Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ರಾತ್ರಿ 11 ಗಂಟೆಗೆ ನಿರ್ಧಾರ – ತಡವಾಗಿದ್ದಕ್ಕೆ ಕಾರಣ ತಿಳಿಸಿದ ಮಾಧುಸ್ವಾಮಿ

Public TV
Last updated: July 26, 2019 12:40 pm
Public TV
Share
2 Min Read
MADHUSWAMY
SHARE

ನವದೆಹಲಿ: ಯಡಿಯೂರಪ್ಪನವರು ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂಬುದು ತುಂಬಾ ದಿನಗಳ ಬಯಕೆಯಾಗಿತ್ತು ಅದೀಗ ಈಡೇರಿದೆ. ರಾಜ್ಯಕ್ಕೆ ಏನೇನು ಒಳ್ಳೆಯ ಕೆಲಸಗಳಾಗಬೇಕೋ ಅದೆಲ್ಲವನ್ನು ಯಡಿಯೂರಪ್ಪನವರು ಮಾಡುತ್ತಾರೆ ಎಂದು ಮಾಧುಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

ದೆಹಲಿಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಅಸ್ತಿತ್ವದ ನಂತರ ತುಂಬಾ ಸಂಕಟವಾಗಿತ್ತು. ಯಡಿಯೂರಪ್ಪನವರಿಗೂ ಸಹ ತುಂಬಾ ದಿನಗಳಿಂದ ಒಂದು ರೀತಿಯ ಬೇಸರ ಕಾಡುತ್ತಿತ್ತು. ಇದೀಗ ಮರಳಿ ಅಧಿಕಾರಕ್ಕೇರುತ್ತಿರುವುದು ಹಾಗೂ ಯಡಿಯೂರಪ್ಪನವರನ್ನು ಮುಖ್ಯಮಂತ್ರಿಯಾಗುತ್ತಿರುವುದು ತುಂಬಾ ಸಂತಸ ತಂದಿದೆ. ರಾಜ್ಯಕ್ಕೆ ಏನೇನು ಒಳ್ಳೆಯ ಕೆಲಸ ಮಾಡಬೇಕೋ ಅದನ್ನು ಅವರು ಮಾಡುತ್ತಾರೆ ಎಂದು ಅಭಿಪ್ರಾಯಪಟ್ಟರು.

yeddy aa

ವಿಧಾನಸಭೆ ಚುನಾವಣೆಯಲ್ಲಿ ಮತದಾರರು 105 ಜೊತೆಗೆ ಇನ್ನು 5-6 ಸ್ಥಾನ ನೀಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಕೆಲವೇ ಸ್ಥಾನ ಕಡಿಮೆ ಬಂದಿದ್ದರಿಂದ ದೊಡ್ಡ ಪಾರ್ಟಿಯಾಗಿದ್ದರೂ ಅಧಿಕಾರದಿಂದ ದೂರ ಉಳಿಯಬೇಕಾಯಿತು. ಹೀಗಾಗಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂತು. ನಂತರ ಅವರ ಕಚ್ಚಾಟ ಶುರುವಾಯಿತು. ಆಗಲೇ ಇವರು ತುಂಬಾ ದಿನ ಉಳಿಯುವುದಿಲ್ಲ ಎಂದು ನಾವು ಅಂದುಕೊಂಡಿದ್ದೆವು. ನಂತರ ನಡೆದ ಲೋಕಸಭಾ ಚುನಾವಣೆ ವೇಳೆ ಮತದಾರರು ಜಾಗೃತಿಯಿಂದ ಮತ ಹಾಕಿದರು ಎಂದು ತಿಳಿಸಿದರು.

ವಿಧಾನಸಭೆಯಲ್ಲಾದ ತಪ್ಪು ಲೋಕಸಭೆಯಲ್ಲಾಗಬಾರದು ಎಂದು ಉತ್ತಮ ತೀರ್ಪು ನೀಡಿದರು. ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಿಸಿ ಕೊಟ್ಟರು. ಇದರಿಂದ ಜನರ ಅಭಿಪ್ರಾಯವೇನು ಎಂಬುದು ಸ್ಪಷ್ಟವಾಗುತ್ತದೆ. ಇಡೀ ರಾಜ್ಯದ ಜನತೆ ಇದೀಗ ನಮ್ಮ ಜೊತೆಗಿದ್ದಾರೆ. ಮೈತ್ರಿ ಸರ್ಕಾರದ ಶಾಸಕರಿಗೂ ಅಲ್ಲಿನ ದುರಾಡಳಿತ ನೋಡಿ ಬೇಸರವಾಯಿತು. ಶಾಸಕರು ನಿರೀಕ್ಷಿಸಿದ ಕೆಲಸ ಆಗುತ್ತಿಲ್ಲ. ಕೆಲವೇ ಜನರ ಕೆಲಸವಾಗುತ್ತದೆ. ಒಂದೇ ಕುಟುಂಬದ ಮಾತನ್ನು ಎಲ್ಲರೂ ಕೇಳುವ ಪರಿಸ್ಥಿತಿ ಇದೆ ಎಂದು ಅವರಲ್ಲೇ ಭಿನ್ನಾಭಿಪ್ರಾಯ ಮೂಡಿ ಹೊರ ನಡೆದರು. ಇದೇ ಸಂದರ್ಭವನ್ನು ನಾವು ಸದ್ಬಳಕೆ ಮಾಡಿಕೊಂಡಿದ್ದೇವೆ ಎಂದು ಹೇಳಿ ಸರ್ಕಾರ ರಚನೆಗೆ ಮುಂದಾಗಿದನ್ನು ಸಮರ್ಥಿಸಿಕೊಂಡರು.

Rebel MLAs C 1

ನಮ್ಮ ಪಕ್ಷದಲ್ಲಿ ಹೈ ಕಮಾಂಡ್ ಅವರೇ ಅಂತಿಮ ನಿರ್ಧಾರ ಮಾಡಬೇಕು. ಹೀಗಾಗಿ ನಾವು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೆವು. ಈ ವೇಳೆ ಅವರು ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು. ಅವರು ಸಂಸತ್‍ನಲ್ಲಿ ಕಾರ್ಯನಿರತರಾಗಿದ್ದರಿಂದ ರಾತ್ರಿ ವೇಳೆ ಸಭೆ ನಡೆಸಿ ಚರ್ಚಿಸಿ, ರಾತ್ರಿ 11ಕ್ಕೆ ನಿರ್ಧಾರ ಕೈಗೊಂಡಿದ್ದಾರೆ. ಹೀಗಾಗಿ ಸರ್ಕಾರ ರಚನೆಗೆ ತಡವಾಗಿ ಸಂದೇಶ ನೀಡಿದ್ದಾರೆ ಎಂದು ತಿಳಿಸಿದರು.

ನಮ್ಮದು 105 ಇದ್ದರೂ ಇಬ್ಬರು ಪಕ್ಷೇತರರು ಬೆಂಬಲ ನೀಡಿದ್ದಾರೆ. ಅಲ್ಲದೆ, ಬಿಎಸ್‍ಪಿಯ ಮಹೇಶ್ ಅವರನ್ನು ಉಚ್ಛಾಟನೆ ಮಾಡಿದ್ದಾರೆ. ಬಿಎಸ್‍ಪಿ ಹೈ ಕಮಾಂಡ್ ಮಹೇಶ್ ಅವರಿಗೆ ಮೈತ್ರಿ ಸರ್ಕಾರಕ್ಕೆ ಮತ ಹಾಕಿ ಎಂದರೂ ಸಹ ಹೋಗಿಲ್ಲದ್ದನ್ನು ಕಂಡರೆ ಅವರು ನಮ್ಮ ಪರವಾಗಿದ್ದಾರೆ ಎಂದರ್ಥ. ಹೀಗಾಗಿ ನಾವು 108 ಜನ ಆಗುತ್ತೇವೆ. ಬಹುಮತಕ್ಕೆ ಕೇವಲ 5 ಸ್ಥಾನ ಮಾತ್ರ ವ್ಯತ್ಯಾಸವಾಗಲಿದೆ ಎಂದು ಮಾಧುಸ್ವಾಮಿ ತಿಳಸಿದರು.

N MAHESH

ಈ ಹಿಂದೆ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ರಾಜ್ಯಪಾಲರು ಸಂವಿಧಾನದಕ್ಕೆ ಬದ್ಧವಾಗಿ ಕ್ರಮ ಕೈಗೊಂಡರು. ಅಲ್ಲದೆ, ಮೈತ್ರಿ ನಾಯಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿ, ಕೇವಲ 24 ಗಂಟೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಸೂಚಿಸಿದರು. ಹೀಗಾಗಿ ಗಲಿಬಿಲಿಯಾಯಿತು. ಅಲ್ಲದೆ, ಆಗ ಪಕ್ಷೇತರರು ಸಹ ಅವರೊಂದಿಗೆ ಹೋಗಿದ್ದರು. ಇಂದು ಆ ಪರಿಸ್ಥಿತಿ ಇಲ್ಲ ಅವರೊಂದಿಗೆ ಪಕ್ಷೇತರರು, ಬಿಎಸ್‍ಪಿ ಶಾಸಕರಿಲ್ಲ. ನಾವು ಒಟ್ಟು 108 ಜನ ಇದ್ದೇವೆ. ಅಲ್ಲದೆ, ಅತೃಪ್ತ ಶಾಸಕರೂ ಸಹ ಯಾವುದೇ ಕಾರಣಕ್ಕೂ ಮರಳಿ ಮೈತ್ರಿ ಪಕ್ಷಗಳನ್ನು ಸೇರುವುದಿಲ್ಲ. ಹೀಗಾಗಿ ಸರ್ಕಾರ ನಡೆಸುವ ಕುರಿತು ನಮಗೆ ವಿಶ್ವಾಸವಿದೆ ಎಂದರು.

TAGGED:bs yeddyurappagovernmentMadhuswamyPublic TVswornಪಬ್ಲಿಕ್ ಟಿವಿಪ್ರಮಾಣ ವಚನ ಸ್ವೀಕಾರಬಿ.ಎಸ್.ಯಡಿಯೂರಪ್ಪಮಾಧುಸ್ವಾಮಿಸರ್ಕಾರ ರಚೆನೆ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Abhiman Studio
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ
Bengaluru City Cinema Districts Karnataka Latest Main Post Sandalwood
Lankasura film team gave good news Vinod Prabhakar 1
ಮಾದೇವ ನಂತರ ಲಂಕಾಸುರನಾಗಿ ಮರಿ ಟೈಗರ್ ಅಬ್ಬರ
Cinema Latest
Manoranjan Ravichandran New Movie
ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾಗೆ ಮುಹೂರ್ತ
Cinema Latest Sandalwood Top Stories
Actor Milind
`ಅನ್‌ಲಾಕ್ ರಾಘವ’ ಖ್ಯಾತಿಯ ಮಿಲಿಂದ್‌ಗೆ ಲಾಟ್ರಿ; ನಾಲ್ಕು ಚಿತ್ರಗಳಿಗೆ ಸಹಿ ಮಾಡಿದ ನಟ
Cinema Latest Sandalwood Top Stories
Kantara Chapter 1 First look of Kanakavati Rukmini Vasanth unveiled on Varamahalakshmi
ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ
Cinema Latest Top Stories

You Might Also Like

HD Kumaraswamy 7
Latest

PM E-DRIVE ಯೋಜನೆಯ ಅವಧಿ 2 ವರ್ಷ ವಿಸ್ತರಣೆ – ಕೇಂದ್ರ ಸಚಿವ ಹೆಚ್‌ಡಿಕೆ

Public TV
By Public TV
17 minutes ago
Krishna Byre Gowda
Districts

ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೃಷ್ಣಭೈರೇಗೌಡ ನೇಮಕ

Public TV
By Public TV
22 minutes ago
Dharmasthala Protest 2
Districts

ಶ್ರೀ ಕ್ಷೇತ್ರದ ಬಗ್ಗೆ ಯೂಟ್ಯೂಬರ್‌ಗಳಿಂದ ಅಪಪ್ರಚಾರ – ಕೊಡಗಿನಲ್ಲೂ ಸಿಡಿದ ಧರ್ಮಸ್ಥಳ ಭಕ್ತರು

Public TV
By Public TV
41 minutes ago
JAYARAM REDDY
Bengaluru City

ಮನೆ ನಂ.35ರಲ್ಲಿ 80 ಮಂದಿ ವಾಸ | 10*15 ಅಡಿಯಲ್ಲಿ ಎಷ್ಟು ಜನ ಇರೋಕಾಗುತ್ತೆ? – ರಾಹುಲ್ ಆರೋಪಕ್ಕೆ ಮಾಲೀಕನ ಪ್ರತಿಕ್ರಿಯೆ

Public TV
By Public TV
45 minutes ago
KPCC Election Commission
Bengaluru City

ಮತಗಳ್ಳತನ ಆರೋಪ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ದೂರು – ಅಂತರ ಕಾಯ್ದುಕೊಂಡ ರಾಗಾ

Public TV
By Public TV
1 hour ago
narendra modi xi jinping
Latest

ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಗೆ ಮೋದಿ ಸ್ವಾಗತಿಸಿದ ಚೀನಾ; ಗಲ್ವಾನ್‌ ಘರ್ಷಣೆ ಬಳಿಕ ಮೊದಲ ಭೇಟಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?