Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಠ ಸಡಿಲಿಸಿದ ಬಿಸಿಸಿಐ – 2028ರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆ?
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಹಠ ಸಡಿಲಿಸಿದ ಬಿಸಿಸಿಐ – 2028ರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆ?

Public TV
Last updated: August 13, 2019 1:51 pm
Public TV
Share
4 Min Read
cricket bat 1
SHARE

ಲಂಡನ್: 2028ರ ಒಲಿಂಪಿಕ್ಸ್‌ನಲ್ಲಿ  ಕ್ರಿಕೆಟ್ ಸೇರ್ಪಡೆಯಾಗುವ ಸಾಧ್ಯತೆಯಿದೆ. ವಿಶ್ವ ಕ್ರಿಕೆಟ್ ಸಮಿತಿಯ ಅಧ್ಯಕ್ಷ, ಮಾಜಿ ಇಂಗ್ಲೆಂಡ್ ತಂಡದ ಬ್ಯಾಟ್ಸ್ ಮನ್ ಮೈಕ್ ಗ್ಯಾಟಿಂಗ್ ಈ ವಿಚಾರವನ್ನು ಮೊದಲ ಬಾರಿಗೆ ಅಧಿಕೃತವಾಗಿ ತಿಳಿಸಿದ್ದಾರೆ.

ಮೇರಿಲೆಬೋನ್ ಕ್ರಿಕೆಟ್ ಕ್ಲಬ್(ಎಂಸಿಸಿ) ಕ್ರಿಕೆಟ್ ಸಮಿತಿಯಲ್ಲಿ ನಡೆದ ಸಭೆಯಲ್ಲಿ ಐಸಿಸಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮನು ಸಾಹ್ನಿ ಅವರು ಬಿಸಿಸಿಐ ರಾಷ್ಟ್ರೀಯ ಉದ್ದೀಪನ ಮದ್ದು ನಿಗ್ರಹ ದಳ(ನಾಡಾ) ವ್ಯಾಪ್ತಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಒಲಿಂಪಿಕ್ಸ್ ಕ್ರೀಡೆಯಲ್ಲಿ ಕ್ರಿಕೆಟ್ ಸೇರ್ಪಡೆಗೊಳಿಸಬೇಕೆಂಬ ಆಗ್ರಹಕ್ಕೆ ಬಲ ಬಂದಿದೆ ಎಂದು ಹೇಳಿದ್ದಾರೆ.

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಮೈಕ್ ಗ್ಯಾಟಿಂಗ್ ಅವರು, ನಾವು ಮನು ಸಾಹ್ನಿ ಅವರ ಜೊತೆ ಮಾತನಾಡಿದ್ದೇವೆ. ಅವರು 2028ರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆಯಾಗಬಹುದು ಎನ್ನುವ ಬಲವಾದ ನಂಬಿಕೆಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

Story Behind Olympic Ringsಈ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲ ಪ್ರಕ್ರಿಯೆಗಳು ನಡೆಯುತ್ತಿದೆ. ಅವಕಾಶ ಸಿಕ್ಕರೆ ಕ್ರಿಕೆಟಿಗೆ ವಿಶ್ವ ಮಟ್ಟದಲ್ಲಿ ಬೋನಸ್ ಸಿಕ್ಕಿದಂತಾಗುತ್ತದೆ. ಒಲಿಂಪಿಕ್ಸ್ ಕ್ರೀಡಾಕೂಟ ತಿಂಗಳುಗಟ್ಟಲೇ ನಡೆಯುವುದಿಲ್ಲ. 2 ವಾರಗಳ ಕಾಲ ಮಾತ್ರ ನಡೆಯುತ್ತದೆ. ಅಷ್ಟೇ ಅಲ್ಲದೇ 4 ವರ್ಷಕ್ಕೊಮ್ಮೆ ನಡೆಯುತ್ತದೆ. ಒಮ್ಮೆ ಕ್ರೀಡಾಕೂಟದ ಅವಧಿ ಪ್ರಕಟಗೊಂಡರೆ ಎರಡು ವಾರಗಳ ಕಾಲ ಶೆಡ್ಯೂಲ್ ಮಾಡುವುದಕ್ಕೆ ಕ್ರಿಕೆಟ್ ತಂಡಗಳಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಮುಂದಿನ 18 ತಿಂಗಳು ಬಹಳ ಮುಖ್ಯವಾಗಿದ್ದು ಬಿಸಿಸಿಐ ನಾಡಾ ಜೊತೆ ಕೆಲಸ ಮಾಡುತ್ತಿದೆ. ಇದರಿಂದಾಗಿ ನಾವು ಒಲಿಂಪಿಕ್ಸ್‌ ಕ್ರೀಡೆಯಲ್ಲಿ ಕ್ರಿಕೆಟ್ ಸೇರಿಸುವ ದಾರಿ ಸುಗಮವಾಗಿದೆ. ಒಲಿಂಪಿಕ್ಸ್ ಕ್ರೀಡೆಯಲ್ಲಿ  ಅವಕಾಶ ಸಿಕ್ಕರೆ ಪುರುಷರ ಮತ್ತು ಮಹಿಳೆಯರ ಕ್ರಿಕೆಟ್ ತಂಡ ದೇಶವನ್ನು ಪ್ರತಿನಿಧಿಸಬಹುದು ಎಂದು ಮೈಕ್ ಗ್ಯಾಟಿಂಗ್ ತಿಳಿಸಿದರು.

cricket doping wada bcci india

ಐಸಿಸಿ ಹಿಂದಿನಿಂದಲೂ ಒಲಿಂಪಿಕ್ಸ್ ಕೂಟದಲ್ಲಿ ಕ್ರಿಕೆಟ್ ಆಟ ಸೇರಿಸಲು ಪ್ರಯತ್ನ ನಡೆಸುತಿತ್ತು. 2024ರಲ್ಲಿ ಕ್ರಿಕೆಟ್ ಸೇರಿಸಲೇಬೇಕೆಂಬ ನಿಟ್ಟಿನಲ್ಲಿ ಭಾರೀ ಪ್ರಯತ್ನ ನಡೆಸಿತ್ತು. ಆದರೆ ಐಸಿಸಿಯ ಆಸೆಗೆ ಬಿಸಿಸಿಐ ಸದಸ್ಯರು ಅಡ್ಡಗಾಲು ಹಾಕಿದ್ದರು. ಬಿಸಿಸಿಐ ಸರ್ಕಾರದ ಸಂಸ್ಥೆ ಅಲ್ಲ.  ಹೀಗಾಗಿ ಭಾಗವಹಿಸುವುದಿಲ್ಲ ಎಂದು ವಾದಿಸುತಿತ್ತು. ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆಯಾದ ಬಿಸಿಸಿಐ ಒಪ್ಪಿದರೆ ಎಲ್ಲ ರಾಷ್ಟ್ರಗಳು ಸಹ ಸುಲಭವಾಗಿ ಯಾವುದೇ ನಿರ್ಧಾರಕ್ಕೆ ಒಪ್ಪಿಗೆ ನೀಡುತ್ತವೆ.

1900ಕ್ಕೂ ಮೊದಲು ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆಗೊಂಡಿತ್ತು. 2028ರ ಒಲಿಂಪಿಕ್ಸ್ ಕ್ರೀಡಾಕೂಟ ಅಮೆರಿಕದ ಲಾಸ್ ಏಂಜಲೀಸ್‍ನಲ್ಲಿ ನಡೆಯಲಿದೆ. 2020ರ ಒಲಿಂಪಿಕ್ಸ್ ಜಪಾನಿನ ಟೋಕಿಯೋದಲ್ಲಿ ನಡೆದರೆ 2024ರ ಕೂಟ ಫ್ರಾನ್ಸಿನ ಪ್ಯಾರಿಸ್ ನಲ್ಲಿ ನಡೆಯಲಿದೆ.

666853 bcci logo afp e1565683123264

ಬಿಸಿಸಿಐ ನಾಡಾ ವ್ಯಾಪ್ತಿಗೆ ಬಂದಿದ್ದು ಹೇಗೆ?
ಉದ್ದೀಪನ ಮದ್ದು ಸೇವನೆ ಪ್ರಕರಣದಲ್ಲಿ ನಿಷೇಧಕ್ಕೆ ಒಳಗಾಗಿರುವ ಪೃಥ್ವಿ ಶಾ ಅವರ ಪ್ರಕರಣದಿಂದಾಗಿ ಬಿಸಿಸಿಐ ಕೊನೆಗೂ ನಾಡಾ ವ್ಯಾಪ್ತಿಗೆ ಬಂದಿದೆ. ಕೇಂದ್ರ ಕ್ರೀಡಾ ಸಚಿವಾಲಯ ನಾಡಾ ವ್ಯಾಪ್ತಿಗೆ ಬರುವಂತೆ ಬಿಸಿಸಿಐಗೆ ಹಲವು ಬಾರಿ ಪತ್ರ ಬರೆದಿತ್ತು. ಈ ಪತ್ರಕ್ಕೆ ಬಿಸಿಸಿಐ ನಾವು ಸರ್ಕಾರದಿಂದ ಯಾವುದೇ ಆರ್ಥಿಕ ಸಹಾಯ ಬಯಸುವುದಿಲ್ಲ. ನಮ್ಮದು ಸ್ವಾಯತ್ತ ಸಂಸ್ಥೆ. ರಾಷ್ಟ್ರೀಯ ಕ್ರೀಡಾ ಫೆಡರೇಷನ್ ಅಲ್ಲ ಎಂದು ವಾದಿಸಿಕೊಂಡು ಬಂದಿತ್ತು.

ಉದ್ದೀಪನ ಪರೀಕ್ಷೆಯನ್ನು ಬಿಸಿಸಿಐ ಖಾಸಗಿ ಸಂಸ್ಥೆಯಿಂದ ಮಾಡಿಸಿಕೊಳ್ಳುತಿತ್ತು. ಯುವ ಆಟಗಾರ ಪೃಥ್ವಿ ಶಾ ಅವರ ಪರೀಕ್ಷೆ ಫೆಬ್ರವರಿಯಲ್ಲಿ ನಡೆದು ಬಳಿಕ ಐಪಿಎಲ್ ಪಂದ್ಯ ಆಡಲು ಅನುಮತಿ ನೀಡಿ ಈಗ 8 ತಿಂಗಳು ನಿಷೇಧ ಹೇರಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು.

Prithvi Shaw 854x600

ಈ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಬಿಸಿಸಿಐ ಆಟಗಾರರಿಗೆ ಔಷಧಿ ತೆಗೆದುಕೊಳ್ಳುವ ವಿಚಾರದಲ್ಲಿ ಸರಿಯಾದ ಮಾಹಿತಿ ನೀಡುತ್ತಿಲ್ಲ. ಸರಿಯಾದ ಮಾಹಿತಿಗಳನ್ನು ನೀಡಿದ್ದರೆ ಪೃಥ್ವಿ ಶಾ ಕೆಮ್ಮಿಗೆ ಟೆರ್ಬುಟಾಲಿನ್ ಅಂಶ ಇರುವ ಸಿರಾಪ್ ಸೇವಿಸುತ್ತಿರಲಿಲ್ಲ ಎನ್ನುವ ಮಾತು ಕೇಳಿ ಬಂದಿತ್ತು. ಅಷ್ಟೇ ಅಲ್ಲದೇ ಪೃಥ್ವಿ ಶಾ ಅವರು, ತಂದೆಯ ಸಲಹೆಯಂತೆ ಹತ್ತಿರ ಮೆಡಿಕಲ್ ಅಂಗಡಿಗೆ ಹೋಗಿ ಸಿರಾಪ್ ತೆಗೆದುಕೊಂಡಿದ್ದೆ. ಉದ್ದೇಶಪೂರ್ವಕವಾಗಿ ನಾನು ಔಷಧಿಯನ್ನು ಸೇವನೆ ಮಾಡಿಲ್ಲ ಎಂದು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರು.

ಇದಾದ ಬಳಿಕ ಬಿಸಿಸಿಐ ಸಿಇಒ ರಾಹುಲ್ ಜೋಹ್ರಿ ಅವರಿಗೆ ಕೇಂದ್ರದ ಕ್ರೀಡಾ ಸಚಿವಾಲಯ ಪತ್ರ ಬರೆದಿತ್ತು. ಬಿಸಿಸಿಐಗೆ ಆಟಗಾರರ ಉದ್ದೀಪನ ಮದ್ದು ಸೇವನೆ ಪರೀಕ್ಷೆ ನಡೆಸಲು ಸರ್ಕಾರದ ಹಾಗೂ ವಿಶ್ವ ಉದ್ದೀಪನ ಮದ್ದು ನಿಗ್ರಹ ದಳ (ವಾಡಾ) ಸಂಸ್ಥೆ ಅನುಮತಿ ಇಲ್ಲದ ಕಾರಣ ನಿಮಗೆ ಪರೀಕ್ಷೆ ನಡೆಸಲು ಅನುಮತಿ ಇಲ್ಲ ಎಂದು ಖಾರವಾಗಿ ತಿಳಿಸಿತ್ತು.

Prithvi Shaw 2

ಕ್ರೀಡೆಯಲ್ಲಿ ಪರೀಕ್ಷೆ ನಡೆಸಲು ಕಡ್ಡಾಯವಾಗಿ ಸ್ವಯತ್ತ ಸಂಸ್ಥೆಯಾದ ನಾಡಾ ದೊಂದಿಗೆ ಬಿಸಿಸಿಐ ಒಪ್ಪಂದ ಮಾಡಿಕೊಂಡಿಲ್ಲ. ಹಲವು ವರ್ಷಗಳಿಂದ ಸರ್ಕಾರ ಒತ್ತಡ ಹಾಕುತ್ತಿದ್ದರು ಬಿಸಿಸಿಐ ಇದಕ್ಕೆ ಮುಂದಾಗಿರಲಿಲ್ಲ. ಇದೇ ಸಂದರ್ಭದಲ್ಲಿ ಉದ್ದೀಪನ ಪರೀಕ್ಷೆಯಲ್ಲಿ ಬಿಸಿಸಿಐ ಅತಿಯಾದ ಪಾಲ್ಗೊಳ್ಳುವಿಕೆನ್ನು ಕೇಂದ್ರ ಕ್ರೀಡಾ ಸಚಿವಾಲಯ ಪ್ರಶ್ನಿಸಿತ್ತು. ನಾಡಾ ಅಂಗೀರಿಸಿದ ನಿಯಮಗಳ ಪ್ರಕಾರ ಬೇರೆ ಸಂಸ್ಥೆಗಳಿಂದ ಉದ್ದೀಪನ ಮದ್ದು ಪರೀಕ್ಷೆ ನಡೆಸುವಂತಿಲ್ಲ. ಆದರೆ ಬಿಸಿಸಿಐ ಕೆಲ ನಿಯಮಗಳನ್ನು ತೋರಿಸಿ ಸ್ವತಃ ವಿಚಾರಣೆ ನೇಮಿಸುತ್ತಿದೆ. ಇದು ನೈಸರ್ಗಿಕ ನ್ಯಾಯ ತತ್ವಗಳಿಗೆ ಅನುಗುಣವಾಗಿಲ್ಲ ಎಂದು ಕ್ರೀಡಾ ಸಚಿವಾಲಯ ತನ್ನ ಪತ್ರದಲ್ಲಿ ಖಾರವಾಗಿ ತಿಳಿಸಿತ್ತು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಬಿಗಿ ನಿಲುವು ತೋರಿಸುತ್ತಿದ್ದಂತೆ ಆಗಸ್ಟ್ 9 ರಂದು ಬಿಸಿಸಿಐ ನಾಡಾ ವ್ಯಾಪ್ತಿಗೆ ಬರಲು ಒಪ್ಪಿಗೆ ಸೂಚಿಸಿತ್ತು.

ಬಿಸಿಸಿಐ ಇಲ್ಲಿಯವರಗೆ ಖಾಸಗಿ ಸಂಸ್ಥೆಯ ಮೂಲಕ ಉದ್ದೀಪನ ಮದ್ದು ಪರೀಕ್ಷೆಗಳನ್ನು ನಡೆಸುತಿತ್ತು. ಆ ಬಳಿಕ ಆಟಗಾರರ ವರದಿಯನ್ನು ಐಸಿಸಿ ಹಾಗೂ ವಿಶ್ವ ಉದ್ದೀಪನ ಮದ್ದು ನಿಗ್ರಹ ದಳ (ವಾಡಾ) ಸಂಸ್ಥೆಗೆ ಕಳುಹಿಸುತ್ತದೆ. ಸದ್ಯ ಭಾರತದ ಸಂಸ್ಥೆಯಾಗಿರುವ ನಾಡಾದ ಅಡಿಯಲ್ಲೇ ಉದ್ದೀಪನ ಪರೀಕ್ಷೆ ನಡೆಸಲು 6 ತಿಂಗಳ ಅವಧಿಗೆ ಸಹಿ ಹಾಕಿದೆ. ಅಕ್ಟೋಬರ್ ನಿಂದ ಕ್ರಿಕೆಟ್ ಆಟಗಾರರ ಉದ್ದೀಪನ ಪರೀಕ್ಷೆಗಳನ್ನು ನಾಡಾ ಸಂಸ್ಥೆ ನಿರ್ವಹಿಸಲಿದೆ ಎಂಬ ಮಾಹಿತಿ ಇದೆ.

NADA

Share This Article
Facebook Whatsapp Whatsapp Telegram
Previous Article mtb nagaraj ಸಂತ್ರಸ್ತರಿಗೆ ನೆರವು – ಎಂಟಿಬಿಯಿಂದ 1 ಕೋಟಿ ರೂ. ಸಹಾಯ ಧನ
Next Article Shobha Karandlaje ಚುನಾಯಿತ ಪ್ರತಿನಿಧಿಗಳಿಗೆ ಸಾಮಾನ್ಯ ಜ್ಞಾನ ಇರಬೇಕು, ಅದಕ್ಕೆ ಕಾಮನ್ ಸೆನ್ಸ್ ಅಂತಾರೆ: ಶೋಭಾ ಕರಂದ್ಲಾಜೆ

Latest Cinema News

Anjali Sudhakar 3
ʻಲಕ್ಷ್ಮಿ ನಿವಾಸʼದಿಂದ ಹೊರನಡೆದ ಅಂಜಲಿ – ಕಾರಣವೇನು?
Cinema Latest TV Shows
Garden Movie
ದರ್ಶನ್ ಅಳಿಯ ಟಕ್ಕರ್ ಮನೋಜ್‌ರ `ಗಾರ್ಡನ್’ ಸಿನಿಮಾಗೆ ದಿನಕರ್ ಕ್ಲ್ಯಾಪ್
Cinema Latest Sandalwood Top Stories
vijayalakshmi 1 1
ದರ್ಶನ್ ಪತ್ನಿ ಮನೆಯಲ್ಲಿ 3 ಲಕ್ಷ ನಗದು ಕಳವು ಕೇಸ್‌ – ಹಣದ ಮೂಲದ ಬಗ್ಗೆ ಮಾಹಿತಿ ಕೇಳಿದ ಪೊಲೀಸರು
Bengaluru City Cinema Crime Districts Karnataka Latest Top Stories
Gandugali Rama
ಸಹಿ ಫೋರ್ಜರಿ ಮಾಡಿ ಯೂಟ್ಯೂಬ್, ಒಟಿಟಿಗೆ ವಿಷ್ಣುವರ್ಧನ್ ಅಭಿನಯದ ಸಿನಿಮಾ ಹಂಚಿಕೆ – ನಿರ್ಮಾಪಕಿಯಿಂದ ದೂರು
Bengaluru City Cinema Crime Karnataka Latest States Top Stories
salman khan
ತಿಂಡಿ ತಿನ್ನಲೂ ಒಂದು ಗಂಟೆ ಬೇಕಿತ್ತು, ಆತ್ಮಹತ್ಯೆ ಯೋಚನೆ ಬಂದಿತ್ತು – ಜೀವನದಲ್ಲಿ ಕಾಡಿದ ನರರೋಗದ ಬಗ್ಗೆ ಸಲ್ಮಾನ್ ಖಾನ್ ಮಾತು
Bollywood Cinema Latest Top Stories TV Shows

You Might Also Like

MiG 21 Retires
Latest

MiG-21 Retires | 6 ದಶಗಳ ಸೇವೆಗೆ ವಿದಾಯ – ʻಹಾರುವ ಶವಪೆಟ್ಟಿಗೆʼ ಮಿಗ್‌-21ಗೆ ಗುಡ್‌ಬೈ ಹೇಳಿದ ಭಾರತ

32 minutes ago
D Veerendra Heggade
Dakshina Kannada

ಸರ್ಕಾರಕ್ಕೆ ಆಭಾರಿ, ಎಸ್‌ಐಟಿ ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ: ವೀರೇಂದ್ರ ಹೆಗ್ಗಡೆ

38 minutes ago
Seema
Bagalkot

ಪಿಜಿಯಲ್ಲಿ ಯುವತಿ ಅನುಮಾನಾಸ್ಪದ ಸಾವು – ನೇತಾಡುತ್ತಿದ್ದ ಶವ ಕಂಡು ಹೊರಗೆ ಓಡಿದ ವಿದ್ಯಾರ್ಥಿನಿಯರು

46 minutes ago
Caste Census 4
31 Districts

ಜಾತಿಗಣತಿ ಸಮೀಕ್ಷೆ ಆರಂಭವಾಗಿ ಇಂದಿಗೆ 4 ದಿನ – 2.62 ಲಕ್ಷ ಮನೆಗಳ ಸರ್ವೆ ಮುಕ್ತಾಯ

49 minutes ago
Mahesh Shetty Thimarodi 1
Dakshina Kannada

ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್ – ಮಹೇಶ್ ಶೆಟ್ಟಿ ತಿಮರೋಡಿಗೆ ಅಂತಿಮ ನೋಟಿಸ್ ಜಾರಿ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?