Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಅಮೆರಿಕದಲ್ಲಿರುವಾಗಲೇ ಸಮ್ಮಿಶ್ರ ಸರ್ಕಾರ ಪತನ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ ಅಮೆರಿಕದಲ್ಲಿರುವಾಗಲೇ ಸಮ್ಮಿಶ್ರ ಸರ್ಕಾರ ಪತನ?

Bengaluru City

ಸಿಎಂ ಅಮೆರಿಕದಲ್ಲಿರುವಾಗಲೇ ಸಮ್ಮಿಶ್ರ ಸರ್ಕಾರ ಪತನ?

Public TV
Last updated: July 6, 2019 4:33 pm
Public TV
Share
3 Min Read
dd
SHARE

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಸ್ ಸಮ್ಮಿಶ್ರ ಸರ್ಕಾರ ಕೊನೆಗೂ ಪತನಗೊಳ್ಳುವುದು ಬಹುತೇಕ ಖಚಿತವಾಗಿದೆ. ಈ ಮೂಲಕ ಸಿಎಂ ಅವರು ಅಮೆರಕದಿಂದ ವಾಪಸ್ಸಾಗುತ್ತಿದ್ದಂತೆಯೇ ಶಾಕ್ ಎದುರಾಗಿದೆ.

ಲೋಕಸಭಾ ಚುನಾವಣೆಯ ಬಳಿಕ ಸಮ್ಮಿಶ್ರ ಸರ್ಕಾರದಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿತ್ತು. ಆದರೆ ಈ ಬಗ್ಗೆ ಎರಡೂ ಪಕ್ಷದ ಮುಖಂಡರು, ಸರ್ಕಾರ 5 ವರ್ಷ ಪೂರ್ಣಗೊಳ್ಳುವುದಾಗಿ ಭರವಸೆ ನೀಡುತ್ತಲೇ ಬಂದರು. ಈ ಮಧ್ಯೆ ಸಿಎಂ ಅವರು ಕಾರ್ಯಕ್ರಮದ ನಿಮಿತ್ತ ಅಮೆರಿಕಕ್ಕೆ ತೆರಳಿದ್ದು, ಇದೀಗ ಅವರು ಅಲ್ಲಿಂದ ವಾಪಸ್ ಆಗುವ ಮೊದಲೇ ಸರ್ಕಾರ ಬಿದ್ದು ಹೋಗುವ ಹಂತಕ್ಕೆ ಬಂದಿದೆ.

operation maha sunami

ಸಿಎಂ ಅವರು ಅಮೆರಿಕ ತೆರಳಿದ ಬಳಿಕ ಕಾಂಗ್ರೆಸ್ ಹಾಗೂ ಜೆಡಿಎಸ್ ರಾಜಕಾರಣದಲ್ಲಿ ಮತ್ತಷ್ಟು ಬೆಳವಣಿಗೆಗಳು ನಡೆದಿದ್ದು, ರಮೇಶ್ ಜಾರಕಿಹೊಳಿ ಹಾಗೂ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇವರಿಬ್ಬರು ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ನೀಡಿದ ಬಳಿಕ ಸಮ್ಮಿಶ್ರ ಸರ್ಕಾರದಲ್ಲಿ ಮತ್ತೆ ತಲ್ಲಣವೇರ್ಪಟ್ಟಿತ್ತು. ಅಲ್ಲದೆ ಎರಡು ಪಕ್ಷದ ಮುಖಂಡರು ಏನೂ ಆಗದಂತೆ ಹೇಳಿಕೆಗಳನ್ನು ಕೊಡುತ್ತಿದ್ದರು. ಮಾಧ್ಯಮಗಳು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿವೆ. ಸರ್ಕಾರಕ್ಕೆ ಏನು ಆಗುವುದಿಲ್ಲ ಎಂದು ಹೇಳಿ ಮಾಧ್ಯಮಗಳ ವಿರುದ್ಧ ಗರಂ ಆಗುತ್ತಿದ್ದರು. ಬಿಜೆಪಿಯವರು ಕೂಡ ಸಮ್ಮಿಶ್ರ ಸರ್ಕಾರ ಜಾಸ್ತಿ ದಿನ ಉಳಿಯಲ್ಲ. ಅತೀ ಶೀಘ್ರದಲ್ಲೇ ಪತನಗೊಳ್ಳುತ್ತದೆ ಎಂದು ಹೇಳುತ್ತಲೇ ಬಂದಿದ್ದಾರೆ.

bjp

ಇಷೆಲ್ಲ ಅಲ್ಲೋಲ ಕಲ್ಲೊಲ್ಲಗಳ ಮಧ್ಯೆ ಕೇಂದ್ರ ಬಜೆಟ್ ಬಂದಿದೆ. ಶುಕ್ರವಾರ ನರೇಂದ್ರ ಮೋದಿ ಸರ್ಕಾರದ 2ನೇ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ. ಒಂದೆಡೆ ಬಜೆಟ್ ಮಂಡನೆಯಾಗುತ್ತಿದ್ದರೆ ಇತ್ತ ಸಮ್ಮಿಶ್ರ ಸರ್ಕಾರದ ಅತೃಪ್ತರು ರಾಜೀನಾಮೆ ನೀಡುವ ಪ್ಲಾನ್ ನಡೆಯುತಿತ್ತು. 13 ಮಂದಿ ಶಾಸಕರು ರಾಜೀನಾಮೆ ನೀಡುವ ನಿರ್ಧಾರವನ್ನು ನಿನ್ನೆಯೇ ಮಾಡಿದ್ದರು. ಆದರೆ ಬಜೆಟ್ ಇದ್ದ ಕಾರಣ ಅದನ್ನು ಬಹಿರಂಗ ಪಡಿಸಲಿಲ್ಲ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

dks hdk congress jds 1

ಇಂದು ಬೆಳಗ್ಗಿನಿಂದಲೇ ಪಬ್ಲಿಕ್ ಟಿವಿ 13 ಮಂದಿ ಶಾಸಕರು ರಾಜೀನಾಮೆ ನೀಡುವ ಬಗ್ಗೆ ವರದಿ ಮಾಡುತಿತ್ತು. 13 ಶಾಸಕರರು ಎರಡು ತಂಡವಾಗಿ ಬಂದು ರಾಜೀನಾಮೆ ನೀಡುತ್ತಾರೆ ಎನ್ನುವ ನಿಖರ ಸುದ್ದಿಯನ್ನು ಪ್ರಸಾರ ಮಾಡಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, ಸರ್ಕಾರಕ್ಕೆ ಏನು ಆಗುವುದಿಲ್ಲ. ನೀವು ಹೇಳಿದ ಶಾಸಕರು ಕಾಂಗ್ರೆಸ್ಸಿನ ಹಿರಿಯ ನಾಯಕರು. ಅವರು ರಾಜೀನಾಮೆ ನೀಡುವುದಿಲ್ಲ ಎಂದೇ ಹೇಳಿದ್ದರು. ಅಲ್ಲದೆ ಮಾಧ್ಯಮದವರು ಕ್ರೆಡಿಬಿಲಿಟಿ ಹಾಳು ಮಾಡಿಕೊಳ್ಳಬೇಡಿ. ಊಹಾಪೋಹದ ಸುದ್ದಿಗಳನ್ನು ಬಿತ್ತರಿಸಬೇಡಿ ಎಂದು ಹೇಳಿದರು. ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡುತ್ತಿದ್ದಂತೆ ರಾಜೀನಾಮೆ ನೀಡಲು ಬಂಡಾಯ ಶಾಸಕರು ವಿಧಾನಸೌಧ ಪ್ರವೇಶಿಸಿದ್ದರು.

Congress JDS 1

ಯಾರೆಲ್ಲ ರಾಜೀನಾಮೆ ನೀಡಿದ್ದಾರೆ..?
ಮೊದಲನೆಯದಾಗಿ ಬಿಡುಗಡೆಯಾಗಿರುವ ಬಂಡಾಯಗಾರರ ಪಟ್ಟಿಯಲ್ಲಿ ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ಹಿರೇಕೆರೂರು ಶಾಸಕ ಬಿ.ಸಿಪಾಟೀಲ್, ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ರಾಜೀನಾಮೆ ನೀಡಿದ್ದಾರೆ. ಹುಣಸೂರು ಶಾಸಕ ಎಚ್. ವಿಶ್ವನಾಥ್, ಕೆ.ಆರ್.ಪೇಟೆ ಶಾಸಕ ನಾರಾಯಣ ಗೌಡ ಸ್ಪೀಕರ್ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ತಲ್ಲಣ ಶುರುವಾಗಿದೆ.

Ramesh jarkiholi

ಎರಡನೇ ತಂಡದಲ್ಲಿ ಬೆಂಗಳೂರಿನ ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜು, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಸ್ಪೀಕರ್ ಕಚೇರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಸಮ್ಮಿಶ್ರ ಸರ್ಕಾರದ ಈ ಬೆಳವಣಿಗೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಮೆಂಟ್ ಮಾಡಿ..

TAGGED:americabengalurubjpcmcongressjdsPublic TVಅಮೆರಿಕಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುಸಿಎಂ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
32 minutes ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
36 minutes ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
41 minutes ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
1 hour ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
1 hour ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?