Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಜನರು ನಮ್ಮನ್ನು ಕ್ಷಮಿಸುವುದಿಲ್ಲ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ಜನರು ನಮ್ಮನ್ನು ಕ್ಷಮಿಸುವುದಿಲ್ಲ: ಸಿಎಂ

Bengaluru City

ರಾಜ್ಯದ ಜನರು ನಮ್ಮನ್ನು ಕ್ಷಮಿಸುವುದಿಲ್ಲ: ಸಿಎಂ

Public TV
Last updated: July 23, 2019 6:41 pm
Public TV
Share
3 Min Read
CM HDK
SHARE

– ವಿಧಿಯ ಆಟದಿಂದ ರಾಜಕೀಯಕ್ಕೆ ಬಂದೆ
– ಸಾಮಾಜಿಕ ಜಾಲತಾಣದಿಂದ ಯುವ ಪೀಳಿಗೆ ಹಾಳಾಗುತ್ತಿದೆ

ಬೆಂಗಳೂರು: ಸದನದಲ್ಲಿ ನಾಲ್ಕು ದಿನಗಳಿಂದ ನಡೆದ ಘಟನೆಗಳು, ಮಾತುಗಳು ರಾಜ್ಯದ ಜನರ ಮುಂದಿವೆ. ಅವರು ತಮ್ಮನ್ನು ಕ್ಷಮಿಸುವುದಿಲ್ಲ. ವಿಶ್ವಾಸ ಮತಯಾಚನೆಯಲ್ಲಿ ವಿಪಕ್ಷದ ಯಾವುದೇ ಸದಸ್ಯರು ಭಾಗವಹಿಸಲಿಲ್ಲ. ಇದು ವಿಶೇಷವಾಗಿತ್ತು ಹಾಗೂ ಇತಿಹಾಸ ಕೂಡ ಆಯಿತು ಎಂದು ಸಿಎಂ ಹೇಳಿದ್ದಾರೆ.

ವಿಶ್ವಾಸ ಮತಯಾಚನೆ ಚರ್ಚೆಯಲ್ಲಿ ಮಾತನಾಡಿದ ಸಿಎಂ, ರಾಜ್ಯಪಾಲರಿಂದ ಬಂದ ಆದೇಶವನ್ನು ಮತ್ತೆ ಪ್ರಸ್ತಾಪಿಸುವುದಿಲ್ಲ. ನಾವು ಕಾಲ ಹರಣ ಮಾಡುತ್ತಿದ್ದೇನೆ ಅಂತ ಚರ್ಚೆಯಾಗುತ್ತಿದೆ. ಹೌದು, ನಾವು ವಿಶ್ವಾಸ ಮತಯಾಚನೆಯನ್ನು ಮುಂದೂಡಿದ್ದು ನಿಜ. ಆದರೆ ಸಮಯವನ್ನು ವ್ಯರ್ಥ ಮಾಡಿಲ್ಲ. ಸರ್ಕಾರ ಬೀಳಿಸಲು ಮುಂದಾದವವರಿಗೆ ಸ್ವಲ್ಪ ಸಮಯದ ಬಳಿಕ ಬುದ್ಧಿ ಬರುತ್ತೆ ಅಂತ ಕಾದು ನೋಡಿದ್ದೇವೆ. ನಾಲ್ಕು ದಿನಗಳಲ್ಲಿ ನಿಮ್ಮ ಬಗ್ಗೆಯೂ ಕೆಲವರು ಮಾತನಾಡಿದ್ದಾರೆ. ಇದು ನಿಮಗೂ ನೋವು ತಂದೆ ಎಂದು ಸಿಎಂ, ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ತಿಳಿಸಿದರು.

Ramesh

ನಾನು ಮದುವೆ ಆಗುವುದಾದರೆ ರಾಜಕಾರಣಕ್ಕೆ ಬರಬಾರದು ಅಂತ ಪತ್ನಿ, ಶಾಸಕಿ ಅನಿತಾ ಅವರು ಷರತ್ತು ಹಾಕಿದ್ದರು. ನನಗೂ ರಾಜಕೀಯದಲ್ಲಿ ಆಸಕ್ತಿ ಕೂಡ ಇರಲಿಲ್ಲ. ಆದರೆ ವಿಧಿಯ ಆಟದಿಂದ ರಾಜಕೀಯಕ್ಕೆ ಬಂದುಬಿಟ್ಟೆ. ಜೊತೆಗೆ ಪತ್ನಿಯನ್ನು ಕರೆದುತಂದೆ ಎಂದು ಸದನದಲ್ಲಿ ನಗೆ ಹರಿಸಿದರು.

ವಿಧಾನಸಭೆ ಗ್ಯಾಲರಿಯಲ್ಲಿ ಕುಳಿತು ಕಲಾಪಗಳನ್ನು ನೋಡುತ್ತಿದ್ದೆ. ನನ್ನ ವ್ಯವಹಾರ ಚಿತ್ರರಂಗದಲ್ಲಿ. ಸಿನಿಮಾ ಕ್ಷೇತ್ರದಲ್ಲಿ ಇದ್ದರೂ ತಂದೆ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಹೋರಾಟವನ್ನು ನೋಡುತ್ತಾ ಬೆಳೆದೆ. ಅವರು ಯಾರ ಹಂಗಿನಲ್ಲಿಯೂ ಬದುಕಿಲ್ಲ, ಜನರ ಮಧ್ಯದಲ್ಲಿ ಬೆಳೆದಿದ್ದಾರೆ. ಎಚ್.ಡಿ.ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಬೇಡಿ ಎಂದು ವಿಪಕ್ಷ ನಾಯಕರ ವಿರುದ್ಧ ಕಿಡಿಕಾರಿದರು.

ಸಚಿವ, ಸಹೋದರ ಎಚ್.ಡಿ.ರೇವಣ್ಣ ಅವರ ಮೇಲೆ ತಂದೆಯ ಆಶೀರ್ವಾದ ಇದೆ. ನಾನು ರಾಜಕೀಯಕ್ಕೆ ಬರುವುದು ಎಚ್.ಡಿ.ದೇವೇಗೌಡ ಅವರಿಗೆ ಇಷ್ಟವಿರಲಿಲ್ಲ. ಅವರ ವಿರೋಧದ ನಡುವೆಯೂ 1996ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಸೋತೆ. ಶಾಸಕರ ಒತ್ತಾಯದ ಮೇರೆಗೆ ವಿಧಾನಸಭಾ ಚುನಾವಣೆಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಸ್ಪರ್ಧೆ ಮಾಡಿದೆ. ಅಲ್ಲಿಯೂ ಸೋಲು ಕಂಡೆ. ಆಗಲೇ ರಾಜಕೀಯ ನಿವೃತ್ತಿ ಘೋಷಿಸಲು ಮುಂದಾಗಿದ್ದೆ. ಆದರೆ ಕಾರ್ಯಕರ್ತರು ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮತ್ತೆ ಬೆಂಬಲಕ್ಕೆ ನಿಂತರು ಎಂದರು.

hdd 1

ಪತ್ನಿಯ ಬಗ್ಗೆ ನನಗೆ ತುಂಬಾ ಹೆಮ್ಮೆಯಿದೆ. ನಾನು ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದಾರೆ. ತಪ್ಪು ಮಾಡಿದಾಗ ಸರಿಪಡಿಸಿಕೊಳ್ಳಲು ಅವಕಾಶ ಕೊಟ್ಟಿದ್ದಾರೆ ಎಂದು ಶಾಸಕಿ ಅನಿತಾ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಚಿವ ಸಾರಾ ಮಹೇಶ್ ಅವರ ಬಗ್ಗೆ ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಅಸಹ್ಯವಾಗಿ ಮಾತನಾಡಿದ್ದಾರೆ. ಇಂತಹ ಶಾಸಕರು ನಿಮಗೆ ಬೇಕಿತ್ತು ಅಲ್ವಾ ಸಿ.ಟಿ.ರವಿ ಅವರೇ? ಕರೆದುಕೊಂಡು ಹೋಗಿ ಎಂದು ಗುಡುಗಿದರು.

ಸಾಮಾಜಿಕ ಜಾಲತಾಣದಿಂದ ಯುವ ಪೀಳಿಗೆ ಹಾಳಾಗುತ್ತಿದೆ. ಅನೇಕರು ಟ್ವಿಟ್ಟರ್ ವಾಟ್ಸಪ್, ಫೇಸ್‍ಬುಕ್‍ನಲ್ಲಿಯೇ ಕಾಲ ಕಳೆಯುತ್ತಾರೆ. ಕೆಲವರು ಟ್ವೀಟ್ ಮಾಡಿ ಸಿಎಂ ವಿಶ್ವಾಸ ಮತಯಾಚನೆ ಮಾಡದೆ ಕಾಲಹರಣ ಮಾಡುತ್ತಿದ್ದಾರೆ ಅಂತ ಹೇಳಿದ್ದಾರೆ. ಇನ್ನೂ ಕೆಲವರು ತಮಗೆ ತೋಜಿದ್ದನ್ನು ಟ್ವೀಟ್ ಮಾಡುತ್ತಾರೆ ಎಂದು ಕಿಡಿಕಾರಿದರು.

ಸಂತೋಷದಿಂದ ಅಧಿಕಾರ ತ್ಯಜಿಸಲು ನಾನು ಸಿದ್ಧನಿದ್ದೇನೆ. ಬಿಜೆಪಿ ಜೊತೆಗೆ ಸೇರಿ 20 ತಿಂಗಳು ಸರ್ಕಾರ ನಡೆಸಿದೆ. ಬಳಿಕ ಅಧಿಕಾರ ಬಿಟ್ಟುಕೊಳ್ಳಲು ಮುಂದಾಗಿದ್ದೆ. ಆದರೂ ನನ್ನನ್ನು ವಚನ ಭ್ರಷ್ಟ ಎಂದು ಆರೋಪಿಸುತ್ತಾರೆ. ಇದು ನನಗೆ ಭಾರೀ ನೋವು ತರುತ್ತಿದೆ ಎಂದು ಕಿಡಿಕಾರಿದರು.

ಮಾಧ್ಯಮಗಳ ವಿರುದ್ಧ ಕಿಡಿ:
ಮಾಧ್ಯಮಗಳಿಂದ ನಮಗೆ ಖಾಸಗಿ ಜೀವನವೇ ಇಲ್ಲದಂತಾಗಿದೆ. ಸರ್ಕಾರ ರಚನೆ ಆದಾಗಿನಿಂದ ಮಾಧ್ಯಮಗಳು ಡೆಡ್‍ಲೈನ್ ಕೊಡುತ್ತಲೇ ಬಂದವು ಎಂದು ಗುಡುಗಿದರು. ದಿನಬೆಳಗಾದರೆ ಸರ್ಕಾರ ನನ್ನ ವಿರುದ್ಧ ಸುದ್ದಿಗಳು ಬರುತಿತ್ತು. ಆದರು ನಾನು ಇದ್ದೇನೆ ಅಂದರೆ ಅದು ತಂದೆ ತಾಯಿ ಪುಣ್ಯ ಎಂದು ತಿಳಿಸಿದರು.

ಅಧಿಕಾರಿಗಳಿಗೆ ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇವೆ. ಆದರೆ ಮಾಧ್ಯಮಗಳು ಕೊಟ್ಟ ಡೆಡ್‍ಲೈನ್‍ನಲ್ಲಿ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ನಾನು ಇಂತಹ ಕಷ್ಟದ ಸಮಯದಲ್ಲಿ ಅಲ್ಪಸ್ವಲ್ಪ ಕೆಲಸ ಮಾಡಿದ್ದೇನೆ ಅದಕ್ಕೆ ಕಾರಣ ಅಧಿಕಾರಿಗಳ ಸಹಕಾರ ಎಂದು ಮೆಚ್ಚಗೆ ವ್ಯಕ್ತಪಡಿಸಿದರು.

ಮೋದಿ ವಿರುದ್ಧ ಕಿಡಿ:
ಲೋಕಸಭಾ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮೈತ್ರಿ ಸರ್ಕಾರದ ಬಗ್ಗೆ ಹಗುರವಾಗಿ ಮಾತನಾಡಿದರು. ನಾವು ರೈತರ ಸಾಲಮನ್ನಾ ಮಾಡಲು ಶ್ರಮಿಸಿದ್ದೇವೆ. ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಈಗಲೂ 1,500 ಕೋಟಿ ರೂ. ಇದೆ. ನಾಡಿನ ರೈತರಿಗೆ ನನ್ನಿಂದ ಯಾವುದೇ ಮೋಸವಾಗಿಲ್ಲ ಎಂದು ಹೇಳಿದರು.

TAGGED:bjpcmcongressjdsPublic TVSpeaker Ramesh Kumartrust voteಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿವಿಶ್ವಾಸ ಮತಯಾಚನೆಸಿಎಂಸ್ಪೀಕರ್ ರಮೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
7 hours ago
Sanju Samson
Cricket

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

Public TV
By Public TV
7 hours ago
bjp leader
Chamarajanagar

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ – ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಮುಖಂಡ

Public TV
By Public TV
8 hours ago
mohammed bin salman and trump
Latest

ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

Public TV
By Public TV
8 hours ago
iran
Latest

ಇರಾನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಸಾವು

Public TV
By Public TV
9 hours ago
Strait of Hormuz closed india oil
Latest

ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್‌ ಜಲಸಂಧಿ ಬಂದ್‌ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?