ಕಾಶ್ಮೀರಕ್ಕೆ ನುಸುಳಿದ್ದಾರೆ ಐವರು ಉಗ್ರರು- ಹೈ ಅಲರ್ಟ್ ಘೋಷಣೆ

Public TV
2 Min Read
army 1 1

ಶ್ರೀನಗರ: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹಮ್ಮದ್‍ಗೆ ಸೇರಿದ ಐದು ಉಗ್ರರು ಕಾಶ್ಮೀರಕ್ಕೆ ನುಸುಳಿದ್ದಾರೆ ಎಂಬ ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಕಾಶ್ಮೀರದ ಕಣಿವೆ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ಭಾರತದ ಕಣಿವೆ ಪ್ರದೇಶಕ್ಕೆ ಐದು ಜನ ಉಗ್ರರು ನುಸುಳಿದ್ದಾರೆ. ಈ ಉಗ್ರರು ಕಣಿವೆಯಲ್ಲಿನ ಭದ್ರತಾ ಪಡೆಗಳ ಮೇಲೆ ದಾಳಿ ಮಾಡುವ ಸಾಧ್ಯತೆ ಇರುವುದರಿಂದ ಈ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

indian army

ಭಾರತಕ್ಕೆ ನುಸುಳಿರುವ ಭಯೋತ್ಪಾದಕರು ಹೆಚ್ಚು ತರಬೇತಿ ಪಡೆದವರು ಮತ್ತು ಅವರು ಭದ್ರತಾ ಪಡೆಗಳ ಮೇಲೆ ದಾಳಿ ಮಾಡಬಹುದು ಎಂದು ಮೂಲಗಳು ತಿಳಿಸಿರುವ ಕಾರಣ ಕೇಂದ್ರ ಸರ್ಕಾರ ಕಾಶ್ಮೀರ ಕಣಿವೆ ಪ್ರದೇಶಕ್ಕೆ ಹೆಚ್ಚಿನ ಸೈನಿಕರು ಮತ್ತು ವಾಯು ಪಡೆಯನ್ನು ನಿಯೋಜನೆ ಮಾಡಿ ತೀವ್ರ ಎಚ್ಚರಿಕೆ ವಹಿಸಿದೆ.

ಈ ವಿಷಯ ತಿಳಿಯುತ್ತಿದ್ದಂತೆ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಗುರುವಾರ ಸಂಜೆಯಿಂದ ಸೂಕ್ಷ್ಮ ಪ್ರದೇಶದಲ್ಲಿ ಗಸ್ತು ತಿರುಗುತ್ತಿದೆ. ಹೆಚ್ಚಿನ ಭದ್ರತೆಗೆ ಸೇನೆಯನ್ನು ಸಿದ್ಧಗೊಳಿಸಲಾಗಿದೆ. ಕಾಶ್ಮೀರ ಕಣಿವೆಗಳಲ್ಲಿ ಭದ್ರತಾ ಪಡೆಗಳ 280 ಗುಂಪುಗಳನ್ನು ನಿಯೋಜನೆ ಮಾಡಲಾಗಿದೆ. ಕಾಶ್ಮೀರದ ನಗರ ಭಾಗದ ಕೆಲ ದುರ್ಬಲ ಸ್ಥಳಗಳಲ್ಲಿ ಸಿ.ಆರ್‍.ಪಿ.ಎಫ್ ಸಿಬ್ಬಂದಿಯನ್ನು ನೇಮಕ ಮಾಡಿದ್ದೇವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

army 2

ನಗರದ ಎಲ್ಲಾ ಪ್ರಮುಖ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಕೇಂದ್ರ ಸಶಸ್ತ್ರ ಅರೆಸೈನಿಕ ಪಡೆ (ಸಿಎಪಿಎಫ್) ಮತ್ತು ಸ್ಥಳೀಯ ಪೊಲೀಸರನ್ನು ನೇಮಿಸಲಾಗಿದೆ. ಭಯೋತ್ಪಾದಕರು ದೇವಾಲಯದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಿದ್ದಾರೆ ಎಂಬ ಗುಪ್ತಚರ ಇಲಾಖೆ ಮಾಹಿತಿಯಿಂದಾಗಿ ಪ್ರಾರ್ಥನ ಮಂದಿರಕ್ಕೆ ನೀಡಿದ್ದ ಭದ್ರತೆಯನ್ನು ಹಿಂತೆಗೆದುಕೊಳ್ಳಲಾಗಿದೆ. ರಾಜ್ಯದ ಶಾಲೆಗಳಿಗೆ 10 ದಿನಗಳವರೆಗೆ ರಜೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

indian army

ಈ ಘಟನೆಯಿಂದ ಅಮರನಾಥ ಯಾತ್ರೆಯ ಕೆಲವು ಊಟದ ಗೃಹಗಳನ್ನು ಸಹ ಮುಚ್ಚಲಾಗಿದೆ. ಈ ಕಾರ್ಯಾಚರಣೆ ನಡೆಸಲು ಮತ್ತು ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಕರ್ತವ್ಯಗಳನ್ನು ಬಲಪಡಿಸುವ ಸಲುವಾಗಿ ಸುಮಾರು 10,000 ಕೇಂದ್ರ ಪಡೆಗಳ ಸಿಬ್ಬಂದಿಯನ್ನು ಕಾಶ್ಮೀರಕ್ಕೆ ನಿಯೋಜಿಸಿತ್ತು. ಈ ನಿರ್ಧಾರದ ಬೆನ್ನಲ್ಲೇ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ 25,000 ಅರೆಸೈನಿಕ ಸಿಬ್ಬಂದಿಯನ್ನು ಕಾಶ್ಮೀರಕ್ಕೆ ಕಳುಹಿಸಿದೆ.

Share This Article
Leave a Comment

Leave a Reply

Your email address will not be published. Required fields are marked *