Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಪೆಟ್ರೋಲ್, ಡೀಸೆಲ್ ಕಾರುಗಳನ್ನು ನಿಷೇಧಿಸಲ್ಲ – ನಿತಿನ್ ಗಡ್ಕರಿ

Public TV
Last updated: September 5, 2019 4:42 pm
Public TV
Share
2 Min Read
NITHIN GADKARI
SHARE

ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಕಾರ್ ಗಳನ್ನು ನಿಷೇಧಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ.

59ನೇ ವಾರ್ಷಿಕ ಭಾರತೀಯ ವಾಹನ ತಯಾರಿಕಾ ಕಂಪನಿಗಳ ಒಕ್ಕೂಟ (ಎಸ್‍ಐಎಎಂ) ಸಮಾವೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳ ನಿಷೇಧದ ಕುರಿತು ಸ್ಪಷ್ಟಪಡಿಸಿದ ಅವರು, ಭಾರತದ ವಾಹನ ಉದ್ಯಮವು ದೇಶದ ರಫ್ತು ಮತ್ತು ಉದ್ಯೋಗಕ್ಕೆ ನೀಡುತ್ತಿರುವ ಕೊಡುಗೆ ಅಪಾರ, ಈ ಬಗ್ಗೆ ಸರ್ಕಾರಕ್ಕೆ ತಿಳಿದಿದೆ. ರಫ್ತು ಹೆಚ್ಚಿರುವುದಕ್ಕೆ ವಾಹನ ಉದ್ಯಮವೇ ಸಾಕ್ಷಿ ಎಂದು ಗಡ್ಕರಿ ಅಭಿಪ್ರಾಯ ಪಟ್ಟರು.

Live from 59th SIAM Annual Convention – “Moving into a New Era of Auto Industry” https://t.co/0Oex0UMPuN

— Nitin Gadkari (@nitin_gadkari) September 5, 2019

ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಕಾರ್ ಗಳನ್ನು ನಿಷೇಧಿಸುವ ಕುರಿತ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಆಟೋಮೊಬೈಲ್ ವಲಯ ಸಾಕಷ್ಟು ಉದ್ಯೋಗ ಒದಗಿಸುತ್ತಿದ್ದು, ಮಾತ್ರವಲ್ಲದೆ ರಫ್ತು ಹೆಚ್ಚಿದೆ. ಆದರೆ, ಇದರಿಂದ ಸರ್ಕಾರ ಕೆಲ ಸಮಸ್ಯೆಗಳನ್ನು ಎದುರಿಸುತ್ತಿದೆ. ಮೊದಲನೇಯದು ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವ ವೆಚ್ಚ, ಎರಡನೇಯದು ಮಾಲಿನ್ಯ, ಮೂರನೇಯದು ರಸ್ತೆ ಸುರಕ್ಷತೆ ಎಂದು ತಿಳಿಸಿದರು.

ದೇಶದಲ್ಲಿ ಆಟೋಮೊಬೈಲ್ ಉದ್ಯಮ 4.50 ಲಕ್ಷ ಕೋಟಿ ರೂ. ಮೌಲ್ಯದ್ದಾಗಿದೆ. ಇದರ ಜೊತೆಗೆ ಮಾಲಿನ್ಯವು ದೇಶಕ್ಕೆ ಒಂದು ಪ್ರಮುಖ ವಿಷಯವಾಗಿ ಉಳಿದಿರುವುದರಿಂದ ಶುದ್ಧ ಇಂಧನ ಮೂಲಗಳತ್ತ ಮುಖ ಮಾಡಬೇಕಿದೆ. ಮಾಲಿನ್ಯದ ಸಮಸ್ಯೆಗೆ ವಾಹನಗಳನ್ನು ಮಾತ್ರ ದೂಷಿಸುವುದು ನ್ಯಾಯವಲ್ಲ. ಆದರೆ, ಅವರೂ ಸಹ ಕೆಲವು ಜವಾಬ್ದಾರಿಗಳನ್ನು ಹಂಚಿಕೊಳ್ಳಬೇಕಾಗುತ್ತದೆ. ದೆಹಲಿ ವಿಶ್ವದ ಅತಿ ಹೆಚ್ಚು ವಾಯು ಮಾಲಿನ್ಯ ಹೊಂದಿದ ನಗರಗಳಲ್ಲಿ ಒಂದು. ಅಲ್ಲದೆ, 2018ರಲ್ಲಿ ಹೆಚ್ಚು ಮಾಲಿನ್ಯ ಹೊಂದಿದ ನಗರಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಮಸ್ಯೆಗಳನ್ನು ನಿಭಾಯಿಸಲು ಸರ್ಕಾರ 50 ಸಾವಿರ ಕೋಟಿ ರೂ.ಗಳ ಯೋಜನೆಯನ್ನು ರೂಪಿಸಿದೆ. ಈ ನಿಟ್ಟಿನಲ್ಲಿ ಈಗಾಗಲೇ ಶೇ.29ರಷ್ಟು ಮಾಲಿನ್ಯವನ್ನು ನಿಯಂತ್ರಿಸಲಾಗಿದೆ. ಮಾಲಿನ್ಯವನ್ನು ಕಡಿಮೆ ಮಾಡುವುದು ರಾಷ್ಟ್ರೀಯ ಹಿತಾಸಕ್ತಿಯಾಗಿದೆ ಎಂದು ಗಡ್ಕರಿ ತಿಳಿಸಿದರು.

Live from 59th SIAM Annual Convention – “Moving into a New Era of Auto Industry” https://t.co/cggreIeZfZ

— Nitin Gadkari (@nitin_gadkari) September 5, 2019

ಈ ಹಿಂದೆ ನಡೆದ ನೀತಿ ಆಯೋಗದ ಸಭೆಯಲ್ಲಿ 2025ರ ವೇಳೆಗೆ ಎಲ್ಲ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್ ಎಂಜಿನ್ ಆಗಿ ಪರಿವರ್ತಿಸಲಾಗುವುದು ಎದು ನಿರ್ಧರಿಸಲಾಗಿತ್ತು.

ನೀತಿ ಆಯೋಗದ `ಥಿಂಕ್ ಟ್ಯಾಂಕ್’ ಸಭೆಯಲ್ಲಿ ಈ ನಿರ್ಧಾರದ ಕುರಿತು ಎಲೆಕ್ಟ್ರಿಕ್ ವಾಹನಗಳ ಉತ್ಪಾದಕರು ಹಾಗೂ ಸ್ಟಾರ್ಟ್ ಅಪ್ ತಯಾರಿಕರೊಂದಿಗೆ ಚರ್ಚಿಸಲಾಗಿತ್ತು. ಮಾಲಿನ್ಯ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳದಿದ್ದರೆ, ನ್ಯಾಯಾಲಯ ಈ ಕುರಿತು ಕ್ರಮ ಕೈಗೊಳ್ಳುತ್ತದೆ ಎಂದು ಕಂಪನಿಗಳಿಗೆ ನೀತಿ ಆಯೋಗದ ಸಭೆಯಲ್ಲಿ ಎಚ್ಚರಿಕೆ ನೀಡಲಾಗಿತ್ತು.

electric car 2

ಇದಕ್ಕೆ ಹಲವು ಆಟೋಮೊಬೈಲ್ ಕಂಪನಿಗಳು ಆಕ್ಷೇಪ ವ್ಯಕ್ತಪಡಿಸಿ, ಈ ಕುರಿತು ಸೂಕ್ತ ನೀತಿ ಮತ್ತು ಮಾರ್ಗದರ್ಶನವಿಲ್ಲದೆ ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸಲು ಸಾಧ್ಯವಿಲ್ಲ. ನೀತಿಗಳನ್ನು ಸ್ಪಷ್ಟವಾಗಿಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದವು. ಇದಕ್ಕೆ ಪ್ರತಿಯಾಗಿ, ಹೆಚ್ಚು ವಾಯು ಮಾಲಿನ್ಯ ಹೊಂದಿದ 15ರ ಪೈಕಿ 14 ನಗರಗಳು ಭಾರತದಲ್ಲಿವೆ. ಸರ್ಕಾರ ಮತ್ತು ಕಂಪನಿಗಳು ಈ ಕುರಿತು ಕ್ರಮ ಕೈಗೊಳ್ಳದಿದ್ದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಎಚ್ಚರಿಸಿದ್ದರು.

2023ರ ವೇಳೆಗೆ ತ್ರಿಚಕ್ರ ವಾಹನಗಳನ್ನು ಸಂಪೂರ್ಣವಾಗಿ ಎಲೆಕ್ಟ್ರಿಕ್‍ಗೆ ಪರಿವರ್ತಿಸಬೇಕು, 2025ರ ವೇಳೆಗೆ 150 ಸಿಸಿಗಿಂತ ಕಡಿಮೆ ಎಂಜಿನ್ ಸಾಮಥ್ರ್ಯ ಹೊಂದಿರುವ ದ್ವಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್‍ಗೆ ಪರಿವರ್ತಿಸಲು ನೀತಿ ಆಯೋಗ ಯೋಜನೆ ರೂಪಿಸಿದೆ.

TAGGED:Automobile CompanyElectric VehiclesNiti Ayognitin gadkaripollutionPublic TVಆಟೋಮೊಬೈಲ್ ಕಂಪನಿಎಲೆಕ್ಟ್ರಿಕ್ ವಾಹನಗಳುನಿತಿನ್ ಗಡ್ಕರಿನೀತಿ ಆಯೋಗಪಬ್ಲಿಕ್ ಟಿವಿಮಾಲಿನ್ಯ
Share This Article
Facebook Whatsapp Whatsapp Telegram

Cinema Updates

kamal haasan thug life
‘ಥಗ್‌ ಲೈಫ್‌’ ಟೀಂ ಉದ್ಧಟತನ ಬಟಾಬಯಲು – ಕನ್ನಡ ಬಿಟ್ಟು 4 ಭಾಷೆಗಳಿಗೆ ಸಿನಿಮಾ ಡಬ್‌
2 hours ago
Trisha
ಥಗ್‌ ಲೈಫ್ ಚಿತ್ರಕ್ಕೆ ʻಶುಗರ್‌ ಬೇಬಿʼ ಪಡೆದ ಸಂಭಾವನೆ ಎಷ್ಟು ಗೊತ್ತಾ?
3 hours ago
pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
7 hours ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
8 hours ago

You Might Also Like

tilak varma suryakumar yadav
Cricket

ಮುಂಬೈ ಸಂಘಟಿತ ಬ್ಯಾಟಿಂಗ್‌ – ಪಂಜಾಬ್‌ಗೆ 204 ರನ್‌ ಗುರಿ

Public TV
By Public TV
10 minutes ago
Ukrainian Drones Strike Airbase In Russia At Least 40 Aircraft Hit
Latest

ರಷ್ಯಾದ ವಾಯುನೆಲೆಗಳ ಮೇಲೆ ಉಕ್ರೇನ್‌ ಡ್ರೋನ್‌ ದಾಳಿ – 40 ವಿಮಾನಗಳು ಧ್ವಂಸ

Public TV
By Public TV
25 minutes ago
DK Shivakumar
Bengaluru City

ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಹೆಚ್ಚು – ಡಿಕೆಶಿ

Public TV
By Public TV
26 minutes ago
Air Force Rescues 14 People Stranded In River On Assam Arunachal Pradesh Border
Latest

ಅಸ್ಸಾಂ | ಹಠಾತ್‌ ಆಗಿ ಹೆಚ್ಚಿದ ಪ್ರವಾಹ – ಸಂಕಷ್ಟದಲ್ಲಿ  ಸಿಲುಕಿದ್ದ 14 ಮಂದಿಯನ್ನು ರಕ್ಷಿಸಿದ ವಾಯುಪಡೆ

Public TV
By Public TV
27 minutes ago
Uttar Pradesh Marriage
Crime

ಕೂಲರ್‌ಗಾಗಿ ಬೀಗರ ಮಧ್ಯೆ ಜಗಳ – ಕುರ್ಚಿ ಎಸೆದು ಅಟ್ಟಾಡಿಸಿದ ವಿಡಿಯೋ ವೈರಲ್

Public TV
By Public TV
34 minutes ago
Florida Teacher
Crime

ಕ್ಲಾಸ್‌ರೂಮ್‌ನಲ್ಲೇ ಅಪ್ರಾಪ್ತ ವಿದ್ಯಾರ್ಥಿ ಜೊತೆ ಸೆಕ್ಸ್‌ – ಶಿಕ್ಷಕಿ ಬಂಧನ

Public TV
By Public TV
40 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?