Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಕ್ಕಲಿಗರಿಗೆ ಜಮೀನು ಹೆಚ್ಚಿರುತ್ತದೆ, ಮೌಲ್ಯ ಹೆಚ್ಚಾಗಿದ್ದರಿಂದ ಅಕ್ರಮ ಹೇಗಾಗುತ್ತೆ – ಸಿಂಘ್ವಿ ವಾದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಒಕ್ಕಲಿಗರಿಗೆ ಜಮೀನು ಹೆಚ್ಚಿರುತ್ತದೆ, ಮೌಲ್ಯ ಹೆಚ್ಚಾಗಿದ್ದರಿಂದ ಅಕ್ರಮ ಹೇಗಾಗುತ್ತೆ – ಸಿಂಘ್ವಿ ವಾದ

Bengaluru City

ಒಕ್ಕಲಿಗರಿಗೆ ಜಮೀನು ಹೆಚ್ಚಿರುತ್ತದೆ, ಮೌಲ್ಯ ಹೆಚ್ಚಾಗಿದ್ದರಿಂದ ಅಕ್ರಮ ಹೇಗಾಗುತ್ತೆ – ಸಿಂಘ್ವಿ ವಾದ

Public TV
Last updated: September 18, 2019 5:31 pm
Public TV
Share
2 Min Read
DK Shivakumar 2
SHARE

ನವದೆಹಲಿ: ನ್ಯಾಯಾಂಗ ಬಂಧನದಲ್ಲಿರುವ ಡಿಕೆ ಶಿವಕುಮಾರ್ ಜಾಮೀನು ಅರ್ಜಿಯ ವಿಚಾರಣೆ ಗುರುವಾರಕ್ಕೆ ಮುಂದೂಡಿಕೆಯಾಗಿದೆ.

ಇಂದು ಮಧ್ಯಾಹ್ನ 3.30ಕ್ಕೆ ರೋಸ್ ಅವೆನ್ಯೂ ನ್ಯಾಯಾಲಯ ಸಮುಚ್ಚಯದ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗಬೇಕಿತ್ತು. ಆದರೆ ಇಡಿ ಪರ ವಕೀಲ ಹೆಚ್ಚುವರಿ ಸಾಲಿಸಿಟರ್ ಜನರಲ್ ನಟರಾಜ್ ಸರಿಯಾದ ಸಮಯಕ್ಕೆ ಆಗಮಿಸಿರಲಿಲ್ಲ. ಕೊನೆಗೆ ನಟರಾಜ್ ಗೈರಲ್ಲಿ ಮಧ್ಯಾಹ್ನ 3.45ಕ್ಕೆ ಜಾಮೀನು ಅರ್ಜಿಯ ವಿಚಾರಣೆ ಆರಂಭವಾಯಿತು.

ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿ, ಮಗಳು ಐಶ್ವರ್ಯ ಹೆಸರಿನಲ್ಲಿರುವ 108 ಕೋಟಿ ಆಸ್ತಿ ಸಾಲದಲ್ಲಿದೆ. ಸ್ನೇಹಿತರ ಜೊತೆ ಬ್ಯಾಂಕ್ ಗಳು ಇದಕ್ಕೆ ಸಾಲ ನೀಡಿವೆ. ಇದನ್ನು ಅಕ್ರಮ ಹಣ ಎಂದು ಹೇಗೆ ಹೇಳುತ್ತೀರಿ. ಚುನಾವಣಾ ಆಯೋಗಕ್ಕೆ ಶಿವಕುಮಾರ್ ಈ ಎಲ್ಲ ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ತಪ್ಪು ಮಾಹಿತಿ ನೀಡಿದರೆ ಶಾಸಕ ಸ್ಥಾನದಿಂದ ಅನರ್ಹರಾಗುತ್ತಾರೆ. ಮಾರುಕಟ್ಟೆ ಮೌಲ್ಯ ಹೆಚ್ಚಳವಾದ ಹಿನ್ನೆಲೆಯಲ್ಲಿ ಆಸ್ತಿ ಮೌಲ್ಯ ಹೆಚ್ಚಾಗಿದೆ ಎಂದು ಕೋರ್ಟ್ ಗಮನಕ್ಕೆ ತಂದರು.

vlcsnap 2019 09 18 17h18m48s133

ಶಿವಕುಮಾರ್ ಒಕ್ಕಲಿಗ ಸಮುದಾಯದವರಾಗಿದ್ದು, ಕರ್ನಾಟಕದಲ್ಲಿ ಸಾಧಾರಣವಾಗಿ ಒಕ್ಕಲಿಗರಿಗೆ ಜಮೀನು ಹೆಚ್ಚಾಗಿರುತ್ತದೆ. ಒಕ್ಕಲಿಗರಿಗೆ ಕೃಷಿಯೇ ಪ್ರಧಾನವಾದ ಉದ್ಯೋಗವಾಗಿದೆ. ಈ ಕಾರಣಕ್ಕೆ ಕೃಷಿ ಆದಾಯ ಹೆಚ್ಚಿದ್ದು, ಜಮೀನು ಮೌಲ್ಯ ಹೆಚ್ಚಾಗುತ್ತಾ ಹೋಗುತ್ತದೆ. ಇದನ್ನು ಅಕ್ರಮ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಈ ವೇಳೆ ದೆಹಲಿ ಸುತ್ತಮುತ್ತಲಿನ ಪ್ರದೇಶಗಳ ಮೌಲ್ಯಗಳ ಹೆಚ್ಚಳದ ಬಗ್ಗೆ ಉದಾಹರಣೆ ನೀಡಿದ ಅವರು ಮೊದಲು ಮೌಲ್ಯ ಲಕ್ಷದಲ್ಲಿತ್ತು. ಆಮೇಲೆ 8 ಕೋಟಿಗೆ ಏರಿಕೆ ಆಗಿದ್ದು, ಇನ್ನು ಮತ್ತಷ್ಟು ಏರಿಕೆ ಆಗಬಹುದು ಎಂದು ತಿಳಿಸಿದರು.

ಶರ್ಮಾ ಟ್ರಾವೆಲ್ಸ್ 50 ವರ್ಷದ ಹಳೆಯದಾಗಿದ್ದು, ಶರ್ಮಾ ಅವರ ಸಾವಿನ ಬಳಿಕ ಸುನೀಲ್ ಶರ್ಮಾ ವ್ಯವಹಾರ ನಡೆಸುತ್ತಿದ್ದಾರೆ. ಸುನಿಲ್ ಶರ್ಮಾ ಅವರ ಚಾಲಕ ರಾಜೇಂದ್ರ ಮನೆಗೆ ದಾಳಿಯಾದಾಗ ಸಿಕ್ಕಿದ ಡೈರಿಯಲ್ಲಿ ಅಂಕಿ ಅಂಶ ಸಿಕ್ಕಿರಬಹುದು. ಆದರೆ ಆ ಡೈರಿಯಲ್ಲಿ ಉಲ್ಲೇಖಿಸಲಾದ ಹಣ ಅಕ್ರಮಲ್ಲ. ಶರ್ಮಾ ಅವರ ಬಳಿ 150-200 ಬಸ್ಸುಗಳು ಇದೆ. ವ್ಯವಹಾರದ ರೂಪದಲ್ಲಿ ಬರೆಯಲಾದ ಅಂಕಿ ಸಂಖ್ಯೆಗಳನ್ನು ಡಿಕೆ ಶಿವಕುಮಾರ್ ಅವರ ಅಕ್ರಮ ಹಣ ಎಂದು ಪರಿಗಣಿಸಲು ಸಾಧ್ಯವಿಲ್ಲ. ಸಚಿನ್ ನಾರಾಯಣ್ ಮತ್ತು ಸುನಿಲ್ ಶರ್ಮಾ ಇಬ್ಬರೂ ತೆರಿಗೆ ಕಟ್ಟುತ್ತಾರೆ. ಸಚಿನ್ ನಾರಾಯಣ್ ಉದ್ಯಮಿಯಾಗಿ ಪ್ರಸಿದ್ಧಿ ಪಡೆದಿದ್ದು 30 ಮದ್ಯದ ಅಂಗಡಿಗಳಿವೆ ಎಂದು ತಿಳಿಸಿದರು.

vlcsnap 2019 09 18 17h19m52s7

ವಿಚಾರಣೆಗೆ ನಟರಾಜ್ ಅವರು ಗೈರಾದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಬೇಕೆಂದು ಇಡಿ ಪರ ವಕೀಲರು ಮನವಿ ಮಾಡಿದರು. ಈ ಮನವಿಗೆ ಆಕ್ಷೇಪ ವ್ಯಕ್ತಪಡಿಸಿದ ಸಿಂಘ್ವಿ ವಿಚಾರಣೆಯನ್ನು ಮುಂದೂಡಬಾರದು ಎಂದು ಕೇಳಿಕೊಂಡರು. ಕೊನೆಗೆ ನ್ಯಾ. ಅಜಯ್ ಕುಮಾರ್ ಕುಹಾರ್ ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು.

ವಿಚಾರಣೆ ಮುಂದೂಡಿದ ಬಳಿಕ 4.16ರ ವೇಳೆಗೆ ಕೋರ್ಟ್ ಹಾಲ್ ನತ್ತ ಇಡಿ ಪರ ವಕೀಲ ಕೆ.ಎಂ ನಟರಾಜ್ ಆಗಮಿಸಿದರು. ಈ ವೇಳೆ ವಿಚಾರಣೆ ಗುರುವಾರಕ್ಕೆ ಮುಂದೂಡಿಕೆಯಾದ ವಿಚಾರವನ್ನು ಇಡಿ ಅಧಿಕಾರಿಗಳು ನಟರಾಜ್ ಅವರಿಗೆ ತಿಳಿಸಿದರು.

ನಿನ್ನೆ ನ್ಯಾ. ಅಜಯ್ ಕುಮಾರ್ ಕುಹಾರ್ ಅವರು ಡಿಕೆ ಶಿವಕುಮಾರ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿದ್ದರು. ತಮ್ಮ ಆದೇಶದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಡಿಕೆ ಶಿವಕುಮಾರ್ ಅವರಿಗೆ ಕೂಡಲೇ ಆರ್‍ಎಂಎಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಬೇಕು. ವೈದ್ಯರು ಗುಣಮುಖರಾಗಿದ್ದಾರೆ ಎಂದು ತಿಳಿಸಿದರೆ ಶಿವಕುಮಾರ್ ಅವರನ್ನು ತಿಹಾರ್ ಜೈಲಿಗೆ ಕಳುಹಿಸಬಹುದು ಎಂದು ಸೂಚಿಸಿದ್ದರು.

TAGGED:AishwaryabailcourtDK Shivakumarenforcement directorateSupreme Courtಐಶ್ವರ್ಯಾಕೋರ್ಟ್ಜಾಮೀನುಜಾರಿ ನಿರ್ದೇಶನಾಲಯಡಿಕೆ ಶಿವಕುಮಾರ್ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
52 minutes ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
1 hour ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
2 hours ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
2 hours ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
2 hours ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?