ಜಗಪತಿ ಬಾಬುರಿಂದ ಡಾ. ರಾಜ್, ಅಂಬಿ ಸಮಾಧಿಗೆ ಪೂಜೆ

Public TV
0 Min Read
Jagapathi Babu 2

ಬೆಂಗಳೂರು: ಟಾಲಿವುಡ್ ನಟ ಜಗಪತಿ ಬಾಬು ಅವರು ಇಂದು ಬೆಳಗ್ಗೆ ಕಂಠೀರವ ಸ್ಟುಡಿಯೋಗೆ ಭೇಟಿ ಕೊಟ್ಟಿದ್ದಾರೆ.

ಈ ವೇಳೆ ಜಗಪತಿ ಬಾಬು ಅವರು ಡಾ. ರಾಜ್ ಕುಮಾರ್, ಅಂಬರೀಶ್ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ್ದಾರೆ. ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಶೂಟಿಂಗ್‍ಗೆ ಬೆಂಗಳೂರಿಗೆ ಆಗಮಿಸಿರೋ ಜಗಪತಿ ಬಾಬು, ಮೊದಲ ಬಾರಿಗೆ ಕಂಠೀರವ ಸ್ಟುಡಿಯೋಗೆ ತೆರಳಿದ್ದಾರೆ.

Jagapathi Babu 1 1

ರಾಬರ್ಟ್ ಸಿನಿಮಾದ ನಿರ್ಮಾಪಕ ಉಮಾಪತಿ ಟಾಲಿವುಡ್‍ನ ಕಲಾವಿದನಿಗೆ ಜೊತೆಯಾಗಿದ್ದಾರೆ. ನಾಲ್ಕು ದಿನ ಕಂಠೀರವದಲ್ಲಿ ನಡೆಯುವ ಶೂಟಿಂಗ್‍ನಲ್ಲಿ ಜಗಪತಿ ಬಾಬು ಭಾಗಿಯಾಗಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *