ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಅಭಿಷೇಕ್ ಅಂಬರೀಶ್ ರಕ್ತದಾನ

Public TV
0 Min Read
mnd abhi copy

ಮಂಡ್ಯ: ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ರಕ್ತದಾನ ಮಾಡಿದ್ದಾರೆ.

ಮಂಡ್ಯದ ವಿದ್ಯಾಗಣಪತಿ ದೇವಾಲಯದಲ್ಲಿ ಜೀವಧಾರೆ ಟ್ರಸ್ಟ್ ವತಿಯಿಂದ ಕಾರ್ಗಿಲ್ ವಿಜಯೋತ್ಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರವನ್ನು ಅಯೋಜನೆ ಮಾಡಲಾಗಿತ್ತು.

mnd abhi2 copy

ಈ ಕಾರ್ಯಕ್ರಮದಲ್ಲಿ ಹಲವರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುತ್ತಿದ್ದರು. ಕಾರ್ಯಕ್ರಮಕ್ಕೆ ಆಹ್ವಾನಿತರಾಗಿ ಆಗಮಿಸಿದ್ದ ಅಭಿಷೇಕ್  ಅಂಬರೀಶ್ ಈ ವೇಳೆ ತಾವೂ ಕೂಡ ರಕ್ತದಾನ ಮಾಡುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾದರು.

Share This Article
Leave a Comment

Leave a Reply

Your email address will not be published. Required fields are marked *