ವೈದ್ಯರ ನಿರ್ಲಕ್ಷ್ಯದಿಂದ ತೀವ್ರ ರಕ್ತಸ್ರಾವ – ಬಾಣಂತಿ ಸಾವು

Public TV
1 Min Read
gdg bananthi death

ಗದಗ: ವೈದ್ಯರ ನಿರ್ಲಕ್ಷ್ಯಕ್ಕೆ ತೀವ್ರ ರಕ್ತಸ್ರಾವದಿಂದ ಬಾಣಂತಿ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ಗದಗ ತಾಲೂಕಿನ ಬೆಳದಡಿ ತಾಂಡ ನಿವಾಸಿಯಾದ 23 ವರ್ಷದ ಸುಮಿತ್ರಾ ಪೀರಪ್ಪ ಚವ್ಹಾಣ್ ಮೃತಪಟ್ಟಿದ್ದಾರೆ. ಸುಮಿತ್ರಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಳ್ಳುತ್ತಿದ್ದಂತೆ ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಸುಮಿತ್ರಾ ನೋವಿನ ಪರಿಸ್ಥಿತಿ ಚಿಂತಾಜನಕವಾಗುತ್ತಿದ್ದಂತೆ ಹೆಚ್ಚಿನ ಚಿಕಿತ್ಸೆಗೆ ಗದಗ ಜಿಮ್ಸ್ ರವಾನಿಸಲಾಯಿತು.

vlcsnap 2019 09 04 08h20m00s32

ಇಲ್ಲಿ ವೈದ್ಯೆ ಶೃತಿ ಪಾಟೀಲ್ ಒಂದು ಗಂಟೆವರೆಗೆ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ತೋರಿದ್ದಾರೆ. ಜೊತೆಗೆ ಆಸ್ಪತ್ರೆಯಲ್ಲಿ ರಕ್ತ ಇಲ್ಲದೇ ಇರುವುದರಿಂದ ಸುಮಿತ್ರಾ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಈ ಎಲ್ಲಾ ಘಟನೆಗಳಿಗೆಲ್ಲಾ ಕಾರಣ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತಳ ಸಂಬಂಧಿಕರು ಹೇಳುತ್ತಿದ್ದಾರೆ.

ಸುಮಿತ್ರಾ ಸಾವಿನಿಂದ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಬಗ್ಗೆ ವೈದ್ಯಾಧಿಕಾರಿಗಳನ್ನು ಕೇಳಿದರೆ ನಮ್ಮದು ಯಾವುದು ತಪ್ಪಿಲ್ಲ. ನಾವು ಎಷ್ಟೇ ಪ್ರಯತ್ನ ಮಾಡಿದರೂ ಬಾಣಂತಿಯನ್ನು ಉಳಿಸಿಕೊಳ್ಳಲಾಗಲಿಲ್ಲ ಎಂದು ಸಮಜಾಯಿಸಿಕೊಳ್ಳುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *