Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡತನದ ಗೋಲ್ಡನ್ ಕ್ಷಣಗಳನ್ನು ಪ್ರೇಕ್ಷಕರ ಮುಂದಿಟ್ಟ ‘ಗೀತಾ’!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕನ್ನಡತನದ ಗೋಲ್ಡನ್ ಕ್ಷಣಗಳನ್ನು ಪ್ರೇಕ್ಷಕರ ಮುಂದಿಟ್ಟ ‘ಗೀತಾ’!

Bengaluru City

ಕನ್ನಡತನದ ಗೋಲ್ಡನ್ ಕ್ಷಣಗಳನ್ನು ಪ್ರೇಕ್ಷಕರ ಮುಂದಿಟ್ಟ ‘ಗೀತಾ’!

Public TV
Last updated: September 27, 2019 7:14 pm
Public TV
Share
2 Min Read
GANESH GEETHA
SHARE

ಬೆಂಗಳೂರು: ಗೋಕಾಕ್ ಚಳುವಳಿ ಮತ್ತು ಕನ್ನಡಪ್ರೇಮದ ಕಥಾನಕವೆಂಬ ಸುಳಿವಿನ ಮೂಲಕವೇ ಕನ್ನಡಿಗರ ನಡುವೆ ಕುತೂಹಲದ ಸೆಳೆಮಿಂಚು ಹರಿಸಿದ್ದ ಚಿತ್ರ ಗೀತಾ. ಗೋಲ್ಡನ್ ಸ್ಟಾರ್ ಗಣೇಶ್ ಟ್ರೇಲರ್ ಮೂಲಕ ಕನ್ನಡ ಪರ ಹೋರಾಟಗಾರನಾಗಿ ಅಬ್ಬರಿಸಿದ್ದ ರೀತಿ ಮತ್ತಷ್ಟು ಜನರನ್ನು ಆಕರ್ಷಿಸಿತ್ತು. ಅಷ್ಟಕ್ಕೂ ಗೋಕಾಕ್‍ನಂಥಾ ಐತಿಹಾಸಿಕ ಚಳುವಳಿಯನ್ನು ಕಮರ್ಶಿಯಲ್ ಚೌಕಟ್ಟಿನಲ್ಲಿ, ಪ್ರೇಮಕಥಾನಕದೊಂದಿಗೆ ಹೇಳೋದೇ ಮಹಾ ಸವಾಲು. ನಿರ್ದೇಶಕ ವಿಜಯ್ ಕಿರಣ್ ಮೊದಲ ಹೆಜ್ಜೆಯಲ್ಲಿಯೇ ಅದನ್ನು ಸ್ವೀಕರಿಸಿದ್ದಾರೆಂದರೆ, ಗೋಲ್ಡನ್ ಸ್ಟಾರ್ ಗಣೇಶ್ ಕನ್ನಡಪರ ಹೋರಾಟಗಾರನಾಗಿ ಕಾಣಿಸಿಕೊಂಡಿದ್ದಾರೆಂದರೆ ಗೀತಾ ಬಗ್ಗೆ ಬೆರಗು ಮೂಡದಿರಲು ಸಾಧ್ಯವೇ? ಈ ಕಾರಣದಿಂದಲೇ ದಶ ದಿಕ್ಕುಗಳಿಂದಲೂ ಕುತೂಹಲಕ್ಕೆ ಕಾರಣವಾಗಿದ್ದ ಗೀತಾ ಇದೀಗ ಪ್ರೇಕ್ಷಕರ ಮುಂದೆ ಅನಾವರಣಗೊಂಡಿದೆ.

GEETHA

ಗೋಲ್ಡನ್ ಸ್ಟಾರ್ ಗಣೇಶ್ ಇಲ್ಲಿ ಎರಡು ಪಾತ್ರಗಳನ್ನು ಸಂಭಾಳಿಸಿದ್ದಾರೆ. ಅವೆರಡರಲ್ಲಿಯೂ ಕನ್ನಡಿಗರೆಲ್ಲರ ಮನ ಮುಟ್ಟುವಂತೆ ನಟಿಸಿದ್ದಾರೆ. ಆಕಾಶ್ ಮತ್ತು ಶಂಕರನಾಗಿ ಅವರು ನಟಿಸಿದ್ದಾರೆ. ಈ ಆಕಾಶ್ ತಂದೆ ತಾಯಿಯರಿದ್ದರೂ ತೊಳಲಾಟವನ್ನೇ ಹೊದ್ದು ಬದುಕುವ ಹುಡುಗ. ಯಾಕೆಂದರೆ ತಂದೆ ತಾಯಿ ಬೇರೆಯಾಗಿ ಎರಡು ಧ್ರುವಗಳಂತಾಗಿರುತ್ತಾರೆ. ಇಬ್ಬರನ್ನೂ ಬೇರೆ ಬೇರೆಯಾಗಿಯೇ ಕಾಣುತ್ತಾ, ಅಪೂರ್ಣ ಪ್ರೀತಿಯ ಕೊರತೆಯನ್ನು ಮನಸೊಳಗೆ ಸಾಕಿಕೊಂಡೆ ಇರೋ ಆತನ ಪಾಲಿಗೆ ಅಪ್ಪ ಅಮ್ಮ ಹೀಗಾಗಲು ಕಾರಣವೇನೆಂಬುದು ಸದಾ ಕಾಡುವ ಪ್ರಶ್ನೆ. ಕಡೆಗೂ ಅದಕ್ಕೆ ಉತ್ತರ ಹುಡುಕಿದಾಗ ಕನ್ನಡಪ್ರೇಮಿ ಶಂಕರನ ಕಥೆ ತೆರೆದುಕೊಳ್ಳುತ್ತೆ. ಇಡೀ ಕಥೆಗೊಂದು ಹೊಸಾ ಆವೇಗ ಬರುವುದು ಆ ಕ್ಷಣದಿಂದಲೇ.

Geetha

ಅಲ್ಲಿಂದಾಚೆಗೆ ಗೋಕಾಕ್ ಚಳುವಳಿಯ ಹಿನ್ನೆಲೆಯ ಅಪ್ಪಟ ಕನ್ನಡ ಪ್ರೇಮ ಹೊದ್ದುಕೊಂಡ ಕಥೆ ಬಿಚ್ಚಿಕೊಳ್ಳುತ್ತದೆ. ಅದರ ಜೊತೆ ಜೊತೆಗೇ ಎಂಥವರ ಎದೆಗಾದರೂ ನೇರವಾಗಿ ಸೋಕುವಂಥಾ ಪ್ರೇಮ ಕಥೆಯೂ ಬಿಚ್ಚಿಕೊಳ್ಳುತ್ತದೆ. ಅಷ್ಟಕ್ಕೂ ಈ ಆಕಾಶ್ ಯಾರು? ಆತನಿಗೂ ಶಂಕರನ ಕಥೆಗೂ ಇರೋ ಕನೆಕ್ಷನ್ನುಗಳೇನೆಂಬುದನ್ನು ಕುತೂಹಲ ಕಾಯ್ದಿಟ್ಟುಕೊಂಡೇ ಅನಾವರಣಗೊಳಿಸುವಲ್ಲಿ ನಿರ್ದೇಶಕ ವಿಜಯ್ ನಾಗೇಂದ್ರರ ಜಾಣ್ಮೆಯ ಅನಾವರಣವಾಗುತ್ತದೆ. ಗೋಕಾಕ್‍ನಂಥಾ ಗಂಭೀರ ಚಳುವಳಿ ಮತ್ತು ಪ್ರೀತಿಯನ್ನು ಹದಮುದವಾಗಿ ಬೆರೆಸುತ್ತಲೇ ಮನೋರಂಜನೆಗೂ ಕೂಡಾ ಕೊರತೆಯಾಗದಂತೆ ಮೂಡಿ ಬಂದಿರೋದು ಈ ಚಿತ್ರದ ನಿಜವಾದ ಹೆಚ್ಚುಗಾರಿಕೆ.

Geeta ganesh sudharani

ಇಲ್ಲಿ ಗೋಕಾಕ್ ಚಳುವಳಿಯನ್ನು ಮರು ರೂಪಿಸಿದ ರೀತಿಯೇ ಕನ್ನಡದ ಮನಸುಗಳನ್ನೆಲ್ಲ ಥ್ರಿಲ್ ಆಗಿಸುವಂತಿದೆ. ಕಥೆ ಬೇರೆ ಬೇರೆ ದಿಕ್ಕುಗಳಲ್ಲಿ ಹರಡಿಕೊಂಡಿದ್ದರೂ ಯಾವುದೂ ಕೃತಕ ಅನ್ನಿಸದಂತೆ, ಬೇರೆ ಬೇರೆಯೆಂಬ ಭಾವ ಮೂಡಿಸದಂತೆ ಕೂಡಿಸುವಲ್ಲಿಯೂ ಕೂಡಾ ನಿರ್ದೇಶನದ ಕಸುಬುದಾರಿಕೆ ಜಾಹೀರಾಗುತ್ತದೆ. ಇನ್ನುಳಿದಂತೆ ಗಣೇಶ್ ಇಲ್ಲಿ ಬೇರೆಯದ್ದೇ ಲುಕ್ಕಿನಲ್ಲಿ, ಹದಗೊಂಡ ನಟನೆಯ ಮೂಲಕ ಪ್ರೇಕ್ಷಕರನ್ನು ಅಚ್ಚರಿಗೀಡು ಮಾಡುತ್ತಾರೆ. ಮೂವರು ನಾಯಕಿಯರು ಮತ್ತು ಇತರೇ ಪಾತ್ರವರ್ಗವೂ ಕೂಡಾ ಅದಕ್ಕೆ ತಕ್ಕುದಾಗಿಯೇ ಸಾಥ್ ಕೊಟ್ಟಿದ್ದಾರೆ. ಹಿನ್ನೆಲೆ ಸಂಗೀತ, ಛಾಯಾಗ್ರಹಣ ಮತ್ತು ಹಾಡುಗಳೆಲ್ಲವೂ ಒಂದಕ್ಕೊಂದು ಪೂರಕವಾಗಿವೆ.

ಈ ಚಿತ್ರದಲ್ಲಿ ಪ್ರಧಾನ ಕುತೂಹಲವಿದ್ದದ್ದೇ ಗೋಕಾಕ್ ಚಳುವಳಿಯ ಮರುಸೃಷ್ಟಿಯ ಬಗ್ಗೆ. ಅದನ್ನು ನಿರ್ಮಾಪಕರಾದ ಸೈಯದ್ ಸಲಾಮ್ ಮತ್ತು ಶಿಲ್ಪಾ ಗಣೇಶ್ ಪರಿಣಾಮಕಾರಿಯಾಗಿ, ರಿಚ್ ಆಗಿ ಮೂಡಿ ಬರುವಂತೆ ಮಾಡಿದ್ದಾರೆ. ನಿರ್ದೇಶಕ ವಿಜಯ್ ನಾಗೇಂದ್ರ ಮೊದಲ ಹೆಜ್ಜೆಯಲ್ಲಿಯೇ ಸಂಕೀರ್ಣವಾದ ಕಥೆಯನ್ನು ಆರಿಸಿಕೊಂಡಿದ್ದರೂ ಕೂಡಾ ಎಲ್ಲಿಯೂ ಸಿಕ್ಕಾಗದಂತೆ ಕಲಾತ್ಮಕ ಕೈಚಳಕ ತೋರಿಸಿದ್ದಾರೆ. ಈ ಕಾರಣದಿಂದಲೇ ವಿರಳ ಕಥೆಯ ಮೂಲಕ ಗೀತಾ ಕನ್ನಡತನದ ಗೋಲ್ಡನ್ ಕ್ಷಣಗಳನ್ನು ಸಮರ್ಥವಾಗಿಯೇ ಪ್ರೇಕ್ಷಕರ ಮುಂದಿಟ್ಟಿದ್ದಾಳೆ!

ರೇಟಿಂಗ್: 3.5/4

TAGGED:cinemaganeshGeethagolden star ganeshPublic TVsandalwoodshilpa ganeshSyed SalamVijay Nagendraಗಣೇಶ್ಗೀತಾಗೋಲ್ಡನ್ ಸ್ಟಾರ್ ಗಣೇಶ್ಪಬ್ಲಿಕ್ ಟಿವಿವಿಜಯ್ ನಾಗೇಂದ್ರಶಿಲ್ಪಾ ಗಣೇಶ್ಸಿನಿಮಾಸೈಯದ್ ಸಲಾಮ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
15 minutes ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
32 minutes ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
48 minutes ago
Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
1 hour ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
2 hours ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?