Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟ್ರಾಫಿಕ್ ದಂಡದ ಮೊತ್ತ ಇಳಿಕೆಗೆ ರಾಜ್ಯ ಸರ್ಕಾರ ನಿರ್ಧಾರ – ಯಾವುದು ಎಷ್ಟು ಇಳಿಕೆಯಾಗುತ್ತೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟ್ರಾಫಿಕ್ ದಂಡದ ಮೊತ್ತ ಇಳಿಕೆಗೆ ರಾಜ್ಯ ಸರ್ಕಾರ ನಿರ್ಧಾರ – ಯಾವುದು ಎಷ್ಟು ಇಳಿಕೆಯಾಗುತ್ತೆ?

Bengaluru City

ಟ್ರಾಫಿಕ್ ದಂಡದ ಮೊತ್ತ ಇಳಿಕೆಗೆ ರಾಜ್ಯ ಸರ್ಕಾರ ನಿರ್ಧಾರ – ಯಾವುದು ಎಷ್ಟು ಇಳಿಕೆಯಾಗುತ್ತೆ?

Public TV
Last updated: September 12, 2019 9:02 am
Public TV
Share
3 Min Read
dvg traffic fine 2
SHARE

ಬೆಂಗಳೂರು: ಕರ್ನಾಟಕದಲ್ಲಿ ವಿಧಿಸಲಾಗುತ್ತಿರುವ ಸಂಚಾರ ನಿಯಮ ಉಲ್ಲಂಘನೆಯ ದಂಡದ ಮೊತ್ತವನ್ನು ಇಳಿಸಲು ಸಾರಿಗೆ ಇಲಾಖೆ ಮುಂದಾಗಿದೆ.

ಗುಜರಾತ್ ಸರ್ಕಾರ ಈಗಾಗಲೇ ದಂಡವನ್ನು ಇಳಿಸಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಸಹ ದಂಡದ ಮೊತ್ತವನ್ನು ಇಳಿಸಲು ಮುಂದಾಗಿರುವ ಸುಳಿವನ್ನು ಸಾರಿಗೆ ಸಚಿವ ಲಕ್ಷ್ಮಣ ಸವದಿ ನೀಡಿದ್ದಾರೆ. ಆದರೆ ಇದು ಜಾರಿಯಾಗಲೂ 10 ದಿನ ಬೇಕಾಗಬಹುದು ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

Public Tv IMPACT copy 2

ಎಷ್ಟು ಇಳಿಕೆಯಾಗುತ್ತೆ?
ಹಲ್ಮೆಟ್ ರಹಿತ ಚಾಲನೆಗೆ 1 ಸಾವಿರ ರೂ. ದಂಡ ಇದ್ದರೆ ಇದನ್ನು 500 ರೂ.ಗೆ ಇಳಿಸಲಾಗುತ್ತದೆ. ಲೈಸೆನ್ಸ್ ರಹಿತ ಚಾಲನೆಗೆ 5,000 ರೂ ಬದಲು 2,500 ರೂ., ಅಪಾಯಕಾರಿ ಚಾಲನೆ 5,000 ರೂ. ಬದಲು 3,000 ರೂ.ಗೆ ಇಳಿಕೆಯಾಗುವ ಸಾಧ್ಯತೆಯಿದೆ.  ಇದನ್ನೂ ಓದಿ:ಸ್ಲಿಪ್ಪರ್ ಹಾಕಿ ಬೈಕ್ ಓಡಿಸಿದ್ರೆ ಬೀಳುತ್ತೆ ಭಾರೀ ದಂಡ!

ಈ ಬಗ್ಗೆ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು, ದಂಡದ ಮೊತ್ತ ಜಾಸ್ತಿಯಾಗಿರುವ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿ ಕಡಿಮೆ ಮಾಡಿರುವಂತೆ ನಮ್ಮಲ್ಲೂ ಕಡಿತ ಮಾಡುವ ಯೋಚನೆ ಇದೆ. ಈಗಾಗಲೇ ಹಿರಿಯ ಅಧಿಕಾರಿಗಳಿಗೆ ಬೇರೆ ಬೇರೆ ರಾಜ್ಯಗಳಿಂದ ಮಾಹಿತಿ ಪಡೆಯಲು ಸೂಚನೆ ನೀಡಿದ್ದೇವೆ. 2 ದಿನಗಳ ಒಳಗೆ ಈ ಮಾಹಿತಿ ಲಭಿಸುವ ನಿರೀಕ್ಷೆ ಇದ್ದು, ಮಾಹಿತಿ ಬಂದ ಕೂಡಲೇ ಕ್ರಮಕೈಗೊಳ್ಳುತ್ತೇನೆ. ಸದ್ಯದ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ನೀಡಬೇಕಾದ ಕೆಲ ಸೂಚನೆಗಳನ್ನ ನೀಡಿದ್ದೇವೆ ಎಂದು ಹೇಳಿದ್ದರು.

traffic police 2

ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದವರಿಗೆ ದುಬಾರಿ ದಂಡ ವಿಧಿಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ಭಾರೀ ಆಕ್ಷೇಪ ಕೇಳಿಬರುತ್ತಿತ್ತು. ಇದೇ ವೇಳೆ ಗುಜರಾತ್ ಸಿಎಂ ವಿಜಯ್ ರೂಪಾಣಿ ಅವರು, ಹೊಸ ಕಾಯ್ದೆಯಲ್ಲಿ ವಿಧಿಸುತ್ತಿರುವ ದಂಡದ ಮೊತ್ತ ಗರಿಷ್ಠ ಪ್ರಮಾಣದಲ್ಲಿದ್ದು, ಈ ಬಗ್ಗೆ ಚರ್ಚೆ ನಡೆಸಿ ಕೆಲ ದಂಡದ ಮೊತ್ತಗಳನ್ನು ಕಡಿಮೆ ಮಾಡಲಾಗಿದೆ ಎಂದು ಹೇಳಿದ್ದರು.

ಗುಜರಾತ್ ಸರ್ಕಾರದ ಹೊಸ ನಿಯಮಗಳಂತೆ ಹೆಲ್ಮೆಟ್ ಧರಿಸದಿದ್ದರೆ 500 ರೂ. ದಂಡವನ್ನು ನಿಗದಿ ಮಾಡಲಾಗಿದೆ. ಕೇಂದ್ರ ಸರ್ಕಾರ ಸೆ.1ರಿಂದ ಜಾರಿ ಮಾಡಿದ್ದ ಹೊಸ ತಿದ್ದುಪಡಿ ಕಾಯ್ದೆಯ ಅನ್ವಯ ಈ ಮೊತ್ತ 1 ಸಾವಿರ ರೂ. ಇತ್ತು. ಸೀಟ್ ಬೆಲ್ಟ್ ಧರಿಸದಿದ್ದರೆ 1 ಸಾವಿರ ಬದಲಾಗಿ 500 ರೂ., ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೆ ದ್ವಿಚಕ್ರ ವಾಹನ ಸವಾರರಿಗೆ 2 ಸಾವಿರ ರೂ., ಉಳಿದ ವಾಹನಗಳಿಗೆ 3 ಸಾವಿರ ರೂ. ನಿಗದಿ ಮಾಡಲಾಗಿದೆ. ಆದರೆ ಲೈಸನ್ಸ್, ಆರ್ ಸಿ, ವಿಮೆ ಮೊದಲ ಬಾರಿಗೆ ಇಲ್ಲದಿದ್ದರೆ 500 ರೂ. ದಂಡ ವಿಧಿಸಿದರೆ, 2ನೇ ಬಾರಿಗೆ ಈ ಮೊತ್ತ ಕೇಂದ್ರ ಸರ್ಕಾರ ನೀತಿಗೆ ಅಡಿ ಅನ್ವಯವಾಗಲಿದೆ. ತ್ರಿಬಲ್ ರೈಡಿಂಗ್ ಮಾಡುವವರಿಗೆ ವಿಧಿಸಲಾಗುತ್ತಿದ್ದ 1 ಸಾವಿರ ರೂ. ದಂಡವನ್ನು 100 ರೂ.ಗಳಿಗೆ ಕಡಿಮೆ ಮಾಡಲಾಗಿದೆ. ಮಾಲಿನ್ಯ ಪ್ರಮಾಣ ಪತ್ರ ಪಡೆಯದ ವಾಹನಗಳಿಗೆ ನಿಗದಿ ಮಾಡಿದ್ದ 10 ಸಾವಿರಗಳನ್ನು ಸಣ್ಣ ವಾಹನಗಳಿಗೆ 1 ಸಾವಿರ ರೂ. ಭಾರೀ ವಾಹನಗಳಿಗೆ 3 ಸಾವಿರ ರೂ.ಗೆ ಇಳಿಸಲಾಗಿದೆ.

Traffic fine Gujarat

ಜೀವ ಮುಖ್ಯ: ಟ್ರಾಫಿಕ್ ದಂಡ ಹೆಚ್ಚಳದ ಪ್ರಶ್ನೆಗೆ ಕಿಡಿಕಾರಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಜೀವಕ್ಕಿಂತ ಹಣ ಮುಖ್ಯವೇ ಎಂದು ಮರು ಪ್ರಶ್ನೆ ಮಾಡಿದ್ದಾರೆ.

ಬಿಎಸ್6 ಹೊಂಡಾ ಆಕ್ಟಿವಾ ಸ್ಕೂಟರ್ ಅನಾವರಣ ಕಾರ್ಯಕ್ರಮದ ಬಳಿಕ ಮಾತನಾಡಿದ ಕೇಂದ್ರ ಸಚಿವರು, ದೇಶದಲ್ಲಿ ಪ್ರತಿ ವರ್ಷ 1.5 ಲಕ್ಷ ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ. ಇದರಲ್ಲಿ ಶೇ.65 ರಷ್ಟು 18-35 ವಯಸ್ಸಿನವರೇ ಇದ್ದಾರೆ. ಅಷ್ಟೇ ಅಲ್ಲದೆ ಪ್ರತಿ ವರ್ಷ 2 ಲಕ್ಷ ಜನರು ರಸ್ತೆ ಅಪಘಾತಗಳಿಂದ ಅಂಗವಿಕಲರಾಗಿದ್ದಾರೆ. ಯುವಕರನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಲು ಹಾಗೂ ಅಪಘಾತದಿಂದ ಅಂಗವಿಕಲತೆಗೆ ತುತ್ತಾಗುವುದನ್ನು ತಪ್ಪಿಸುವ ಉದ್ದೇಶದಿಂದ ಹೊಸ ಟ್ರಾಫಿಕ್ ದಂಡವನ್ನು ಜಾರಿಗೆ ತರಲಾಗಿದೆ. ದಂಡವನ್ನು ಯಾವ ರೀತಿ ಅಳವಡಿಸಿಕೊಳ್ಳಬೇಕು ಎನ್ನುವುದು ಆಯಾ ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರವಾಗಿದೆ. ಸಂಗ್ರಹವಾದ ದಂಡದ ಮೊತ್ತವು ರಾಜ್ಯ ಸರ್ಕಾರಕ್ಕೆ ಹೋಗುತ್ತದೆ. ಟ್ರಾಫಿಕ್ ದಂಡ ಏರಿಕೆ ಉದ್ದೇಶ ಜನರ ಜೀವ ರಕ್ಷಣೆಗಾಗಿಯೇ ಹೊರತು ಸರ್ಕಾರಕ್ಕೆ ಆದಾಯ ತರುವುದಲ್ಲ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

Nitin Gadkari, Union Minister of Road Transport&Highways on revised traffic fines: This isn't a revenue income scheme, are you not worried about deaths of 1,50,000 people? If the state govts want to reduce this,is it not true that people neither recognise law nor have fear of it. pic.twitter.com/H95G10rjh9

— ANI (@ANI) September 11, 2019

TAGGED:finekarnatakatrafficTraffic ViolationsVehicle Actಟ್ರಾಫಿಕ್ದಂಡನಿತಿನ್ ಗಡ್ಕರಿಲಕ್ಷ್ಮಣ ಸವದಿಸಂಚಾರ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
26 minutes ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
40 minutes ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
1 hour ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
1 hour ago
Narendra Modi 1 2
Latest

ಕಾಂಗ್ರೆಸ್‌ ಮಿತ್ರ ಪಕ್ಷಗಳಿಂದ ಭ್ರೂಣ ಹತ್ಯೆ – ದೇಶದ ಮಹಿಳೆಯರಲ್ಲಿ ಕ್ಷಮೆ ಕೇಳಿದ ಮೋದಿ

Public TV
By Public TV
2 hours ago
Iranian Envoy
Latest

ಭಾರತದ 2 ತೈಲ ಟ್ಯಾಂಕರ್‌ ಮೇಲೆ ಗುಂಡಿನ ದಾಳಿ – ಇರಾನ್‌ ರಾಯಭಾರಿಗೆ ಭಾರತ ಸಮನ್ಸ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?