ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಪ್ರಧಾನಿ ದೇವೇಗೌಡರ ಮಾತು ಕೇಳಿಕೊಂಡು ಸ್ಪೀಕರ್ ರಮೇಶ್ ಕುಮಾರ್ ಅನ್ಯಾಯ ಮಾಡಿದರು ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ವಿಚಾರದಲ್ಲಿ ಅನರ್ಹ ಶಾಸಕರ ಕೈವಾಡವಿಲ್ಲ. ಹಾಗೆ ಅಂದುಕೊಂಡಿದ್ದರೆ ಅದು ಮೂರ್ಖತನ ಅಷ್ಟೇ ಎಂದು ಕಿಡಿಕಾರಿದರು.
ಕಾನೂನಿನ ಮುಂದೆ ಎಲ್ಲರೂ ಒಂದೇ. ಡಿ.ಕೆ ಶಿವಕುಮಾರ್ ಅವರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗುತ್ತದೆ ಇಲ್ಲ ಅವರು ತಪ್ಪೇ ಮಾಡಿಲ್ಲ ಎಂದರೆ ಶಿಕ್ಷೆ ಆಗಲ್ಲ ಅಷ್ಟೇ ಎಂದು ಹೇಳಿದರು. ಇದೇ ವೇಳೆ ಅನರ್ಹರಾಗಿರೋ ನಾವು ಸುಪ್ರೀಂ ಕೊರ್ಟಿನಲ್ಲಿ ಗೆದ್ದು ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.