Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮಿಷನ್ ಕಾಶ್ಮೀರ ಅಷ್ಟು ಸುಲಭವಾಗಿದ್ದು ಹೇಗೆ? ವಿರೋಧಿಗಳು ಹೇಳುವುದು ಏನು? ಸಂವಿಧಾನ ಏನು ಹೇಳುತ್ತೆ?

Public TV
Last updated: August 6, 2019 8:43 pm
Public TV
Share
4 Min Read
Mission Kashmir
SHARE

ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು ಎನ್ನುವ ಗಾದೆ ಮಾತಿನಂತೆ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನೇ ಬಳಸಿಕೊಂಡು ಯಾರು ಊಹೆ ಮಾಡದ ರೀತಿಯಲ್ಲಿ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಬೇಕಾದರೆ ಜಮ್ಮು ಕಾಶ್ಮೀರ ಶಾಸನಸಭೆಯ ಒಪ್ಪಿಗೆ ಪಡೆಯುವುದು ಕಡ್ಡಾಯವಾಗಿತ್ತು. ಆದರೆ ಇದ್ಯಾವ ಪ್ರಕ್ರಿಯೆಗಳಿಗೆ ಆಸ್ಪದ ನೀಡದೇ ಕೇಂದ್ರ ಸರ್ಕಾರ ‘ಬೈಪಾಸ್ ಸರ್ಜರಿ’ ಮಾಡುವ ಮೂಲಕ ಕಾಶ್ಮೀರಿ ಪ್ರತ್ಯೇಕವಾದಿಗಳಿಗೆ ಶಾಕ್ ನೀಡಿದೆ. ಹೀಗಾಗಿ ಕೇಂದ್ರ ಸರ್ಕಾರ ಯಾವ ತಂತ್ರ ಬಳಸಿ ಸಂವಿಧಾನದ 370 ಮತ್ತು 35 ವಿಧಿಯನ್ನು ರದ್ದು ಮಾಡಿದೆ? ಈ ರೀತಿ ತಂತ್ರದ ಮೂಲಕ ರದ್ದು ಮಾಡಬಹುದೇ ಇತ್ಯಾದಿ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಅಷ್ಟೊಂದು ಜಟಿಲವಾಗಿದ್ದು ಯಾಕೆ?
ನಿಮಗೆ ಈಗಾಗಲೇ ತಿಳಿದಿರುವುಂತೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳಬೇಕಾದರೆ ಅದು ಜಮ್ಮು ಕಾಶ್ಮೀರದ ಶಾಸನ ಸಭೆಯಲ್ಲಿ ಪಾಸ್ ಆಗಬೇಕು. ಆದರೆ ಸದ್ಯ ಅಲ್ಲಿನ ವಿಧಾನಸಭೆಯನ್ನು ವಿಸರ್ಜಿಸಲಾಗಿದೆ. ಹೀಗಾಗಿ ವಿಧಾನಸಭೆ ಇಲ್ಲದೇ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲು ಸಾಧ್ಯವಿರಲಿಲ್ಲ. ಇದರ ಜೊತೆಯಲ್ಲಿ ಸಂವಿಧಾನಕ್ಕೆ ತಿದ್ದುಪಡಿಯಾಗಬೇಕು. ಸಂವಿಧಾನಕ್ಕೆ ತಿದ್ದುಪಡಿಯಾಗಬೇಕಾದರೆ ರಾಜ್ಯಸಭೆಯಲ್ಲಿ ಎನ್‍ಡಿಎಗೆ ಬಹುಮತ ಇಲ್ಲ. ಹೀಗಾಗಿ ಲೋಕಸಭೆಯಲ್ಲಿ ಮಸೂದೆ ಮಂಡಿಸಿದರೂ ರಾಜ್ಯಸಭೆಯಲ್ಲಿ ಮಸೂದೆ ಪಾಸ್ ಆಗಲಾರದು ಎನ್ನುವ ಮಾತು ಕೇಳಿ ಬಂದಿತ್ತು.

Indian army

ಪ್ರತ್ಯೇಕವಾದಿಗಳ ವಾದ ಏನಿತ್ತು?
ವಿಶೇಷ ಸ್ಥಾನಮಾನ ರದ್ದು ಮಾಡಬೇಕಾದರೆ ಜಮ್ಮು ಕಾಶ್ಮೀರ ಸಂವಿಧಾನದ ರಚನಾ ಸಮಿತಿ ಶಿಫಾರಸು ಅಗತ್ಯ ಎನ್ನುವ ಮಹತ್ವದ ಉಲ್ಲೇಖ ಭಾರತದ ಸಂವಿಧಾನದಲ್ಲಿದೆ. ಈ ಸಮಿತಿ 1957ರಲ್ಲೇ ವಿಸರ್ಜನೆ ಆಗಿದೆ. ಅಷ್ಟೇ ಅಲ್ಲದೇ ಅಲ್ಲದೇ ಕಾಶ್ಮೀರದ ಒಂದು ಭಾಗ ಪಾಕಿಸ್ತಾನದಲ್ಲಿದೆ. ಈ ಕಾರಣಕ್ಕಾಗಿ ಮತ್ತೆ ಸಂವಿಧಾನ ರಚನಾ ಸಮಿತಿ ರಚಿಸಲು ಸಾಧ್ಯವಿರಲಿಲ್ಲ. ಸಂವಿಧಾನ ರಚನಾ ಸಮಿತಿ ಅಸ್ವಿತ್ವದಲ್ಲಿ ಇಲ್ಲದೇ ಇರುವಾಗ ಪ್ರತ್ಯೇಕ ಸ್ಥಾನಮಾನವನ್ನು ಹೇಗೆ ತೆಗೆಯಲಾಗುತ್ತದೆ? ಸದ್ಯದ ಪರಿಸ್ಥಿತಿಯಲ್ಲಿ ಇದು ಅಸಾಧ್ಯವಾದ ವಿಚಾರ. ಬೇರೆ ಯಾವುದೇ ರೀತಿ ಮಾಡಿದರೂ ಅದು ಸಂವಿಧಾನದ ಉಲ್ಲಂಘನೆಯಾಗುತ್ತದೆ ಎನ್ನುವ ವಾದವನ್ನು ಇಲ್ಲಿಯವರೆಗೆ ಮುಂದಿಟ್ಟುಕೊಂಡು ಬಂದಿದ್ದರು.

ಜಟಿಲ ಸಮಸ್ಯೆಯನ್ನು ಪರಿಹರಿಸಿದ್ದು ಹೇಗೆ?
ಕಾಶ್ಮೀರ ಸಮಸ್ಯೆ ಇಲ್ಲಿಯವರೆಗೆ ಜಟಿಲವಾಗಿ ಕಂಡರೂ ಸರ್ಕಾರ 370ನೇ ಕಲಂನಲ್ಲೇ ಇದ್ದ ಅಂಶವೊಂದನ್ನು ಬಳಸಿಕೊಂಡು ಆ ವಿಧಿಯನ್ನೇ ಈಗ ರದ್ದುಮಾಡಿರುವುದು ವಿಶೇಷ. ಸೆಕ್ಷನ್ 3ರ ಪ್ರಕಾರ ಈ ಕಲಂನಲ್ಲಿ ಯಾವುದೇ ಅಂಶಗಳಿದ್ದರೂ ರಾಷ್ಟ್ರಪತಿಗಳು ಒಂದು ಸಾರ್ವಜನಿಕ ಅಧಿಸೂಚನೆ ಹೊರಡಿಸುವ ಮೂಲಕ ಈ ಕಲಂ ಅನ್ನು ನಿಷ್ಕ್ರಿಯಗೊಳಿಸಬಹುದು ಅಥವಾ ಕೆಲ ಬದಲಾವಣೆಗಳನ್ನು ಮಾಡಬಹುದು ಎನ್ನುವ ಪ್ರಸ್ತಾಪವಿದೆ. ಕೇಂದ್ರ ಸರ್ಕಾರ ಈ ಅಂಶವನ್ನೇ ಮುಂದಿಟ್ಟುಕೊಂಡು ಈಗ 370ನೇ ವಿಧಿಯನ್ನು ರದ್ದುಗೊಳಿಸಿದೆ.

Mission Kashmir A

ತಿದ್ದುಪಡಿ ಮಾಡಿದ್ದು ಹೇಗೆ?
ಈ ಮೊದಲೇ ತಿಳಿಸಿದಂತೆ ಸಂವಿಧಾನ ರಚನಾ ಸಮಿತಿ ಶಿಫಾರಸು ಮಾಡಿದರೆ ಮಾತ್ರ ವಿಶೇಷ ಸ್ಥಾನಮಾನವನ್ನು ತೆಗೆಯಬಹುದು. ಸದ್ಯದ ಪರಿಸ್ಥಿತಿಯಲ್ಲಿ ಇದು ಸಾಧ್ಯವಿಲ್ಲದ ಕಾರಣ ಸರ್ಕಾರ 370ನೇ ವಿಧಿಯನ್ನು ತಿದ್ದುಪಡಿ ಮಾಡಲೇಬೇಕಿತ್ತು. ಈ ತಿದ್ದುಪಡಿಗಾಗಿ ಸರ್ಕಾರ ಆಯ್ಕೆ ಮಾಡಿದ್ದು 367ನೇ ವಿಧಿಯನ್ನು. ರಾಷ್ಟ್ರಪತಿಗಳು ಆದೇಶದ ಮೂಲಕ ತಿದ್ದುಪಡಿ ಮಾಡಬಹುದಾದ ವಿಧಿ ಇದಾಗಿದೆ. ಈ ವಿಧಿಯನ್ನು ಬಳಸಿಕೊಂಡು ಸರ್ಕಾರ ‘ಸಂವಿಧಾನ ರಚನಾ ಸಮಿತಿ’ಯನ್ನು ‘ರಾಜ್ಯ ವಿಧಾನಸಭೆ’ ಎಂಬುದಾಗಿ ಪರಿಗಣಿಸಬೇಕು ಎನ್ನುವ ಅಂಶವನ್ನು ಸೇರಿಸಿ ತಿದ್ದುಪಡಿ ಮಾಡಲಾಯಿತು. ಸದ್ಯ ಈಗ ಜಮ್ಮು ಕಾಶ್ಮೀರದಲ್ಲಿ ಸರ್ಕಾರ ಅಸ್ವಿತ್ವದಲ್ಲಿ ಇಲ್ಲ. ಪ್ರಸ್ತುತ ರಾಜ್ಯಪಾಲರಿಂದ ಶಿಫಾರಸು ಮಾಡಿಸುವ ಮೂಲಕ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಲಾಯಿತು.

ಕೇಂದ್ರದ ಈ ನಿರ್ಧಾರ ಸಾಧುವೇ?
ಯಾರೂ ಊಹಿಸದ ರೀತಿಯಲ್ಲಿ ದಶಕಗಳಿಂದ ಕಾಡುತ್ತಿದ್ದ ಸಮಸ್ಯೆಗೆ ಮುಕ್ತಿ ಸಿಕ್ಕಿದೆ. ಆದರೆ ಈಗ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಮಾಡಲು ಕೇಂದ್ರ ಸರ್ಕಾರ ಅನುಸರಿಸಿದ ನಡೆಯ ಬಗ್ಗೆ ಚರ್ಚೆ ಆರಂಭವಾಗಿದೆ. ಯಾವುದೇ ರಾಜ್ಯವನ್ನು ಒಡೆಯಬೇಕಾದರೆ ಶಾಸನ ಸಭೆಯಲ್ಲಿ ಚರ್ಚೆ ನಡೆಯುವುದು ಉತ್ತಮ ಪ್ರಜಾಪ್ರಭುತ್ವದ ಲಕ್ಷಣ. ಆದರೆ ಇಲ್ಲಿ ಯಾವುದೇ ಚರ್ಚೆ ನಡೆಸದೇ ನಾಯಕರನ್ನು ಗೃಹ ಬಂಧನದಲ್ಲಿರಿಸಿ ದಿನಬೆಳಗಾಗುವುದರ ಒಳಗಡೆ ಎರಡು ಭಾಗ ಮಾಡಿದ್ದು ಎಷ್ಟು ಸರಿ? ಇನ್ನು ಮುಂದೆ ಯಾವುದೇ ಸರ್ಕಾರಗಳು ಬೇರೆ ರಾಜ್ಯವನ್ನು ಒಡೆದು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬಹುದಲ್ಲವೇ ಎನ್ನುವ ಪ್ರಶ್ನೆಯೂ ಎದ್ದಿದೆ.

Amit Shah

ಕಾನೂನು ತಜ್ಞರು ಏನು ಹೇಳುತ್ತಾರೆ?
ಕೇಂದ್ರದ ನಡೆಯ ಬಗ್ಗೆ ಕಾನೂನು ಪಂಡಿತರಲ್ಲೇ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೇಂದ್ರದ ನಿರ್ಧಾರ ಅಸಂವಿಧಾನಿಕವಲ್ಲ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಶೋಕ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ. ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದರೆ ಹಲವು ಚರ್ಚೆಗಳು ಆಗಬಹುದು ಎಂದು ಹೇಳಿದ್ದಾರೆ.

ಕೆಲವರು ಸಂವಿಧಾನದಲ್ಲಿ ಇರುವ ಅಂಶಗಳನ್ನೇ ಬಳಸಿಕೊಂಡು ಕಿತ್ತು ಹಾಕಿದ ಪರಿಣಾಮ ನ್ಯಾಯಾಲಯಕ್ಕೆ ಹೋಗುವ ಪ್ರಮೇಯವೇ ಉದ್ಭವಿಸುವುದಿಲ್ಲ. ನ್ಯಾಯಾಲಯದಲ್ಲೂ ಕೇಂದ್ರದ ವಾದಕ್ಕೆ ಅಂತಿಮವಾಗಿ ಜಯ ಸಿಗುತ್ತದೆ ಎಂದು ಹೇಳಿದ್ದರೆ ಇನ್ನು ಕೆಲವರೂ ಸೂಪರ್ ಸೀಡ್ ಮಾಡಿ ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ರಾಜ್ಯಪಾಲರು ಯಾವಾಗಲೂ ಕೇಂದ್ರದ ಪ್ರತಿನಿಧಿ ಆಗುತ್ತಾರೆಯೇ ಹೊರತು ರಾಜ್ಯದ ಪ್ರತಿನಿಧಿಯಾಗಲು ಸಾಧ್ಯವಿಲ್ಲ. ಹೀಗಾಗಿ ವಿಧಾನಸಭೆಯಲ್ಲಿ ಅಂಗೀಕಾರವಾಗದ ಹೊರತು ವಿಶೇಷ ಸ್ಥಾನಮಾನವನ್ನು ಹೇಗೆ ರದ್ದು ಪಡಿಸುತ್ತಾರೆ? ಕೇಂದ್ರ ತಪ್ಪು ನಿರ್ಧಾರ ಕೈಗೊಂಡಿದೆ ಎಂದು ವಾದಿಸುತ್ತಿದ್ದಾರೆ.

ಇತ್ತೀಚೆಗೆ ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಳ್ಳುವ ಸಮಯದಲ್ಲಿ ಹಣಕಾಸು ಮಸೂದೆಯನ್ನು ಜುಲೈ 31ರ ಒಳಗಡೆ ಪಾಸ್ ಮಾಡಬೇಕಿತ್ತು. ಸರ್ಕಾರವೇ ಇಲ್ಲದೇ ಇರುವಾಗ ಈ ಮಸೂದೆಯನ್ನು ಹೇಗೆ ಪಾಸ್ ಮಾಡಲಾಗುತ್ತದೆ ಎನ್ನುವ ಪ್ರಶ್ನೆ ಬಂದಾಗ ಕಾನೂನು ಪಂಡಿತರು, ಸ್ಪೀಕರ್ ಕೈ ತೋರಿಸಿದ್ದು ಕೇಂದ್ರ ಸರ್ಕಾರವನ್ನು. ರಾಜ್ಯ ಸರ್ಕಾರ ಅಧಿಕಾರದಲ್ಲಿ ಇಲ್ಲದೇ ಇದ್ದಾಗ ಹಣಕಾಸು ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆದುಕೊಳ್ಳಲು ಸಂವಿಧಾನದಲ್ಲಿ ಅವಕಾಶವಿದೆ. ಹೀಗಾಗಿ ಸದ್ಯ ಕಣಿವೆ ರಾಜ್ಯದಲ್ಲಿ ಸರ್ಕಾರ ಇಲ್ಲದ ಕಾರಣ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬಹುದು. ಸಂವಿಧಾನವೇ ಈ ಅವಕಾಶ ನೀಡಿದ್ದಾಗ ಇದರಲ್ಲಿ ತಪ್ಪು ಏನು ಇಲ್ಲ. ಒಂದು ವೇಳೆ ಬಹುಮತ ಇರುವ ಸರ್ಕಾರವನ್ನು ಉದ್ದೇಶಪೂರ್ವಕವಾಗಿ ವಿಸರ್ಜಿಸಿ ರಾಷ್ಟ್ರಪತಿ ಆಡಳಿತ ಹೇರಿ ಈ ನಿರ್ಧಾರ ಕೈಗೊಂಡಿದ್ದರೆ ಮಾತ್ರ ತಪ್ಪಾಗುತಿತ್ತು. ಆದರೆ ಈ ಪ್ರಕ್ರಿಯೆಯಲ್ಲಿ ಎಲ್ಲ ಸಂವಿಧಾನ ಬದ್ಧವಾಗಿಯೇ ನಡೆದಿದೆ ಎಂದು ಎಂದು ಕೆಲವರು ವಾದಿಸುತ್ತಿದ್ದಾರೆ.

TAGGED:Article 370Jammu and Kashmirpm narendra modiPublic TVಅಮಿತ್ ಶಾಕೇಂದ್ರ ಸರ್ಕಾರಜಮ್ಮು ಕಾಶ್ಮೀರನರೇಂದ್ರ ಮೋದಿವಿಧಿ 370ವಿಶೇಷ ಸ್ಥಾನಮಾನ
Share This Article
Facebook Whatsapp Whatsapp Telegram

Cinema Updates

Nagalakshmi Chowdary
`ಡಿ’ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ – ರಮ್ಯಾ ದೂರು ಕೊಟ್ರೆ 7 ವರ್ಷ ಜೈಲು ಗ್ಯಾರಂಟಿ: ಮಹಿಳಾ ಆಯೋಗ
Bengaluru City Cinema Districts Karnataka Latest Top Stories
Ramya 5
`ಡಿ ಬಾಸ್‌’ ಮೇಲೆ ಗೌರವ ಇರೋರು ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ: ಸೆಲೆಬ್ರಿಟಿಗಳಿಗೆ ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ
Bengaluru City Cinema Latest Main Post Sandalwood
Olle Hugda Pratham ramya
`I Stand With Ramya’ – ಸ್ಯಾಂಡಲ್‌ವುಡ್ ಕ್ವೀನ್ ಬೆಂಬಲಕ್ಕೆ ನಿಂತ ಒಳ್ಳೆ ಹುಡ್ಗ ಪ್ರಥಮ್
Cinema Latest Sandalwood Top Stories
Ramya 4
ʻಡಿʼ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌ – ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ: ಪರಮೇಶ್ವರ್‌
Bengaluru City Cinema Districts Karnataka Latest Sandalwood
Actress Rakshith Prem and Ramya
`ದಯೆಯಿಂದಿರಿ’ ಡಿ-ಬಾಸ್ ಫ್ಯಾನ್ಸ್‌ಗೆ ರಕ್ಷಿತಾ ಕಿವಿಮಾತು – ಸ್ಯಾಂಡಲ್‌ವುಡ್ ಕ್ವೀನ್‌ಗೆ ಟಾಂಗ್ ಕೊಟ್ರಾ ಕ್ರೇಜಿ ಕ್ವೀನ್?
Cinema Latest Sandalwood Top Stories

You Might Also Like

Divya Deshmukh
Latest

ಚೆಸ್‌ ವಿಶ್ವಕಪ್‌ | ಅನುಭವಿ ಕೊನೆರು ಹಂಪಿಗೆ ಸೋಲು, 19ರ ದಿವ್ಯಾ ದೇಶಮುಖ್‌ ಚಾಂಪಿಯನ್‌

Public TV
By Public TV
14 minutes ago
JDS On Guarantee Schemes
Bengaluru City

ಮಜಾವಾದಿ ಸಿದ್ದರಾಮಯ್ಯ ಕೊಟ್ಟಿದ್ದಕ್ಕಿಂತ ಕಿತ್ತುಕೊಂಡಿದ್ದೇ ಹೆಚ್ಚು – ಜೆಡಿಎಸ್

Public TV
By Public TV
19 minutes ago
Sanjay Dutt
Bollywood

72 ಕೋಟಿ ಮೌಲ್ಯದ ಆಸ್ತಿಯನ್ನು ಸಂಜಯ್ ದತ್ ಹೆಸರಿಗೆ ಬರೆದಿಟ್ಟ ಅಭಿಮಾನಿ

Public TV
By Public TV
30 minutes ago
Gaurav Gogoi
Latest

ಉಗ್ರರು ಬಂದಿದ್ದು ಹೇಗೆ ಅಂತ ರಾಜನಾಥ್ ಸಿಂಗ್ ಮಾಹಿತಿಯೇ ನೀಡಲಿಲ್ಲ: ಕಾಂಗ್ರೆಸ್ ಮುಖಂಡ ಗೌರವ್ ಗೊಗೊಯ್

Public TV
By Public TV
32 minutes ago
A 25 year old youth died after suffering a heart attack while playing badminton at in Hyderabad
Latest

ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಕುಸಿದು ಬಿದ್ದು 25ರ ಯುವಕ ಸಾವು

Public TV
By Public TV
59 minutes ago
Operation Mahadev
Crime

ಪಹಲ್ಗಾಮ್ ದಾಳಿ ಬಳಿಕ ಆಫ್‌ ಆಗಿದ್ದ ಸ್ಯಾಟಲೈಟ್‌ ಫೋನ್ ದಿಢೀರ್ ಆನ್‌ – ಇದೇ ಸುಳಿವಿಂದ ಉಗ್ರರ ಬೇಟೆ!

Public TV
By Public TV
60 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?