Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನರ್ಹತೆಗೆ ನಾವು ಹೆದರೋದಿಲ್ಲ: ವಿಶ್ವನಾಥ್ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅನರ್ಹತೆಗೆ ನಾವು ಹೆದರೋದಿಲ್ಲ: ವಿಶ್ವನಾಥ್ ತಿರುಗೇಟು

Latest

ಅನರ್ಹತೆಗೆ ನಾವು ಹೆದರೋದಿಲ್ಲ: ವಿಶ್ವನಾಥ್ ತಿರುಗೇಟು

Public TV
Last updated: July 26, 2019 11:16 am
Public TV
Share
2 Min Read
MYS H VISHWANATH
SHARE

ಮುಂಬೈ: ಸ್ಪೀಕರ್ ಮೂವರನ್ನ ಅನರ್ಹಗೊಳಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಜೆಡಿಎಸ್ ನಾಯಕ ಎಚ್. ವಿಶ್ವನಾಥ್ ಅವರು ಅನರ್ಹತೆಗೆ ನಾವು ಹೆದರೋದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಗುರುವಾರದಂದು ರಾಣೇಬೆನ್ನೂರು ಶಾಸಕ ಆರ್.ಶಂಕರ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಈ ಮೂವರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದಾರೆ. ಈ ಬಗ್ಗೆ ಮುಂಬೈನಲ್ಲಿ ಮಾತನಾಡಿದ ವಿಶ್ವನಾಥ್, ಅನರ್ಹತೆಗೆ ನಾವು ಹೆದರೋದಿಲ್ಲ. ಇನ್ನು 2-3 ದಿನಗಳಲ್ಲಿ ಬೆಂಗಳೂರಿಗೆ ವಾಪಸ್ ಬರುತ್ತೇವೆ. ಅನರ್ಹತೆ ವಿಚಾರವನ್ನ ಸುಪ್ರಿಂಕೋರ್ಟಿನಲ್ಲಿ ಪ್ರಶ್ನೆ ಮಾಡುತ್ತೇವೆ ಎಂದು ಕಿಡಿಕಾರಿದ್ದಾರೆ.

ramesh jarkiholi Umesh Kumatalli R shankar

ಶಾಸಕ ಆರ್.ಶಂಕರ್, ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮೂವರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಲಾಗಿದೆ. ಇನ್ನುಳಿದ ರಾಜೀನಾಮೆ ನೀಡಿರುವ ಶಾಸಕರ ಪ್ರಕರಣಗಳ ಬಗ್ಗೆ ಅಧ್ಯಯನ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸವಿವರವಾಗಿ ಮಾಹಿತಿ ನೀಡುತ್ತೇನೆ. ಅನರ್ಹಗೊಂಡಿರುವ ಶಾಸಕರು 15 ವಿಧಾನಸಭೆ ಅವಧಿ ಅಂದರೆ 3 ವರ್ಷ 10 ತಿಂಗಳು ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಿಲ್ಲ ಎಂಬುದನ್ನು ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದ್ದರು.

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ನಮ್ಮ‌ ಪಕ್ಷದ ಮೂವರು ಶಾಸಕರನ್ನು ಅನರ್ಹಗೊಳಿಸಿದ ಮಾನ್ಯ ಸಭಾಧ್ಯಕ್ಷರ ನಿರ್ಣಯವನ್ನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವದ ರಕ್ಷಣೆಗಾಗಿ ಇಂಥ ಕಠಿಣ ನಿರ್ಣಯಗಳು ಅತ್ಯಗತ್ಯ. ಸ್ವಾರ್ಥ ಸಾಧನೆಗಾಗಿ ಜನಾದೇಶವನ್ನು ಉಲ್ಲಂಘಿಸುವವರಿಗೆ ಈ ಐತಿಹಾಸಿಕ ನಿರ್ಣಯ ಎಚ್ಚರಿಕೆಯ ಗಂಟೆಯಾಗಲಿದೆ.

— Siddaramaiah (@siddaramaiah) July 25, 2019

ಸ್ಪೀಕರ್ ಅವರು ಮೂವರು ರೆಬೆಲ್ ಶಾಸಕರನ್ನು ಅನರ್ಹಹೊಳಿಸಿ ಆದೇಶ ಹೊರಡಿಸಿದ್ದಕ್ಕೆ ಕಾಂಗ್ರೆಸ್ ವಲಯದಲ್ಲಿ ಸಂತಸ ವ್ಯಕ್ತವಾಗಿದೆ. ಈ ಕುರಿತು ಕಾಂಗ್ರೆಸ್ ನಾಯಕರು ಟ್ವೀಟ್ ಮೇಲೆ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಅವರು ಟ್ವೀಟ್ ಮಾಡಿ ಸ್ಪೀಕರ್ ನಿರ್ಧಾರವನ್ನ ಶ್ಲಾಘಿಸಿದ್ದಾರೆ.

ಟ್ವೀಟ್‍ಗಳಲ್ಲಿ ಏನಿದೆ?
ರೆಬೆಲ್ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಆರ್.ಶಂಕರ್ ಅವರನ್ನು ಅನರ್ಹಗೊಳಿಸಲಾಗಿದೆ. ಸ್ಪೀಕರ್ ರಮೇಶ್ ಕುಮಾರ್ ಅವರ ತೀರ್ಪನ್ನ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದರು.

Speaker #RameshKumar disqualifies 3 MLA’s, R Shankar, Ramesh Jarkiholi & Mahesh Kumatalli for the entire term of the present Karnataka Vidhana Sabha.

Wholeheartedly welcome the verdict.#VictoryForDemocracy

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 25, 2019

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ನಮ್ಮ ಪಕ್ಷದ ಮೂವರು ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್ ಅವರ ನಿರ್ಣಯವನ್ನು ಸ್ವಾಗರಿಸುತ್ತೇನೆ. ಪ್ರಜಾಪ್ರಭುತ್ವದ ರಕ್ಷಣೆಗಾಗಿ ಇಂತ ನಿರ್ಧಾರಗಳು ಅತ್ಯಗತ್ಯ. ಸ್ವಾರ್ಥ ಸಾಧನೆಗಾಗಿ ಜನಾದೇಶವನ್ನು ಉಲ್ಲಂಘಿಸಿದವರಿಗೆ ಈ ಐತಿಹಾಸಿಕ ನಿರ್ಣಯ ಎಚ್ಚರಿಕೆಯ ಗಂಟೆಯಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು.

ಬಂಡಾಯ ಶಾಸಕರು ಅಧಿಕಾರದ ಆಸೆಗೆ ಪಕ್ಷ ತೊರೆದು ಹೋದರು. ಈ ಮೂಲಕ ತಮ್ಮನ್ನು ಆರಿಸಿದ ಜನರನ್ನು ಇಡೀ ದೇಶದ ಜನರ ಎದುರಿಗೆ ನಗೆಪಾಟಲಿಗೆ ತಳ್ಳಿದರು. ರೆಬೆಲ್ ಶಾಸಕರಾದ ರಮೇಶ್ ಜಾರಕಿಹೊಳಿ, ಆರ್.ಶಂಕರ್ ಹಾಗೂ ಮಹೇಶ್ ಕುಮಟಳ್ಳಿ ಅವರನ್ನು ಅಮಾನತು ಮಾಡಿರುವ ಸಭಾಧ್ಯಕ್ಷರ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಬಂಡಾಯ ಶಾಸಕರ ನಡವಳಿಕೆಯಿಂದಾಗಿ ರಾಜಕಾರಣದ ಬಗ್ಗೆ ಜನರಲ್ಲಿ ಹೇಸಿಗೆ ಹುಟ್ಟಿದೆ ಎಂದು ಜಿ. ಪರಮೇಶ್ವರ್ ಕಿಡಿಕಾರಿದ್ದರು.

ಅಧಿಕಾರದಾಸೆಗೆ ಪಕ್ಷ ತೊರೆದು ಹೋಗಿ ತಮ್ಮನ್ನಾರಿಸಿದ ಜನರನ್ನು ಇಡೀ ದೇಶದ ಜನರ ಎದುರಿಗೆ ನಗೆಪಾಟಲಿಗೀಡಾಗುವಂತೆ ಮಾಡಿದ ರಮೇಶ್ ಜಾರಕಿಹೊಳಿ,‌ ಶಂಕರ್ ಹಾಗೂ ಮಹೇಶ್ ಕುಮಟಳ್ಳಿ ಅವರನ್ನು ಅಮಾನತು ಮಾಡಿರುವ ಸಭಾಧ್ಯಕ್ಷರ ನಿರ್ಧಾರವನ್ನು ಸ್ವಾಗತಿಸುತ್ತೇನೆ.

ಬಂಡಾಯ ಶಾಸಕರ ನಡವಳಿಕೆಯಿಂದಾಗಿ ರಾಜಕಾರಣದ ಬಗ್ಗೆ ಜನರಲ್ಲಿ ಹೇಸಿಗೆ ಹುಟ್ಟಿದೆ.

— Dr. G Parameshwara (@DrParameshwara) July 25, 2019

TAGGED:disqualifymumbaiPublic TVrebel MLAsVishwanathಅನರ್ಹಪಬ್ಲಿಕ್ ಟಿವಿಮುಂಬೈರೆಬೆಲ್ ಶಾಸಕರುವಿಶ್ವನಾಥ್ಸ್ಪೀಕರ್
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
22 minutes ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
30 minutes ago
HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
58 minutes ago
Iran Flight
Latest

ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್‌ ನಿಯೋಗ

Public TV
By Public TV
1 hour ago
Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
2 hours ago
Digital Arrest
Belgaum

ಬೆಳಗಾವಿ ಉದ್ಯಮಿಗೆ ಡಿಜಿಟಲ್‌ ಅರೆಸ್ಟ್‌ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?