Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಹಿರಿಯರ ಮಾತಿಗೆ ಬೆಲೆ ಕೊಡಿ- ಸ್ಟಾರ್ ವಾರ್‌ಗೆ ಹ್ಯಾಟ್ರಿಕ್ ಹೀರೋ ಕಿಡಿ

Public TV
Last updated: September 18, 2019 9:38 pm
Public TV
Share
3 Min Read
Shiva Rajkumar A
SHARE

– ‘ಪೈಲ್ವಾನ್’ ಸಿನಿಮಾ ಸೂಪರ್ ಮೇಕಿಂಗ್ ಅಂದ್ರು ಶಿವಣ್ಣ
– ಕುಟುಂಬದಲ್ಲಿ ಒಂದಾಗಿರೋದನ್ನು ಕಲಿಬೇಕು

ಬೆಂಗಳೂರು: ಬಾಕ್ಸ್ ಆಫೀಸ್ ಭಾರೀ ಸದ್ದು ಮಾಡುತ್ತಿರುವ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾವ್’ ಸಿನಿಮಾದ ಬಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಗರದ ಒರಾಯನ್ ಮಾಲ್‍ನಲ್ಲಿ ‘ಪೈಲ್ವಾನ್’ ಸಿನಿಮಾ ವೀಕ್ಷಿಸಿ ಮಾತನಾಡಿದ ಶಿವಣ್ಣ, ಪೈಲ್ವಾನ್ ಸಿನಿಮಾ ಮೇಕಿಂಗ್ ತುಂಬಾ ಚೆನ್ನಾಗಿದೆ. ಸಂಸ್ಕೃತಿಯನ್ನು ಉತ್ತಮವಾಗಿ ಬಿಂಬಿಸಲಾಗಿದೆ. ಸುದೀಪ್ ಅಭಿನಯ ಅದ್ಭುತವಾಗಿದ್ದು, ಪಾತ್ರಕ್ಕೆ ತಕ್ಕಂತೆ ಮೈಕಟ್ಟು ಬೆಳೆಸಿಕೊಂಡಿದ್ದಾರೆ. ನಿರ್ದೇಶಕ ಎಸ್.ಕೃಷ್ಣ ಅವರು ಕೂಡ ಉತ್ತಮ ಸಿನಿಮಾವನ್ನು ಪ್ರೇಕ್ಷಕರಿಗೆ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಸೈಬರ್ ಕ್ರೈಂಗೆ ಪೈಲ್ವಾನ್ ಚಿತ್ರತಂಡ ದೂರು

pailwaan

ಎಸ್.ಕೃಷ್ಣ ಅವರು ‘ಕಡ್ಡಿಪುಡಿ’ ಸಿನಿಮಾದಲ್ಲಿ ಕ್ಯಾಮೆರಾಮೆನ್ ಆಗಿ ನನ್ನ ಜೊತೆಗೆ ಕೆಲಸ ಮಾಡಿದ್ದರು. ಆದರೆ ಈಗ ಉತ್ತಮ ನಿರ್ದೇಶಕರಾಗಿ ಬೆಳೆಯುತ್ತಿದ್ದಾರೆ. ಅವರ ಮೊದಲ ಸಿನಿಮಾ ‘ಗಜಕೇಸರಿ’ ಹಾಗೂ ಎರಡನೇ ಸಿನಿಮಾ ಹೆಬ್ಬುಲಿ ಅಭಿಮಾನಿಗಳ ಮನ ಗೆದ್ದಿವೆ. ಈಗ ಅವರ ಮೂರನೇ ಸಿನಿಮಾ ‘ಪೈಲ್ವಾನ್’ ಭರ್ಜರಿ ಸದ್ದು ಮಾಡುತ್ತಿದೆ. ಈ ಮೂಲಕ ತಾವು ಉತ್ತಮ ನಿರ್ದೇಶಕ ಎನ್ನುವುದನ್ನು ಕೃಷ್ಣ ಹಂತ ಹಂತವಾಗಿ ನಿರೂಪಿಸುತ್ತಾ ಬಂದಿದ್ದಾರೆ ಎಂದು ನಿರ್ದೇಶಕರ ಬೆನ್ನು ತಟ್ಟಿದರು. ಇದನ್ನೂ ಓದಿ: ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು ಬರದಿರಿ: ದರ್ಶನ್

ಸ್ಟಾರ್ ವಾರ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಶಿವಣ್ಣ ಅವರು, ಕುಟುಂಬದಲ್ಲಿ ಒಬ್ಬರಾಗಿ ಇರಬೇಕು. ನಾನು ದೊಡ್ಡವನು, ಅವರು ದೊಡ್ಡವರು ಎನ್ನುವುದು ಸರಿಯಲ್ಲ. ಕನ್ನಡ ಚಿತ್ರರಂಗದಲ್ಲಿ ಉತ್ತಮ ಸಿನಿಮಾ ಬಂದಾಗ ಮೆಚ್ಚುಗೆ ವ್ಯಕ್ತಪಡಿಸಬೇಕೇ ಹೊರತು ಹೊಟ್ಟೆಕಿಚ್ಚು ಪಡಬಾರದು. ಒಬ್ಬರಿಗೆ ಒಬ್ಬರು ಟಾಂಗ್ ಕೊಡುವುದು ಸರಿಯಲ್ಲ. ಹಿರಿಯನಾಗಿ ಒಂದು ಮಾತು ಹೇಳುತ್ತೇನೆ. ಸರಿಯಾಗಿದ್ದರೆ ಸ್ವೀಕರಿಸಿ, ಹಿರಿಯರ ಮಾತಿಗೆ ಬೆಲೆ ಕೊಡಿ ಎಂದರು.

Shiva Rajkumar

ಸಿನಿಮಾ ಪೈರಸಿ ಮಾಡುವುದು ಉತ್ತಮ ನಡೆಯಲ್ಲ. ಹೀಗೆ ಮಾಡಿದವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಬೇಕು. ನಿರ್ಮಾಪಕರು ಪ್ರಕರಣ ದಾಖಲಿಸಿ, ತನಿಖೆಗೆ ಒತ್ತಾಯಿಸಬೇಕು ಎಂದು ತಿಳಿಸಿದರು.

ಪೈಲ್ವಾನ್ ಸಿನಿಮಾದಲ್ಲಿ ಸುದೀಪ್ ನಟಿ ಆಕಾಂಕ್ಷಾ ಸಿಂಗ್ ಅವರನ್ನು ಪ್ರೀತಿಸಿ ಪೋಷಕರ ವಿರೋಧದ ನಡುವೆ ಮದುವೆಯಾಗುತ್ತಾರೆ. ಆಗ ನಟಿಯ ತಂದೆ ಅವಿನಾಶ್ ಅವರು ತುಂಬಾ ನೋವನ್ನು ವ್ಯಕ್ತಪಡಿಸುತ್ತಾರೆ. ಈ ಸನ್ನಿವೇಶದ ಕುರಿತು ಪ್ರತಿಕ್ರಿಯೆ ನೀಡಿದ ಶಿವಣ್ಣ ಅವರು, ಹೆಣ್ಣು ಮಕ್ಕಳು ಇದ್ದವರಿಗೆ ಆ ನೋವು ಏನು ಅಂತ ತಿಳಿಯುತ್ತದೆ. ನನಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಅಣ್ಣ, ತಾಯಿ, ತಂದೆ ಯಾರೇ ಆಗಿದ್ದರೂ ಅವರಿಗೆ ಹೆಣ್ಣು ಮಕ್ಕಳು ಅಂದ್ರೆ ಅತ್ಯಮೂಲ್ಯ ಸಂಬಂಧ. ನಾನು ನಟಿಸಿದ ‘ತವರಿಗೆ ಬಾ ತಂಗಿ’, ‘ಜೋಗಿ’ ಅಂತಹ ಸಿನಿಮಾಗಳಲ್ಲಿ ಹೆಣ್ಣಿನ ಭಾವನೆಗಳಿವೆ. ಇಂತಹ ಸಿನಿಮಾಗಳು ಪ್ರೇಕ್ಷಕರ ಮನ ಗೆಲ್ಲುತ್ತವೆ ಎಂದು ತಿಳಿಸಿದರು.

Pailwan F

ನಟನಿಗೆ ವಯಸ್ಸು ಮುಖ್ಯವಲ್ಲ. ಪಾತ್ರಕ್ಕೆ ತಕ್ಕಂತೆ ಬದಲಾಗುವ ಪವರ್ ಇರಬೇಕು. ಇಂತಹ ಬದಲಾವಣೆ ನನ್ನಿಂದ ಆಗಿದೆ ಎಂದು ಹೇಳುವುದು ಸರಿಯಲ್ಲ. ‘ಭಜರಂಗಿ’ ಸಿನಿಮಾದಲ್ಲಿ ಕೊನೆಯ ಸೀನ್‍ನಲ್ಲಿ ಮೈಕಟ್ಟು ತೋರಿಸಿದ್ದೇನೆ. ಅಗತ್ಯವಿರುವ ಸೀನ್‍ಗಳಲ್ಲಿ ಮಾತ್ರ ಮೈಕಟ್ಟು ತೋರಿಸಬೇಕು. ಕಿಚ್ಚ ಸುದೀಪ್ ಹಾಗೂ ದುನಿಯಾ ವಿಜಯ್ ಅವರು ಕೂಡ ತಮ್ಮ ಸಿನಿಮಾಗೆ ತಕ್ಕಂತೆ ಮೈಕಟ್ಟು ಬೆಳೆಸಿಕೊಳ್ಳಲು ಹಾರ್ಡ್ ವರ್ಕೌಟ್ ಮಾಡುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪೈಲ್ವಾನ್ ರೀತಿಯ ಚಿತ್ರಕಥೆ ಬಂದರೆ ಖಂಡಿತ ನಟಿಸುತ್ತೇನೆ. ನಾನು ಫಿಟ್ ಆಗಿರಲು ಬಯಸುತ್ತೇನೆ. ನನಗೆ ಶಸ್ತ್ರಚಿಕಿತ್ಸೆ ಆಗಿದ್ದರೂ ವರ್ಕೌಟ್ ಆರಂಭಿಸಿದ ನಾಲ್ಕು ದಿನಕ್ಕೆ ವೇಟ್ ಲಿಫ್ಟ್ ಮಾಡಲು ಆರಂಭಿಸಿದೆ. ಇಂತಹ ಅದ್ಭುತ ಸಿನಿಮಾ ಮಾಡಲು ನಿರ್ದೇಶಕ ಕೃಷ್ಣ ಹೆಚ್ಚು ಶ್ರಮಪಟ್ಟಿದ್ದಾರೆ ಎಂದು ತಿಳಿಸಿದರು.

TAGGED:kichcha SudeepaPailwanPublic TVShivarajKumarStar warನಿರ್ದೇಶಕ ಎಸ್.ಕೃಷ್ಣಪಬ್ಲಿಕ್ ಟಿವಿಪೈಲ್ವಾನ್ಶಿವರಾಜ್‍ಕುಮಾರ್
Share This Article
Facebook Whatsapp Whatsapp Telegram

Cinema news

ashwini gowda
ʻನನ್ ತಲೇಲಿ ಬುದ್ಧಿ ಇಲ್ಲ’ ಹೇಳಲು ಅಶ್ವಿನಿ ಒಪ್ಪಲ್ಲ!
Cinema Latest TV Shows
Bigg Boss
ಗಿಲ್ಲಿ ಜೊತೆ ಕಿರಿಕ್ ಮಾಡ್ಕೊಂಡ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳು
Cinema Latest Sandalwood Top Stories
Sathish Ninasam 2
ʻಏಳೋ ಏಳೋ ಮಾದೇವʼ ಸಾಂಗ್ – ಸತೀಶ್ ನೀನಾಸಂ ಸೂಪರ್
Cinema Latest Sandalwood
Mango Pachcha
ಮ್ಯಾಂಗೋ ಪಚ್ಚನ ಹಸ್ರವ್ವ ಹಾಡು ರಿಲೀಸ್ : ಕಿಚ್ಚನ ಅಳಿಯನ ಸಿನಿಮಾ
Cinema Latest Sandalwood Top Stories

You Might Also Like

Imran Khan
Latest

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಹತ್ಯೆ ವದಂತಿ

Public TV
By Public TV
1 minute ago
Muruga Mutt Seer
Chitradurga

ಈಗ ಮಾತನಾಡುವ ಸಂದರ್ಭ ಕಡಿಮೆಯಿದೆ – ಖುಲಾಸೆಯಾದ ಬಳಿಕ ಮುರುಘಾ ಶ್ರೀ ಪ್ರತಿಕ್ರಿಯೆ

Public TV
By Public TV
21 minutes ago
Shivamurthy Murugha Sharana Aide Jithendra
Chitradurga

ಮುರುಘಾ ಶ್ರೀಗಳು ಗಂಗೆಯಷ್ಟೇ ಪವಿತ್ರ: ಆಪ್ತ ಜಿತೇಂದ್ರ ರಿಯಾಕ್ಷನ್

Public TV
By Public TV
44 minutes ago
Odanadi Parashu
Chitradurga

ಆರೋಪಿಗಳನ್ನು ರಕ್ಷಿಸಲು ತನಿಖಾಧಿಕಾರಿಗಳು ಸರಿಯಾದ ದಾಖಲೆ ಸಲ್ಲಿಸಿರಲಿಲ್ಲ: ಒಡನಾಡಿ ಪರಶು

Public TV
By Public TV
1 hour ago
MURUGHA SHREE
Chitradurga

ಪೋಕ್ಸೋ ಪ್ರಕರಣದಲ್ಲಿ ಬಿಗ್‌ ರಿಲೀಫ್‌ – ಮುರುಘಾ ಶ್ರೀ ನಿರ್ದೋಷಿ

Public TV
By Public TV
1 hour ago
Gautam Gambhir
Cricket

ಭಾರತೀಯ ಕ್ರಿಕೆಟ್‌ ಮುಖ್ಯ, ನಾನಲ್ಲ – ಕೋಚ್‌ ಹುದ್ದೆಗೆ ಗುಡ್‌ ಬೈ ಹೇಳ್ತಾರಾ ಗಂಭೀರ್‌?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?