Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಪಾಕ್ ಹೆಸರನ್ನು ಪ್ರಸ್ತಾಪಿಸದೆ ಭಾರತದ ಅಭಿವೃದ್ಧಿ ಜಪಿಸಿದ ಮೋದಿ

Public TV
Last updated: August 15, 2019 5:13 pm
Public TV
Share
3 Min Read
Modi A
SHARE

– ನೀರಿನ ವಿಚಾರವಾಗಿ 24 ಬಾರಿ ಪ್ರಸ್ತಾಪ
– 11 ಬಾರಿ ಭಾರತದ ಹೆಸರನ್ನು ಪ್ರಸ್ತಾಪಿಸಿದ್ದ ಇಮ್ರಾನ್

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ದೆಹಲಿಯ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು 92 ನಿಮಿಷಗಳ ಕಾಲ ಸುದೀರ್ಘ ಭಾಷಣ ಮಾಡಿದರು. ತಮ್ಮ ಭಾಷಣದಲ್ಲಿ ಒಂದೇ ಒಂದು ಬಾರಿಯೂ ಪಾಕಿಸ್ತಾನದ ಹೆಸರನ್ನು ಪ್ರಸ್ತಾಪಿಸಲಿಲ್ಲ.

ಹೌದು. ಬುಧವಾರ ಪಾಕ್ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್ ವಿಧಾನ ಸಭೆಯಲ್ಲಿ ಮಾತನಾಡಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಡಾಯಿ ಕೊಚ್ಚಿದ್ದರು. ಹೀಗಾಗಿ ಮೋದಿ ಇಂದು ಈ ಭಾಷಣಕ್ಕೆ ತಿರುಗೇಟು ಎನ್ನುವಂತೆ ನೇರವಾಗಿ ಪಾಕಿಸ್ತಾನದ ಹೆಸರನ್ನು ಪ್ರಸ್ತಾಪ ಮಾಡಬಹುದು ಎನ್ನುವ ವಿಶ್ಲೇಷಣೆ ಕೇಳಿ ಬಂದಿತ್ತು. ಆದರೆ ಮೋದಿ ತಮ್ಮ ಭಾಷಣದಲ್ಲಿ ಎಲ್ಲಿಯೂ ಪಾಕಿಸ್ತಾನದ ಹೆಸರನ್ನು ಹೇಳದೇ ಪರೋಕ್ಷವಾಗಿ ಉಗ್ರರಿಗೆ ಸಹಕಾರ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

This 2nd October, I have a request for my fellow Indians. Will you help me? pic.twitter.com/90lQplqesb

— Narendra Modi (@narendramodi) August 15, 2019

ಪ್ರಧಾನಿ ನರೇಂದ್ರ ಮೋದಿ ಅವರು ಇದುವರಗೂ ಕೆಂಪುಕೋಟೆ ಮೇಲೆ 6 ಬಾರಿ ಧ್ವಜಾರೋಹಣ ನೆರವೇರಿಸಿ, ಭಾಷಣ ಮಾಡಿದ್ದಾರೆ. ಈ ಪೈಕಿ ಇಂದು ಮಾಡಿದ ಭಾಷಣವು ಎರಡನೇ ಸುದೀರ್ಘ ಭಾಷಣವಾಗಿದೆ. 2016ರಲ್ಲಿ ಮೋದಿ ಅವರು 96 ನಿಮಿಷ ಭಾಷಣ ಮಾಡಿದ್ದರು. ಇದು ಅತ್ಯಂತ ಸುದೀರ್ಘ ಭಾಷಣವಾಗಿದೆ. 2014ರಲ್ಲಿ 65 ನಿಮಿಷ, 2015ರಲ್ಲಿ 86 ನಿಮಿಷ, 2017ರಲ್ಲಿ 57 ನಿಮಿಷ, 2018ರಲ್ಲಿ 82 ನಿಮಿಷಗಳ ಕಾಲ ಭಾಷಣ ಮಾಡಿದ್ದಾರೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಸ್ವತಂತ್ರ ಭಾರತದ ಮೊದಲ ಭಾಷಣವನ್ನು 72 ನಿಮಿಷ ಮಾಡಿದ್ದರು. 2015ರ ವರೆಗೂ ಯಾವುದೇ ಪ್ರಧಾನಿಗಳು ಕೂಡ 72 ನಿಮಿಷಕ್ಕಿಂತ ಹೆಚ್ಚು ಕಾಲ ಭಾಷಣ ಮಾಡಿರಲಿಲ್ಲ.

ನೀರು:
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಾಡಿದ ಭಾಷಣದಲ್ಲಿ ಒಟ್ಟು 24 ಬಾರಿ ನೀರಿನ ಬಗ್ಗೆ ಪ್ರಸ್ತಾಪಿಸಿದ್ದಾರೆ. ಜಲ ಜೀವನ್ ಮಿಷನ್ ಯೋಜನೆಯಿಂದಾಗಿ ದೇಶದ ಪ್ರತಿ ಮನೆ ಮನೆಗೂ ನಲ್ಲಿಯ ಮೂಲಕ ನೀರು ಪೂರೈಕೆ ಆಗಲಿದೆ. 100 ಲಕ್ಷ ಕೋಟಿ ರೂ.ವನ್ನು ಮೂಲ ಸೌಕರ್ಯಕ್ಕೆ ಹಾಗೂ ಜಲ ಜೀವನ್ ಮೀಷನ್ ಯೋಜನೆಗೆ 3.5 ಲಕ್ಷ ಕೋಟಿ ರೂ. ಮೀಸಲು ಇಡಲಾಗಿದೆ. ಜಲ ಸಮಸ್ಯೆ ನಿವಾರಣೆಗಾಗಿ ಜಲಶಕ್ತಿ ಮಂತ್ರಾಲಯ ಆರಂಭಿಸಿದ್ದೇವೆ ಎಂದು ತಿಳಿಸಿದ್ದಾರೆ.

Population explosion is a subject our nation must discuss as widely as possible. We owe this to the future generations… pic.twitter.com/SWkne1uvwG

— Narendra Modi (@narendramodi) August 15, 2019

ಬಡ ಜನರು:
ದೇಶದಲ್ಲಿರುವ ಬಡತನವನ್ನು ಹಾಗೂ ಬಡವರ ಸಂಖ್ಯೆಯನ್ನು ಕಡಿಮೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು 2022ರ ವೇಳೆಗೆ ಪ್ರತಿ ಬಡವರಿಗೂ ಶಾಶ್ವತ ಮನೆ ನೀಡಲಾಗುತ್ತದೆ. 100 ಲಕ್ಷ ಕೋಟಿ ರೂ.ವನ್ನು ಮೂಲ ಸೌಕರ್ಯಕ್ಕೆ ಹಾಗೂ ಜಲ ಜೀವನ್ ಮೀಷನ್ ಯೋಜನೆಗೆ 3.5 ಲಕ್ಷ ಕೋಟಿ ರೂ. ಮೀಸಲು ಇಡಲಾಗಿದೆ. ಪ್ರತಿಯೊಂದು ಗ್ರಾಮಕ್ಕೂ 24 ಗಂಟೆಗಳ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ನನಗೆ ಏನನ್ನು ಮಾಡಿಕೊಳ್ಳಲು ಅಧಿಕಾರಕ್ಕೆ ಬಂದಿಲ್ಲ. ನಾವು ಸಮಸ್ಯೆಗಳನ್ನು ಸಾಕುವುದೂ ಇಲ್ಲ, ದೂರ ತಳ್ಳುವುದಿಲ್ಲ. ಬದಲಾಗಿ ಅವುಗಳನ್ನು ಬಗೆಹರಿಸುತ್ತೇವೆ ಎಂದು ಮೋದಿ ಅವರು ಹೇಳುವ ಮೂಲಕ ಭಾಷಣದಲ್ಲಿ 17 ಬಾರಿ ಬಡ ಜನರ ಬಗ್ಗೆ ಮಾತನಾಡಿದ್ದಾರೆ.

ಭಯೋತ್ಪಾದನೆ:
ನರೇಂದ್ರ ಮೋದಿ ಅವರು ತಮ್ಮ ಸುದೀರ್ಘ ಭಾಷಣದಲ್ಲಿ ಭಯೋತ್ಪಾದನೆ ವಿಚಾರವನ್ನು 13 ಬಾರಿ ಪ್ರಸ್ತಾಪಿಸಿದರು. ಭಯೋತ್ಪಾದನೆಯು ಗೆದ್ದಲಿನಂತೆ ವರ್ತಿಸುತ್ತಿದ್ದು, ದೇಶವನ್ನು ಒಳಗಿನಿಂದಲೇ ಹಾಳು ಮಾಡುತ್ತಿದೆ. ಭಯೋತ್ಪಾದನೆ ಹೊಡೆದು ಹಾಕಲು ಎನ್‍ಡಿಎ ಸರ್ಕಾರರ ಶ್ರಮಿಸುತ್ತಿದೆ ಎಂದು ಹೇಳಿದರು. ಆದರೆ ಎಲ್ಲಿಯೂ ಪಾಕಿಸ್ತಾನ ಬಗ್ಗೆ ಮಾತನಾಡಲಿಲ್ಲ.

Modi B 1

ಪ್ರವಾಸೋದ್ಯಮ:
ತಮ್ಮ ಸುದೀರ್ಘ ಭಾಷಣದಲ್ಲಿ ಪ್ರಧಾನಿ ಮೋದಿ ಅವರು, ಪ್ರವಾಸೋದ್ಯಮದ ಕುರಿತು 13 ಬಾರಿ ಮಾತನಾಡಿದ್ದಾರೆ. ಪ್ರವಾಸೋದ್ಯಮದಿಂದ ಸರ್ಕಾರಕ್ಕೆ ಹೆಚ್ಚಿನ ಹಣ ಹರಿದು ಬರುತ್ತಿದೆ. ಆದರೆ ದೇಶದ ಜನರು ರಜಾ ದಿನಗಳಲ್ಲಿ ಹೆಚ್ಚಾಗಿ ವಿದೇಶಿ ಪ್ರವಾಸ ಕೈಗೊಳ್ಳುತ್ತಾರೆ. ನಮ್ಮ ದೇಶದ ಪ್ರವಾಸಿ ತಾಣಗಳಿಗೆ ಭೇಟಿ ಕೊಡುವುದು ತುಂಬಾ ಅಪರೂಪ ಎಂಬಂತಾಗಿದೆ. ದೇಶದ ಜನರು 2022ರ ಒಳಗೆ ಭಾರತದ 15 ಪ್ರವಾಸಿ ಸ್ಥಳಗಳಿಗೆ ಭೇಟಿ ಕೊಡುವ ಸಂಕಲ್ಪ ಮಾಡಬೇಕಿದೆ. ಎಲ್ಲಿ ನೀವು ಪ್ರವಾಸಕ್ಕೆ ಹೋಗುತ್ತಿರೋ ಅಲ್ಲಿ ಹೊಸ ಜಗತ್ತು ನಿರ್ಮಿಸಬಹುದು. ಭಾರತೀಯರು ಹೋಗುವ ಸ್ಥಳಗಳಿಗೆ ವಿದೇಶಿಯರು ಕೂಡ ಬರುತ್ತಾರೆ. ಈ ಮೂಲಕ ನಮ್ಮ ದೇಶದ ಪ್ರವಾಸೋದ್ಯಮ ಅಭಿವೃದ್ಧಿಯಾಗುತ್ತದೆ ಎಂದು ಮನವಿ ಮಾಡಿಕೊಂಡರು.

ಇಮ್ರಾನ್ ಖಾನ್ ತಮ್ಮ ಭಾಷಣದಲ್ಲಿ ಪಾಕಿಸ್ತಾನಕ್ಕಿಂತಲೂ ಕಾಶ್ಮೀರ ಪದವನ್ನೇ ಹೆಚ್ಚು ಬಳಸಿದ್ದರು. ಪಾಕಿಸ್ತಾನ 12 ಬಾರಿ ಬಳಸಿದ್ದರೆ ಕಾಶ್ಮೀರ ಪದವನ್ನು 20 ಬಾರಿ ಬಳಸಿದ್ದರು. ಉಳಿದಂತೆ ಮೋದಿ 7, ಭಾರತ 11, ಆರ್‌ಎಸ್ಎಸ್‌ 10, ಯುದ್ಧ 6, ಮುಸ್ಲಿಂ 14, ವಿಶ್ವ 12, ನಾಜಿ ಪದವನ್ನು 6 ಬಾರಿ ಬಳಕೆ ಮಾಡಿದ್ದರು.

Imran Khan 2

TAGGED:Independence Daypakistanpm narendra modiPublic TVspeechಕೆಂಪುಕೋಟೆನೀರುಪಬ್ಲಿಕ್ ಟಿವಿಪಾಕಿಸ್ತಾನಪ್ರಧಾನಿ ನರೇಂದ್ರ ಮೋದಿಪ್ರವಾಸೋದ್ಯಮಭಾಷಣ
Share This Article
Facebook Whatsapp Whatsapp Telegram

Cinema Updates

Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
24 minutes ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
4 hours ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
15 hours ago
Vikram Sugumaran
ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ
17 hours ago

You Might Also Like

Chamarajanagar Mariyala School
Chamarajanagar

Chamarajanagar | ಶಿಕ್ಷಕರ ಒಳಜಗಳ ಆರೋಪ – ಮರಿಯಾಲ ಸರ್ಕಾರಿ ಶಾಲೆಯಲ್ಲಿ ಝೀರೋ ಅಡ್ಮಿಷನ್

Public TV
By Public TV
16 minutes ago
Mysuru Road Accident
Bengaluru City

ಬೆಂಗಳೂರು| ಓವರ್‌ಟೇಕ್ ಮಾಡಲು ಹೋಗಿ ಪರಸ್ಪರ ಬೈಕ್ ಡಿಕ್ಕಿ – ಇಬ್ಬರು ಸಾವು

Public TV
By Public TV
39 minutes ago
Narendra Modi
Latest

ಅಸ್ಸಾಂನಲ್ಲಿ ಭೀಕರ ಪ್ರವಾಹ – ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾಗೆ ಮೋದಿ ಕರೆ

Public TV
By Public TV
53 minutes ago
CRIME
Crime

ಅನೈತಿಕ ಸಂಬಂಧದಲ್ಲಿ ಮನಸ್ತಾಪ – ನಿವೃತ್ತ ಇನ್ಸ್‌ಪೆಕ್ಟರ್ ಮೇಲೆ ಸೀಮೆಎಣ್ಣೆ ಸುರಿದು ಸುಟ್ಟುಹಾಕಿದ ಮಹಿಳೆ

Public TV
By Public TV
53 minutes ago
anil kumble
Bengaluru City

ಕಪ್‌ ನಮ್ದೆ ಅಂತ ಗೆದ್ದ ಮೇಲೆ ಹೇಳೋಣ: ಅನಿಲ್‌ ಕುಂಬ್ಳೆ

Public TV
By Public TV
57 minutes ago
Phil Salt 2
Cricket

ಆರ್‌ಸಿಬಿಗೆ ದೊಡ್ಡ ಶಾಕ್‌ – ಸಾಲ್ಟ್‌ ಆಡೋದು ಅನುಮಾನ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?