Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ನಾನು ನಾಮಪತ್ರ ಕೊಟ್ಟು ಎಲ್ಲಿ ಕುಳಿತ್ರೂ ಕ್ಷೇತ್ರದ ಜನ ಗೆಲ್ಲಿಸ್ತಾರೆ- ರಮೇಶ್ ಜಾರಕಿಹೊಳಿ

Public TV
Last updated: September 22, 2019 11:30 am
Public TV
Share
3 Min Read
ramesh
SHARE

– ತಂದೆ-ತಾಯಿ ನೆನೆದು ರಮೇಶ್ ಭಾವುಕ

ಬೆಳಗಾವಿ: ರಾಜ್ಯದ 15 ಕ್ಷೇತ್ರಗಳಲ್ಲಿ ಉಪಚುನಾವಣೆಯ ದಿನಾಂಕ ಘೋಷಣೆಯಾಗಿದ್ದು ಇದೀಗ ಗೋಕಾಕ್ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅವರು, ನಾನು ನಾಮಪತ್ರ ಕೊಟ್ಟು ಎಲ್ಲಿ ಕುಳಿತರೂ ಜನ ನನ್ನನ್ನು ಗೆಲ್ಲಿಸುತ್ತಾರೆ. ಕ್ಷೇತ್ರದ ಜನ ನನ್ನ ಮೇಲೆ ಪ್ರೀತಿ ಇಟ್ಟಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜೀನಾಮೆ ಕೊಟ್ಟ ದಿನವೇ ಚುನಾವಣೆಗೆ ಸ್ಪರ್ಧೆ ಮಾಡಲು ಮಾನಸಿಕವಾಗಿ ಸಿದ್ಧನಾಗಿದ್ದೇನೆ. ಕಾನೂನು ಅಡಚಣೆ, ತಾಂತ್ರಿಕ ಸಮಸ್ಯೆ ಬಗ್ಗೆ ವಕೀಲರೊಂದಿಗೆ ಚರ್ಚೆ ಮಾಡುತ್ತೇವೆ. ಅನರ್ಹರು ಚುನಾವಣೆಗೆ ಸ್ಪರ್ಧಿಸಲು ಬರುವುದಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ, ಸ್ಪೀಕರ್ ಅವರ ಆದೇಶ ಓದಿ ಹೇಳಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆದೇಶ ಸುಪ್ರೀಂಕೋರ್ಟಿನಲ್ಲಿ ಒಂದು ತಾಸು ನಿಲ್ಲುವುದಿಲ್ಲ. ರಮೇಶ್ ಕುಮಾರ್ ಕಾನೂನು ಬಾಹಿರವಾಗಿ ಆದೇಶ ನೀಡಿದ್ದಾರೆ. ನೂರಕ್ಕೆ ನೂರರಷ್ಟು ಸುಪ್ರೀಂಕೋರ್ಟಿನಲ್ಲಿ ನಮಗೆ ಜಯ ಸಿಗುತ್ತದೆ. ನಾವೇ ನಮ್ಮ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇವೆ. ಯಾವ ಪಕ್ಷದಿಂದ ಸ್ಪರ್ಧೆ ಮಾಡಬೇಕು ಎಂಬುದು ತೀರ್ಮಾನ ಮಾಡಿಲ್ಲ. ಆದರೆ ಎಲ್ಲ ಅನರ್ಹ ಶಾಸಕರು ಕೂಡ ನಿರ್ಧಾರ ಮಾಡಿದ್ದಾರೆ ಎಂದರು.

Ramesh Jarkiholi A

ನಾನು ನಾಮಪತ್ರ ಕೊಟ್ಟು ಎಲ್ಲಿ ಕುಳಿತರು ಕ್ಷೇತ್ರದ ಜನ ಗೆಲ್ಲಿಸುತ್ತಾರೆ. ಕ್ಷೇತ್ರದ ಜನ ನನ್ನ ಮೇಲೆ ಪ್ರೀತಿ ಇಟ್ಟಿದ್ದಾರೆ. ಅವರು ಕೈಬಿಟ್ಟ ದಿನವೇ ನಾನು ಝೀರೋ, ಜನ ಇರೋವರೆಗೂ ಯಾರೂ ಏನೂ ಮಾಡಲು ಆಗಲ್ಲ. ಪ್ರವಾಹದ ಸಂದರ್ಭದಲ್ಲಿ ಬಹಳಷ್ಟು ಕೆಲಸ ಮಾಡಿದ್ದೇನೆ. ಸತೀಶ್ ಗೋಕಾಕ್ ನಲ್ಲಿ ಟೋಪಿ ಹಾಕಿಕೊಂಡು ಫೋಟೋ ಹಾಕಿಸಿಕೊಂಡು ಪ್ರಚಾರ ಮಾಡಿದ್ದಾರೆ. ನನ್ನ ಕ್ಷೇತ್ರದಲ್ಲಿ ನಾನು ಅನರ್ಹ ಅನಿಸಿಲ್ಲ. ಜನರು ಮತ್ತು ಅಧಿಕಾರಿಗಳು ನನ್ನ ಅಷ್ಟು ಪ್ರೀತಿ ಮಾಡುತ್ತಾರೆ ಎಂದು ತಿಳಿಸಿದರು.

ವಸ್ತು ಕಳೆದುಕೊಂಡ ಕುರಿತು ಗೋಕಾಕ್ ಸಮಾವೇಶದಲ್ಲಿ ಬಹಿರಂಗ ಪಡಿಸುವ ಕುರಿತು ಸತೀಶ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸತೀಶ್ ಎಲ್ಲಿ ಕಾರ್ಯಕ್ರಮ ಮಾಡುತ್ತಾರೆ ಅದೇ ವೇದಿಕೆ ಮೇಲೆ ನಾನು ಹೋಗಿ ಏನು ಎಂದು ಕೇಳುತ್ತೇನೆ. ಯಾವ ವಸ್ತು ಎಂದು ನನಗೆ ಗೊತ್ತಿಲ್ಲ. ಅವನೇ ಹೇಳಬೇಕು. ಸತೀಶ್ ಜಾರಕಿಹೊಳಿನೇ ಆ ವಸ್ತು ಹುಡುಕಿಕೊಡಲಿ. ಸತೀಶ್ ಹಗರಣ ಏನಿದ್ದಾವೆ ಎಂದು ನನಗೆ ಗೊತ್ತು. ನಾನು ಹೇಳಿದರೆ ನಮ್ಮ ಮನೆತನದ ಗೌರವ ಕಮ್ಮಿ ಆಗುತ್ತದೆ. ಈ ಕಾರಣಕ್ಕೆ ನಾನು ಬಾಯಿ ಮುಚ್ಚಿಕೊಂಡಿದ್ದೇನೆ. ನಮ್ಮ ತಂದೆ ಲಕ್ಷ್ಮಣ ಜಾರಕಿಹೊಳಿ ದೊಡ್ಡ ಪ್ರಮಾಣದಲ್ಲಿ ಹೋರಾಡಿ ಸಾಮ್ರಾಜ್ಯ ಕಟ್ಟಿದ್ದಾರೆ. ಸತೀಶ್ ಜಾರಕಿಹೊಳಿ ಸಾಮ್ರಾಜ್ಯ ಕಟ್ಟಿಲ್ಲ ಎಂದು ಟಾಂಗ್ ನೀಡಿದರು.

satish jarakiholi

ಇದೇ ವೇಳೆ ನಮ್ಮ ತಂದೆ ಆದರ್ಶ ನಡಿಗೆಯಿಂದ ಈ ಮಟ್ಟಿಗೆ ನಾನು ಬಂದಿದ್ದೇನೆ. ನಮ್ಮ ತಂದೆ ಅಗರ್ಭ ಶ್ರೀಮಂತರಲ್ಲ ಕೂಲಿ ಮಾಡಿ ಈ ಮಟ್ಟಿಗೆ ಬಂದಿದ್ದೇವೆ ಎಂದು ತಂದೆ-ತಾಯಿ ನೆನೆದು ಭಾವುಕರಾದರು.

ಅಂಬಿರಾವ್ ಪಾಟೀಲ್ ವಿರುದ್ಧ ಸತೀಶ್ ಜಾರಕಿಹೊಳಿ ಆರೋಪ ವಿಚಾರದ ಕುರಿತು ಮಾತನಾಡಿದ ರಮೇಶ್, ಅಂಬಿರಾವ್ ಪಾಟೀಲ್ ಬಗ್ಗೆ ಸತೀಶ್ ಹತಾಶೆಯಿಂದ ಹೇಳುತ್ತಿದ್ದಾನೆ. ಅಂಬಿರಾವ್ ಕ್ಷೇತ್ರದ ಜನರ ಪ್ರೀತಿ ವಿಶ್ವಾಸ ಗಳಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಯಾರಾದರೂ ತಪ್ಪಾಗಿ ಹೇಳಿದರೆ ಇಂದೇ ಆತನ ತೆಗೆಯುತ್ತೇನೆ. ಇಂತಹ ಮಾತುಗಳಿಗೆ ಕ್ಷೇತ್ರದ ಜನರು ಕಿವಿಗೊಡದಂತೆ ರಮೇಶ್ ಮನವಿ ಮಾಡಿಕೊಂಡರು.

ramesh jarakiholi 1

ಸತೀಶ್ ನಮ್ಮ ಕ್ಷೇತ್ರ ಸುತ್ತಿ ಮುಜುಗರವಾಗಿ ಮಾತನಾಡುತ್ತಿದ್ದಾರೆ. ಚುನಾವಣೆ ಬಂದಾಗ ನಾವು ಸಿದ್ಧರಾಗಿರೋಣ ಎಂದು ಸಹೋದರ ಲಖನ್ ಗೆ ಶುಭಹಾರೈಸಿದರು. ಲಖನ್ ಶಾಸಕ ಆದರೆ ಮೊದಲು ಸಂತೋಷ ನಾನು ಪಡುತ್ತೇನೆ. ಲಖನ್ ಜಾರಕಿಹೊಳಿಗೆ ಒಳ್ಳೆಯದಾಗಲಿ. ಗೋಕಾಕ್ ಕ್ಷೇತ್ರದ ಜನರಿಗೆ ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಮಾಡುತ್ತಿದ್ದಾರೆ ಎಂದು ಗೊತ್ತು. ಜನರು ಸತೀಶ್ ಗೆ ಯಾವಾಗ ಬುದ್ಧಿ ಕಲಿಸಬೇಕೋ ಆವಾಗ ಕಲಿಸುತ್ತಾರೆ. ಸತೀಶ್ ವಿರೋಧ ಮಾಡಿದಷ್ಟು ನನಗೆ ಒಳ್ಳೆಯದಾಗುತ್ತದೆ. ಅತೀ ಶೀಘ್ರದಲ್ಲಿ ನನ್ನ ಮುಂದಿನ ನಡೆ ಬಗ್ಗೆ ತಿಳಿಸುತ್ತೇನೆ. ಮತದಾರರು ಯಾರೂ ಸಂಶಯ ಮತ್ತು ಡೈವರ್ಟ್ ಆಗೊದು ಬೇಡ. ಅಂಬಿರಾವ್ ಪಾಟೀಲ್ ಕಳೆದ ಮೂವತ್ತು ವರ್ಷಗಳಿಂದ ಗೋಕಾಕ್ ನಲ್ಲಿ ಬಂದುಳಿದಿದ್ದಾನೆ. ಯಾವುದೇ ಕೇಸ್ ಬಂದರೂ ಕೋರ್ಟ್ ಕಳುಹಿಸದೆ ಇಲ್ಲೇ ಮುಗಿಸಿ ಕಳುಹಿಸುತ್ತಾರೆ. ಬಡ ಜನರಿಗೆ ಈ ಮೂಲಕ ಅನುಕೂಲ ಮಾಡುತ್ತಿದ್ದಾನೆ. ಸತೀಶ್ ಕ್ಷೇತ್ರದಲ್ಲಿ ಪಿಎಗಳ ಹಾವಳಿ ಇದೆ ಎಂದು ಕಿಡಿಕಾರಿದರು.

TAGGED:belagaviby electionDisqualified MLAPublic TVRamesh jarakiholiಅನರ್ಹ ಶಾಸಕಉಪ ಚುನಾವಣೆಪಬ್ಲಿಕ್ ಟಿವಿಬೆಳಗಾವಿರಮೇಶ್ ಜಾರಕಿಹೊಳಿ
Share This Article
Facebook Whatsapp Whatsapp Telegram

You Might Also Like

Police raid over 17 dance bars in Bengaluru
Crime

ಬೆಂಗಳೂರಿನ 17ಕ್ಕೂ ಹೆಚ್ಚು ಡ್ಯಾನ್ಸ್‌ ಬಾರ್‌ಗಳ ಮೇಲೆ ಪೊಲೀಸರ ದಿಢೀರ್‌ ದಾಳಿ

Public TV
By Public TV
1 minute ago
Akhila Pajimannu
Bengaluru City

ಯುವ ಗಾಯಕಿ ಅಖಿಲಾ ಪಜಿಮಣ್ಣು ಬಾಳಲ್ಲಿ ಬಿರುಗಾಳಿ – ವಿವಾಹ ವಿಚ್ಛೇದನಕ್ಕೆ ಅರ್ಜಿ

Public TV
By Public TV
14 minutes ago
Crime
Bengaluru City

ಮಗುವಿಗೆ ಜನ್ಮ ನೀಡಿ ರಕ್ತಸ್ರಾವದಿಂದ ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿ ಸಾವು

Public TV
By Public TV
7 hours ago
kannadigas israel and iran return
Bengaluru City

ಇಸ್ರೇಲ್-ಇರಾನ್ ಸಂಘರ್ಷ; 18 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

Public TV
By Public TV
8 hours ago
Amit Shah in Benagluru
Bengaluru City

ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ – ತಡರಾತ್ರಿ ರೆಬೆಲ್ ನಾಯಕ ಸಭೆ

Public TV
By Public TV
8 hours ago
Chess Divya Deshmukh
Latest

ಚೆಸ್ | ದಿವ್ಯಾ ದೇಶಮುಖ್ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?