Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟ್ರಬಲ್ ಶೂಟರ್ ಬಂಧನ- ಯಾರು ಏನು ಹೇಳಿದ್ರು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟ್ರಬಲ್ ಶೂಟರ್ ಬಂಧನ- ಯಾರು ಏನು ಹೇಳಿದ್ರು?

Bengaluru City

ಟ್ರಬಲ್ ಶೂಟರ್ ಬಂಧನ- ಯಾರು ಏನು ಹೇಳಿದ್ರು?

Public TV
Last updated: September 4, 2019 7:41 am
Public TV
Share
3 Min Read
DK Shivakumar ED Main 3
SHARE

ಬೆಂಗಳೂರು: ಮಾಜಿ ಸಚಿವ, ಕನಕಪುರ ಬಂಡೆ ಡಿ.ಕೆ.ಶಿವಕುಮಾರ್ ಅವರ ಬಂಧನವಾಗುತ್ತಿದ್ದಂತೆ ಕರ್ನಾಟಕದ ಹಲವೆಡೆ ಆಕ್ರೋಶ ವ್ಯಕ್ತವಾಗಿದೆ. ಡಿ.ಕೆ.ಶಿವಕುಮಾರ್ ಬೆಂಬಲಿಗರು ಮತ್ತು ಕಾಂಗ್ರೆಸ್ ನಾಯಕರು, ಇದೊಂದು ಬಿಜೆಪಿ ಷಡ್ಯಂತ್ರ, ಬಿಜೆಪಿ ಸರ್ಕಾರಿ ಸಂಸ್ಥೆಗಳನ್ನು ತಮ್ಮ ಅನಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದೆ. ಇತ್ತ ಬಿಜೆಪಿ ನಾಯಕರು, ಕಾನೂನಿನ ಮುಂದೆ ಎಲ್ಲರೂ ಒಂದೇ, ಎಲ್ಲವೂ ಕಾನೂನಿ ಪ್ರಕಾರ ನಡೆಯಲಿದೆ ಎಂದು ಹೇಳುತ್ತಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ:
ಡಿಕೆ ಶಿವಕುಮಾರ್ ಬಂಧನ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ತಮ್ಮ ಹಿತಾಸಕ್ತಿಗಳಿಗೆ ಬಗ್ಗದ ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ವಿವಿಧ ಏಜೆನ್ಸಿಗಳನ್ನು ಅಕ್ರಮವಾಗಿ ಬಳಸುತ್ತಿರುವುದು ದೃಢಪಟ್ಟಿದೆ. ಹಬ್ಬಕ್ಕೂ ರಿಲೀಫ್ ಕೊಡದೇ ಸತತ ವಿಚಾರಣೆ ನಡೆಸಿ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ನೆಪ ಹೇಳಿ ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಟ್ವೀಟ್ ಮಾಡಿದ್ದಾರೆ.

ತಮ್ಮ ಹಿತಾಸಕ್ತಿಗಳಿಗೆ ಬಗ್ಗದ ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ವಿವಿಧ ಏಜೆನ್ಸಿಗಳನ್ನು ಅಕ್ರಮವಾಗಿ ಬಳಸುತ್ತಿರುವುದು ದೃಢಪಟ್ಟಿದೆ.ಹಬ್ಬದ ಆಚರಣೆಗೂ ಅವಕಾಶ ನೀಡದೆ 4ದಿನಗಳ ಕಾಲ ನಿರಂತರ ವಿಚಾರಣೆಗೆ ಒಳಪಟ್ಟ @DKShivakumar ರನ್ನು ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ನೆಪದ ಮೇಲೆ ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ.

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 3, 2019

ಕಳೆದ 4 ದಿನಗಳಿಂದ ಸತತ ವಿಚಾರಣೆಗೆ ಡಿಕೆಶಿ ಹಾಜರಾಗಿದ್ದರೂ ಕಸ್ಟಡಿಗೆ ಪಡೆದಿರುವುದು ರಾಜಕೀಯ ಷಡ್ಯಂತ್ರ. ಬಿಜೆಪಿ ಸರ್ಕಾರ ವಿಪಕ್ಷಗಳೇ ಇರಬಾರದು ಎಂದು ಹೀಗೆ ಮಾಡುತ್ತಿದೆ. ಇಡಿ ಬಂಧನ ಬಗ್ಗೆ ಕಳೆದ 7-8 ತಿಂಗಳ ಹಿಂದೆಯೇ ಅಂದಾಜು ಮಾಡಿದ್ದೇ, ಡಿಕೆಶಿ ಒಂದು ವರ್ಷದಿಂದ ತನಿಖೆಗೆ ಸಹಕರಿಸುತ್ತಿದ್ದಾರೆ. ಅವರನ್ನು ಬಂಧನ ಮಾಡುವ ಅವಶ್ಯಕತೆ ಏನಿತ್ತು. ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣ ಆಗಿದೆ. ಗುಜರಾತ್ ಕಾಂಗ್ರೆಸ್ ಶಾಸಕರನ್ನು ರಕ್ಷಿಸಿದ್ದಕ್ಕೆ ಟಾರ್ಗೆಟ್ ಮಾಡಿದ್ದಾರೆ. ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಕೇಂದ್ರದ ವಿರುದ್ಧ ಪ್ರತಿಭಟನೆಗೆ ಜೆಡಿಎಸ್ ಬೆಂಬಲ ನೀಡುತ್ತದೆ. ಸಿಎಂ ಯಡಿಯೂರಪ್ಪ ಸೇರಿ ಡಿಸಿಎಂ ಗೋವಿಂದ ಕಾರಜೋಳ, ಅಶ್ವತ್ ನಾರಾಯಣ ವಿರುದ್ಧ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದರು.

ರಾಮಲಿಂಗಾರೆಡ್ಡಿ:
ಡಿಕೆಶಿ ಬಂಧನಕ್ಕೆ ಶಾಸಕ ರಾಮಲಿಂಗಾರೆಡ್ಡಿ ಕೆಂಡಕಾರಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ಸ್ವಾಯತ್ತ ಸಂಸ್ಥೆಗಳನ್ನು ಕೈಗೊಂಬೆಯನ್ನಾಗಿ ಮಾಡಿಕೊಂಡು ವಿಪಕ್ಷಗಳನ್ನು ತುಳಿಯುವ ಕೆಲಸ ಮಾಡ್ತಿದೆ. ಚಿದಂಬರಂ, ಡಿಕೆಶಿ ಮಾತ್ರ ಅಲ್ಲ ವಿಪಕ್ಷಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇಡಿ, ಐಟಿ ಅಂತಹ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ತಿದೆ ಎಂದು ವಾಗ್ದಾಳಿ ನಡೆಸಿದರು. ದೆಹಲಿಯ ಆರ್‍ಎಂಎಲ್ ಆಸ್ಪತ್ರೆಗೆ ರಾಮಲಿಂಗಾರೆಡ್ಡಿ ಭೇಟಿ ನೀಡಿದರು.

ಇಂದು ದೆಹಲಿಯಲ್ಲಿ ಶ್ರೀ @DKShivakumar ರವರನ್ನು ಭೇಟಿ ಮಾಡಿದ್ದೇನೆ, ಸುಮಾರು 15 ಅಡಿಗಳ ದೂರದಿಂದ ಅವರನ್ನು ಕಂಡೆ, ನನ್ನನು ನೋಡಿ ವಿಶ್ ಮಾಡಿದರು.
ವಶಕ್ಕೆ ಪಡೆದ್ರು ಅಂತ ಅವರೇನು ಧೈರ್ಯ ಕಳೆದುಕೊಂಡಿಲ್ಲ.

ಐಟಿ,ಇಡಿಯವರು ಅವರ ಕೆಲಸ ಮಾಡಬೇಕೆ ವಿನಃ ಬೇರೆಯವರ ಕೈಗೊಂಬೆಯಾಗಿ ಮಾಡಿದರೆ ಹೇಗೆ ? ಇದೊಂದು ದುರುದ್ದೇಶಪೂರಿತ ಕೃತ್ಯ. pic.twitter.com/VhxPP20wgg

— Ramalinga Reddy (@RLR_BTM) September 3, 2019

ನಾನು ಡಿಕೆಶಿ ಭೇಟಿಗಾಗಿಯೇ ಆಸ್ಪತ್ರೆಗೆ ಹೋಗಿದ್ದೆ. ಭೇಟಿ ವೇಳೆ ಡಿಕೆಶಿ ಕೊನೆಗೂ ಸಾಧಿಸಿಬಿಟ್ಟರಪ್ಪ. ನಾನು ಕೋರ್ಟ್ ನಲ್ಲಿ ಹೋರಾಟ ಮಾಡ್ತೀನಿ ಎಂದ್ರು. ಡಿಕೆಶಿ ಆರೋಗ್ಯ ತಪಾಸಣೆಗಾಗಿ ವೈದ್ಯರು ರಕ್ತ ಪಡೆಯುತ್ತಿದ್ದರು ವರದಿ ಬಂದ ಬಳಿಕ ಅವರ ಆರೋಗ್ಯದ ಬಗ್ಗೆ ಗೊತ್ತಾಗಲಿದೆ. ಪಬ್ಲಿಕ್ ಟಿವಿಗೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದರು.

ಸಿದ್ದರಾಮಯ್ಯ:
ಡಿಕೆ ಶಿವಕುಮಾರ್ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿ ಮುಗಿಸಲು ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಶಿವಕುಮಾರ್ ಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಹದ್ಯೋಗಿ ಡಿ.ಕೆ.ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗದ ಮೂಲಕ ದಮನಿಸುವ ಯತ್ನ ಹೇಡಿತನದ್ದು. ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ.@INCKarnataka

— Siddaramaiah (@siddaramaiah) September 3, 2019

ದಿನೇಶ್ ಗುಂಡೂರಾವ್:
ದ್ವೇಷದ, ಕುತಂತ್ರದ ರಾಜಕಾರಣ ಮಾಡುತ್ತಿರುವ ನರೇಂದ್ರ ಮೋದಿ ಸರ್ಕಾರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷಗಳ ನಾಯಕರನ್ನು ಮುಗಿಸುವ ಹೀನ ಕೃತ್ಯಕ್ಕಿಳಿದಿದೆ. ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿರುವುದನ್ನು ಕಟುವಾಗಿ ಖಂಡಿಸುತ್ತೇವೆ. ಕಾಂಗ್ರೆಸ್ ಪಕ್ಷ, ಕಾರ್ಯಕರ್ತರ ಸೈದ್ಧಾಂತಿಕ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಕೆಪಿಸಿ ಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ದ್ವೇಷದ, ಕುತಂತ್ರದ ರಾಜಕಾರಣ‌ ಮಾಡುತ್ತಿರುವ @narendramodi ಸರ್ಕಾರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷಗಳ ನಾಯಕರನ್ನು ಮುಗಿಸುವ ಹೀನ ಕೃತ್ಯಕ್ಕಿಳಿದಿದೆ.@DKShivakumar ರನ್ನು ಬಂಧಿಸಿರುವುದನ್ನು ಕಟುವಾಗಿ ಖಂಡಿಸುತ್ತೇವೆ.

ಕಾಂಗ್ರೆಸ್ ಪಕ್ಷ, ಕಾರ್ಯಕರ್ತರ
ಸೈದ್ಧಾಂತಿಕ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 3, 2019

ರಂದೀಪ್ ಸುರ್ಜೇವಾಲಾ:
ದೇಶದ ಅರ್ಥ ವ್ಯವಸ್ಥೆ ಆರ್ಥಿಕ ಸಂಕಷ್ಟದಲ್ಲಿದೆ. ಕೇಂದ್ರ ಸರ್ಕಾರದ ನಿರ್ಧಾರಗಳಿಂದ ಎಲ್ಲ ಉದ್ಯಮಗಳು ಅವನತಿಯತ್ತ ಸಾಗುತ್ತುದೆ. ದೇಶದ ಜಿಡಿಪಿ ದರವು ಗಣನೀಯವಾಗಿ ಕುಸಿಯುತ್ತಿದ್ದು, ಇದೆಲ್ಲದರ ಬಗ್ಗೆ ತಲೆಕೆಡಿಸಿಕೊಳ್ಳದ ಬಿಜೆಪಿ ನಮ್ಮ ನಾಯಕರನ್ನು ಬಂಧಿಸುತ್ತಿದೆ. ಡಿ.ಕೆ.ಶಿವಕುಮಾರ್ ಪ್ರಕರಣದಲ್ಲಿ ಮುಗ್ಧರಾಗಿದ್ದು, ಇಡಿ ಅಧಿಕಾರಿಗಳಿಗೆ ಅವರನ್ನು ಬಂಧಿಸಲು ಯಾವುದೇ ಸಾಕ್ಷ್ಯಗಳಿಲ್ಲ. ಇದೊಂದು ರಾಜಕೀಯ ಪ್ರೇರಿತ ಬಂಧನ ಎಂದು ಕಾಂಗ್ರೆಸ್ ನಾಯಕ ರಂದೀಪ್ ಸುಜೇವಾಲಾ ಹೇಳಿದ್ದಾರೆ.

Shri @rssurjewala gives a statement on the politically motivated arrest of Shri @DKShivakumar#BJPVendettaPolitics pic.twitter.com/3fqruSahYx

— Congress (@INCIndia) September 3, 2019

TAGGED:arrestDK ShivakumarEDNew DelhiPublic TVಇಂಡಿಕಾಂಗ್ರೆಸ್ಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

Cinema news

Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows

You Might Also Like

Silver Jubilee of CMR Technical College Vice President inaugurates new incubation centre
Bengaluru City

ಸಿಎಂಆರ್ ತಾಂತ್ರಿಕ ಮಹಾವಿದ್ಯಾಲದ ಬೆಳ್ಳಿ ಹಬ್ಬ – ನೂತನ ಇನ್‌ಕ್ಯುಬೇಷನ್ ಸೆಂಟರ್ ಲೋಕಾರ್ಪಣೆಗೊಳಿಸಿದ ಉಪರಾಷ್ಟ್ರಪತಿ

Public TV
By Public TV
12 minutes ago
5 6 Small Pieces Of Bones Coin Like Item Found During Excavation In Lakkundi Village
Districts

ಲಕ್ಕುಂಡಿ ಉತ್ಖನನ – ಹಸಿರು ಬಣ್ಣದ ನಾಗರ ಶಿಲೆ, ಮಣ್ಣಿನ ಬಿಲ್ಲೆ, ಮೂಳೆ ಪತ್ತೆ

Public TV
By Public TV
33 minutes ago
Donald Trump 2
Latest

ಗ್ರೀನ್‌ಲ್ಯಾಂಡ್‌ ನಮಗೆ ಬೇಕು, ತಕ್ಷಣವೇ ಡೆನ್ಮಾರ್ಕ್‌ ಮಾತುಕತೆ ನಡೆಸಬೇಕು: ಟ್ರಂಪ್‌ ಅಬ್ಬರ

Public TV
By Public TV
58 minutes ago
Congress MLA Sivaganga Basavaraj
Davanagere

ತಾಳ್ಮೆಗೂ ಒಂದು ಮಿತಿ ಇದೆ – ಅಧಿಕಾರ ಹಸ್ತಾಂತರ ವಿಚಾರ ವರಿಷ್ಠರು ಸ್ಪಷ್ಟಪಡಿಸಬೇಕು: ಶಿವಗಂಗಾ ಬಸವರಾಜ್‌

Public TV
By Public TV
1 hour ago
T20 World Cup ICC votes to replace Bangladesh if it doesnt play in India
Cricket

ಭಾರತಕ್ಕೆ ಬರದಿದ್ದರೆ ವಿಶ್ವಕಪ್‌ನಿಂದ ಔಟ್‌ – ಬಾಂಗ್ಲಾಗೆ ಐಸಿಸಿ ವೋಟು ಏಟು

Public TV
By Public TV
2 hours ago
Man killed by Bihari laborers in Chikkamagaluru 1
Chikkamagaluru

ಚಿಕ್ಕಮಗಳೂರು | ಬಾರ್‌ನಲ್ಲಿ ಗಲಾಟೆ – ವ್ಯಕ್ತಿಯನ್ನು ಕೊಂದು ಬಯಲಲ್ಲಿ ಎಸೆದ ಬಿಹಾರಿ ಕಾರ್ಮಿಕರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?