Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಜೈನ ಸಮುದಾಯದ ಬ್ಯಾನರ್ ಹರಿದ ಹೋರಾಟಗಾರರು ರೌಡಿಗಳು: ತೇಜಸ್ವಿ ಸೂರ್ಯ

Public TV
Last updated: August 19, 2019 12:35 pm
Public TV
Share
3 Min Read
TejaswiSURYA
SHARE

– ಉರ್ದು ಭಾಷೆಯಲ್ಲಿ ಬ್ಯಾನರ್ ಹಾಕಿದ್ರೆ ಪ್ರಶ್ನೆ ಮಾಡಲ್ಲ
– ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧ ಚರ್ಚೆ

ಬೆಂಗಳೂರು: ಯುವ ಬಿಜೆಪಿ ನಾಯಕ, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಕನ್ನಡ ಸಂಘಟನೆಯ ಕಾರ್ಯಕರ್ತರ ಕುರಿತು ಮಾಡಿರುವ ಟ್ವೀಟ್ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಜೈನ ದೇವಾಲಯದಲ್ಲಿ ಹಿಂದಿ ಬ್ಯಾನರ್ ಅಳವಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಜೈನ ಸಹೋದರರ ಮೇಲೆ ಕೆಲ ರೌಡಿಗಳು ದಾಳಿ ಮಾಡಿರುವುದು ಬಹಳ ನೋವಾಗಿದೆ. ಆದರೆ ಇವರು ಬೆಂಗಳೂರಿನಲ್ಲಿ ಉರ್ದು ಭಾಷೆ ಬಳಕೆ ಮಾಡುತ್ತಿರುವ ಬಗ್ಗೆ ಪ್ರಶ್ನೆ ಮಾಡುವುದಿಲ್ಲ. ಕರ್ನಾಟಕಕ್ಕೆ ಕೊಡುಗೆ ನೀಡಿರುವ ಶಾಂತಿ ಪ್ರಿಯ ಜೈನರ ಮೇಲೆ ಹಲ್ಲೆ ನಡೆಸಿರುವುದು ನಿಜವಾದ ಕನ್ನಡಿಗರು ಮತ್ತು ಕಾರ್ಯಕರ್ತರಿಗೆ ಅಪಚಾರ ಮಾಡಿದಂತೆ ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.

Deeply hurt over attack on our Jain brothers in B'luru over हिन्दी on a banner of a temple by few rowdy elements.

They however never question use of عربى in Bengaluru.

Assaulting peaceful Jains who contribute to Karnataka brings infamy to genuine Kannada lovers & activists.

— Tejasvi Surya (@Tejasvi_Surya) August 18, 2019

ಇದಾದ ನಂತರ ಮತ್ತೊಂದು ಟ್ವೀಟ್ ನಲ್ಲಿ ದೊಡ್ಡ ಕವಿಗಳಾದ ಪಂಪ, ಪೊನ್ನ, ರನ್ನ ರತ್ನತ್ರಯರಾಗಿದ್ದು ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಈ ಮೂವರು ಜೈನರಾಗಿದ್ದಾರೆ. ಹೀಗಾಗಿ ಕರ್ನಾಟಕ ಯುವ ಜೈನರು ಕರ್ನಾಟಕದ ಇತಿಹಾಸವನ್ನು ಓದಬೇಕು ಮತ್ತು ಸಂವಹನದ ವೇಳೆ ಕನ್ನಡವನ್ನು ಬಳಕೆ ಮಾಡಬೇಕು ಎಂದು ಹೇಳಿದ್ದಾರೆ.

Many great poets like Pampa, Ponna & Ranna known as Ratnatraya or three gems of Kannada literature were Jains. Very beginning of Kannada literature is Jaina Yuga.

Therefore, I urge today's young Jains in Karnataka to learn this history & also use Kannada in their communications.

— Tejasvi Surya (@Tejasvi_Surya) August 18, 2019

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಸಂಘಟನೆಯ ಸದಸ್ಯರನ್ನು ರೌಡಿಗಳು ಎಂದು ಕರೆದಿದ್ದಕ್ಕೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ. 6 ಸಾವಿರಕ್ಕೂ ಹೆಚ್ಚು ಜನ ಈ ಟ್ವೀಟ್ ಅನ್ನು ರಿಟ್ವೀಟ್ ಮಾಡಿದ್ದರೆ 23 ಸಾವಿರಕ್ಕೂ ಅಧಿಕ ಜನ ಲೈಕ್ ಮಾಡಿದ್ದಾರೆ.

https://twitter.com/SwamiGeetika/status/1163088798890094598

ಕನ್ನಡದ ನೆಲದಲ್ಲಿ ಕನ್ನಡ ಹಾಕದಿದ್ದರೆ ಪ್ರಶ್ನೆ ಮಾಡಬೇಕು ತಾನೇ? ಕನ್ನಡ ನೆಲದ ಜಾಗ, ನೀರು, ಹಣ ಎಲ್ಲಾ ಬೇಕು. ಆದರೆ ಕನ್ನಡ ಬೇಡವೇ? ಹೋಗಿ ಅವರನ್ನು ಓಲೈಕೆ ಮಾಡೋದು ನೋಡಿದರೆ ನೀವು ಕೇವಲ ಓಟಿಗಾಗಿ ನಿಮ್ಮ ಈ ಹೇಳಿಕೆ ಅನಿಸುತ್ತದೆ. ಅಷ್ಟು ಕನ್ನಡ ಜನರ ಕಾಳಜಿ ಇದ್ದರೆ ನೆರೆ ಪರಿಹಾರ ತರಬೇಕಿತ್ತು. ಬಕೆಟ್ ಹಿಡಿಯೋದೇ ಜೀವನವಾಗಬಾರದು ಎಂದು ಜನ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಮಾನ್ಯ ಲೋಕಸಭಾ ‌ಸದಸ್ಯರೇ,

-ಕರ್ನಾಟಕದಲ್ಲಿರುವ ಬೋರ್ಡ್ ಗಳಲ್ಲಿ ಕನ್ನಡ ಇರಬೇಕು ಎನ್ನುವುದು ಹೇಗೆ ಅಪರಾಧ?

-ಇಲ್ಲದಿದ್ದಾಗ ಪ್ರಶ್ನಿಸುವುದು ಯಾವ ಅಪರಾಧ?

-ಕನ್ನಡಿಗರು ಏನೇ ಕೇಳಿದರೂ ಉರ್ದುವನ್ನು ಯಾಕೆ ಮಧ್ಯದಲ್ಲಿ‌ ತರುತ್ತೀರಾ?

-ಕನ್ನಡದ ವಿಷಯದಲ್ಲಿ‌ ಯಾಕೆ‌ ವಸ್ತುನಿಷ್ಠ ವಾಗಿ ಹೇಳಿಕೆ‌‌ ನೀಡುವುದಿಲ್ಲ?

— Kiran Kodlady | ಕಿರಣ್ ಕೊಡ್ಲಾಡಿ (@kodlady) August 18, 2019

ಕರ್ನಾಟಕದಲ್ಲಿರುವ ಬೋರ್ಡ್ ಗಳಲ್ಲಿ ಕನ್ನಡ ಇರಬೇಕು ಎನ್ನುವುದು ಹೇಗೆ ಅಪರಾಧ? ಇಲ್ಲದಿದ್ದಾಗ ಪ್ರಶ್ನಿಸುವುದು ಯಾವ ಅಪರಾಧ? ಕನ್ನಡಿಗರು ಏನೇ ಕೇಳಿದರೂ ಉರ್ದುವನ್ನು ಯಾಕೆ ಮಧ್ಯದಲ್ಲಿ ತರುತ್ತೀರಾ? ಕನ್ನಡದ ವಿಷಯದಲ್ಲಿ ಯಾಕೆ ವಸ್ತುನಿಷ್ಠ ವಾಗಿ ಹೇಳಿಕೆ ನೀಡುವುದಿಲ್ಲ ಎಂದು ಇನ್ನೊಬ್ಬರು ಪ್ರಶ್ನೆ ಮಾಡಿದ್ದಾರೆ.

ಏನಿದು ಪ್ರಕರಣ?
ಇನ್‍ಫೆಂಟ್ರಿ ರಸ್ತೆಯ ಬಳಿ ಜೈನ ಸಮುದಾಯದ ಪ್ರಾರ್ಥನಾ ಮಂದಿರದಲ್ಲಿ ಚಾತುರ್ಮಾಸ ಆಚರಣೆ ನಡೆಯುತ್ತಿತ್ತು. ಇದಕ್ಕೆ ಸಂಬಂಧಪಟ್ಟಂತೆ ಹಿಂದಿ ಭಾಷೆಯಲ್ಲಿ ಬ್ಯಾನರ್ ಕಟ್ಟಲಾಗಿತ್ತು. ಹಿಂದಿ ಭಾಷೆಯಲ್ಲಿ ಬ್ಯಾನರ್ ಕಟ್ಟಿದ್ದಕ್ಕೆ ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಬಿ.ಹರೀಶ್‍ಕುಮಾರ್, ಪದಾಧಿಕಾರಿಗಳಾದ ಮಂಜು, ಚಂದ್ರಶೇಖರ್, ಕರ್ನಾಟಕ ರಕ್ಷಣಾ ವೇದಿಕೆಯ ಅಂಜನಪ್ಪ, ರಕ್ಷಣಾ ಸೇನೆಯ ರಮೇಶ್‍ಗೌಡ ಹಾಗೂ ಕರುನಾಡ ಸೇವಕರು ವೇದಿಕೆಯ ಮಾದೇಶ್‍ಗೌಡ ಈ ಬ್ಯಾನರ್ ಹರಿದು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿತ್ತು.

ಅಣ್ಣ ದೊಡ್ಡ ಮನುಷ್ಯ ಕನ್ನಡದ ನೆಲದಲ್ಲಿ ಕನ್ನಡ ಹಾಕದಿದ್ದರೆ ಪ್ರಶ್ನೆ ಮಾಡಬೇಕು ತಾನೇ?ಕನ್ನಡ ನೆಲದ ಜಾಗ,ನೀರು,ಹಣ ಎಲ್ಲಾ ಬೇಕು..ಆದರೆ ಕನ್ನಡ ಬೇಡ್ವ?
ಹೋಗಿ ಅವರನ್ನು ಓಲೈಕೆ ಮಾಡೋದು ನೋಡಿದರೆ ನೀವು ಕೇವಲ ಓಟಿಗಾಗಿ ನಿಮ್ಮ ಈ ಹೇಳಿಕೆ ಅನಿಸುತ್ತ
ಅಷ್ಟು ಕನ್ನಡ ಜನರ ಕಾಳಜಿ ಇದ್ದರೆ ನೆರೆ ಪರಿಹಾರ ತರಬೇಕಿತ್ತು
ಬಕೆಟ್ ಹಿಡಿಯೋದೆ ಜೀವನವಾಗಬಾರದು

— ಕನ್ನಡಿಗ ಮಂಜುನಾಥ್ ಸಿರುಗುಪ್ಪ (@manjumedicals) August 18, 2019

ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬ್ಯಾನರ್ ಹರಿದು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕನ್ನಡಪರ ಸಂಘಟನೆಗಳ ಆರು ಮಂದಿ ಕಾರ್ಯಕರ್ತರನ್ನು ಕೋಮು ಸೌಹರ್ದತೆಗೆ ಧಕ್ಕೆ ತರುವ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಆರು ಮಂದಿಯನ್ನು ಭಾನುವಾರ ನ್ಯಾಯಾಧೀಶರ ಎದುರು ಹಾಜರುಪಡಿಸಿ ಕಾರ್ಯಕರ್ತರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.

ಇತಿಹಾಸ ಎಲ್ಲರಿಗೂ ಗೊತ್ತಿದೆ ತೇಜಸ್ವಿಯವರೇ ಜೈನರು ಬಗ್ಗೆ ಮಾವ ಅಡಿಗರ ಬಗ್ಗೆ ನಿಮ್ಮಿಂದ ಹೇಳಿ ತುಳುಕುವಷ್ಟು ಮೂರ್ಖರಲ್ಲ ಈ ಕರುನಾಡಿನ ಕನ್ನಡಿಗರು ಕನ್ನಡಿಗರ ಇನ್ನೊಂದು ಹೆಸರೇ ಸಹಬಾಳ್ವೆ-ಸಮನ್ವಯ ಸೋದರತ್ವ ಸಹನಾಭೂತಿ ಬಾದಾಮಿ ಚಾಲುಕ್ಯರು ಹೊಯ್ಸಳರು ಕದಂಬರು ವಿಜಯನಗರ ಸಾಮ್ರಾಜ್ಯ ಹಿಂದಿನ ಕಾಲದಿಂದಲೂ ಜೈನರ ನಮ್ಮೊಂದಿಗೆ ಇದ್ದಾರೆ

— ಯಮನೂರ ಹಂಚಿನಾಳ yamanur Hanchinal ✍️ (@M100Yamanur) August 19, 2019

ಆನಂದ ಚಾತುರ್ಮಾಸ ಸಮಿತಿಯ ಕಾರ್ಯದರ್ಶಿ ಫ್ಯಾನ್‍ಚಂದ್ ಜೈನ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಜೈನ ಸಮುದಾಯಕ್ಕಾಗಿ ನಡೆಸುವ ಕಾರ್ಯಕ್ರಮ ಆಗಿರುವುದರಿಂದ ಬೇರೆಯವರಿಗೆ ಪ್ರವೇಶ ಇರುವುದಿಲ್ಲ. ಈಗಾಗಿ ಕನ್ನಡದಲ್ಲಿ ಬ್ಯಾನರ್ ಹಾಕಿರಲಿಲ್ಲ. ಹಿಂದೆಯೂ ಹಿಂದಿ ಭಾಷೆಯಲ್ಲಿಯೇ ಬ್ಯಾನರ್ ಹಾಕಿದ್ದೇವೆ. ಎಂದೂ ಕೂಡ ಇಂತಹ ಅನುಭವ ಆಗಿಲ್ಲ. ಶುಕ್ರವಾರ ಮಾತ್ರ ಕೆಲ ಕಾರ್ಯಕರ್ತರು ಬ್ಯಾನರ್ ಹರಿದಿದ್ದಾರೆ. ನಾವು ಕನ್ನಡ ವಿರೋಧಿಗಳಲ್ಲ. ಚಾತುರ್ಮಾಸ್ಯಕ್ಕೆ ಕನ್ನಡಿಗರು ಬಾರದ ಕಾರಣ ಹಿಂದಿಯಲ್ಲಿ ಬ್ಯಾನರ್ ಹಾಕಲಾಗಿತ್ತು ಎಂದು ಹೇಳಿದ್ದಾರೆ.

TAGGED:bengalurujainkannadaTejasvi Suryaಕನ್ನಡಕನ್ನಡ ಸಂಘಟನೆಕನ್ನಡ ಹೋರಾಟಗಾರರುತೇಜಸ್ವಿ ಸೂರ್ಯಬಿಜೆಪಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories
Kantara 2 1
ಕಾಂತಾರದಲ್ಲಿ ಕಾಣಿಸಲಿದ್ದಾರೆ ಸೂಪರ್‌ಸ್ಟಾರ್!
Cinema Latest
Coolie 2
ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್
Bollywood Cinema Latest South cinema Top Stories
dulquer salmaan dq41
ದುಲ್ಕರ್ ಸಲ್ಮಾನ್ ಹೊಸ ಚಿತ್ರಕ್ಕೆ ಚಾಲನೆ : ನಟ ನಾನಿ ಸಾಥ್
Cinema Latest Top Stories

You Might Also Like

team india
Cricket

1 ಜಯ, 12 ಅಂಕ ಪಡೆದು ಮೂರನೇ ಸ್ಥಾನಕ್ಕೆ ಭಾರತ ಹೈಜಂಪ್‌!

Public TV
By Public TV
7 hours ago
Narendra Modi Donald Trump
Latest

ನೀವು ರಷ್ಯಾದಿಂದ ಆಮದು ಮಾಡಬಹುದು, ನಾವು ಮಾಡಿದ್ರೆ ಯುದ್ಧಕ್ಕೆ ಫಂಡಿಂಗ್‌ ಹೇಗೆ: ಟ್ರಂಪ್‌ಗೆ ಭಾರತದ ಗುದ್ದು

Public TV
By Public TV
7 hours ago
Kolar Rain
Bidar

ಕೋಲಾರ ಜಿಲ್ಲೆಯಾದ್ಯಂತ ಉತ್ತಮ ಮಳೆ – ರೈತರ ಮೊಗದಲ್ಲಿ ಮಂದಹಾಸ

Public TV
By Public TV
8 hours ago
Yadagiri Arrest
Districts

11 ಲಕ್ಷದ ಚಿನ್ನ ಕದ್ದು ಪರಾರಿ – ನಾಲ್ಕು ಕೇಸ್‌ಲ್ಲಿ ಭಾಗಿಯಾಗಿದ್ದ ಕತರ್ನಾಕ್ ಕಳ್ಳ ಅರೆಸ್ಟ್

Public TV
By Public TV
8 hours ago
mahadevappa
Bengaluru City

ಟಿಪ್ಪು ಡ್ಯಾಂ ಕಟ್ಟಿದ್ದ ಅಂತ ನಾನು ಎಲ್ಲಿಯೂ ಕೂಡ ಹೇಳಿಲ್ಲ – ಮಹದೇವಪ್ಪ ಯೂಟರ್ನ್

Public TV
By Public TV
8 hours ago
Prahlad Joshi 1
Latest

ಮೈಸೂರು ಮಹಾರಾಜರ ಕೊಡುಗೆಗೆ ಕಾಂಗ್ರೆಸ್ ಅಪಸ್ವರ – ಮಹದೇವಪ್ಪ ಮೊದ್ಲು ಇತಿಹಾಸ ಅರಿಯಲಿ: ಜೋಶಿ ಕಿಡಿ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?