Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಶ್ವನಾಥ್ ವಿರುದ್ಧ ಕಿಡಿ – ರಾಜೀನಾಮೆ ಪತ್ರವನ್ನು ಜೇಬಿನಲ್ಲಿ ಇಟ್ಕೊಂಡಿದ್ದ ಸ್ಪೀಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಶ್ವನಾಥ್ ವಿರುದ್ಧ ಕಿಡಿ – ರಾಜೀನಾಮೆ ಪತ್ರವನ್ನು ಜೇಬಿನಲ್ಲಿ ಇಟ್ಕೊಂಡಿದ್ದ ಸ್ಪೀಕರ್

Bengaluru City

ವಿಶ್ವನಾಥ್ ವಿರುದ್ಧ ಕಿಡಿ – ರಾಜೀನಾಮೆ ಪತ್ರವನ್ನು ಜೇಬಿನಲ್ಲಿ ಇಟ್ಕೊಂಡಿದ್ದ ಸ್ಪೀಕರ್

Public TV
Last updated: July 23, 2019 8:11 pm
Public TV
Share
2 Min Read
Ramesh Kumar A
SHARE

ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ಅವರು ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿರುದ್ಧ ಕೆಂಡಾಮಂಡಲವಾದ ಪ್ರಸಂಗ ಮಂಗಳವಾರ ವಿಧಾನಸಭಾ ಕಲಾಪದಲ್ಲಿ ನಡೆಯಿತು.

ಸಿಎಂ ತಮ್ಮ ಭಾಷಣದಲ್ಲಿ ವಿಶ್ವನಾಥ್ ಅವರು ಭಾಷಣಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ. ಕಾಲಹರಣ ಮಾಡುತ್ತಿದ್ದಾರೆ ಎನ್ನುವ ವಿಚಾರವನ್ನು ಪ್ರಸ್ತಾಪಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್, ಎಚ್.ವಿಶ್ವನಾಥ್ ಅವರು ನಮ್ಮ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದ್ದರು. ಅವರು ಬರುತ್ತಿದ್ದೇವೆ ಅಂತ ಮೊದಲು ಮಾಹಿತಿ ನೀಡಿರಲಿಲ್ಲ. ಹೀಗಾಗಿ ಸಂಬಂಧಿಕರನ್ನು ನೋಡಲು ಜಯದೇವ ಆಸ್ಪತ್ರೆಗೆ ಹೋಗಿದ್ದೆ. ಅಲ್ಲಿದ್ದ ಕಚೇರಿಯ ಅಧಿಕಾರಿಗಳಿಗೆ ರಾಜೀನಾಮೆ ಪತ್ರ ನೀಡುವಂತೆ ಸೂಚನೆ ನೀಡಿದೆ. ಆದರೆ ಅವರು ನೇರವಾಗಿ ಸುಪ್ರೀಂಕೋರ್ಟಿಗೆ ಹೋದರು ಎಂದು ಕಿಡಿಕಾರಿದರು.

ಸುಪ್ರೀಂಕೋರ್ಟ್ ಆದೇಶದ ಬಳಿಕ ಎಚ್.ವಿಶ್ವನಾಥ್ ಅವರು ಬಂದು ರಾಜೀನಾಮೆ ನೀಡಿದರು. ಈ ದೃಶ್ಯವನ್ನು ನಾನು ವಿಡಿಯೋ ಕೂಡ ಮಾಡಿಸಿದ್ದೇನೆ. ರಾಜೀನಾಮೆ ಪತ್ರದ ಹೇಗಿರಬೇಕು ಅಂತ ತಿಳಿ ಹೇಳಿದ್ದೇನೆ. ಆದರೂ ಅವರು ಉದ್ದೇಶ ಅದೇ ಎಂದು ಸರಳವಾಗಿ ಹೇಳಿಬಿಟ್ಟರು ಎಂದು ಅಸಮಾಧಾನ ಹೊರ ಹಾಕಿದರು.

Speaker Ramesh Kumar

ಎಚ್.ವಿಶ್ವನಾಥ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷ, ವಿಧಾನಸಭಾ ಸದಸ್ಯ ಸೇರಿದಂತೆ ಅನೇಕ ಸ್ಥಾನಗಳನ್ನ ಅಲಂಕರಿಸಿದ್ದಾರೆ. ಆದರೂ ಅವರಿಗೆ ರಾಜೀನಾಮೆ ನೀಡುವುದು ಗೊತ್ತಿಲ್ಲವೇ? ಒಂದು ವೇಳೆ ರಾಜೀನಾಮೆ ಕೊಡುವ ನಿಯಮ ತಿಳಿದಿದ್ದರೆ ಯಾವ ಉದ್ದೇಶಕ್ಕಾಗಿ ಹಾಗೆ ಮಾಡಿದರು ಎನ್ನುವ ಅನುಮಾನ ಬರುತ್ತದೆ. ಇಂತಹ ವ್ಯಕ್ತಿ ಈಗ ಸ್ಪೀಕರ್ ಕುಮ್ಮಕ್ಕು ಕೊಡುತ್ತಿದ್ದಾರೆ ಅಂತ ಆರೋಪಿಸುತ್ತಿದ್ದಾರೆ. ನನ್ನಂತೆ ಬದುಕಲು ಅವರು ನೂರು ಜನ್ಮ ಪಡೆಯಬೇಕು ಎಂದು ವಿಶ್ವನಾಥ್ ಅವರ ವಿರುದ್ಧ ಚಾಟಿ ಬೀಸಿದರು.

ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಅನುಗ್ರಹದಿಂದ ನಾವು ವಿಧಾನಸಭೆಗೆ ಕಾಲಿಟ್ಟಿದ್ದೇವು. ನನ್ನ ಕ್ಷೇತ್ರದಲ್ಲಿ ನನಗೆ ಜಾತಿಯ ಬೆಂಬಲವಿಲ್ಲ. ಹಣ ಎಷ್ಟಿದೆ ಅಂತ ದೇಶದ ಜನರಿಗೆ ಗೊತ್ತಿದೆ. ಅವಕಾಶ ಸಿಕ್ಕಾಗ ಡಿ.ದೇವರಾಜು ಅರಸು ಅವರನ್ನು ನೆನಪಿಸಿಕೊಳ್ಳುತ್ತೇನೆ. ಅವರು ಹಾಕಿದ ಮಾರ್ಗದಲ್ಲಿಯೇ ನಡೆಯುತ್ತಿದ್ದೇನೆ ಎಂದು ಹೇಳಿದರು.

ರಾಜೀನಾಮೆ ಕೊಡುವ ನಿಯಮದ ಬಗ್ಗೆ ಗೊತ್ತಿಲ್ಲದವರು ನನ್ನ ಬಗ್ಗೆ ಮಾತನಾಡುತ್ತಾರೆ. ಮುಂದಿನ ದಿನಗಳಲ್ಲಿ ನಾನು ಈ ಸ್ಥಾನದಲ್ಲಿ ಇರುತ್ತೇನೆ ಇಲ್ಲವೋ ಗೊತ್ತಿಲ್ಲ. ಆದರೆ ನನ್ನ ಬಗ್ಗೆ ಮಾತನಾಡಿರುವುದು ಸಭಾ ನಿಂದನೆ ಎಂದು ಗುಡುಗಿದರು.

ರಾಜೀನಾಮೆ ಪತ್ರವನ್ನು ಜೇಬಿನಲ್ಲಿ ಇಟ್ಕೊಂಡಿದ್ದೇನೆ ಎಂದು ಹೇಳಿದ ಸ್ಪೀಕರ್ ರಮೇಶ್ ಕುಮಾರ್ ಅವರು, ಪತ್ರವನ್ನು ಬಿ.ಎಸ್.ಯಡಿಯೂರಪ್ಪನವರಿಗೆ ನೀಡುವಂತೆ ಸಿಬ್ಬಂದಿಯನ್ನು ಕರೆದರು. ಬಳಿಕ ಮಾತು ಮುಂದುವರಿಸಿ, ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಒಂದೇ ಕ್ಷಣವೂ ಇರಲ್ಲ. ಅದಕ್ಕಾಗಿಯೇ ರಾಜೀನಾಮೆ ಪತ್ರವನ್ನು ಜೇಬಿನಲ್ಲಿ ಇಟ್ಟುಕೊಂಡು ಓಡಾಡುತ್ತಿದ್ದೇನೆ. ಕೆ.ಎಚ್.ರಂಗನಾಥ್ ಅವರ ಕೈಯಲ್ಲಿ ಬೆಳೆದಿದ್ದೇನೆ. ಅವರು ನನಗೆ ರಾಜಕೀಯ ಸಂಸ್ಕಾರ ನೀಡಿದ್ದಾರೆ ಎಂದರು.

TAGGED:floor testh vishwanathPublic TVSpeaker Ramesh Kumarಎಚ್ ವಿಶ್ವನಾಥ್ಜೆಡಿಎಸ್ಪಬ್ಲಿಕ್ ಟಿವಿರೆಬೆಲ್ ಶಾಸಕರುಸ್ಪೀಕರ್ ರಮೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

sri lanka fuel crisis
Latest

ವಾರದಲ್ಲಿ 4 ದಿನ ಮಾತ್ರ ಕೆಲಸ, ಪ್ರತಿ ಬುಧವಾರವೂ ರಜೆ: ಪೆಟ್ರೋಲ್‌, ಡೀಸೆಲ್ ಉಳಿಸಲು ಶ್ರೀಲಂಕಾ ಹೊಸ ರೂಲ್ಸ್‌

Public TV
By Public TV
20 minutes ago
Traffic Rules Violation Chikkamagaluru Court
Chikkamagaluru

ಟ್ರಾಫಿಕ್ ರೂಲ್ಸ್ ಬ್ರೇಕ್ – ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ!

Public TV
By Public TV
1 hour ago
LPG Cylinders Jagalur
Davanagere

ಜಗಳೂರು | ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ – 20 ಗೃಹ ಬಳಕೆ ಸಿಲಿಂಡರ್ ವಶಕ್ಕೆ

Public TV
By Public TV
2 hours ago
kabul hospital pak strikes
Latest

ಅನಾಗರಿಕ, ಹೇಡಿತನದ ಕೃತ್ಯ: ಕಾಬೂಲ್‌ ಆಸ್ಪತ್ರೆ ಮೇಲಿನ ಪಾಕ್‌ ದಾಳಿ ಖಂಡಿಸಿದ ಭಾರತ

Public TV
By Public TV
2 hours ago
Four workers fall ill due to chemical reaction in Hubballi
Dharwad

ಹುಬ್ಬಳ್ಳಿ | ಫ್ಲೈವುಡ್‌ ಕೆಲಸದ ವೇಳೆ ಕೆಮಿಕಲ್ ರಿಯಾಕ್ಷನ್ – ನಾಲ್ವರು ಕಾರ್ಮಿಕರು ಅಸ್ವಸ್ಥ

Public TV
By Public TV
2 hours ago
congress leader pm modi
Chikkamagaluru

ಸ್ವಪಕ್ಷದ ಮುಖಂಡನ ವಿರುದ್ಧವೇ ದೂರು – ನ್ಯಾಯಕ್ಕಾಗಿ ಪ್ರಧಾನಿ ಮೋದಿ ಕಚೇರಿ ಕದ ತಟ್ಟಿದ ಕಾಂಗ್ರೆಸ್ ನಾಯಕಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?