ಹಬ್ಬದ ದಿನವೇ ಒಂದೇ ಕುಟುಂಬದ ನಾಲ್ವರ ದುರ್ಮರಣ

Public TV
1 Min Read
car

ಮಂಗಳೂರು: ಗಣೇಶ ಹಬ್ಬದ ದಿನವೇ ಕಾರು ಕೆರೆಗೆ ಬಿದ್ದು ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಸಮೀಪದ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಕೌಡಿಚ್ಚಾರ್ ಬಳಿ ನಡೆದಿದೆ.

ಈ ಘಟನೆ ಇಂದು ಬೆಳಗ್ಗೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿರುವ ಕೆರೆಗೆ ಬಿದ್ದಿದೆ ಎನ್ನಲಾಗಿದ್ದು. ಕಾರಿನಲ್ಲಿ ಗಂಡ, ಹೆಂಡತಿ ಇಬ್ಬರು ಮಕ್ಕಳು ಇದ್ದರು. ಮೃತರು ಮಡಿಕೇರಿ ಶುಂಠಿಕೊಪ್ಪ ನಿವಾಸಿಗಳು ಎಂಬುದಾಗಿ ತಿಳಿದುಬಂದಿದೆ.

mng

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಕಾರು ಮೇಲಕ್ಕೆತ್ತಿದ್ದಾರೆ. ಅಲ್ಲದೆ ಮೃತದೇಹಗಳನ್ನೂ ಹೊರ ತೆಗೆದಿದ್ದಾರೆ. ಸದ್ಯ ನಾಲ್ವರ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶೌಆಗಾರದಲ್ಲಿ ಇರಿಸಲಾಗಿದೆ.

ಪುತ್ತೂರಿನ ಸಂಪ್ಯ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿದೆ.

Share This Article
Leave a Comment

Leave a Reply

Your email address will not be published. Required fields are marked *