Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಮಾತಿನಂತೆ ದೂರ ಉಳಿದಿದ್ದೇವೆ – ಶಿವರಾಮ್ ಹೆಬ್ಬಾರ್ ಬಾಂಬ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿದ್ದರಾಮಯ್ಯ ಮಾತಿನಂತೆ ದೂರ ಉಳಿದಿದ್ದೇವೆ – ಶಿವರಾಮ್ ಹೆಬ್ಬಾರ್ ಬಾಂಬ್

Districts

ಸಿದ್ದರಾಮಯ್ಯ ಮಾತಿನಂತೆ ದೂರ ಉಳಿದಿದ್ದೇವೆ – ಶಿವರಾಮ್ ಹೆಬ್ಬಾರ್ ಬಾಂಬ್

Public TV
Last updated: July 25, 2019 11:13 am
Public TV
Share
3 Min Read
shivaram hebbar siddaramaiah
SHARE

ಕಾರವಾರ: ಮೈತ್ರಿ ಸರ್ಕಾರದ ವಿರುದ್ಧ ಮುನಿಸಿಕೊಂಡು ರಾಜೀನಾಮೆ ನೀಡಿ ಮುಂಬೈಗೆ ತೆರಳಿದ್ದ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರು ಸಿದ್ದರಾಮಯ್ಯ ಮಾತಿನಂತೆ ನಡೆದುಕೊಂಡಿದ್ದು, ಬಿಜೆಪಿ ಸಂಪರ್ಕದಲ್ಲಿ ಇಲ್ಲ ಎಂದಿದ್ದಾರೆ.

ರಾತ್ರಿಯಷ್ಟೇ ಕ್ಷೇತ್ರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿ ಪಬ್ಲಿಕ್ ಟಿವಿ ಮಾತನಾಡಿದ ಅವರು, ನಾವು ಯಾವ ಬಿಜೆಪಿ ನಾಯಕರ ಜೊತೆ ಸಂಪರ್ಕವಿಲ್ಲ. ಸದ್ಯ ರಾಜ್ಯದಲ್ಲಿ ಆಗುತ್ತಿರುವ ಬಿಜೆಪಿ ಸರ್ಕಾರ ರಚನೆಯ ಬೆಳವಣಿಗೆಗೆ ನಮಗೆ ಯಾವುದೇ ಸಂಬಂಧ ಇಲ್ಲ. ನಾವು ಕೇವಲ ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ಕೊಟ್ಟಿದ್ದೇವೆ. ಇಂದಿಗೂ ಕಾಂಗ್ರೆಸ್ ಪಕ್ಷದಲ್ಲೇ ಇದ್ದೇವೆ ಎಂದರು.

ಶಾಸಕ ರಾಜೀನಾಮೆ ಸಲ್ಲಿಕೆ ಮಾಡಿರುವುದರಿಂದ ರಾಜೀನಾಮೆ ಅಂಗೀಕಾರ ಬಳಿಕ ಎಲ್ಲರೂ ಒಟ್ಟಿಗೆ ಸೇರಿ ತೀರ್ಮಾನ ಮಾಡುತ್ತೇವೆ. ನಮ್ಮ ನಾಯಕರು ಸಿದ್ದರಾಮಯ್ಯ ಅವರು, ಅವರೇ ದೂರ ಉಳಿಯಿರಿ ಎಂದಿದ್ದಾರೆ. ಸ್ಪೀಕರ್ ಅವರಿಗೆ ಮನವಿ ಮಾಡಿದ್ದು, ಅವರು ತೆಗೆದುಕೊಳ್ಳುವ ತೀರ್ಮಾನದ ಮೇಲೆ ನಮ್ಮ ಮುಂದಿನ ತೀರ್ಮಾನ ಇರುತ್ತದೆ ಎಂದು ಹೇಳಿದರು.

Shivaram Hebbar a

ಇದೇ ಸಂದರ್ಭದಲ್ಲಿ ಕ್ಷೇತ್ರದ ಜನರ ಕ್ಷಮೆಯಾಚನೆ ಮಾಡಿರುವ ಅವರು, ಕಳೆದ 1 ತಿಂಗಳಿನಿಂದ ನಡೆದ ರಾಜಕೀಯ ಬೆಳವಣಿಗೆ ನನಗೂ ಅಸಮಾಧಾನ ಉಂಟು ಮಾಡಿದೆ. ಆದರೆ ಅನಿವಾರ್ಯ ಕಾರಣಗಳಿಂದ ರಾಜೀನಾಮೆ ನೀಡಿದ್ದೇನೆ. 120 ಶಾಸಕರಲ್ಲಿ ನಾವು 20 ಶಾಸಕರು 4 ರಿಂದ 7 ಬಾರಿ ಶಾಸಕರಾಗಿದ್ದೇವೆ. ಆದರೆ ನಾವು ಯಾರನ್ನು ಟೀಕೆ ಮಾಡಲ್ಲ. ಈಗ ನಾವು ತೆಗೆದುಕೊಂಡಿರುವ ನಿರ್ಧಾರ ಧೃಡವಾಗಿದ್ದು, ಸ್ಪೀಕರ್ ಅವರು ಯಾವ ಒತ್ತಡಕ್ಕೂ ಒಳಗಾಗದೇ ತೀರ್ಮಾನ ಕೈಗೊಳ್ಳುವ ವಿಶ್ವಾಸ ಇದೆ ಎಂದರು.

ಕ್ಷೇತ್ರಕ್ಕೆ ಆಗಮಿಸಿದ್ದ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದ ಅವರು, ನಾನು ತುರ್ತು ಕೆಲಸಕ್ಕೆ ಬಂದಿದ್ದು ನಿಜ. ನಮ್ಮ ಯಾವ ನಿಲುವಿನಲ್ಲಿ ಒಗ್ಗಟ್ಟಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಅಂತಿಮ ನಿರ್ಣಯಕ್ಕೆ ನಾವೆಲ್ಲರೂ ಬಾಧ್ಯಸ್ಥರು. ನಾವು ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಭಾಧ್ಯಕ್ಷರಿಗೆ ಕೊಟ್ಟಿದ್ದೇವೆ ನಮ್ಮ ನಿರ್ಣಯವನ್ನು ಸ್ವೀಕರಿಸಬೇಕು ಎಂದು ಪ್ರಾರ್ಥನೆ ಮಾಡಿದ್ದೇವೆ. ಸೂಕ್ತ ನಿರ್ಣಯ ಸಿಗುತ್ತೆ ಎಂದು ನಂಬಿಕೊಂಡಿದ್ದೇವೆ. ಆ ನಿರ್ಣಯದ ನಂತರ ನಮ್ಮ ನಡೆ ಬಹಿರಂಗ ಮಾಡುತ್ತೇವೆ ಎಂದು ತಿಳಿಸಿದರು.

ಶಿವರಾಮ್ ಹೆಬ್ಬಾರ್ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅತೃಪ್ತ ಶಾಸಕರ ಹಿಂದೆ ಸಿದ್ದರಾಮಯ್ಯ ಅವರು ಇದ್ದರಾ ಎಂಬ ಪ್ರಶ್ನೆ ಮೂಡಿದೆ. ಆದರೆ ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಅತೃಪ್ತ ಶಾಸಕರನ್ನ ಸೇರಿಸಿಕೊಳ್ಳುವುದಿಲ್ಲ ಎಂದು ಖಡಕ್ ಆಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ನೋಡುವುದಾದರೆ ದಿಕ್ಕು ತಪ್ಪಿಸಲು ಶಿವರಾಮ್ ಹೆಬ್ಬಾರ್ ಈ ಹೇಳಿಕೆ ನೀಡಿದ್ದಾರಾ ಎಂಬ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.

siddaramaiah 1

ವಿಶ್ವಾಸ ಮತಯಾಚನೆಯ ವೇಳೆ ಮಾತನಾಡಿದ್ದ ಸಿದ್ದರಾಮಯ್ಯ, ಈ ಹೊಲಸು ರಾಜಕೀಯ ಬೆಳವಣಿಗೆಗಳ ಹಿಂದೆ ಬಿಜೆಪಿ ಪಕ್ಷ ಇದೆ ಎಂಬುದು ಅತ್ಯಂತ ಸ್ಪಷ್ಟವಾಗಿ ಕಾಣಿಸುತ್ತಿದೆ. ರಾಜ್ಯದ ಮತದಾರರು ಮೂರ್ಖರಲ್ಲ. ಇದಕ್ಕೆ ಮುಂದಿನ ಚುನಾವಣೆಗಳು ತಕ್ಕ ಪಾಠ ಕಲಿಸಲಿವೆ. ಅಧಿಕಾರದಾಸೆಗೆ ಶಾಸಕರನ್ನು ಖರೀದಿಸಿ, ಇದ್ದ ಸರ್ಕಾರವನ್ನು ಅಸ್ಥಿರಗೊಳಿಸಿ ಜನರ ಆಶಯಗಳಿಗೆ ವಿರುದ್ಧವಾಗಿ ಸರ್ಕಾರ ರಚಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದರು.

ಇಂದಿನ ಹದಗೆಟ್ಟ ರಾಜಕೀಯ ಪರಿಸ್ಥಿತಿಗೂ ನಮಗೂ ಸಂಬಂಧವೇ ಇಲ್ಲ ಎಂದು ಬಿಜೆಪಿಯವರು ನಾಟಕ ಮಾಡುತ್ತಿದ್ದಾರೆ. ಇದೊಂದು ರೀತಿ ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಪ್ರಪಂಚಕ್ಕೆ ತಿಳಿಯದು ಎಂಬಂತಿದೆ. ಮುಂದೆ ಬಿಜೆಪಿ ಸರ್ಕಾರ ಬಂದು ಈಗ ಪಕ್ಷಾಂತರ ಮಾಡಿದವರೆಲ್ಲ ಬಿಜೆಪಿಯಲ್ಲಿ ಮಂತ್ರಿಗಳಾದರೆ ಜಗತ್ತಿಗೆ ಇವರ ಕುತಂತ್ರ ತಿಳಿಯುವುದಿಲ್ಲವೇ? ನಮಗೆ ದ್ರೋಹ ಬಗೆದು ಪಕ್ಷವನ್ನು ಬಿಟ್ಟು ಯಾರು ಬಿಜೆಪಿ ಜತೆ ಹೋಗಿದ್ದಾರೋ, ಅವರನ್ನು ಪ್ರಳಯವಾದರೂ ಮತ್ತೆ ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ ಎಂದಿದ್ದರು.

TAGGED:bjpcongressmumbaiPublic TVpuneShivaram Hebbarsiddaramaiahಕಾಂಗ್ರೆಸ್ಕಾರವಾರಪಬ್ಲಿಕ್ ಟಿವಿಪುಣೆಬಿಜೆಪಿಮುಂಬೈಶಾಸಕ ಶಿವರಾಮ್ ಹೆಬ್ಬಾರ್ಶಿವರಾಮ್ ಹೆಬ್ಬಾರ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

OM BIRLA RAHUL GANDHI
Latest

ಲೋಕಸಭಾ ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ – ಮಾ.9 ರಂದು ಚರ್ಚೆ ಸಾಧ್ಯತೆ

Public TV
By Public TV
3 minutes ago
Canada Shooting 1
Latest

ಕೆನಡಾ ಶಾಲೆಯಲ್ಲಿ ಗುಂಡಿನ ದಾಳಿ – ಶಂಕಿತ ಗನ್‌ಮ್ಯಾನ್‌ ಸೇರಿ 10 ಮಂದಿ ಸಾವು

Public TV
By Public TV
18 minutes ago
Bengaluru Basavanagudi Theft Arrest
Bengaluru City

ಕಾರಿನ EMI ಕಟ್ಟಲು ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲೇ ಕಳ್ಳತನ – ಆರೋಪಿ ಅರೆಸ್ಟ್

Public TV
By Public TV
33 minutes ago
daily horoscope dina bhavishya
Astrology

ದಿನ ಭವಿಷ್ಯ: 11-02-2026

Public TV
By Public TV
59 minutes ago
Haveri APMC Scam For Farmer
Districts

ಕಷ್ಟಪಟ್ಟು ಬೆಳೆದ ರೈತರಿಗೆ ತೂಕದಲ್ಲಿ ಮೋಸ – ಹಾವೇರಿ ಎಪಿಎಂಸಿಯಲ್ಲಿ ರೈತರ ಆಕ್ರೋಶ

Public TV
By Public TV
1 hour ago
Spicy Honey Chicken Wings 2
Bengaluru City

ಏರ್ ಫ್ರೈಯರ್ ಸ್ಪೈಸಿ ಹನಿ ಚಿಕನ್ ವಿಂಗ್ಸ್ ಟೇಸ್ಟ್‌ ಮಾಡಿದ್ದೀರಾ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?