Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ಟ್ರಾಫಿಕ್ ದಂಡದ ಮೊತ್ತ ಇಳಿಯುವುದು ಅನುಮಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕದಲ್ಲಿ ಟ್ರಾಫಿಕ್ ದಂಡದ ಮೊತ್ತ ಇಳಿಯುವುದು ಅನುಮಾನ

Bengaluru City

ಕರ್ನಾಟಕದಲ್ಲಿ ಟ್ರಾಫಿಕ್ ದಂಡದ ಮೊತ್ತ ಇಳಿಯುವುದು ಅನುಮಾನ

Public TV
Last updated: September 13, 2019 11:59 am
Public TV
Share
3 Min Read
dvg traffic fine 2
SHARE

– ಕಾನೂನು ಸಚಿವಾಲಯದ ಮೊರೆ ಹೋದ ಕೇಂದ್ರ ಸಾರಿಗೆ ಇಲಾಖೆ
– ಬಿಜೆಪಿ ರಾಜ್ಯಗಳಿಂದ ಭಾರೀ ವಿರೋಧ

ನವದೆಹಲಿ: ಹೊಸ ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ವಿಧಿಸಲಾಗುತ್ತಿರುವ ದಂಡದ ಮೊತ್ತವನ್ನು ಒಂದೊಂದು ರಾಜ್ಯಗಳು ಕಡಿಮೆ ಮಾಡುತ್ತಿರುವ ಬೆನ್ನಲ್ಲೇ ಕೇಂದ್ರ ಸಾರಿಗೆ ಸಚಿವಾಲಯ ಈಗ ಕಾನೂನು ಸಚಿವಾಲಯದ ಮೊರೆ ಹೋಗಿದೆ.

ಹೌದು, ಆರಂಭದಲ್ಲಿ ಗುಜರಾತ್ ಸರ್ಕಾರ ಇಳಿಸಿದ ಬೆನ್ನಲ್ಲೇ ಉತ್ತರಾಖಂಡ್ ಸರ್ಕಾರ ಸಹ ಇಳಿಕೆ ಮಾಡಿತ್ತು. ಇದರ ಬೆನ್ನಲ್ಲೇ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ಬಿಜೆಪಿ ರಾಜ್ಯಗಳು ಸಹ ದರವನ್ನು ಇಳಿಕೆ ಮಾಡಲು ಚಿಂತಿಸಿವೆ. ಹೀಗಾಗಿ ಸಾರಿಗೆ ಸಚಿವಾಲಯ ತಿದ್ದುಪಡಿಯಾದ ಕಾಯ್ದೆಯಲ್ಲಿ ನಿಗದಿಯಾದ ದಂಡದ ಪ್ರಮಾಣಕ್ಕಿಂತಲೂ ಕಡಿಮೆ ಮೊತ್ತದ ದಂಡವನ್ನು ವಿಧಿಸುತ್ತಿರುವ ರಾಜ್ಯಗಳ ನಡೆಯ ಬಗ್ಗೆ ಕಾನೂನು ಸಚಿವಾಲಯದ ಜೊತೆ ಸಲಹೆ ಕೇಳಿದೆ.

traffic 1

ಈ ಸಂಬಂಧ ಸಾರಿಗೆ ಸಚಿವಾಲಯದ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ದಂಡ ಇಳಿಸುವ ಬಗ್ಗೆ ಕಾನೂನು ಸಚಿವಾಲಯದ ಜೊತೆ ಸಲಹೆ ಕೇಳಲಾಗಿದೆ. ಸಚಿವಾಲಯದ ಉತ್ತರ ಬಂದ ನಂತರ ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯಗಳಿಗೆ ಇದೆ ಅಧಿಕಾರ:
ಭಾರತದ ಸಂವಿಧಾನದ 7ನೇ ಶೆಡ್ಯೂಲ್ ಪ್ರಕಾರ ಮೂರು ಪ್ರತ್ಯೇಕ ಪಟ್ಟಿಯನ್ನು ರಚಿಸಿ ವಿಷಯಗಳ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ಹಂಚಿಕೆ ಮಾಡಲಾಗಿದೆ. ರಕ್ಷಣೆ, ವಿದೇಶಾಂಗ ಸೇರಿದಂತೆ 97 ವಿಷಯಗಳು ಕೇಂದ್ರ ಪಟ್ಟಿಯಲ್ಲಿ ಬಂದರೆ ಪೊಲೀಸ್, ರಾಜ್ಯ ಲೋಕಸಭಾ ಆಯೋಗ ಸೇರಿದಂತೆ 61 ವಿಷಯಗಳು ರಾಜ್ಯ ಪಟ್ಟಿಯಲ್ಲಿ ಹಂಚಿಕೆಯಾಗಿದೆ. ಆದರೆ ರಸ್ತೆ ಸಾರಿಗೆ, ಶಿಕ್ಷಣ, ಅರಣ್ಯದಂತಹ ವಿಚಾರಗಳು ಸಮವರ್ತಿ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.

ಸಮವರ್ತಿ ಪಟ್ಟಿಯಲ್ಲಿ ಸ್ಥಾನ ಪಡೆದ ವಿಷಯಗಳ ಮೇಲೆ ಅಧಿಕಾರ ಚಲಾಯಿಸುವ ಸಮಾನ ಹಕ್ಕು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಂವಿಧಾನ ನೀಡಿದೆ. ಹೀಗಾಗಿ ರಾಜ್ಯ ಸರ್ಕಾರಗಳು ಈ ಅಧಿಕಾರವನ್ನು ಬಳಸಿಕೊಂಡು ಕೇಂದ್ರ ವಿಧಿಸಿದ ದಂಡದ ದರಕ್ಕಿಂತ ಕಡಿಮೆ ದರವನ್ನು ವಿಧಿಸುತ್ತಿದೆ. ಇದನ್ನೂ ಓದಿ: ನಾಯಕರ ‘ದಂಡ’ಯಾತ್ರೆ – ಟ್ರಾಫಿಕ್ ನಿಯಮಕ್ಕೆ ಸಿಎಂ ಡೋಂಟ್‍ಕೇರ್

Traffic fine Gujarat

ಕೆಂದ್ರಕ್ಕೆ ಸಿಟ್ಟು?
ಬಿಜೆಪಿ ರಾಜ್ಯಗಳೇ ಈಗ ದಂಡದ ದರ ಇಳಿಸುತ್ತಿರುವ ವಿಚಾರ ಕೇಂದ್ರದ ಸಿಟ್ಟಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ. ಒಂದೊಂದು ರಾಜ್ಯ ಸರ್ಕಾರಗಳು ಒಂದೊಂದು ದರವನ್ನು ನಿಗದಿ ಪಡಿಸಿದರೆ ಕಾಯ್ದೆಯ ಮೂಲ ಸ್ವರೂಪವೇ ಬದಲಾಗುತ್ತದೆ. ಹೀಗಾಗಿ ಕಾನೂನು ಸಚಿವಾಲಯದ ಮೊರೆ ಹೋಗಿದೆ. ಆದರೆ ಅನಿವಾರ್ಯ ಸಂದರ್ಭದಲ್ಲಿ ರಾಜ್ಯಗಳ ಆದೇಶದ ವಿರುದ್ಧ ಕೇಂದ್ರದ್ದೇ ಮೇಲುಗೈ ಆಗಲಿದ್ದು ಅಂತಿಮವಾಗಿ ಕೇಂದ್ರ ಸರ್ಕಾರದ ಆದೇಶವನ್ನೇ ಪಾಲಿಸಬೇಕಾಗುತ್ತದೆ.

ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಮಹಾರಾಷ್ಟ್ರ ಸರ್ಕಾರ ದಂಡದ ಮೊತ್ತ ಇಳಿಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿದೆ.

dvg traffic fine 1

ಜೀವ ಮುಖ್ಯವಲ್ಲವೇ?
ದೇಶದಲ್ಲಿ ಪ್ರತಿ ವರ್ಷ 1.5 ಲಕ್ಷ ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ. ಇದರಲ್ಲಿ ಶೇ.65 ರಷ್ಟು 18-35 ವಯಸ್ಸಿನವರೇ ಇದ್ದಾರೆ. ಅಷ್ಟೇ ಅಲ್ಲದೆ ಪ್ರತಿ ವರ್ಷ 2 ಲಕ್ಷ ಜನರು ರಸ್ತೆ ಅಪಘಾತಗಳಿಂದ ಅಂಗವಿಕಲರಾಗುತ್ತಿದ್ದಾರೆ. ಹೀಗಾಗಿ ಕಠಿಣ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ಗಡ್ಕರಿ ಸಮರ್ಥಿಸಿಕೊಂಡಿದ್ದಾರೆ.

ದಂಡದ ಮೊತ್ತ ದುಬಾರಿ ಆಗಿಲ್ಲವೇ ಎಂದು ಮಾಧ್ಯಮಗಳು ಪ್ರಶ್ನಿಸಿದ್ದಕ್ಕೆ ಜೀವಕ್ಕಿಂತ ಹಣ ಮುಖ್ಯವೇ ಎಂದು ಮರು ಪ್ರಶ್ನೆ ಹಾಕಿದ ಗಡ್ಕರಿ, ಯುವಕರನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಲು ಹಾಗೂ ಅಪಘಾತದಿಂದ ಅಂಗವಿಕಲತೆಗೆ ತುತ್ತಾಗುವುದನ್ನು ತಪ್ಪಿಸುವ ಉದ್ದೇಶದಿಂದ ಹೊಸ ಟ್ರಾಫಿಕ್ ದಂಡವನ್ನು ಜಾರಿಗೆ ತರಲಾಗಿದೆ. ದಂಡವನ್ನು ಯಾವ ರೀತಿ ಅಳವಡಿಸಿಕೊಳ್ಳಬೇಕು ಎನ್ನುವುದು ಆಯಾ ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರವಾಗಿದೆ. ಸಂಗ್ರಹವಾದ ದಂಡದ ಮೊತ್ತವು ರಾಜ್ಯ ಸರ್ಕಾರಕ್ಕೆ ಹೋಗುತ್ತದೆ. ಟ್ರಾಫಿಕ್ ದಂಡ ಏರಿಕೆ ಉದ್ದೇಶ ಜನರ ಜೀವ ರಕ್ಷಣೆಗಾಗಿಯೇ ಹೊರತು ಸರ್ಕಾರಕ್ಕೆ ಆದಾಯ ತರುವುದಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮದ್ಯ ಸೇವಿಸಿ ಕಾರು ಓಡಿಸಿ ಆಟೋಗೆ ಡಿಕ್ಕಿ ಹೊಡೆದ ಆರ್‌ಟಿಓ ಇನ್ಸ್‌ಪೆಕ್ಟರ್

NITHIN GADKARI

ಸಂಚಾರ ನಿಯಮ ಉಲ್ಲಂಘಿಸುವ ಚಾಲಕರು, ಸವಾರರಿಗೆ 30 ವರ್ಷಗಳ ಹಿಂದೆ 100 ರೂ. ದಂಡ ವಿಧಿಸಲಾಗುತ್ತಿತ್ತು. ಆಗ 100 ರೂ.ಗೆ ಇದ್ದ ಮೌಲ್ಯವು ಈಗ ಎಷ್ಟಾಗಬಹುದು ನೀವೇ ಯೋಚನೆ ಮಾಡಿ. ಸಂಚಾರ ನಿಮಯವನ್ನು ಸರಿಯಾಗಿ ಜನರು ಪಾಲಿಸಿದರೆ ಯಾವುದೇ ದಂಡ ಪಾವತಿಸುವ ಅಗತ್ಯವಿರಲ್ಲ. ಟ್ರಾಫಿಕ್ ನಿಯಮ ಉಲ್ಲಂಘನೆಗೆ ವಿಧಿಸುತ್ತಿದ್ದ ದಂಡದ ಮೊತ್ತವು ಹೆಚ್ಚಾದ ಬಳಿಕ ಅನೇಕ ಬದಲಾವಣೆಗಳಾಗಿವೆ. ಅನೇಕರು ಲೈಸನ್ಸ್, ಹೆಲ್ಮೆಟ್ ಪಡೆಯುತ್ತಿದ್ದಾರೆ. ತಮ್ಮ ವಾಹನಗಳ ದಾಖಲೆಗಳನ್ನು ಸರಿ ಮಾಡಿಕೊಳ್ಳುತ್ತಿದ್ದಾರೆ ಎಂದು ಸರ್ಕಾರದ ನಡೆಯನ್ನು ಸಮರ್ಥಿಸಿದ್ದಾರೆ.

TAGGED:lawLegalnitin gadkariRoad MinistryTraffic Fineಕಾನೂನು ಸಚಿವಾಲಯದಂಡನಿತಿನ್ ಗಡ್ಕರಿಸಂಚಾರಸಂಚಾರ ನಿಯಮಸಾರಿಗೆ ಇಲಾಖೆ ಟ್ರಾಫಿಕ್
Share This Article
Facebook Whatsapp Whatsapp Telegram

Cinema news

Chaitra Kundapura Ashwini Gowda 1
ಸೋಶಿಯಲ್‌ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್‌ ವಾರ್‌!
Cinema Latest Sandalwood Top Stories
Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post
Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories

You Might Also Like

Congress Women MPs near PM Modis chair chaos Rijiju shares video of Feb 4 Parliament face off
Latest

ಪ್ರಧಾನಿ ಕುರ್ಚಿ ಬಳಿ ಕೈ ಮಹಿಳಾ ಸದಸ್ಯರ ಪ್ರತಿಭಟನೆಯ ವಿಡಿಯೋ ಬಿಡುಗಡೆ – ಕಿರಣ್‌ ರಿಜುಜು ಆಕ್ರೋಶ

Public TV
By Public TV
48 seconds ago
Dharmasthala Padayatra 2
Chikkamagaluru

ಚಾರ್ಮಾಡಿ ದಟ್ಟಡವಿ ಮಧ್ಯೆ ಆನೆ, ಅಪಘಾತದ ಆತಂಕದಲ್ಲಿ ಮಂಜುನಾಥನ ಭಕ್ತರ ಪಾದಯಾತ್ರೆ!

Public TV
By Public TV
2 hours ago
DK Shivakumar 7
Bengaluru City

ಕದ್ದುಮುಚ್ಚಿ ಮಾತನಾಡಿಲ್ಲ, ನಾನು ಸಿಎಂ ಏನು ಮಾತನಾಡಿದ್ದೇವೆ ಅನ್ನೋದು ಗೊತ್ತಿದೆ: ಡಿಕೆಶಿ

Public TV
By Public TV
2 hours ago
Davanagere Father Burns Daughters Books
Crime

ಶಾಲೆಗೆ ಹೋಗಬೇಡ ಎಂದು ಪುಸ್ತಕ ಸುಟ್ಟು ಹಾಕಿದ ತಂದೆ – ಪೊಲೀಸರಿಗೆ ದೂರು ನೀಡಿದ ಮಗಳು

Public TV
By Public TV
3 hours ago
Vidhana Soudha
Bengaluru City

Exclusive | ಶಕ್ತಿಸೌಧ ವಿಧಾನಸೌಧದಲ್ಲೇ 300 ಗ್ರಾಂ ಚಿನ್ನಾಭರಣ , 1.5 ಲಕ್ಷ ರೂ. ಕಳ್ಳತನ!

Public TV
By Public TV
3 hours ago
Bidar Inscription Sculptures Found
Bidar

ಬೀದರ್‌ನಲ್ಲೂ ಪ್ರಾಚೀನ ಶಿಲಾಶಾಸನ, ಸರ್ಪರೂಪದ ಶಿಲ್ಪಗಳು ಪತ್ತೆ – ಸಂಶೋಧನೆ ಮಾಡುವಂತೆ ಸರ್ಕಾರಕ್ಕೆ ಆಗ್ರಹ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?