ್ಯಮಂತ್ರಿ ಆಗಲಿ ಎಂದು ಆರ್.ಶಂಕರ್ ತಿಳಿಸಿದರು.

mbp 3

ಮೈಕಲ್ ಲೋಬೋ ಅವರ ಮಾತಿಗೆ ರಾಜಕೀಯ ಅರ್ಥ ಕಲ್ಪಿಸೋದು ಬೇಡ. ಪಕ್ಷಗಳು ಬೇರೆಯಾಗಿದ್ದರೂ, ನಾವಿಬ್ಬರು ಒಳ್ಳೆಯ ಸ್ನೇಹಿತರು. ಸ್ನೇಹದ ಪ್ರತೀಕವಾಗಿ ತನ್ನ ಗೆಳೆಯ ಸಿಎಂ ಆಗಲಿ ಎಂದು ಹಾರೈಸಿದ್ದಾರೆ. ಹಾಗಾದ್ರೆ ನೀವು ಮುಖ್ಯಮಂತ್ರಿ ಆಗ್ತೀರಾ ಪ್ರಶ್ನೆಗೆ ನಾನು ಸಿಎಂ ಆಗಬಾರದಾ ಎಂದರು. ಕ್ಷೇತ್ರ ಮತ್ತು ಕರ್ನಾಟಕದ ಜನತೆ ನಮಗೆ ಬಹುಮತ ನೀಡಿ ನಮ್ಮನ್ನು ಸ್ವಂತ ಬಲದಿಂದ ಸರ್ಕಾರ ರಚನೆ ಮಾಡಿದಾಗ ಸಿಎಂ ಆಗಲು ಸಾಧ್ಯ. ನಾವು, ನೀವೂ ಹೇಳಿದ ಮಾತ್ರಕ್ಕೆ ಯಾರು ಸಿಎಂ ಆಗಲ್ಲ. ಬಹುಮತ ಬಂದ ಮೇಲೆ ಎಲ್ಲ ಶಾಸಕರು ಮತ್ತು ಹೈಕಮಾಂಡ್ ಒಪ್ಪಿದರೆ ಮಾತ್ರ ಸಿಎಂ ಆಗಲು ಸಾಧ್ಯವಾಗಲಿದೆ ಎಂದು ಎಂ.ಬಿ.ಪಾಟೀಲರು ಸ್ಪಷ್ಟನೆ ನೀಡಿದರು.

mbp 2

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಮಾತನಾಡಿ, ಮೈತ್ರಿ ಸರ್ಕಾರ ಸುಭದ್ರವಾಗಿದ್ದು, ಇಬ್ಬರ ರಾಜೀನಾಮೆಯಿಂದ ಏನು ಆಗಲ್ಲ. ಪಕ್ಷದ ಮುಖಂಡರು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಹೈಕಮಾಂಡ್, ಜನಾಶೀರ್ವಾದ, ಶಾಸಕರ ಬೆಂಬಲ ಸಿಕ್ಕರೆ ಎಂ.ಬಿ.ಪಾಟೀಲ್ ಮುಖ್ಯಮಂತ್ರಿಯಾಗಬಹುದು ಎಂದರು.

mbp 4

2018ರಲ್ಲಿ ಸಚಿವ ಸ್ಥಾನ ವಂಚಿತರಾಗಿದ್ದ ಎಂ.ಬಿ.ಪಾಟೀಲ್ ಇದೇ ಜಾತ್ರೆಯಲ್ಲಿ ಭಾಗವಹಿಸಿದ್ದ ವೇಳೆಯೂ ಮುಖ್ಯಮಂತ್ರಿ ಆಗುವ ಇಂಗಿತವನ್ನು ಹೊರ ಹಾಕಿದ್ದರು. ಅಂದು ಸ್ವ-ಕ್ಷೇತ್ರ ಗ್ರಾಮದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರೆಯಲ್ಲಿ ಭಾಗಿಯಾಗಿದ್ದ ಎಂ.ಬಿ.ಪಾಟೀಲ್, ನಾನು ಸಚಿವನಾದರೂ, ಶಾಸಕನಾದರೂ ಯಾವಾಗಲೂ ಫವರ್ ಫುಲ್. ತಾಯಿ ದುರ್ಗಾದೇವಿಯ ಆಶೀರ್ವಾದ ನನ್ನ ಮೇಲಿದೆ. ತಾಯಿಯ ಕೃಪೆಯಿಂದ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗಲಿದೆ ಎಂಬ ಭರವಸೆ ವ್ಯಕ್ತಪಡಿಸಿದ್ದರು.

mb patil 1

ನನಗೆ ಇನ್ನೂ 54 ವರ್ಷ ಆಗಿದೆ. ಮುಂದಿನ ದಿನಗಳಲ್ಲಿ ನನಗೂ ಮುಖ್ಯಮಂತ್ರಿ ಆಗುವ ಟೈಮ್ ಬರುತ್ತದೆ. ಸಿಎಂ ಆಗುವ ಆಸೆ ಸ್ವಾಭಾವಿಕ. ಆದ್ರೆ ನನಗೆ ದುರಾಸೆ ಇಲ್ಲ ಎಂದು ಮುಖ್ಯಮಂತ್ರಿ ಆಗುವ ಇಂಗಿತವನ್ನ ವ್ಯಕ್ತಪಡಿಸಿದರು. ಸದ್ಯ ದೇವಿ ಪರೀಕ್ಷೆ ನಡೆಸಿದ್ದಾಳೆ. ನನಗೆ ಎದುರಾಗಿರುವ ಪರೀಕ್ಷೆಯನ್ನು ದುರ್ಗಾದೇವಿಯೇ ಪಾರು ಮಾಡುತ್ತಾಳೆ. ಕಳೆದ ವರ್ಷದ ಜಾತ್ರೆಯಲ್ಲಿಯೂ ಎಂ.ಬಿ. ಪಾಟೀಲ್ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದು, ಶುಕ್ರವಾರ ಅದೇ ಮಾತನ್ನು ಪುನರುಚ್ಚರಿಸಿದ್ದರು.

TAGGED:bjpcmcongressMB PatilMichael LoboPublic TVR Shankarಆರ್.ಶಂಕರ್ಎಂ.ಬಿ.ಪಾಟೀಲ್ಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಮೈಕಲ್ ಲೋಬೋಸಿಎಂ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
39 minutes ago
David Warner
Cricket

ಪಾಕ್‌ ಕ್ರಿಕೆಟ್‌ ಲೀಗ್‌ಗೆ ಶಾಕ್‌ – ಡೇವಿಡ್ ವಾರ್ನರ್ ಅರೆಸ್ಟ್‌

Public TV
By Public TV
1 hour ago
US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
1 hour ago
Air India Flight
Latest

ಮತ್ತಷ್ಟು ಏರಿಕೆಯಾಗಲಿದೆ ಏರ್ ಇಂಡಿಯಾ ಪ್ರಯಾಣ ದರ

Public TV
By Public TV
2 hours ago
Donald Trump
Latest

ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
2 hours ago
Basangouda Patil Yatnal 2
Bagalkot

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್‌ : ರಮೇಶ್‌ ಜಾರಕಿಹೊಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?