Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನರ್ಹರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ: ಸಂಜೀವ್‍ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅನರ್ಹರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ: ಸಂಜೀವ್‍ ಕುಮಾರ್

Bengaluru City

ಅನರ್ಹರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ: ಸಂಜೀವ್‍ ಕುಮಾರ್

Public TV
Last updated: September 21, 2019 4:38 pm
Public TV
Share
2 Min Read
Sanjeev Kumar
SHARE

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ ಮಾಡುತ್ತಿದಂತೆ ರಾಜ್ಯ ಚುನಾವಣಾ ಆಯೋಗ ಮುಖ್ಯಸ್ಥ ಸಂಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಉಪಚುನಾವಣೆಯ ಕುರಿತು ಹೆಚ್ಚಿನ ಮಾಹಿತಿ ನೀಡಿದ್ದಾರೆ.

ಈಗಾಗಲೇ ಚುನಾವಣೆ ನಡೆಯಲಿರುವ ಕ್ಷೇತ್ರಗಳ ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. 24 ಗಂಟೆ ಒಳಗೆ ನಡೆಸಬೇಕಾದ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳುತ್ತಾರೆ. ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣಿಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆಆರ್ ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆಆರ್ ಪೇಟೆ, ಹುಣಸೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ ಎಂದು ತಿಳಿಸಿದರು. ಇದನ್ನು ಓದಿ: ಬೈ ಎಲೆಕ್ಷನ್ ಘೋಷಣೆ ಬೆನ್ನಲ್ಲೇ ಅನರ್ಹರ ಜೊತೆ ಬಿಎಸ್‍ವೈ ಮೀಟಿಂಗ್

rebel congress jds resigns B 1 1000x329 1 768x422 1

ಸೆ.23ರ ಸೋಮವಾರ ಅಧಿಸೂಚನೆ ಹೊರ ಬೀಳಲಿದ್ದು, ಸೆ.30 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲು ಕೊನೆ ದಿನವಾಗಿದೆ. ಅ.01 ನಾಮಪತ್ರ ಪರಿಶೀಲನೆ ನಡೆದರೆ, ಅ.3 ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ಅ.21 ಮತದಾನ, ಅ.24 ರಂದು ಫಲಿತಾಂಶ ಬರಲಿದೆ. ಅ.27 ವೇಳೆಗೆ ಚುನಾವಣಾ ಕಾರ್ಯ ಪೂರ್ಣಗೊಳ್ಳಲಿದೆ.

15 ಕ್ಷೇತ್ರಗಳ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಹಾಕುವ 7 ಸಾವಿರ ಮಂದಿ ಇದ್ದು, ಒಟ್ಟಾರೆ 37,49,047 ಮತದಾರರು ಭಾಗವಹಿಸಲಿದ್ದಾರೆ. 4,185 ಮತ ಕೇಂದ್ರಗಳು ಇರಲಿದೆ. ಚುನಾವಣೆಯಲ್ಲಿ 22,598 ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಇವರಿಗೆ ನೀಡಬೇಕಾದ ತರಬೇತಿಯನ್ನು ಶೀಘ್ರವೇ ನೀಡುತ್ತೇವೆ ಎಂದು ಆಯೋಗ ಮುಖ್ಯಸ್ಥರು ತಿಳಿಸಿದರು. ಇದನ್ನು ಓದಿ: ಅನರ್ಹರಿಗೆ ಬಿಗ್‍ಶಾಕ್ – ಅನರ್ಹ ಶಾಸಕರ ಮುಂದಿನ ಆಯ್ಕೆಗಳೇನು?

Sanjeev Kumar a

ಮಸ್ಕಿ ಹಾಗೂ ಆರ್.ಆರ್ ನಗರ ಚುನಾವಣೆ ಘೋಷನೆಯಾಗದಿರುವ ಪ್ರತಿಕ್ರಿಯೆ ನೀಡಿದ ಆಯೋಗದ ಮುಖ್ಯಸ್ಥರು, ಎರಡು ಕ್ಷೇತ್ರಗಳ ವಿಚಾರವಾಗಿ 2018 ರಲ್ಲಿ ತಕರಾರು ಅರ್ಜಿಗಳು ನ್ಯಾಯಾಲಯದಲ್ಲಿ ಬಾಕಿ ಇರುವುದರಿಂದ ಚುನಾವಣೆ ದಿನಾಂಕ ಘೋಷಣೆಯಾಗಿಲ್ಲ. ಒಂದೊಮ್ಮೆ ಸುಪ್ರೀಂ ಕೋರ್ಟಿನಿಂದ ಸ್ಪೀಕರ್ ಆದೇಶಕ್ಕೆ ತಡೆಯಾಜ್ಞೆ ಬಂದರೆ ಈಗಿನ ಚುನಾವಣಾ ವೇಳಾಪಟ್ಟಿಗೆ ಧಕ್ಕೆಯಾಗಲಿದೆ ಎಂಬ ಬಗ್ಗೆ ಯಾವುದೇ ಸ್ಪಷ್ಟನೆ ನೀಡಲಿಲ್ಲ. ಆದರೆ ಸ್ಪೀಕರ್ ಆದೇಶ ಚುನಾವಣೆಗೂ ಅನ್ವಯವಾಗುವ ಹಿನ್ನೆಲೆಯಲ್ಲಿ ಈ ಚುನಾವಣೆಯಲ್ಲಿ ಅನರ್ಹರಿಗೆ ಸ್ಪರ್ಧೆಗೆ ಅವಕಾಶವಿಲ್ಲ ಎಂದರು.

ಉಪಚುನಾವಣೆಯಲ್ಲಿ ಒ-3 ಇವಿಎಂ ಹಾಗೂ ವಿವಿ ಪ್ಯಾಟ್ ಬಳಕೆ ಮಾಡಲಾಗುತ್ತದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರದಲ್ಲಿ ಇವುಗಳನ್ನು ಬಳಕೆ ಮಾಡಲಾಗಿತ್ತು. ಈ ಬಾರಿ 8,370 ವಿವಿ ಪ್ಯಾಟ್ ಅಗತ್ಯವಿದ್ದು, ಬೇರೆ ಬೇರೆ ಜಿಲ್ಲೆಗಳಿಂದ ಇವುಗಳಿಂದ ಪಡೆಯಲಾಗುತ್ತಿದೆ ಎಂದು ಚುನಾವಣೆ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದರು.

ಇದೇ ವೇಳೆ ಚುನಾವಣೆ ನಡೆಯುವ ಪ್ರವಾಹ ಪೀಡಿತ ಕ್ಷೇತ್ರಗಳಿಗೆ ಭೇಟಿ ನೀಡಬಹುದು. ಆದರೆ ಸಚಿವರಿಗೆ ಹಾಗೂ ರಾಜಕೀಯ ಪ್ರತಿನಿಧಿಗಳಿಗೆ ಜಿಲ್ಲೆಯ ಕಾರ್ಯಕ್ರಮಗಳಿಗೆ ನೀತಿ ಸಂಹಿತೆ ಜಾರಿಯಾಗಲಿದೆ. ದಸರಾದಲ್ಲಿ ರಾಜಕೀಯ ವ್ಯಕ್ತಿಗಳಿಗೆ ಸ್ವಲ್ಪ ನಿಯಮಗಳು ಜಾರಿಯಾಗಲಿದೆ ಎಂದು ವಿವರಿಸಿದರು. ಇದನ್ನು ಓದಿ: ಕರ್ನಾಟಕದ 2 ಕ್ಷೇತ್ರಗಳಿಗೆ ಉಪಚುನಾವಣೆ ಇಲ್ಲ

TAGGED:ಅನರ್ಹ ಶಾಸಕರುಉಪಚುನಾವಣೆಪಬ್ಲಿಕ್ ಟಿವಿಬೆಂಗಳೂರುರಾಜ್ಯ ಚುನಾವಣಾ ಆಯೋಗ
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

Bomb threat to Davangere DCs residence
Crime

ದಾವಣಗೆರೆ ಡಿಸಿ ನಿವಾಸ ಸ್ಫೋಟಿಸೋದಾಗಿ 112ಕ್ಕೆ ಬೆದರಿಕೆ ಕರೆ!

Public TV
By Public TV
1 minute ago
nazima thimmaraju expelled from shivamogga congress
Crime

ಮಹಿಳೆಗೆ ಕೆಲಸ ಕೊಡಿಸೋದಾಗಿ 3 ಲಕ್ಷ ರೂ. ವಸೂಲಿ ಆರೋಪ – ಕಾಂಗ್ರೆಸ್‌ನಿಂದ ನಾಜಿಮಾ, ತಿಮ್ಮರಾಜು ಉಚ್ಚಾಟನೆ

Public TV
By Public TV
19 minutes ago
Khamenei Funeral
Latest

Khamenei Funeral | ಇಂದು ಮಧ್ಯರಾತ್ರಿ 12ರಿಂದ ಅಲಿ ಖಮೇನಿ ಅಂತ್ಯಕ್ರಿಯೆ ಪ್ರಕ್ರಿಯೆ ಆರಂಭ

Public TV
By Public TV
48 minutes ago
BY Vijayendra 1
Bengaluru City

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ

Public TV
By Public TV
1 hour ago
AI Image
Bengaluru City

ಪರೀಕ್ಷಾ ಭಯಕ್ಕೆ ಮನೆ ಬಿಟ್ಟ ಇಬ್ಬರು ವಿದ್ಯಾರ್ಥಿನಿಯರು – ಆಧಾರ್ ಇಟ್ಕೊಂಡು ಫ್ರೀ ಬಸ್‌ನಲ್ಲಿ ಊರೂರು ಸುತ್ತಾಟ

Public TV
By Public TV
1 hour ago
Israeli F 35 shoots down Iranian YAK 130 fighter jet
Latest

ಇರಾನ್‌ನ YAK-130 ಫೈಟರ್ ಜೆಟ್ ಹೊಡೆದುರುಳಿಸಿದ ಇಸ್ರೇಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?