Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಣ್ಣು ಮುಚ್ಚಿದ ಮೇಲೆ ನಮ್ಮ ಪಲ್ಲಕ್ಕಿ ಯಾರು ಹೊರುತ್ತಾರೆ ಗೊತ್ತಿಲ್ಲ: ಮುನಿರತ್ನ

Public TV
Last updated: July 29, 2019 11:21 am
Public TV
Share
2 Min Read
muniratna
SHARE

ಬೆಂಗಳೂರು: ನಾವು ಕಣ್ಣು ಮುಚ್ಚಿದ ಮೇಲೆ ನಮ್ಮ ಪಲ್ಲಕ್ಕಿ ಯಾರು ಹೊರುತ್ತಾರೆ ಎಂಬುದು ಗೊತ್ತಿಲ್ಲ, ಈಗ ಕಣ್ಣು ತೆರೆದಿದ್ದೇವೆ. ಹಾಗಾಗಿ ಕ್ಷೇತ್ರದ ಅಭಿವೃದ್ಧಿಯನ್ನು ಕೇಳಿದ್ದೇನೆ ಎಂದು ಅನರ್ಹ ಶಾಸಕ ಮುನಿರತ್ನ ಅವರು ತಿಳಿಸಿದ್ದಾರೆ.

ಮುಂಬೈಯಿಂದ ಬಂದ ಬಳಿಕ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಈ ಬಗ್ಗೆ ಏನೂ ಮಾತನಾಡುವುದಿಲ್ಲ. ಈಗ ನ್ಯಾಯಯುತವಾಗಿ ಹೋರಾಟ ಮಾಡುತ್ತೇವೆ. ಈಗಾಗಲೇ ಇದಕ್ಕೆ ಸಂಬಂಧಪಟ್ಟಂತೆ ದಾಖಲೆಯನ್ನು ಪಡೆದು ಸ್ಪೀಕರ್ ಕಚೇರಿಯಿಂದ ಸುಪ್ರೀಂ ಕೋರ್ಟಿಗೆ ಹೋಗುವುದಾಗಿ ತಿಳಿಸಿದರು.

speaker Ramesh Kumar letter

ಅಲ್ಲದೆ ಸ್ಪೀಕರ್ ಅವರ ಈ ಪ್ರಕಿಯೆ ನಮಗೆ ಮೊದಲೇ ಗೊತ್ತಿತ್ತು. ನಾನು ಇದನ್ನು ಪಿತೂರಿ ಎಂದು ಹೇಳುವುದಿಲ್ಲ. ಈಗ ಎಲ್ಲ ಮುಗಿದಿದೆ. ನಾವೇನಿದ್ದರೂ ನ್ಯಾಯಯುತವಾಗಿ ಹೋರಾಟ ಮಾಡುತ್ತೇವೆ. ಈಗಾಗಲೇ ಕೆಲವು ಶಾಸಕರು ಸುಪ್ರೀಂ ಕೋರ್ಟಿಗೆ ತೆರಳಿದ್ದಾರೆ. ನಾವು ತಪ್ಪು ಮಾಡಿದ್ದೇವೆ ಎಂದು ನಮಗೆ ಅನಿಸುತ್ತಿಲ್ಲ. ಏಕೆಂದರೆ ಶಾಸಕ ಎಂದು ಅನಿಸಿಕೊಂಡ ಮೇಲೆ ಅವರು ಕ್ಷೇತ್ರಕ್ಕೆ ನ್ಯಾಯ ಒದಗಿಸುವುದು ಪ್ರತಿಯೊಬ್ಬ ಅವರ ಕರ್ತವ್ಯ ಎಂದರು.

supreme court

ನಾನು ಅಭಿವೃದ್ಧಿ ಕೇಳಿದ್ದೇನೆ ಹೊರತು ನನ್ನ ಕುಟುಂಬಕ್ಕೆ ಅಥವಾ ನನ್ನ ಲಾಭಕ್ಕೆ ನಾನು ಬೇಡಿಕೆ ಇಟ್ಟಿಲ್ಲ. ನನಗಿದ್ದ ಒಂದು ಕನಸು ತುಮಕೂರು ರಸ್ತೆ ರಾಜ್‍ಕುಮಾರ್ ಅವರ ಸಮಾಧಿಯ ಮುಂದೆ ರಿಂಗ್ ರೋಡ್‍ನಲ್ಲಿ ಮೆಟ್ರೋ ಬರಬೇಕು ಎಂದು ಕೇಳಿದ್ದೆ. ನಾನು ಹೆಚ್ಚೇನು ಕೇಳಲಿಲ್ಲ. ಈಗ ಬೆಂಗಳೂರು ಕೇವಲ ಐಟಿಬಿಟಿಯಲ್ಲಿ ಅಭಿವೃದ್ಧಿ ಆಗುತ್ತಿದೆ. ಬೆಂಗಳೂರು ಪಶ್ಚಿಮದ ಕಡೆ ಮಧ್ಯಮ ವರ್ಗ, ಬಡ ಕುಟುಂಬ ಹೆಚ್ಚು ಇದೆ. ನಾವು ಕಣ್ಣು ಮುಚ್ಚಿದ ಮೇಲೆ ನಮ್ಮ ಪಲ್ಲಕ್ಕಿ ಯಾರು ಹೊರುತ್ತಾರೆ ಎಂಬುದು ಗೊತ್ತಿಲ್ಲ, ಈಗ ಕಣ್ಣು ತೆರೆದಿದ್ದೇವೆ. ಹಾಗಾಗಿ ಕ್ಷೇತ್ರದ ಅಭಿವೃದ್ಧಿಯನ್ನು ಕೇಳಿದ್ದೇನೆ ಎಂದರು.

REVANNA

ಅಭಿವೃದ್ಧಿಗೆ ಸಹಕರಿಸಿ, ಗೊರಗೊಂಟೆಪಾಳ್ಯ ಜಂಕ್ಷನ್‍ಗೆ ಸಂಬಂಧಪಟ್ಟಂತೆ ರೇವಣ್ಣ ಅವರಿಗೆ ಸುಮಾರು ಪತ್ರ ಬರೆದು ಬೇಡಿಕೆ ಇಟ್ಟಿದ್ದೇನೆ. ಸಿಗ್ನಲ್ ಫ್ರೀ ಕಾರಿಡಾರ್ ಮಾಡಿಕೊಡಿ, ಎಲಿವೆಟೆಡ್ ಕಾರಿಡಾರ್ ನಮ್ಮ ಕ್ಷೇತ್ರಕ್ಕೆ ಅವಶ್ಯಕತೆ ಇದೆ. 24 ಸಾವಿರ ಕೋಟಿ ಬೆಂಗಳೂರಿಗೆ ಖರ್ಚು ಮಾಡ್ತೀರಾ. ದಯವಿಟ್ಟು ನಮ್ಮ ಮಾತು ಕೇಳಿ ಎಂದು ಕೇಳಿಕೊಂಡೆ. ಆದರೆ ಅವರು ನಮ್ಮ ಮಾತು ಕೇಳಲಿಲ್ಲ. ಸಮ್ಮಿಶ್ರ ಸರ್ಕಾರ ಎಂದರೆ ಎರಡು ಮನಸ್ಸು ಒಂದಾದ ಮೇಲೆ ಮಕ್ಕಳು ಚೆನ್ನಾಗಿರುತ್ತಾರೆ. ಎರಡು ಮನಸ್ಸು ಒಂದಾಗಿಲ್ಲ ಎಂದರೆ ಪ್ರತಿ ದಿನ ಜಗಳ, ಮುಸುಕಿನ ಗುದ್ದಾಟ ನಡೆಯುತ್ತದೆ ಎಂದು ತಿಳಿಸಿದರು.

RAMALINGAREDDY

ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೊಡದೇ ಇರುವುದರಿಂದ ಬೆಂಗಳೂರಿನ ಶಾಸಕರಿಗೆ ಮನಸ್ತಾಪ ಬಂದಿದೆ. ರಾಮಲಿಂಗಾರೆಡ್ಡಿ ಅವರು ಹಿರಿಯರು, 7 ಬಾರಿ ಶಾಸಕರಾಗಿದ್ದರು ಸಹ ಅವರಿಗೆ ಸಚಿವ ಸ್ಥಾನ ಕೊಡದೇ ಇದದ್ದು ನಮಗೆ ಬೇಸರವಾಗಿತ್ತು. ಅವರು ಬೆಂಗಳೂರಿನ ಅಭಿವೃದ್ಧಿಗೆ ಬಗ್ಗೆ ಹೆಚ್ಚು ಕೆಲಸ ಮಾಡಿದ್ದರು. ಬೆಂಗಳೂರು ಶಾಸಕರ ಸಮಸ್ಯೆ ಕೇಳುವವರು ಇಲ್ಲದಂತಾದ ಪರಿಸ್ಥಿತಿ ನಮಗೆ ಬಂದಿತ್ತು. ಇಡೀ ರಾಜ್ಯದಲ್ಲಿ ಬೆಂಗಳೂರಿಗೆ ಆದಾಯ ಬರುತ್ತದೆ. ಬೆಂಗಳೂರು ಅಭಿವೃದ್ಧಿ ಮಾಡಲು ಅವರಿಗೇನು ಕಷ್ಟ. ಕೆಲಸ ಮಾಡಬೇಕು ಎಂದು ನಾವು ಬಂದಿದ್ದೇವೆ. ಕೆಲಸ ಆಗಿಲ್ಲ ಎಂದು ಈಗ ಹೊರ ನಡೆದಿದ್ದೇವೆ. ಕ್ಷೇತ್ರದ ಜನ ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ಪ್ರತಿಕ್ರಿಯಿಸಿದರು.

BJP SULLAI 1

ನಾವು ಯಾವುದೋ ಆಪರೇಷನ್ ಕಮಲಕ್ಕೊ ಅಥವಾ ಹಣದ ಆಮೀಷಕ್ಕೆ ಒಳಗಾಗಿಲ್ಲ. ನಾವು ಯಾವುದೇ ಕಾರಣಕ್ಕೂ ಈ ಪಾಪದ ಕೆಲಸಕ್ಕೆ ಕೈ ಹಾಕಲ್ಲ. ನಮಗೆ ಇದು ಬೇಕಾಗಿಲ್ಲ. ನಮ್ಮ ಕ್ಷೇತ್ರಕ್ಕೆ ಯಾರು ಅಭಿವೃದ್ಧಿ ಮಾಡುತ್ತಾರೋ ಅವರ ಹಿಂದೆ ಹೋಗುತ್ತೇವೆ ಎಂದು ಮುನಿರತ್ನ ಅವರು ಪ್ರತಿಕ್ರಿಯಿಸಿದ್ದಾರೆ.

TAGGED:bengaluruMuniratnaPublic TVResignationrevannaspeakerSupreme Courtಪಬ್ಲಿಕ್ ಟಿವಿಬೆಂಗಳೂರುಮುನಿರತ್ನರಾಜೀನಾಮೆರೇವಣ್ಣಸುಪ್ರೀಂ ಕೋರ್ಟ್ಸ್ಪೀಕರ್
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
6 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
7 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
10 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
19 hours ago

You Might Also Like

Temba Bavuma Aiden Markram
Cricket

ಚೋಕರ್ಸ್‌ ಪಟ್ಟ ಕಳಚಿ ಚಾಂಪಿಯನ್‌ ಆಗಲು ಆಫ್ರಿಕಾಗೆ ಬೇಕಿದೆ ಕೇವಲ 69 ರನ್‌!

Public TV
By Public TV
4 hours ago
Vijayapura Rain
Districts

ವಿಜಯಪುರ | ಭಾರಿ ಮಳೆ – ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರು

Public TV
By Public TV
4 hours ago
ಸಾಂದರ್ಭಿಕ ಚಿತ್ರ
Belgaum

ಬೆಳಗಾವಿ | ಧಾರಾಕಾರ ಮಳೆಗೆ ಕೊಚ್ಚಿಹೋದ ಆಟೋ – ಚಾಲಕ ದುರ್ಮರಣ

Public TV
By Public TV
4 hours ago
Leopard
Districts

ಗ್ರಾಮಸ್ಥರ ನಿದ್ದೆಗೆಡಿಸಿದ ಚಿರತೆ – ಡ್ರೋನ್ ಕ್ಯಾಮೆರಾದಲ್ಲಿ ಸೆರೆ

Public TV
By Public TV
4 hours ago
Hardhik Vibhuthi 2
Latest

ವಿಮಾನ ದುರಂತ – ನಿಶ್ಚಿತಾರ್ಥ ಮುಗಿಸಿ ಹೊರಟ ಜೋಡಿಯ ದಾರುಣ ಅಂತ್ಯ

Public TV
By Public TV
5 hours ago
Basavasagar dam
Districts

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?