Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿಎಂ ಕುರ್ಚಿಗಾಗಿ ಟೆಲಿಫೋನ್ ಕದ್ದಾಲಿಕೆ ಮಾಡಿಲ್ಲ: ಎಚ್‍ಡಿಕೆ

Public TV
Last updated: August 14, 2019 8:52 pm
Public TV
Share
2 Min Read
HDK
SHARE

ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ಫೋನ್ ಕದ್ದಾಲಿಕೆ ಕುರಿತು ಬಾರೀ ಚರ್ಚೆ ನಡೆಯುತ್ತಿದ್ದು, ಈ ಕುರಿತು ಸ್ವತಃ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನಾನು ಫೋನ್ ಕದ್ದಾಲಿಕೆ ಮಾಡಿಲ್ಲ. ಮುಖ್ಯಮಂತ್ರಿ ಅಧಿಕಾರ ಶಾಶ್ವತವಲ್ಲ ಎಂದು ಪದೇ ಪದೆ ಹೇಳುತ್ತಿದ್ದವನು ನಾನು. ಈ ಕುರ್ಚಿಗಾಗಿ ಟೆಲಿಫೋನ್ ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಟ್ವೀಟ್ ಮಾಡುವ ಮೂಲಕ ತಮ್ಮ ಮೇಲಿನ ಆರೋಪವನ್ನು ಕುಮಾರಸ್ವಾಮಿ ಸಾರಾ ಸಗಟಾಗಿ ತಿರಸ್ಕರಿಸಿದ್ದಾರೆ. ಇಂದು ಬೆಳಗ್ಗೆ ಫೋನ್ ಕದ್ದಾಲಿಕೆ ಕುರಿತು ಸಾಕಷ್ಟು ಚರ್ಚೆಗಳು ನಡೆದಿದ್ದು, ಸಿಎಂ, ಎಚ್.ವಿಶ್ವನಾಥ್ ಸೇರಿದಂತೆ ಹಲವರು ಈ ಕುರಿತು ಪ್ರತಿಕ್ರಿಯಿಸಿದ್ದರು.

ಮುಖ್ಯಮಂತ್ರಿ ಅಧಿಕಾರ ಶಾಶ್ವತವಲ್ಲ ಎಂದು ಪದೇ ಪದೇ ಹೇಳುತ್ತಿದ್ದವನು ನಾನು. ಈ ಕುರ್ಚಿಗಾಗಿ ಟೆಲಿಫೋನ್ ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ. ಈ ವಿಚಾರದಲ್ಲಿ ಕೆಲವರು ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು.

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 14, 2019

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿ, ನಾನು ಎಲ್ಲವನ್ನೂ ಗಮನಿಸುತ್ತಿದ್ದೇನೆ. ಫೋನ್ ಟ್ಯಾಪಿಂಗ್ ಕುರಿತು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಬಳಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಈ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದ್ದು, 6 ಸಾವಿರ ಕರೆಗಳನ್ನು ಕದ್ದಾಲಿಕೆ ಮಾಡಲಾಗಿದೆ. ಸುಮಾರು 34 ಜಿಬಿಯಷ್ಟು ಆಡಿಯೋ ರೆಕಾರ್ಡ್ ಆಗಿರುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದ್ದು, ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.

CM BSY

ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ದೊಡ್ಡವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಸಿಸಿಬಿಯ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಈಗಾಗಲೇ ಪ್ರಾಥಮಿಕ ತನಿಖೆ ನಡೆದಿದೆ. ಸಂದೀಪ್ ಪಾಟೀಲ್ ಹಿರಿಯ ಪೊಲೀಸ್ ಅಧಿಕಾರಿಯ ಸೂಚನೆಯ ಮೇರೆಗೆ ಫೋನ್ ಕದ್ದಾಲಿಕೆ ನಡೆದಿದೆ ಎಂದು ವರದಿ ನೀಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ಸರ್ಕಾರ ಬೀಳಿಸುವ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪನವರ ಕರೆಗಳನ್ನು ಕದ್ದಾಲಿಸಲಾಗಿದೆ ಎನ್ನುವ ಗಂಭೀರ ಆರೋಪ ಎಚ್‍ಡಿಕೆಯ ಮೇಲೆ ಬಂದಿದೆ. ಮಾಧ್ಯಮಗಳ ಜೊತೆ ಮಾತನಾಡಿದ್ದ ಬಿಜೆಪಿ ಮುಖಂಡ ಆರ್.ಅಶೋಕ್, ಕುಮಾರಸ್ವಾಮಿ ಅವಧಿಯಲ್ಲಿ ರಾಜ್ಯ ನಾಯಕರ ಫೋನ್ ಕರೆ ಟ್ಯಾಪ್ ಮಾಡಲಾಗುತ್ತಿದೆ ಎಂದು ಹೇಳಿದ್ದೆ. ಅದು ಈಗ ನಿಜವಾಗಿದೆ. ಸಿದ್ದರಾಮಯ್ಯನವರ ಮೇಲೆ ಕುಮಾರಸ್ವಾಮಿ ಅವರಿಗೆ ನಂಬಿಕೆ ಇರಲಿಲ್ಲ. ಹೀಗಾಗಿ ಅವರ ಫೋನನ್ನು ಕದ್ದಾಲಿಸಲಾಗಿದೆ ಎಂದು ಅಶೋಕ್ ಆರೋಪಿಸಿದ್ದಾರೆ.

ashok

ಇದೇ ವೇಳೆ ಅನರ್ಹ ಶಾಸಕ ಎಚ್.ವಿಶ್ವನಾಥ್ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ದೂರವಾಣಿ ಕದ್ದಾಲಿಕೆ ದೊಡ್ಡ ಮಟ್ಟದಲ್ಲಿ ನಡೆದಿದೆ. ಸಿದ್ದರಾಮಯ್ಯ ಅವರ ಪಿಎ ವೆಂಕಟೇಶ್ ಎಂಬವರ ಫೋನ್ ಕದ್ದಾಲಿಕೆ ಮಾಡಲಾಗಿದೆ. ರೆಬೆಲ್ ಶಾಸಕರ ದೂರವಾಣಿ ಕದ್ದಾಲಿಕೆ ಮಾಡಲಾಗಿದೆ. ಹೀಗೆ ಕದ್ದಾಲಿಕೆ ಮಾಡಿ ರೆಬೆಲ್ ಶಾಸಕರನ್ನು ಸಿಎಂ (ಹೆಚ್‍ಡಿಕೆ) ಕಚೇರಿಯಿಂದ ಬ್ಲಾಕ್ ಮೇಲ್ ಮಾಡಲಾಯಿತು. ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ದವನ ದೂರವಾಣಿಯನ್ನು ಜೆಡಿಎಸ್ ಮುಖ್ಯಮಂತ್ರಿಯೇ ಕದ್ದಾಲಿಕೆ ಮಾಡಿದ್ದಾರೆ. ನಮ್ಮ ಮೇಲೆ ನಿಮಗೆ ವಿಶ್ವಾಸ ಇರಲಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

vishwanath

ವಿಶ್ವನಾಥ್ ಮಾತನಾಡಿರುವುದು ಸಿಕ್ಕಿದೆ ಚೀ ಚೀ ಕೇಳಿಸಿಕೊಳ್ಳಲು ಆಗಲ್ಲ ಎಂದು ಕುಮಾರಸ್ವಾಮಿ ಸದನದಲ್ಲಿ ಹೇಳಿದ್ದರು. ನಾನು ಮೊಬೈಲ್‍ನಲ್ಲಿ ಸಾವಿರ ಮಾತನಾಡುತ್ತೇನೆ. ಹೀಗೆ ಮಾತಾಡಬೇಕು ಎಂದು ಹೇಳೋಕೆ ನೀವು ಯಾರು? ಬೆಂಗಳೂರು ಪೊಲೀಸ್ ಆಯುಕ್ತರ ಮೂಲಕ ದೂರವಾಣಿಯೆ ಕದ್ದಾಲಿಕೆ ಮಾಡಲಾಗಿದೆ. ರಾಜ್ಯದ ಸಿಎಂ ಆಗಿ ಹೆಚ್‍ಡಿಕೆ ಎಲ್ಲಾ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಹಳ್ಳಿ ಕಡೆ ಮನೆಯವರಿಗೆ ಮನೆಯವರೇ ಮದ್ದು ಹಾಕುತ್ತಾರೆ ಎನ್ನುವ ಮಾತಿದೆ ಇದು ಅದೇ ಕಥೆ ಎಂದು ವ್ಯಂಗ್ಯವಾಡಿದ್ದಾರೆ.

TAGGED:bjpbs yeddyurappacongressh vishwanathhd kumaraswamyjdsPhone TappingPublic TVsiddaramaiahಎಚ್ ಡಿ ಕುಮಾರಸ್ವಾಮಿಎಚ್ ವಿಶ್ವನಾಥ್ಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಫೋನ್ ಕದ್ದಾಲಿಕೆಬಿ.ಎಸ್.ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Nelamangala Solur Heart Attack copy
Bengaluru City

KSRTC ಬಸ್‌ನಲ್ಲಿ ಹೃದಯಾಘಾತ – ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ವ್ಯಕ್ತಿ ಸಾವು

Public TV
By Public TV
4 minutes ago
Shivamogga Heart Attack copy
Crime

Shivamogga | ದೆವ್ವ ಬಿಡಿಸುತ್ತೇನೆಂದು ಚಿತ್ರಹಿಂಸೆ – ಮಹಿಳೆ ಸಾವು

Public TV
By Public TV
32 minutes ago
siddaramaiah student letter
Chamarajanagar

ನಮಗೆ ಕುಡಿಯೋಕೆ ನೀರು ಕೊಡಿ: ಸಿಎಂಗೆ ವಿದ್ಯಾರ್ಥಿನಿ ಪತ್ರ

Public TV
By Public TV
42 minutes ago
Bommanahalli Rowdy Sheeter
Crime

ಕುಡಿದ ಮತ್ತಿನಲ್ಲಿ ರೌಡಿಶೀಟರ್‌ನಿಂದ ದಾಂಧಲೆ – 18ಕ್ಕೂ ಹೆಚ್ಚು ವಾಹನಗಳ ಗಾಜು ಪುಡಿಪುಡಿ, ಮೂವರು ಅರೆಸ್ಟ್

Public TV
By Public TV
47 minutes ago
Okalipuram Road Rage
Bengaluru City

ನಡುರಸ್ತೆಯಲ್ಲಿ ಲಾಂಗ್ ತೆಗೆದು ಗೂಂಡಾವರ್ತನೆ – ಇನ್ನೋವಾ ಕಾರು ಪುಡಿಗಟ್ಟಿದ ಸಾರ್ವಜನಿಕರು

Public TV
By Public TV
2 hours ago
Karnataka Congress Meet to Mangaluru ashraf Family
Dakshina Kannada

ಕುಡುಪು ಮೈದಾನದಲ್ಲಿ ಹತ್ಯೆಯಾಗಿದ್ದ ಅಶ್ರಫ್ ಕುಟುಂಬಸ್ಥರ ಭೇಟಿಯಾದ ರಾಜ್ಯ ಕಾಂಗ್ರೆಸ್ ನಿಯೋಗ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?