Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅತೃಪ್ತರ ರಾಜೀನಾಮೆ ಇಂದೇ ನಿರ್ಧರಿಸಿ-ಸುಪ್ರೀಂ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅತೃಪ್ತರ ರಾಜೀನಾಮೆ ಇಂದೇ ನಿರ್ಧರಿಸಿ-ಸುಪ್ರೀಂ ಆದೇಶ

Latest

ಅತೃಪ್ತರ ರಾಜೀನಾಮೆ ಇಂದೇ ನಿರ್ಧರಿಸಿ-ಸುಪ್ರೀಂ ಆದೇಶ

Public TV
Last updated: July 11, 2019 11:29 am
Public TV
Share
3 Min Read
supreme court
SHARE

ಬೆಂಗಳೂರು: ರಾಜೀನಾಮೆ ಸಲ್ಲಿಸಿರುವ ಅತೃಪ್ತ ಶಾಸಕರ ಅರ್ಜಿಯನ್ನು ಇಂದೇ ನಿರ್ಧರಿಸಿ. ಇಂದು ಸಂಜೆ 6 ಗಂಟೆಯೊಳಗೆ ಅರ್ಜಿ ಸಲ್ಲಿಸಿರುವ 10 ಶಾಸಕರು ಸ್ಪೀಕರ್ ಮುಂದೆ ಹಾಜರಾಗಬೇಕು. ಹಾಗಾಗಿ ಇಂದು ಎಲ್ಲ ಅತೃಪ್ತ ಶಾಸಕರು ಎಲ್ಲರೂ ಸ್ಪೀಕರ್ ಮುಂದೆ ಹಾಜರಾಗಬೇಕು. ರಾಜೀನಾಮೆ ನೀಡಿರುವ ಎಲ್ಲ ಶಾಸಕರಿಗೆ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರು ಸೂಕ್ತ ರಕ್ಷಣೆಯನ್ನು ನೀಡಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.

Rebel MLA

ಅತೃಪ್ತ ಶಾಸಕರು ಬುಧವಾರ ಸ್ಪೀಕರ್ ವಿಳಂಬ ನೀತಿಯನ್ನು ವಿರೋಧಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅತೃಪ್ತರ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ಕೈಗೆತ್ತಿಕೊಂಡು ವಿಚಾರಣೆ ನಡೆಸಿತು. ಮುಖ್ಯ ನ್ಯಾ.ರಂಜನ್ ಗೊಗಯ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಸಿತು. ಅತೃಪ್ತರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಮುಕುಲ್ ರೋಹಟಿಗೆ ವಾದವನ್ನು ಆಲಿಸಿತು. ಇತ್ತ ಸಿಎಂ, ರಾಜ್ಯ ಸರ್ಕಾರ ಮತ್ತು ಸ್ಪೀಕರ್ ಅವರಿಗೆ ನೋಟಿಸ್ ರವಾನಿಸಿದ್ದು, ನಿಮ್ಮ ವಾದವನ್ನು ಮಂಡಿಸಬಹುದು ಎಂದು ತಿಳಿಸಿದೆ.

Rebel MLA 4

ಅತೃಪ್ತ ಶಾಸಕರ ದೂರು ಏನು?
ಜುಲೈ 6ರಂದು ಎಲ್ಲ 10 ಶಾಸಕರು ರಾಜೀನಾಮೆ ಸಲ್ಲಿಸಲು ವಿಧಾನಸೌಧಕ್ಕೆ ಆಗಮಿಸುತ್ತಿರುವ ವಿಷಯ ತಿಳಿದು ಸ್ಪೀಕರ್ ಕಚೇರಿಯಿಂದ ಹೊರ ನಡೆದಿದ್ದಾರೆ. ಹೀಗಾಗಿ ಸ್ಪೀಕರ್ ಕಚೇರಿಯ ಕಾರ್ಯದರ್ಶಿಗಳಿಗೆ ರಾಜೀನಾಮೆಯನ್ನು ಸಲ್ಲಿಸಿದ್ದೇವೆ. ಅಲ್ಲಿಂದ ನೇರವಾಗಿ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆಯನ್ನು ಸಲ್ಲಿಸಲಾಗಿದೆ. ಜುಲೈ 9ರಂದು ಕಚೇರಿಗೆ ಆಗಮಿಸಿದ ಸ್ಪೀಕರ್, ಎಂಟು ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲ, ಐವರ ಶಾಸಕರ ಪತ್ರಗಳು ಕ್ರಮಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಜುಲೈ 12ರಂದು ವಿಚಾರಣೆಗೆ ಹಾಜರಾಗಬೇಕೆಂದು ಐವರಲ್ಲಿ ಮೂವರಿಗೆ ತಿಳಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಸಭೆಯ ನಾಯಕರು ರಾಜೀನಾಮೆ ಸಲ್ಲಿಸಿರುವ ಶಾಸಕರನ್ನು ಅನರ್ಹಗೊಳಿಸಬೇಕೆಂದು ಸ್ವೀಕರ್ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ. 10 ಶಾಸಕರು ತಮ್ಮ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ರೆ ಅವರನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಸ್ವೀಕರ್ ಅವರಿಗೆ ಸಲ್ಲಿಸಿರುವ ಅರ್ಜಿಯನ್ನು ರದ್ದುಗೊಳಿಸಬೇಕು.

HDK speaker Ramesh kumar

ಜುಲೈ 12ರಂದು ಅಧಿವೇಶನ ಆರಂಭಗೊಳ್ಳಲಿದ್ದು, ಅಂದೇ ಸ್ಪೀಕರ್ ರಾಜೀನಾಮೆ ಕ್ರಮಬದ್ಧವಾಗಿರುವ ಶಾಸಕರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಸ್ಪೀಕರ್ ನಡೆ ಯಾರದ್ದೊ ಒತ್ತಡಕ್ಕೆ ಮಣಿದಂತೆ ಕಾಣುತ್ತಿದೆ. ಬಹುಮತವಿಲ್ಲದ ಸರ್ಕಾರ ಶಾಸಕರನ್ನು ಅನರ್ಹಗೊಸುವಂತೆ ಬೆದರಿಕೆಯನ್ನು ಹಾಕಿದೆ. ಶಾಸಕರಾದ ನಾವು ಯಾವುದೇ ಭಯ, ಒತ್ತಡ, ಪ್ರಲೋಭನೆಗೆ ಬಲಿಯಾಗದೇ ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇವೆ.

Mumbai Hotel copy

ನಮ್ಮ ರಾಜೀನಾಮೆ ಅಂಗೀಕಾರವಾಗದೇ ಇರೋದು ಸಂವಿಧಾನದ 14ನೇ ಪರಿಚ್ಚೇದದ ಸ್ಪಷ್ಟ ಉಲ್ಲಂಘನೆ ಆಗಿದೆ. ನಾವು ಕರ್ನಾಟಕ ವಿಧಾನಸಭಾ ನಿಯಮಾವಳಿ ರೂಲ್ ನಂಬರ್ 202 ಪ್ರಕಾರ ರಾಜೀನಾಮೆ ಪತ್ರ ಸಲ್ಲಿಸಿದೇವೆ. ಆರ್ಟಿಕಲ್ 190 ರ ಪ್ರಕಾರ ರಾಜೀನಾಮೆ ಪತ್ರದಲ್ಲಿ ಕೇವಲ ಸಹಿ ಇದ್ರೆ ಸಾಕು ಜೊತೆಗೆ ಸ್ಪೀಕರ್ ಗೆ ತೃಪ್ತಿ ಆದ್ರೆ ಸಾಕು. ರಾಜೀನಾಮೆ ಪತ್ರ ಹೀಗೆ ಇರಬೇಕು ಎಂಬ ಕಾನೂನು ಇಲ್ಲ. ನಾವು ಸ್ಪೀಕರ್ ಕಚೇರಿಗೆ ಹೋಗಿರುವ ಬಗ್ಗೆ ಮಾಧ್ಯಮಗಳಲ್ಲಿ ಬಂದಿದೆ, ಅದನ್ನು ಸ್ಪೀಕರ್ ಕೂಡಾ ನೋಡಿದ್ದಾರೆ.

Supreme COurt 1

ಸ್ಪೀಕರ್ ಕಾನೂನು ಪ್ರಕಾರ ನಡೆದುಕೊಳ್ಳುತ್ತಿಲ್ಲ ಮತ್ತು ಪಕ್ಷಪಾತ ನೀತಿ ಅನುಸರಿಸುತ್ತಿದ್ದಾರೆ. ಈಗ ಮೈತ್ರಿ ಸರ್ಕಾರ ಅಧಿಕೃತವಾಗಿ ಬಹುಮತ ಕಳೆದುಕೊಂಡಿದೆ. ಹೀಗಿದ್ದರೂ ರಮೇಶ್ ಕುಮಾರ್ ತಾವು ಸದನದ ಸ್ಪೀಕರ್ ಅಂತಾ ಅಂದುಕೊಂಡಿದ್ದಾರೆ. ಬಹುಮತ ಕಳೆದುಕೊಂಡ ಸರ್ಕಾರದಲ್ಲಿ ಸ್ಪೀಕರ್ ಮತ್ತು ಸಿಎಂ ಪವರ್ ಲೇಸ್ ಇದ್ದಂಗೆ. ಹಾಗಾಗಿ ನ್ಯಾಯಾಲಯ ಮಧ್ಯಪ್ರವೇಶಿಸಿ, ಸಂವಿಧಾನ ಉಳಿಸಬೇಕು. ನಮ್ಮ ಅರ್ಜಿಯನ್ನ ಮಾನ್ಯ ಮಾಡಬೇಕು. ಸ್ಪೀಕರ್ ನಮ್ಮ ರಾಜೀನಾಮೆಯನ್ನ ಅಂಗೀಕರಿಸುವಂತೆ ನ್ಯಾಯಾಲಯ ನಿರ್ದೇಶನ ನೀಡಬೇಕು.

supreme

ಸ್ಪೀಕರ್ ವಾದವೇನು?
ಸದನದ ನಡಾವಳಿ ಪ್ರಕಾರ ಕಾರ್ಯ ನಿರ್ವಹಿಸುತ್ತಿದ್ದೇನೆ. ಸಲ್ಲಿಕೆಯಾಗಿರುವ 13 ರಾಜೀನಾಮೆ ಪತ್ರಗಳ ಪೈಕಿ 5 ರಾಜೀನಾಮೆ ಪತ್ರಗಳು ನಿಯಮ ಬದ್ಧವಾಗಿವೆ. ಖುದ್ದು ಹಾಜರಾಗಿ ಮತ್ತೊಮ್ಮೆ ರಾಜೀನಾಮೆ ಪತ್ರ ನೀಡುವಂತೆ ಶಾಸಕರಿಗೆ ತಿಳುವಳಿಕೆ ಪತ್ರದ ಮೂಲಕ ಸೂಚಿಸಿದ್ದೇನೆ. ಕ್ರಮಬದ್ಧವಾಗಿ ರಾಜೀನಾಮೆ ನೀಡಿದವರಿಗೆ ವಿಚಾರಣೆಗೆ ಆಗಮಿಸಲು ಸಮಯ ನಿಗದಿಪಡಿ, ಈ ಎಲ್ಲಾ ಪ್ರಕ್ರಿಯೆ ಬಗ್ಗೆ ರಾಜ್ಯಪಾಲರ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಬಹುದು.

TAGGED:jdsKarnataka PoliticsMLA'songressPublic TVSupreme Courtಕರ್ನಾಟಕ ಪೊಲಿಟಿಕ್ಸ್ಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಶಾಸಕರುಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

priyank kharge
Bidar

ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ

Public TV
By Public TV
7 minutes ago
Shivalik LPG carrier 1
Latest

ನೌಕಾಪಡೆಯ ಬೆಂಗಾವಲಿನೊಂದಿಗೆ ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದೆ ಎಲ್‌ಪಿಜಿ ಟ್ಯಾಂಕರ್‌

Public TV
By Public TV
16 minutes ago
Chikkamagaluru Funeral
Chikkamagaluru

ಪುರುಷ ಪ್ರಧಾನ ಸಮಾಜಕ್ಕೆ ತಿಲಾಂಜಲಿ – ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು

Public TV
By Public TV
23 minutes ago
GBA
Bengaluru City

ಸಿಲಿಂಡರ್ ಕೊರತೆ – ಬಯೋಗ್ಯಾಸ್ ಉತ್ಪಾದನೆಗೆ ಮುಂದಾದ ಜಿಬಿಎ

Public TV
By Public TV
49 minutes ago
bank loan
Districts

9 ರೂ. ಸಾಲಕ್ಕೆ ಬೆನ್ನು ಬಿದ್ದ ಬ್ಯಾಂಕ್‌ – ಸಾಲ ತೀರಿಸಿ ಕೊನೆಗೂ ತನ್ನ ಖಾತೆಗೆ ಬಾಕಿ 66 ಪೈಸೆ ಹಾಕಿಸಿಕೊಂಡ ರೈತ

Public TV
By Public TV
1 hour ago
Varthuru Murder
Bengaluru City

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?