Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿನ್ನ, ಭೂಮಿ ಅಡವಿಟ್ಟ ಖಾಸಗಿ ಸಾಲ ಮನ್ನಾ – ಎಚ್‍ಡಿಕೆ ಗಿಫ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಿನ್ನ, ಭೂಮಿ ಅಡವಿಟ್ಟ ಖಾಸಗಿ ಸಾಲ ಮನ್ನಾ – ಎಚ್‍ಡಿಕೆ ಗಿಫ್ಟ್

Bengaluru City

ಚಿನ್ನ, ಭೂಮಿ ಅಡವಿಟ್ಟ ಖಾಸಗಿ ಸಾಲ ಮನ್ನಾ – ಎಚ್‍ಡಿಕೆ ಗಿಫ್ಟ್

Public TV
Last updated: July 24, 2019 5:34 pm
Public TV
Share
3 Min Read
HDK A
SHARE

– ಕೊನೆ ಕ್ಷಣದಲ್ಲೂ ರಾಜ್ಯದ ಜನರಿಗೆ ಸಿಹಿ ಸುದ್ದಿ
– ನಿನ್ನೆಯೇ ಸಾಲ ಮನ್ನಾ ಆದೇಶ ಜಾರಿ

ಬೆಂಗಳೂರು: ಅಧಿಕಾರ ಕಳೆದುಕೊಂಡ ಹೊತ್ತಲ್ಲೇ ಕುಮಾರಸ್ವಾಮಿ ಬಂಪರ್ ಗಿಫ್ಟ್ ಕೊಟ್ಟಿದ್ದು ಖಾಸಗಿ ವ್ಯಕ್ತಿಗಳಿಂದ ಪಡೆದ ಸಾಲವನ್ನು ಮನ್ನಾ ಮಾಡಿದ್ದಾರೆ. ಫೈನಾನ್ಸ್ ಸೇರಿದಂತೆ ಖಾಸಗಿ ವ್ಯಕ್ತಿಗಳಿಂದ ಪಡೆದಿದ್ದ ಸಾಲವನ್ನು ಮನ್ನಾ ಮಾಡುವ ಕರ್ನಾಟಕ ಋಣ ಪರಿಹಾರ ಕಾಯ್ದೆ ನಿನ್ನೆಯಿಂದಲೇ ಜಾರಿಯಾಗಿದೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭೂರಹಿತರು, ಕಾರ್ಮಿಕರು ಹಾಗೂ ಬಡವರ ಆದಾಯ 1.20 ಲಕ್ಷ ರೂ.ಗಳಿಗಿಂತ ಕಡಿಮೆ ಇದ್ದರೆ ಅವರಿಗೆ ಈ ಕಾಯ್ದೆ ಅನ್ವಯ ಆಗಲಿದೆ. ಅಲ್ಲದೇ ಈ ಬಗ್ಗೆ ಕಾಯ್ದೆಯ ಜಾರಿಗೆ ನಾನು ಕೊನೆಯ ಸಹಿ ಹಾಕಿದ್ದು, ಖಾಸಗಿ ಅವರ ಬಳಿ ಪಡೆದ ಮಾಹಿತಿಯನ್ನು ಪಡೆಯಲು ಸೂಚನೆ ನೀಡಿದ್ದೇನೆ. ಋಣ ಮುಕ್ತ ಕಾಯ್ದೆ ಅಡಿ ಅವರು ಋಣ ಮುಕ್ತರಾಗಲಿದ್ದಾರೆ. ಒಂದು ವರ್ಷಗಳ ಕಾಲ ಈ ಕಾಯ್ದೆಯ ಅವಧಿ ಇದ್ದು, 90 ದಿನಗಳ ಒಳಗೆ ನೋಡಲ್ ಅಧಿಕಾರಿಗೆ ಮಾಹಿತಿ ನೀಡಬೇಕು ಮನವಿ ಮಾಡಿದರು.

Maharashtra farmers PTI

ಒನ್ ಟೈಂ ಅವಧಿಯಲ್ಲಿ ಇದು ಜಾರಿ ಆಗಲಿದ್ದು, ಚಿನ್ನ, ಭೂಮಿ ಅಡವಿಟ್ಟ ಸಾಲಮನ್ನಾ ಆಗಲಿದೆ ಎಂದರು. ಇದಕ್ಕೆ ಪ್ರೇರಣೆ ನೀಡಿದ ಮಹಿಳೆಯ ಕಥೆಯನ್ನ ವಿವರಿಸಿದ ಕುಮಾರಸ್ವಾಮಿ ಅವರು, ಪತಿಯೊಬ್ಬರು ಸಾಲ ಮಾಡಿ ಮೃತಪಟ್ಟಿದ್ದರು. ಈ ಸಾಲದ ಹೊರೆ ಪತ್ನಿಯ ಮೇಲೆ ಬಿದ್ದಿತ್ತು. ಈ ಸಾಲವನ್ನು ತೀರಿಸಲು ಮಹಿಳೆಗೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಆ ಮಹಿಳೆ ರೈತರ ಸಾಲವನ್ನು ಮಾಡಿದಂತೆ ಈ ರೀತಿಯ ಸಾಲವನ್ನು ಮನ್ನಾ ಮಾಡಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿ ಮನವಿ ಮಾಡಿದರು. ಹೀಗಾಗಿ ನಾನು ಈ ಕಾಯ್ದೆಯನ್ನು ಜಾರಿಗೆ ತರಲಾಯಿತು ಎಂದು ವಿವರಿಸಿದರು.

ನಿನ್ನೆಯವರೆಗೆ ಎಷ್ಟು ಸಾಲ ಮಾಡಿದ್ದಾರೆ ಎಷ್ಟು ವರ್ಷದ ಹಿಂದೆ ಮಾಡಿದ್ದರೂ ಕೂಡ ಇದು ಅನ್ವಯ ಆಗಲಿದೆ. 90 ದಿನಗಳ ಒಳಗೆ ಈ ಬಗ್ಗೆ ಮಾಹಿತಿ ನೀಡಿ, 5 ಎಕರೆ ಗಿಂತ ಭೂಮಿ ಕಡಿಮೆ ಇರುವವರಿಗೂ ಇದು ಅನ್ವಯ ಆಗಲಿದೆ. ಖಾಸಗಿ ಅವರಿಂದ ಪಡೆದ ಸಾಲವಷ್ಟೇ ಮನ್ನಾ ಆಗಲಿದೆ. ಆದರೆ ರಿಸರ್ವ್ ಬ್ಯಾಂಕ್ ನಿಂದ ಅನುಮತಿ ಪಡೆದು ವ್ಯವಹಾರ ಮಾಡುವವರಿಗೆ ಇದು ಅನ್ವಯ ಆಗುವುದಿಲ್ಲ. ಈ ಯೋಜನೆ ಬಗ್ಗೆ ಕೇಂದ್ರ ಸರ್ಕಾರವೂ ಮಾಹಿತಿ ಕೇಳಿತ್ತು. ಅಧಿಕಾರಿಗಳು ನಿರಂತರವಾಗಿ ಮಾಹಿತಿ ನೀಡಿ ಕೇಂದ್ರದ ಗೊಂದಲಗಳನ್ನು ನಿವಾರಣೆ ಮಾಡಿದ್ದಾರೆ. ಫೆಬ್ರವರಿಯಲ್ಲಿ ವಿಧಾನಸಭೆಯಲ್ಲಿ ಅಂಗೀಕಾರಗೊಂದಿದ್ದ ಮಸೂದೆಗೆ ರಾಷ್ಟ್ರಪತಿಗಳು ಜುಲೈ 16 ರಂದು ಅಂಕಿತ ಹಾಕಿದ್ದಾರೆ ಎಂದು ತಿಳಿಸಿದರು.

labourers

ಈ ಸಂದರ್ಭದಲ್ಲಿ ಖಾಸಗಿಯವರಿಗೆ ಸರ್ಕಾರದಿಂದ ಹಣವನ್ನು ಪಾವತಿಸಲಾಗುತ್ತಾ ಎಂಬ ಪ್ರಶ್ನೆಗೆ, ಇಲ್ಲಿಯವರೆಗೆ ಖಾಸಗಿ ವ್ಯಕ್ತಿಗಳು ಬಡ್ಡಿ ಹಣವನ್ನು ತಿಂದದ್ದು ಸಾಕು. ಯಾವುದೇ ಹಣವನ್ನು ಮರು ಪಾವತಿ ಮಾಡುವುದಿಲ್ಲ ಎಂದು ಉತ್ತರಿಸಿದರು.

ಕಳೆದ 14 ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಹಲವು ರಾಜಕೀಯ ಸಮಸ್ಯೆಗಳ ನಡುವೆ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲು ಸಹಕಾರ ನೀಡಿದ ಎಲ್ಲ ಅಧಿಕಾರಿ ವರ್ಗಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.

ರೈತರ ಸಾಲಮನ್ನಾ, ರೈತರ ಅಭಿವೃದ್ಧಿ, ಕೈಗಾರಿಕೆಗಳ ಅಭಿವೃದ್ಧಿಗೆ ಸಹಕಾರ ನೀಡಿದ ಅಧಿಕಾರಿಗಳಿಗೆ ಧನ್ಯವಾದ. ರಾಜಕೀಯ ಅಸ್ಥಿರತೆ ಉಂಟು ಮಾಡಲು ಕಳೆದ 14 ತಿಂಗಳು ನಡೆದ ಪ್ರಯತ್ನ ನಡುವೆ ರಾಜ್ಯದ ಆರ್ಥಿಕ ಸ್ಥಿತಿ ಕಾಪಾಡಲು ಅಸಹಕಾರ ನೀಡಿದ ಅಧಿಕಾರಿಗಳಿಗೆ ವಂದನೆ ತಿಳಿಸಿದ್ದೇನೆ ಎಂದರು.

Hdk

ಮುಂದಿನ ಅವಧಿಯಲ್ಲೂ ರಾಜಕೀಯ ಅಸ್ಥಿರತೆ ನಿರ್ಮಾಣವಾಗುವ ಸಂದರ್ಭಗಳು ಎದುರಾಗುತ್ತದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಮನವಿ ಮಾಡಿದ್ದು, ಸರ್ಕಾರ ಅಸ್ಥಿರವಾಗಿದ್ದರೂ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಪ್ರಮಾಣಿಕವಾಗಿ ನಿರ್ವಹಿಸಲು ಸಲಹೆ ನೀಡಿದ್ದೇನೆ. ಅಧಿಕಾರದಿಂದ ನಿರ್ಗಮಿಸುತ್ತಿರುವ ಸಂದರ್ಭದಲ್ಲಿ ಜನರಿಗೂ ಧನ್ಯವಾದ ತಿಳಿಸುತ್ತೇನೆ. 1976 ರಲ್ಲಿ ದೇವರಾಜ ಅರಸು ಅವರ ಕಾಲದಲ್ಲಿ ಇದ್ದ ಋಣ ಪರಿಹಾರ ಕಾಯ್ದೆ ಮುಂದುವರಿಸಲು ಪ್ರಯತ್ನ ಪಟ್ಟಿದ್ದೆ.

TAGGED:bengalurugovernment officialshd kumaraswamyPrivate DebtPublic TVಖಾಸಗಿ ಸಾಲಮನ್ನಾಪಬ್ಲಿಕ್ ಟಿವಿಬೆಂಗಳೂರುಮಾಜಿ ಸಿಎಂ ಕುಮಾರಸ್ವಾಮಿಸರ್ಕಾರಿ ಅಧಿಕಾರಿಗಳುಸಾಲಮನ್ನಾ
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

asia cup india pakistan toss
Cricket

ಭಾರತ, ಪಾಕ್‌ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ?

Public TV
By Public TV
4 hours ago
Bengaluru Car Seize
Bengaluru City

ಬೆಂಗ್ಳೂರಿನಲ್ಲಿ ಮನಸೋ ಇಚ್ಛೆ ಮಾರ್ಪಡಿಸಿದ ಐಷಾರಾಮಿ ಕಾರು ಸೀಜ್‌

Public TV
By Public TV
4 hours ago
USA Cricket Team
Cricket

ನೆದರ್‌ಲ್ಯಾಂಡ್‌ ವಿರುದ್ಧ 93 ರನ್‌ಗಳ ಭರ್ಜರಿ ಜಯ – ವಿಶ್ವಕಪ್‌ನಲ್ಲಿ ಅಮೆರಿಕಗೆ ಮೊದಲ ಗೆಲುವು

Public TV
By Public TV
4 hours ago
01 7
Big Bulletin

ಬಿಗ್‌ ಬುಲೆಟಿನ್‌ 13 February 2026 ಭಾಗ-1

Public TV
By Public TV
4 hours ago
02 8
Big Bulletin

ಬಿಗ್‌ ಬುಲೆಟಿನ್‌ 13 February 2026 ಭಾಗ-2

Public TV
By Public TV
4 hours ago
03 7
Big Bulletin

ಬಿಗ್‌ ಬುಲೆಟಿನ್‌ 13 February 2026 ಭಾಗ-3

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?