Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರವಾಹ ಸಂತ್ರಸ್ತರಿಗೆ 5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ, ಪ್ರತಿ ಮಂಗಳವಾರ ಕ್ಯಾಬಿನೆಟ್ ಸಭೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರವಾಹ ಸಂತ್ರಸ್ತರಿಗೆ 5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ, ಪ್ರತಿ ಮಂಗಳವಾರ ಕ್ಯಾಬಿನೆಟ್ ಸಭೆ

Bengaluru City

ಪ್ರವಾಹ ಸಂತ್ರಸ್ತರಿಗೆ 5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ, ಪ್ರತಿ ಮಂಗಳವಾರ ಕ್ಯಾಬಿನೆಟ್ ಸಭೆ

Public TV
Last updated: August 26, 2019 9:02 pm
Public TV
Share
3 Min Read
bs yeddyurppa
SHARE

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ 5 ಲಕ್ಷ ರೂ. ವೆಚ್ಚದಲ್ಲಿ ಹೊಸ ಮನೆ ನಿರ್ಮಾಣ ಮಾಡಿಕೊಡಲು ನಿರ್ಧರಿಸಲಾಗಿದೆ.

ಕರ್ನಾಟಕದಲ್ಲಿ ಉಂಟಾದ ಪ್ರವಾಹ ಪರಿಹಾರ ಸೇರಿದಂತೆ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಚುರುಕು ಮುಟ್ಟಿಸುವ ಹಿನ್ನೆಲೆಯಲ್ಲಿ ಇಂದಿನ ಸಂಪುಟ ಸಭೆ ಬಹುಮುಖ್ಯವಾಗಿತ್ತು. ಈ ಸಭೆಯಲ್ಲಿ ಸಚಿವರಾದ ಶ್ರೀರಾಮುಲು, ಜೆಸಿ ಮಾಧುಸ್ವಾಮಿ, ಗೋವಿಂದ ಕಾರಜೋಳ, ಸಿಸಿ ಪಾಟೀಲ್, ವಿ ಸೋಮಣ್ಣ, ನಾಗೇಶ್, ಈಶ್ವರಪ್ಪ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಸಭೆಯಲ್ಲಿ ಪ್ರವಾಹದಿಂದ ಸಮಸ್ಯೆ ಎದುರಿಸಿದ್ದ ರಾಜ್ಯದ ಜನರಿಗೆ ಪರಿಹಾರ, ಪುನರ್ವಸತಿ ನೀಡುವ ಕಲ್ಪಿಸುವ ಬಗ್ಗೆ ಪ್ರಮುಖ ಚರ್ಚೆ ನಡೆಸಲಾಯಿತು.

CM BSY

ಕ್ಯಾಬಿನೆಟ್ ನಿರ್ಣಯಗಳು:
ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣಕ್ಕೆ ಒಪ್ಪಿಗೆ ನೀಡಿತು. ಅಲ್ಲದೇ ನೆರೆ ಪೀಡಿತ ಪ್ರದೇಶಗಳ ಕುಟುಂಬಗಳಿಗೆ ತಲಾ 10 ಸಾವಿರ ರೂ. ನೀಡುವ ನಿರ್ಧಾರದಂತೆ ಈಗಾಗಲೇ 1.35 ಲಕ್ಷ ಜನರಿಗೆ ಹಣ ಬಿಡುಗಡೆ ಮಾಡಲಾಯಿತು. ಈ ವೇಳೆ ಪರಿಹಾರ ಪಡೆಯಲು ಮತ್ತೆ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿ ಅವರಿಗೂ 10 ಸಾವಿರ ರೂ.ಗಳನ್ನು ನೀಡಲು ಒಪ್ಪಿಗೆ ನೀಡಿದರು.

ಕಳೆದ ಕ್ಯಾಬಿನೆಟ್ ಸಭೆಯ ವೇಳೆ ಸಂಪುಟ ವಿಸ್ತರಣೆ ಹಿನ್ನೆಲ್ಲಿ ಉಳಿದುಕೊಂಡಿದ್ದ ಸನ್ನಡತೆಯ ಆಧಾರದಲ್ಲಿ ಕೈದಿಗಳನ್ನು ಬಿಡುಗಡೆ ಮಾಡುವ ಪಟ್ಟಿಗೆ ಇಂದಿನ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು. ಸ್ವತಂತ್ರ್ಯ ದಿನದ ಹಿನ್ನೆಲೆಯಲ್ಲಿ ಈ ಬಾರಿ ಬಿಡುಗಡೆಯಾಗಬೇಕಿದ್ದ ಒಬ್ಬ ಮಹಿಳಾ ಕೈದಿ ಸೇರಿ 140 ಜನರ ಬಿಡುಗಡೆಗೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ತೀರ್ಮಾನಿಸಲಾಯಿತು.

BLG NH 4 A

ಹೊಸ ಪಿಂಚಣಿ ವ್ಯವಸ್ಥೆ ಅಡಿ ಪಿಂಚಣಿಯನ್ನು ರಾಜ್ಯದ ಪಾಲು ನೀಡುತ್ತ ಮೊತ್ತವನ್ನು ಶೇ.10 ರಿಂದ ಶೇ.14ಕ್ಕೆ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. 2019 ಏಪ್ರಿಲ್ ನಿಂದ ಹೊಸ ಪಿಂಚಣಿ ವ್ಯವಸ್ಥೆ ಅನ್ವಯವಾಗುವಂತೆ ನಿರ್ಣಯ ಕೈಗೊಳ್ಳಲಾಗಿದೆ.

ಮುಂದಿನ ಅವಧಿಯಲ್ಲಿ ಅಭಿವೃದ್ಧಿಯ ವೇಗವನ್ನು ಹೆಚ್ಚಿಸುವ ದೃಷ್ಟಿಯಿಂದ ಪ್ರತಿ ಮಂಗಳವಾರ ಕ್ಯಾಬಿನೆಟ್ ಸಭೆ ನಡೆಸಲು ತೀರ್ಮಾನ ಮಾಡಲಾಯಿತು.

ಬರ ಪ್ರದೇಶಗಳಲ್ಲಿ ಬೋರ್‍ವೆಲ್ ಹಾಗೂ ಇನ್ನಿತರ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಮುಕ್ತಿಗೆ ಕ್ಯಾಬಿನೆಟ್ ನೀಡಿತು. 5 ಲಕ್ಷ ರೂ.ವರೆಗಿನ ಕಾಮಗಾರಿಗಳಿಗೆ ಟೆಂಡರ್ ಇಲ್ಲದೆಯೇ ಕಾಮಗಾರಿ ಆರಂಭಿಸುವ ಪ್ರಮುಖ ನಿರ್ಧಾರವನ್ನು ಕೈಗೊಳ್ಳಲಾಗಿದೆ.

rcr election bara 2

ಸಂಪುಟ ಉಪಸಮಿತಿ: ಅಂತರ್ ರಾಜ್ಯ ಜಲ ವಿವಾದಗಳ ನಿರ್ವಹಣೆ ಸೇರಿದಂತೆ ಕೇಂದ್ರದ ಜೊತೆ ಜಲ ವಿಚಾರವಾಗಿ ಸಮನ್ವಯ ಸಾಧಿಸಲು ಸಚಿವ ಸಂಪುಟ ಉಪ ಸಮಿತಿ ನೇಮಕ ಮಾಡಲಾಯಿತು. ಸಿಎಂ ಬಿಎಸ್‍ವೈ ನೇತೃತ್ವದಲ್ಲಿ ರಚನೆಯಾದ ಉಪ ಸಮಿತಿಯಲ್ಲಿ ಬಸವರಾಜ ಬೊಮ್ಮಾಯಿ, ಅಶೋಕ್, ಗೋವಿಂದ ಕಾರಜೋಳ ಸಮಿತಿ ಸದಸ್ಯರಾಗಿದ್ದಾರೆ.

ಕೇಂದ್ರಕ್ಕೆ ನಿಯೋಗ: ರಾಜ್ಯದಲ್ಲಿ ಭೂವಿಜ್ಞಾನಿಗಳ ಕೊರತೆ ಹಿನ್ನೆಲೆ ನಿವೃತ್ತ ಭೂ ವಿಜ್ಞಾನಿಗಳನ್ನ ಗುತ್ತಿಗೆ ಆಧಾರದಲ್ಲಿ ಮುಂದುವರಿಸಲು ತೀರ್ಮಾನ ಮಾಡಲಾಗಿದೆ. ನೆರೆಯಿಂದ ಹಾನಿಯಾದ ಕಬ್ಬು, ಕಾಫಿ, ಅಡಿಕೆ ಸೇರಿದಂತೆ ಇನ್ನಿತರ ಬೆಳೆಗಳಿಗೆ ವಿಮಾ ಸೌಲಭ್ಯ ಸೇರಿದಂತೆ ವಿಶೇಷ ಪ್ಯಾಕೇಜ್ ನೀಡಲು ಪ್ರಧಾನಿ ಮಂತ್ರಿಗಳ ಬಳಿ ಜನಪ್ರತಿನಿಧಿಗಳ ನಿಯೋಗ ತೆಗೆದುಕೊಂಡು ಹೋಗಲು ತೀರ್ಮಾನ ಮಾಡಲಾಗಿದೆ.

ಸಂಪುಟ ವಿಸ್ತರಣೆಯಾದ ಬಳಿಕ ನಡೆದ ಮೊದಲ ಸಭೆಗೆ ಆರ್ ಅಶೋಕ್ ತಡವಾಗಿ ಆಗಮಿಸಿದರು. ಸಂಪುಟ ವಿಸ್ತರಣೆ ಆದರೂ ಖಾತೆ ಹಂಚಿಕೆಯಾಗದ(ರಾತ್ರಿ 8 ಗಂಟೆಯ ವೇಳೆಗೆ ಖಾತೆ ಹಂಚಿಕೆ ಅಧಿಕೃತವಾಗಿ ಪ್ರಕಟಗೊಂಡಿತ್ತು) ಹಿನ್ನೆಲೆಯಲ್ಲಿ ನಾಯಕರ ಮುಖದಲ್ಲಿ ಅಸಮಾಧಾನ ಕಂಡು ಬಂತು. ಸಭೆ ಬಳಿಕ ಮಾತನಾಡಿದ ಸಚಿವ ಮಾಧುಸ್ವಾಮಿ, ನೆರೆ ಹಾವಳಿ ಹಿನ್ನೆಲೆ ಸಚಿವರು ಪ್ರವಾಸ ಮಾಡಿದ್ದೆವು. ಇಂದಿನ ಸಭೆಯಲ್ಲಿ ಪ್ರವಾಸ ಮಾಡಿದ್ದ ಸಂದರ್ಭದಲ್ಲಿ ಪಡೆದ ಮಾಹಿತಿಯೊಂದಿಗೆ ವಿಶೇಷ ಪ್ಯಾಕೇಜ್ ನೀಡುವ ಬಗ್ಗೆ ಚರ್ಚೆ ನಡೆಸಲಾಯಿತು. ಹೊಸ ಪಿಂಚಣಿ ಅನ್ವಯ ಶೇ.14 ರಷ್ಟು ನೀಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದ್ದು, ಇದರಿಂದ ರಾಜ್ಯ ಸರ್ಕಾರಕ್ಕೆ 250 ಕೋಟಿ ರೂ. ಹೊಣೆಯಾಗುತ್ತದೆ ಎಂದರು.

TAGGED:bengalurucabinet meetingCM BS YeddyurappadroughtKarnataka Flood ReliefPublic TVಕರ್ನಾಟಕ ಪ್ರವಾಹ ಪರಿಹಾರಕ್ಯಾಬಿನೆಟ್ ಸಭೆಪಬ್ಲಿಕ್ ಟಿವಿಬರಗಾಲಬೆಂಗಳೂರುಸಿಎಂ ಬಿಎಸ್ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

Vijayapura Kidney Donate
Districts

9 ತಿಂಗಳಿನಿಂದ ಬಳಲುತ್ತಿದ್ದ ಸೊಸೆಗೆ ಕಿಡ್ನಿ ದಾನ ಮಾಡಿದ ಅತ್ತೆ

Public TV
By Public TV
5 minutes ago
Murugesh Nirani
Kalaburagi

ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ: ಮುರುಗೇಶ್ ನಿರಾಣಿ

Public TV
By Public TV
8 minutes ago
shivamogga murder
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
43 minutes ago
MP RENUKACHARYA
Bengaluru City

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Public TV
By Public TV
56 minutes ago
shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
2 hours ago
Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?