ಕಾರ್ಗಿಲ್ ಯುದ್ಧದಂತಹ ಪ್ರಯತ್ನಕ್ಕೆ ಕೈ ಹಾಕುವ ಧೈರ್ಯ ಪಾಕ್‍ಗೆ ಇಲ್ಲ: ಬಿಪಿನ್ ರಾವತ್

Public TV
1 Min Read
Bipin Rawat

ನವದೆಹಲಿ: ಪಾಕಿಸ್ತಾನವು ಮತ್ತೊಮ್ಮೆ 1999ರಲ್ಲಿ ನಡೆದ ಕಾರ್ಗಿಲ್ ಯುದ್ಧದಂತಹ ಪ್ರಯತ್ನ ಮಾಡುವುದಿಲ್ಲ. ಏಕೆಂದರೆ ಪಾಕ್ ಅನೇಕ ಪರಿಣಾಮಗಳನ್ನು ಎದುರಿಸಿದೆ ಎಂದು ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.

ಪಾಕಿಸ್ತಾನದ ವಿರುದ್ಧ ಕಾರ್ಗಿಲ್‍ನಲ್ಲಿ ನಡೆದ ಆಪರೇಷನ್ ವಿಜಯ್‍ದಲ್ಲಿ ಭಾರತ ಗೆಲುವು ಸಾಧಿಸಿತ್ತು. ಈ ನೆನಪಿಗಾಗಿ ನಡೆದ ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಶಸ್ತ್ರ ಪಡೆಗಳು ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ನಿಗಾ ವಹಿಸಿವೆ. ಎಲ್ಲ ಪ್ರದೇಶವನ್ನೂ ರಕ್ಷಿಸುತ್ತೇವೆ. ಸೈನ್ಯದವರು ಕಟ್ಟುನಿಟ್ಟಾಗಿ ಕಾವಲು ಕಾಯುತ್ತಿವೆ ಎಂದು ತಿಳಿಸಿದರು.

ಪಾಕಿಸ್ತಾನವು ಕಾರ್ಗಿಲ್ ನಂತಹ ಮತ್ತೊಂದು ಯುದ್ಧಕ್ಕೆ ಮುಂದಾಗುವುದಿಲ್ಲ ಎಂದು ಭಾವಿಸಿದ್ದೇನೆ. ಅವರಿಗೆ ಯುದ್ಧದ ಭೀಕರತೆ ಮುಟ್ಟಿದೆ. ಪಾಕಿಸ್ತಾನವು ಮುಂಬರುವ ದಿನಗಳಲ್ಲಿ ಹಾಗೂ ವರ್ಷಗಳಲ್ಲಿ ಒಳನುಸುಳುವಿಕೆಯನ್ನು ಪ್ರಯತ್ನಿಸಲು ಧೈರ್ಯ ಮಾಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಬಾಲಿವುಡ್ ಗೀತರಚನೆಕಾರ ಸಮೀರ್ ಅವರು ಬರೆದ ಕಾರ್ಗಿಲ್ ವೀರರಿಗೆ ಮೀಸಲಾದ ವಿಶೇಷ ಗೌರವದ ಹಾಡಿನ ವಿಡಿಯೋವನ್ನು ಬಿಪಿನ್ ರಾವತ್ ಬಿಡುಗಡೆ ಮಾಡಿದರು. ವಿಡಿಯೋದಲ್ಲಿ ಬಾಲಿವುಡ್‍ನ ಹಿರಿಯ ನಟ ಅಮಿತಾಬ್ ಬಚ್ಚನ್ ಹಾಗೂ ಅನೇಕ ಪ್ರಸಿದ್ಧ ನಟರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *