ಶ್ರೀ ನಿರ್ಮಲಾನಂದ ಸ್ವಾಮೀಜಿಯ ಆಶೀರ್ವಾದ ಪಡೆದ ಸಿಎಂ ಬಿಎಸ್‍ವೈ

Public TV
1 Min Read
bsy meets Sri Nirmalananda Swamiji

ಬೆಂಗಳೂರು: ಸಿಎಂ ಯಡಿಯೂರಪ್ಪ ಅವರು ಇಂದು ಶ್ರೀ ನಿರ್ಮಲಾನಂದ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

ಇಂದು ನಗರದ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಬಿಎಸ್‍ವೈ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಸಿಎಂಗೆ ಸಚಿವರಾದ ಆರ್. ಅಶೋಕ್, ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ ಮತ್ತು ಡಾ: ಸಿ.ಎನ್.ಅಶ್ವಥನಾರಾಯಣ ಸಾಥ್ ನೀಡಿದರು.

bsy meets Sri Nirmalananda Swamiji2

ಬಿಎಸ್‍ವೈ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರ ಮಾಡಿದರು ಸಚಿವ ಸಂಪುಟ ರಚನೆ ಮಾಡಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡದ ಕಾರಣ ಸಂಪುಟ ರಚನೆ ಆಗಿರಲಿಲ್ಲ. ಕೇಂದ್ರ ಸಚಿವ ಅಮಿತ್ ಶಾ ಅವರ ಸಂಪುಟ ರಚನೆ ಮಾಡುವಂತೆ ಸೂಚಿಸಿದ ನಂತರ ಮಂಗಳವಾರ 17 ಜನ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *