Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಳೆರಾಯನ ಮುನಿಸಿಗೆ 150ಕ್ಕೂ ಹೆಚ್ಚು ಮಂದಿ ಬಲಿ- ಕೇರಳದಲ್ಲಿ ವರುಣಾಸುರನ ಪ್ರತಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಳೆರಾಯನ ಮುನಿಸಿಗೆ 150ಕ್ಕೂ ಹೆಚ್ಚು ಮಂದಿ ಬಲಿ- ಕೇರಳದಲ್ಲಿ ವರುಣಾಸುರನ ಪ್ರತಾಪ

Bengaluru City

ಮಳೆರಾಯನ ಮುನಿಸಿಗೆ 150ಕ್ಕೂ ಹೆಚ್ಚು ಮಂದಿ ಬಲಿ- ಕೇರಳದಲ್ಲಿ ವರುಣಾಸುರನ ಪ್ರತಾಪ

Public TV
Last updated: July 21, 2019 8:47 am
Public TV
Share
3 Min Read
bihar flood 1
SHARE

-ಕೊಡಗಿನಲ್ಲಿ ಮತ್ತೆ ಮಹಾಮಳೆಯ ಮುನ್ಸೂಚನೆ

ಬೆಂಗಳೂರು/ನವದೆಹಲಿ: ಈ ಸಲ ದೇಶದಲ್ಲಿ ತುಂಬಾ ಲೇಟಾಗಿ ಅಬ್ಬರಿಸೋಕೆ ಶುರು ಮಾಡಿದ್ದ ವರುಣ, ಹಲವೆಡೆ ಉಗ್ರ ರೂಪ ತಾಳಿದ್ದಾನೆ. ಮಳೆರಾಯನ ಮುನಿಸಿಗೆ 150ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಕೋಟ್ಯಂತರ ಜನರು ಸಂಕಷ್ಟದಲ್ಲಿ ದಿನ ದೂಡ್ತಿದ್ದಾರೆ. ರಸ್ತೆಗಳೆಲ್ಲಾ ಕೊಚ್ಚಿಹೋಗಿದ್ದು, ಕಾರು, ಬೈಕ್ ಎಲ್ಲಾ ಮನೇಲಿ ನಿಲ್ಲಿಸಿ ದೋಣಿಯಲ್ಲಿ ಓಡಾಡುತ್ತಿದ್ದಾರೆ.

assam flood new

ಇತ್ತ ಈ ಬಾರಿ ಕೊಡಗಿನಲ್ಲಿ ಮಳೆ ಅಷ್ಟೊಂದಿಲ್ಲ. ಆದರೂ ಜನ ಮಾತ್ರ ಆತಂಕದಲ್ಲೇ ದಿನ ದೂಡ್ತಿದ್ದಾರೆ. ಯಾಕೆಂದರೆ ಭಾರಿ ಮಳೆಯಾಗುತ್ತೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಅಲ್ಲದೆ ಶನಿವಾರ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಕೂಡ ಘೋಷಿಸಲಾಗಿತ್ತು. ಆದರೆ ನೀರಿಕ್ಷೆ ಮಾಡಿದಷ್ಟು ಮಳೆ ಮಳೆಯಾಗದ ಕಾರಣಕ್ಕೆ ಜಿಲ್ಲಾಡಳಿತ ಮತ್ತೆ ಆರೆಂಜ್ ಅಲರ್ಟ್ ಘೋಷಿಸಿದೆ.

MDK RAIN

ಜುಲೈ 25ರವರೆಗೆ ಮಳೆಯಾಗುತ್ತೆ ಎಂಬ ಮಾಹಿತಿ ಇದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಸ್ವಲ್ಪ ಎಚ್ಚರವಾಗಿರಿ ಎಂದು ಜಿಲ್ಲಾಡಳಿತ ಮನವಿ ಮಾಡಿದೆ. ಅಲ್ಲದೆ ಎನ್‍ಡಿಆರ್‍ಎಫ್ ತಂಡ ಜಿಲ್ಲೆಯಲ್ಲಿ ಬೀಡು ಬಿಟ್ಟಿದ್ದು, ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಸಹಾಯವಾಣಿ ತೆರೆದಿದ್ದು, ತುರ್ತು ಸಂದರ್ಭದಲ್ಲಿ ಕರೆ ಮಾಡುವಂತೆ ಸೂಚಿಸಲಾಗಿದೆ.

mng rain

ಇತ್ತ ಪಶ್ಚಿಮ ಘಟ್ಟ ಪ್ರದೇಶದಲ್ಲೂ ಭಾರೀ ಮಳೆಯಾಗುತ್ತಿದ್ದು, ಸಕಲೇಶಪುರ-ಸುಬ್ರಹ್ಮಣ್ಯ ಘಾಟ್‍ನ ಸಿರಿಬಾಗಿಲು ಬಳಿ ರೈಲ್ವೇ ಹಳಿ ಮೇಲೆ ಭೂಕುಸಿತವಾಗಿದೆ. ಬೆಟ್ಟದಿಂದ ರೈಲು ಹಳಿ ಮೇಲೆ ಕಲ್ಲು ಮಣ್ಣು ಬೀಳುತ್ತಿದ್ದು, ಕಾರ್ಮಿಕರು ತೆರವು ಕಾರ್ಯದಲ್ಲಿ ತೊಡಗಿದ್ದಾರೆ. ಹೀಗಾಗಿ ಮಂಗಳೂರು-ಬೆಂಗಳೂರು ರೈಲು ಸಂಚಾರವನ್ನು ಎರಡು ದಿನ ಸ್ಥಗಿತಗೊಳಿಸಲಾಗಿದೆ.

190507kpn74

ವಿಜಯಪುರ ಜಿಲ್ಲೆ ಶಿವಣಗಿಯಲ್ಲಿ ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ್ದಾರೆ. ಉಡುಪಿಯಲ್ಲಿ 101 ಎಂಎಂ, ಕುಂದಾಪುರದಲ್ಲಿ 99.02 ಎಂಎಂ, ಕಾರ್ಕಳದಲ್ಲಿ 105 ಮಿಲಿಮೀಟರ್ ದಾಖಲೆ ಮಳೆ ಆಗಿದೆ. ಉಡುಪಿಯ ಸಮುದ್ರಕ್ಕೆ ಇಳಿದಂತೆ ಮೀನುಗಾರರಿಗೆ ವಾರ್ನಿಂಗ್ ಕೊಡಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತ ತುಂತುರು ಮಳೆ, ಮೋಡ ಕವಿದ ವಾತಾವರಣವಿದೆ.

bihar flood 4

ಆದರೆ ಕರಾವಳಿಯಲ್ಲಿ ನಿರೀಕ್ಷೆಯಷ್ಟು ಮಳೆಯಾಗಿಲ್ಲ. ಶನಿವಾರ ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಎಚ್ಚರಿಕೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಆದರೆ ಕರಾವಳಿಯ ಕೆಲವು ಭಾಗದಲ್ಲಿ ಸಣ್ಣ ಪ್ರಮಾಣದ ಮಳೆಯಾಗಿದ್ದು, ನೇತ್ರಾವತಿ ಇನ್ನೂ ತುಂಬಿಕೊಂಡಿಲ್ಲ. ಅಲ್ಲದೆ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿತ್ತು. ಹಾಗೆಯೆ ವಾಯುಭಾರ ಕುಸಿತದಿಂದಾಗಿ ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆ ಇದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಭಾರಿ ಮಳೆಯ ಪ್ರಮಾಣ ತುಂಬ ಕಮ್ಮಿಯಾಗಿದೆ. ಇತ್ತ ಚಿಕ್ಕಮಗಳೂರಿನಲ್ಲೂ ಸಹ ನಿರೀಕ್ಷಿಸಿದಷ್ಟೂ ಮಳೆಯಾಗಿಲ್ಲ.

bihar flood 5

ಇನ್ನು ಬಿಹಾರದಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ರಾಜ್ಯದ 12 ಜಿಲ್ಲೆಗಳಿಗೆ ಪ್ರವಾಹ ವ್ಯಾಪಿಸಿದ್ದು, 67 ಲಕ್ಷ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈವರೆಗೆ ಒಟ್ಟು 97 ಸಾವನ್ನಪ್ಪಿದ್ದು, ಕಳೆದ 24 ಗಂಟೆಯಲ್ಲೇ 19 ಮಂದಿ ಪ್ರಾಣ ಬಿಟ್ಟಿದ್ದಾರೆ. ರಸ್ತೆ, ಹೊಲ, ಮನೆ ಹೀಗೆ ಎಲ್ಲೆಲ್ಲೂ ನೀರು ವ್ಯಾಪಿಸಿದ್ದು, ಜನ ದಿಕ್ಕೇ ತೋಚದಂತಾಗಿದ್ದಾರೆ.

assam flood 4

ಈಶಾನ್ಯ ರಾಜ್ಯಗಳಲ್ಲೂ ಪರಿಸ್ಥಿತಿ ಏನೂ ಭಿನ್ನವಾಗಿಲ್ಲ. ಅದರಲ್ಲೂ ಅಸ್ಸಾಂನಲ್ಲಂತೂ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ರಾಜ್ಯದ 33 ಜಿಲ್ಲೆಗಳ ಪೈಕಿ 27ರಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಒಟ್ಟು 3,700ಕ್ಕೂ ಹೆಚ್ಚು ಗ್ರಾಮಗಳು ನೀರಿನಲ್ಲಿ ಮುಳುಗಿಹೋಗಿವೆ. 48 ಲಕ್ಷ ಮಂದಿ ಸಂಕಷ್ಟಕ್ಕೀಡಾಗಿದ್ದು, ಈವರೆಗೆ 59 ಮಂದಿ ಸಾವನ್ನಪ್ಪಿದ್ದಾರೆ. 2 ಲಕ್ಷದ 26 ಸಾವಿರ ಮಂದಿ ಸಂತ್ರಸ್ಥರನ್ನು 1600 ನಿರಾಶ್ರಿತ ಕೇಂದ್ರಗಳಿಗೆ ಶಿಫ್ಟ್ ಮಾಡಲಾಗಿದೆ. ಅದ್ರಲ್ಲೂ ಕಾಜಿರಂಗ ಉದ್ಯಾನವನ ಜಲಾವೃತಗೊಂಡಿದ್ದು, ಪ್ರಾಣಿಗಳು ಜೀವ ಉಳಿಸಿಕೊಳ್ಳಲು ಈಜುತ್ತಿರುವ ದೃಶ್ಯ ಕರಳು ಕಿತ್ತುಬರುವಂತಿದೆ.

assam 2

ಇನ್ನು ಪಕ್ಕದ ಕೇರಳದಲ್ಲೂ ಮಳೆಯಬ್ಬರ ಜೋರಾಗಿದ್ದು, ಈವರೆಗೆ ಒಟ್ಟು ಮೂವರು ಸಾವನ್ನಪ್ಪಿದ್ದಾರೆ. ಇಡುಕ್ಕಿ, ಮಲಪ್ಪುರಂ, ಕೋಝಿಕೋಡ್, ವಯನಾಡ್, ಕಣ್ಣೂರಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 23ರವರೆಗೆ ಭಾರಿ ಮಳೆಯಾಗಲಿದ್ದು, ಮುಂದಿನ 24 ಗಂಟೆಗಳಲ್ಲಿ 200 ಮಿಲಿಮೀಟರ್ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಎಚ್ಚರಿಸಿದೆ. ಮೀನುಗಾರಿಕೆಗೆ ತೆರಳಿದ್ದ ತಮಿಳುನಾಡಿನ ಮೂವರು ನಾಪತ್ತೆಯಾಗಿದ್ದಾರೆ.

TAGGED:AssambengaluruBiharkarnatakaPublic TVrainಅಸ್ಸಾಂಕರ್ನಾಟಕಪಬ್ಲಿಕ್ ಟಿವಿಬಿಹಾರಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
2 minutes ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
37 minutes ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
43 minutes ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
1 hour ago
big bulletin 20 april 2026 part 1
Big Bulletin

ಬಿಗ್‌ ಬುಲೆಟಿನ್‌ 20 April 2026 ಭಾಗ-1

Public TV
By Public TV
2 hours ago
big bulletin 20 april 2026 part 2
Big Bulletin

ಬಿಗ್‌ ಬುಲೆಟಿನ್‌ 20 April 2026 ಭಾಗ-2

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?