18 ತಿಂಗಳ ನಂತರ ಮತ ಭಿಕ್ಷೆ: ಕೋಡಿಹಳ್ಳಿ ಶ್ರೀ ಭವಿಷ್ಯ

Public TV
1 Min Read
Kodihalli Shree2

ಹಾವೇರಿ: 18 ತಿಂಗಳ ನಂತರ ಮತ ಭಿಕ್ಷೆ ಎಂದು ನಾನು ಚುನಾವಣೆ ಪೂರ್ವದಲ್ಲಿ ಹೇಳಿದ್ದೆ. ಈಗ 14, 15 ತಿಂಗಳು ಮುಗಿದಿದೆ, ಇನ್ನೂ ಮೂರು ನಾಲ್ಕು ತಿಂಗಳು ಕಾದು ನೋಡಿ ಎಂದು ಕೋಡಿಹಳ್ಳಿ ಮಠದ ಶ್ರೀ ಭವಿಷ್ಯ ಹೇಳಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಬಿಎಸ್‍ವೈ ಸರ್ಕಾರದ ಪತನದ ಮುನ್ಸೂಚನೆ ನೀಡಿದ್ದಾರೆ. ಮಧ್ಯಂತರ ಚುನಾವಣೆ ಸನಿಹ ಬಂದಿದೆ ಎಂಬ ವಿಚಾರ ಕೇಳಿದಾಗ ಮೈತ್ರಿ ಸರ್ಕಾರ 14 ತಿಂಗಳಿಗೆ ಪತನವಾಗಿದೆ. ಇನ್ನೂ ಕಾಲಾವಕಾಶ ಇದೆ ಕಾದು ನೋಡಿ ಎಂದರು.

CM BSY C

ಇದೇ ವೇಳೆ ಅನರ್ಹ ಶಾಸಕರ ಬಗ್ಗೆ ಕೇಳಿದಾಗ, ಆದರ ಬಗ್ಗೆ ಹೇಳಿದರೆ ದೈವತ್ವದ ಬೆಲೆ ಇಲ್ಲದಾಗುತ್ತೆ. ದೇವರು, ಧರ್ಮ ಹೇಳಬಹುದು. ರಾಜಕೀಯ ಏನು ಮಾಡೋಕೆ ಹೇಳೋದು ಎಂದರು. ದೇಶದಲ್ಲಿ ದಾಯಾದಿಗಳ ಕಲಹ ಮೊದಲಿನಿಂದಲೂ ನಡೆಯುತ್ತಲೇ ಬಂದಿದೆ. ಅದರಂತೆ ಭಾರತ-ಪಾಕ್ ಯುದ್ಧೋನ್ಮಾದ, ಯುದ್ಧ ಮುಂದುವರಿಯುತ್ತದೆ ಎಂದು ಶ್ರೀಗಳು ಭವಿಷ್ಯ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *