Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಏನು? ತಯಾರಿ ಹೇಗೆ ಮಾಡಬೇಕು?

Public TV
Last updated: August 6, 2019 5:08 pm
Public TV
Share
3 Min Read
VARALAKSHMI
SHARE

ಶ್ರಾವಣ ಮಾಸ ಬಂತೆಂದರೆ ಹಬ್ಬಗಳ ಮಾಸವಾಗಿದೆ. ಪ್ರತಿಯೊಂದು ಹಬ್ಬದಲ್ಲಿ ಮನೆಯಲ್ಲಿ ಸಡಗರ ಸಂಭ್ರಮದಿಂದ ಕೂಡಿರುತ್ತದೆ. ಅದರಲ್ಲೂ ಶ್ರಾವಣ ಮಾಸದಲ್ಲಿ ಎರಡನೇ ಶುಕ್ರವಾರ ಬರುವ ಈ ವರಲಕ್ಷ್ಮಿ ವ್ರತವನ್ನು ಎಲ್ಲಾ ಮುತ್ತೈದೆಯರು ಭಕ್ತಿ ಶ್ರದ್ಧೆಯಿಂದ ಆಚರಿಸುತ್ತಾರೆ.

ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ
ಪುರಾಣದಲ್ಲಿ ಚಾರುಮತಿ ಎಂಬ ಸ್ತ್ರೀಯೊಬ್ಬಳು ನಿಸ್ವಾರ್ಥವಾಗಿ ತನ್ನ ಅತ್ತೆ-ಮಾವಂದಿರ ಸೇವೆ ಮಾಡುತ್ತಿರುತ್ತಾಳೆ. ಇದನ್ನು ಕಂಡು ಆಕೆಯ ಶ್ರದ್ಧೆಗೆ ಒಲಿದ ಲಕ್ಷ್ಮಿ ಶ್ರಾವಣ ಮಾಸದ ಹುಣ್ಣಿಮೆಗೂ ಮೊದಲ ಶುಕ್ರವಾರ ನನ್ನನ್ನು ಆರಾಧಿಸು, ನಿನ್ನ ಇಷ್ಟಾರ್ಥಗಳನ್ನು ಪೂರೈಸುತ್ತೇನೆ ಎನ್ನುತ್ತಾಳೆ. ಆ ಕಾರಣ ಚಾರುಮತಿ ಶ್ರಾವಣ ಮಾಸದ ಹುಣ್ಣಿಮೆಗೂ ಮೊದಲ ಶುಕ್ರವಾರ ವರಮಹಾಲಕ್ಷ್ಮಿಯನ್ನು ಆರಾಧಿಸಿ ತನ್ನ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳುತ್ತಾಳೆ.

ಲಕ್ಷ್ಮಿಯು ಕ್ಷೀರ ಸಾಗರದಿಂದ ಅವತಾರ ತಾಳಿದ್ದಾಳೆ ಎನ್ನುವ ಕಥೆಯಿದೆ. ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದಾರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಲಕ್ಷ್ಮೀ ಉದ್ಭವಿಸುತ್ತಾಳೆ. ಆದ್ದರಿಂದಲೇ ಇಷ್ಟಾರ್ಥಗಳನ್ನು ಪೂರೈಸುವ ಲಕ್ಷ್ಮಿಯ ಆರಾಧನೆಗಾಗಿ ಈ ಹಬ್ಬವಾಗಿದೆ. ಪ್ರತಿವರ್ಷವೂ ಲಕ್ಷ್ಮಿಯನ್ನು ಶ್ರದ್ಧೆ-ಭಕ್ತಿಯಿಂದ ಆರಾಧಿಸುವುದರಿಂದ ಸಕಲ ಇಷ್ಟಾರ್ಥವೂ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ.

maxresdefault

ವ್ರತ ಹೇಗೆ ಮಾಡಬೇಕು?
ಲಕ್ಷ್ಮಿ ಎಂದರೆ ಶುದ್ಧತೆಯ ಸಂಕೇತವಾಗಿದೆ. ಹೀಗಾಗಿ ಹಬ್ಬದ ದಿನದಂದು ಮುಂಜಾನೆ ಎದ್ದು ಮನೆಯನ್ನು ಶುಚಿಗೊಳಿಸಿ, ರಂಗೋಲಿ, ತಳಿರು ತೋರಣಗಳಿಂದ ಅಲಂಕರಿಸಿ ಸ್ನಾನ ಮಾಡಿ ಶುಭ್ರವಾದ ಬಟ್ಟೆಯನ್ನು ತೊಟ್ಟು ಮಡಿಯಲ್ಲಿ ನೈವೇದ್ಯವನ್ನು ತಯಾರಿಸಲಾಗುತ್ತದೆ. ಸಣ್ಣ ಉಕ್ಕಿನ ಬಿಂದಿಗೆ ಅಥವಾ ಬೆಳ್ಳಿ ಚೆಂಬನ್ನು ಕಲಶದ ರೂಪದಲ್ಲಿ ಇಟ್ಟು ಅದರಲ್ಲಿ ನೀರನ್ನು ತುಂಬಿಸಿ ಅದಕ್ಕೆ ಸ್ವಲ್ಪ ಖರ್ಜೂರ ಹಾಗೂ ದ್ರಾಕ್ಷಿಯನ್ನು ಹಾಕಬೇಕು. ಒಂದು ತಟ್ಟೆಯಲ್ಲಿ ಅಕ್ಕಿಯನ್ನು ಹರಡಿ ಅದರಲ್ಲಿ ಕಲಶವನ್ನು ಇಟ್ಟು, ಮಾವಿನ ಎಲೆ ಹಾಗೂ ವೀಳ್ಯೆದೆಲೆಯನ್ನು ಕಲಶದ ಸುತ್ತ ಜೋಡಿಸಿ ಅದರ ಮೇಲೆ ಅರಿಶಿಣ ಹಚ್ಚಿದ ತೆಂಗಿನಕಾಯಿಯನ್ನು ಇಟ್ಟು ಅದಕ್ಕೆ ಶ್ವೇತವರ್ಣದ ಕೆಂಪು ಅಂಚಿನ ಸೀರೆಯನ್ನು ಉಡಿಸಿ ಅಲಂಕರಿಸುತ್ತಾರೆ. ಜೊತೆ ಒಡವೆಗಳನ್ನು ಹಾಕಿ ಸಿಂಗಾರಗೊಳಿಸುತ್ತಾರೆ.

ಶುಕ್ರವಾರ ವರಮಹಾಲಕ್ಷ್ಮಿಯನ್ನು ಬ್ರಾಹ್ಮೀ ಲಗ್ನದಲ್ಲಿ ಪ್ರತಿಷ್ಠಾಪನೆ ಮಾಡಬೇಕು, ಮುಂಜಾನೆ 4:30 ರಿಂದ 5.30 ರವರೆಗೂ ಬ್ರಾಹ್ಮೀ ಲಗ್ನದ ಮುಹೂರ್ತವಿದೆ. ಇದೇ ಮುಹೂರ್ತದಲ್ಲಿ ಲಕ್ಷ್ಮಿಯನ್ನು ಕೂರಿಸಿ ಪೂಜೆ ಸಲ್ಲಿಸಬೇಕು. ಈ ಮುಹೂರ್ತದಲ್ಲಿ ಲಕ್ಷ್ಮಿಯನ್ನು ಕೂರಿಸಿ ಪೂಜೆ ಮಾಡಿದರೆ ನಮ್ಮ ಪ್ರಾರ್ಥನೆ ದೇವಿಗೆ ತಲುಪಿ, ನಮ್ಮ ಇಷ್ಟಾರ್ಥಗಳನ್ನು ಈಡೇರಿಸುತ್ತಾಳೆ ಎನ್ನುವ ನಂಬಿಕೆಯಿದೆ.

varamahalakshmi flowers 4

ಲಕ್ಷ್ಮಿಗೆ ಹೂವುಗಳೆಂದರೆ ಬಹಳ ಪ್ರೀತಿ. ಅದರಲ್ಲೂ ಕಮಲದ ಹೂವು ಹಾಗೂ ಬಿಲ್ವಪತ್ರೆ ಎಂದರೆ ಲಕ್ಷ್ಮಿಗೆ ತುಂಬಾ ಪ್ರೀತಿ. ಹೀಗಾಗಿ ವ್ರತ ಮಾಡುವವರು ಈ ಹೂವನ್ನು ತಪ್ಪದೆ ತಾಯಿಯ ಬಳಿಯಿಟ್ಟು ಪೂಜೆ ಮಾಡುತ್ತಾರೆ. ಲಕ್ಷ್ಮಿ ಮುಂದೆ ಹಣ, ಚಿನ್ನ, ಬಳೆ, ಹಣ್ಣು, ಸ್ವೀಟ್, ಅರಿಶಿಣ, ಕುಂಕುಮ, ಎಲ್ಲವನ್ನು ಇಡುತ್ತಾರೆ.

ಬಿಲ್ವ ವೃಕ್ಷದಲ್ಲಿ ಲಕ್ಷ್ಮಿ ನೆಲೆಸಿದ್ದಾಳೆ ಎಂಬುದು ನಂಬಿಕೆಯಾಗಿದೆ. ಹೀಗಾಗಿ ಬಿಲ್ವ ಪತ್ರೆಯಿಂದ ಪೂಜೆ ಮಾಡಿದರೆ ತಾಯಿ ಒಲಿಯುವಳೆಂಬ ಪ್ರತೀತಿಯೂ ಇದೆ. ವರಲಕ್ಷ್ಮಿ ಎಂದರೆ ವರಗಳನ್ನು ಕೊಡುವವಳು ಎಂದು ಕೂಡ ಹೇಳುತ್ತಾರೆ. ಸಾಮಾನ್ಯವಾಗಿ ಲಕ್ಷ್ಮೀ ಪೂಜೆಯನ್ನು ಗೋಧೂಳಿ ಸಮಯದಲ್ಲಿ ಮಾಡಿದರೆ ಶ್ರೇಷ್ಠ. ಈ ವ್ರತವನ್ನು ಯಾರು ನಿಷ್ಠೆಯಿಂದ ಮಾಡುತ್ತಾರೋ ಅವರಿಗೆ ಹಾಗೂ ಅವರ ಮನೆಯವರಿಗೆಲ್ಲರಿಗೂ ಒಳ್ಳೆಯದಾಗುತ್ತದೆಂದೂ ಹಾಗೂ ಎಲ್ಲಾ ಕೆಲಸದಲ್ಲಿ ಏಳಿಗೆ ಆಗುತ್ತದೆಂಬ ನಂಬಿಕೆಯೂ ಇದೆ. ಹೀಗಾಗಿ ನಮ್ಮ ಪೂರ್ವಿಕರು ಎಲ್ಲಿ ತನು, ಮನ, ಮನೆ ಶುದ್ಧವಾಗಿರುತ್ತದೋ ಅಲ್ಲಿ ಲಕ್ಷ್ಮಿಯು ನೆಲೆಸುತ್ತಾಳೆ ಎಂಬ ನಂಬಿಕೆಯನ್ನು ಹೊಂದಿದ್ದರು.

LAKDHI

ಲಕ್ಷ್ಮಿಗೆ ಪ್ರಿಯವಾದ ಧಾನ್ಯವೆಂದರೆ ಕಡಲೆಬೇಳೆ. ಆದ್ದರಿಂದ ವರಮಹಾಲಕ್ಷ್ಮಿ ಹಬ್ಬದ ದಿನದಂದು ನೈವ್ಯೇದ್ಯಕ್ಕೆ ಕಡಲೆಬೇಳೆಯಿಂದ ತಯಾರಿಸಿದ ಪಾಯಸ, ಹೋಳಿಗೆ ಇತ್ಯಾದಿ ಸಿಹಿ ತಿನಿಸುಗಳನ್ನು ದೇವರಿಗೆ ಅರ್ಪಿಸುತ್ತಾರೆ. ವ್ರತದ ನೇಮದ ಪ್ರಕಾರ ಪೂಜೆಯ ಸಿದ್ಧತೆಗಳೆಲ್ಲ ಆದ ನಂತರ ಮೊದಲು ವಿಘ್ನಕಾರಕನಾದ ಗಣಪತಿಯನ್ನು ಪೂಜಿಸಿ ನಂತರ ಯಮುನಾ ಪೂಜೆ ಅಂದರೆ ಶ್ರೇಷ್ಠವಾದ ನದಿಯ ನೀರನ್ನು ತಂದು ಪೂಜೆ ಮಾಡುತ್ತಾರೆ. ಇದಾದ ಮೇಲೆ ವರಲಕ್ಷ್ಮಿ ವ್ರತವನ್ನು ಆರಂಭಿಸುತ್ತಾರೆ. ಮನೆಗೆ ಮುತ್ತೈದೆಯರನ್ನು ಕರೆದು ಅರಿಶಿಣ, ಕುಂಕುಮ, ಸಿಹಿ ಕೊಡುತ್ತಾರೆ. ಇದೇ ರೀತಿ ಮದುವೆಯಾದ ಹೆಣ್ಣು ಮಕ್ಕಳು ಮೊದಲನೇ ವರ್ಷದಿಂದ ಒಂಬತ್ತು ವರ್ಷದವರೆಗೆ ಶ್ರದ್ಧೆಯಿಂದ ವ್ರತವನ್ನಾಚರಿಸಿ ಒಂಬತ್ತನೇ ವರ್ಷ ವ್ರತವನ್ನು ಮುಗಿಸುತ್ತಾರೆ.

TAGGED:Public TVvaramahalakshmi festivalಪಬ್ಲಿಕ್ ಟಿವಿವರಮಹಾಲಕ್ಷ್ಮಿ ಹಬ್ಬ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
16 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
18 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
18 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
20 hours ago

You Might Also Like

KRS Dam
Districts

ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ಏರಿಕೆ – 17,544 ಕ್ಯೂಸೆಕ್ ಒಳಹರಿವು

Public TV
By Public TV
21 minutes ago
Bengaluru BMTC Bus
Bengaluru City

PUBLiC TV Impact – ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿದ್ದ BMTC ಬಸ್ ಡ್ರೈವರ್ ಅಮಾನತು

Public TV
By Public TV
26 minutes ago
CORONA 1
Dharwad

ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಕೊರೊನಾ ಸೋಂಕು – ಮಂಡ್ಯದಲ್ಲೂ ಮೊದಲ ಕೇಸ್‌ ಪತ್ತೆ

Public TV
By Public TV
50 minutes ago
Eshwara Khandre
Bengaluru City

ಭೂಕುಸಿತ; 3 ತಿಂಗಳಲ್ಲಿ ಪಶ್ಚಿಮಘಟ್ಟ ಧಾರಣಾ ಸಾಮರ್ಥ್ಯದ ವರದಿ ಕೇಳಿದ ಈಶ್ವರ್ ಖಂಡ್ರೆ

Public TV
By Public TV
1 hour ago
Nelamangala Car Theft
Bengaluru City

ನೆಲಮಂಗಲ| ಕಾರ್ ಗ್ಲಾಸ್ ಒಡೆದು 11.5 ಲಕ್ಷ ನಗದು ದೋಚಿ ಪರಾರಿಯಾದ ಕಳ್ಳರು

Public TV
By Public TV
1 hour ago
Assam Meghalaya Road 1
Latest

ಭಾರೀ ಮಳೆಗೆ ಅಸ್ಸಾಂ-ಮೇಘಾಲಯ ರಸ್ತೆ ಸಂಪರ್ಕ ಕಡಿತ – 2 ದಿನದಲ್ಲಿ 30 ಮಂದಿ ಸಾವು!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?