ಚಿಕಿತ್ಸೆ ಪಡೆದು ಬೆಂಗ್ಳೂರಿಗೆ ಹ್ಯಾಟ್ರಿಕ್ ಹೀರೋ ವಾಪಸ್

Public TV
1 Min Read
Shivarajkumar A

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಭುಜ ನೋವಿಗೆ ಶಸ್ತ್ರ ಚಿಕಿತ್ಸೆಯ ಪಡೆದು ಕ್ಷೇಮವಾಗಿ ಲಂಡನ್‍ನಿಂದ ವಾಪಸ್ ಆಗಿದ್ದಾರೆ.

ಶಿವರಾಜ್‍ಕುಮಾರ್ ಮಂಗಳವಾರ ಸಂಜೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಕ್ಕೆ ಬಂದಿಳಿದರು. ಈ ವೇಳೆ ಅವರನ್ನು ನೋಡಿದ ಅಭಿಮಾನಿಗಳು ಯೋಗಕ್ಷೇಮ ವಿಚಾರಿಸಲು ಹಾಗೂ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು. ಹೀಗಾಗಿ ಭದ್ರತಾ ಸಿಬ್ಬಂದಿ ಅಭಿಮಾನಿಗಳನ್ನು ತಡೆದು, ಶಿವಣ್ಣ ಅವರನ್ನು ಕಾರಿನವರೆಗೂ ಕರೆದುಕೊಂಡು ಬಿಟ್ಟರು.

ಶಿವಣ್ಣ ಅವರು ಕಳೆದ ಆರು ತಿಂಗಳಿನಿಂದ ಭುಜದ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಕೆಲ ದಿನಗಳ ಹಿಂದೆಯಷ್ಟೇ ಶಸ್ತ್ರ ಚಿಕಿತ್ಸೆಗಾಗಿ ಲಂಡನ್‍ಗೆ ತೆರಳಿದ್ದರು. ಕಳೆದ ಗುರುವಾರ ಅವರ ಶಸ್ತ್ರಚಿಕಿತ್ಸೆ ಯಶ್ವಸಿಯಾಗಿ ನಡೆದಿತ್ತು. ಶಿವಣ್ಣ ಅವರ ಜೊತೆ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿ ನಿವೇದಿತಾ ಕೂಡ ಲಂಡನ್‍ಗೆ ತೆರಳಿದ್ದರು. ಪುನೀತ್ ರಾಜಕುಮಾರ್ ಅವರು ಕೂಡ ಲಂಡನ್‍ಗೆ ತೆರಳಿ ಅವರ ಆರೋಗ್ಯವನ್ನು ನೋಡಿಕೊಂಡಿದ್ದರು.

Shivarajkumar B

Share This Article
Leave a Comment

Leave a Reply

Your email address will not be published. Required fields are marked *