Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿಕಾರಿಗಳ ಬೇಜವಾಬ್ದಾರಿಗೆ ಸಂತ್ರಸ್ತರಿಗೆ ಸಿಗ್ತಿಲ್ಲ ಪರಿಹಾರ ಚೆಕ್‍ಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಅಧಿಕಾರಿಗಳ ಬೇಜವಾಬ್ದಾರಿಗೆ ಸಂತ್ರಸ್ತರಿಗೆ ಸಿಗ್ತಿಲ್ಲ ಪರಿಹಾರ ಚೆಕ್‍ಗಳು

Belgaum

ಅಧಿಕಾರಿಗಳ ಬೇಜವಾಬ್ದಾರಿಗೆ ಸಂತ್ರಸ್ತರಿಗೆ ಸಿಗ್ತಿಲ್ಲ ಪರಿಹಾರ ಚೆಕ್‍ಗಳು

Public TV
Last updated: September 30, 2019 9:37 am
Public TV
Share
3 Min Read
blg flood
SHARE

ಬೆಳಗಾವಿ: ನೆರೆ ಪ್ರವಾಹಕ್ಕೆ ಸಿಕ್ಕ ಬೆಳಗಾವಿ ಜಿಲ್ಲೆ ಅಕ್ಷರಶಃ ನಲುಗಿ ಹೋಗಿತ್ತು. ಸರ್ಕಾರದಿಂದ ತಕ್ಷಣ ಹತ್ತು ಸಾವಿರ ಕೊಡಬೇಕೆಂದು ಆದೇಶ ಮಾಡಿ ಒಂದೂವರೆ ತಿಂಗಳಾದರೂ ಹತ್ತು ಸಾವಿರ ರೂ. ಚೆಕ್‍ಗಳು ಸಂತ್ರಸ್ತರಿಗೆ ಸಿಗುತ್ತಿಲ್ಲ.

ಹೌದು ಬಿದ್ದುಹೋಗಿರುವ ಮನೆ, ನೆಲೆ ಕಾಣದೆ ಕಂಗಾಲಾಗಿರುವ ಕುಟುಂಬಗಳು, ಇನ್ನೂ ಎಷ್ಟು ದಿನಗಳು ಇಂತಹ ವನವಾಸ ಎಂದು ಚಿಂತೆಯಲ್ಲಿ ಜನರಿದ್ದಾರೆ. ಹತ್ತು ಸಾವಿರ ರೂ. ಚೆಕ್‍ಗಳನ್ನೇ ತಲುಪಿಸಲು ಆಗದ ಸರ್ಕಾರ ಮನೆಗಳನ್ನ ಯಾವಾಗ ನಿರ್ಮಾಣ ಮಾಡಿಕೊಡುತ್ತೆ? ಬೆಳೆಗಳಿಗೆ ಪರಿಹಾರವಾದರೂ ಯಾವಾಗ ಕೊಡುತ್ತೆ ಎನ್ನುವ ಆತಂಕದಲ್ಲಿ ಸಂತ್ರಸ್ತರಿದ್ದಾರೆ. ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ನೆರವಾಗಬೇಕಿದ್ದ ಅಧಿಕಾರಿಗಳು ಮಾತ್ರ ಬೇಜವಾಬ್ದಾರಿ ತೋರಿ ಅವರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ. ಇದು ಬೆಳಗಾವಿ ಜಿಲ್ಲೆಯಲ್ಲಿ ನೆರೆ ಪ್ರವಾಹಕ್ಕೆ ಸಿಕ್ಕ ಜನರ ದುಸ್ಥಿತಿಯಾಗಿದೆ. ಇದನ್ನೂ ಓದಿ:ಸಂತ್ರಸ್ತರಿಗೆ ಪರಿಹಾರ ಚೆಕ್ ನೀಡಲು ಲಂಚ ಕೇಳುತ್ತಿದ್ದಾರೆ ಅಧಿಕಾರಿಗಳು

blg flood 3

ಕಳೆದ ಎರಡು ತಿಂಗಳ ಹಿಂದೆ ಸುರಿದ ಭಾರೀ ಮಳೆಗೆ ಸವದತ್ತಿ ತಾಲೂಕಿನ ದುಂಡನಕೊಪ್ಪ ಗ್ರಾಮದಲ್ಲಿ ಐವತ್ತಕ್ಕೂ ಅಧಿಕ ಮನೆಗಳು ಧರೆಗುರುಳಿವೆ. ಸಾವಿರಾರು ಎಕ್ರೆ ಬೆಳೆ ಹಾನಿಯಾಗಿದೆ. ಇನ್ನೂ ಮನೆ ಬಿದ್ದಿರುವ ಸ್ಥಳಗಳಿಗೆ ಪಿಡಿಒ ಮತ್ತು ಎಂಜಿನಿಯರ್‌ಗಳು ಭೇಟಿ ನೀಡಿ ವರದಿ ಕೂಡ ಮಾಡಿದ್ದಾರೆ. ಕೊನೆಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಎಷ್ಟು ಪರ್ಸಂಟೇಜ್ ನಷ್ಟು ಹಾನಿಯಾಗಿದೆ ಎಂದು ವರದಿ ನೀಡಿ ಚೆಕ್ ಕೊಡಬೇಕಾಗಿದೆ. ಆದರೆ ಗ್ರಾಮ ಲೆಕ್ಕಾಧಿಕಾರಿ ಬೇಜವಾಬ್ದಾರಿಯಿಂದ ಇಪ್ಪತ್ತಕ್ಕೂ ಅಧಿಕ ಕುಟುಂಬಗಳಿಗೆ ಈವರೆಗೂ ಹತ್ತು ಸಾವಿರ ರೂ.ಯ ಚೆಕ್‍ಗಳೇ ಸಿಕ್ಕಿಲ್ಲ. ಅಷ್ಟೇ ಅಲ್ಲದೆ ಬೆಳೆಹಾನಿ ಕುರಿತು ವರದಿ ಕೂಡ ನೀಡುತ್ತಿಲ್ಲ. ಇದನ್ನೂ ಓದಿ:ನೆರೆ ‘ಪೀಡಕರು’- ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂತ್ರಸ್ತರಿಗೆ ತಲುಪುತ್ತಿಲ್ಲ ಪರಿಹಾರ

1

ಈ ಕುರಿತು ಗ್ರಾಮ ಲೆಕ್ಕಾಧಿಕಾರಿ(ವಿಎ) ರವಿಕುಮಾರ್ ಕಾಂಬ್ಳೆಗೆ ಕೇಳಿದರೆ ನೀವು ಯಾರಿಗೆ ಬೇಕಾದ್ರೂ ಹೇಳಿ ನಾನು ವರದಿ ಕೊಡುವುದಿಲ್ಲ ಎಂದು ಅವಾಜ್ ಹಾಕುತ್ತಿದ್ದಾನೆ. ಅಷ್ಟೇ ಅಲ್ಲದೆ ಆತನಿಗೆ ಯಾರು ಲಂಚ ಕೊಡುತ್ತಾರೆ ಅಂತವರಿಗೆ ಚೆಕ್ ಕೊಡುತ್ತಿದ್ದಾನೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ಇದರಿಂದ ಏನು ಮಾಡಬೇಕೆಂದು ತೋಚದೆ ಗ್ರಾಮಸ್ಥರು ಕಂಗಾಲಾಗಿದ್ದು, ನಮಗೆ ಪರಿಹಾರ ಕೊಡಿಸಿ ಎಂದು ಗೋಗರೆಯುತ್ತಿದ್ದಾರೆ.

blg flood 4

ಸವದತ್ತಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಮಲಪ್ರಭಾ ನದಿ ಪ್ರವಾಹಕ್ಕೆ ಸಿಕ್ಕಿ ಸಂಕಷ್ಟ ಎದುರಿಸುತ್ತಿರುವ ಅನೇಕ ಕುಟುಂಬಗಳಿಗೆ ಪರಿಹಾರ ಸಿಕ್ಕಿಲ್ಲ. ಇತ್ತ ಅಧಿಕಾರಿಗಳು ಸ್ಥಳಕ್ಕೆ ಹೋಗದೆ ಯಾರು ಲಂಚ ಕೊಡುತ್ತಿದ್ದಾರೆ ಅಂತವರಿಗೆ ಪರಿಹಾರ ಕೊಡುವ ಕೆಲಸ ಮಾಡುತ್ತಿದ್ದಾರೆ. ಎಷ್ಟರ ಮಟ್ಟಿಗೆ ಅಧಿಕಾರಿಗಳು ಬೇಜವಾಬ್ದಾರಿ ಮೆರೆದಿದ್ದಾರೆ ಎಂದರೆ, ಈ ದುಂಡನಕೊಪ್ಪ ಗ್ರಾಮದ ವಿಎ ರವಿಕುಮಾರ್ ಸ್ಥಳಕ್ಕೆ ಹೋಗಿ ವಿಚಾರಿಸದೆ ಅದೇ ಗ್ರಾಮದ ಫಕ್ಕೀರ್ ಗೌಡ ಅವರು ಮರಣ ಹೊಂದಿದ್ದಾರೆ ಎಂದು ದಾಖಲೆ ನೀಡಿದ್ದಾನೆ. ಇದನ್ನ ನೋಡಿದ ಸ್ಥಳೀಯರು ಆತನನ್ನ ತರಾಟೆಗೆ ತೆಗೆದುಕೊಂಡ ಮೇಲೆ ಅದೇ ದಾಖಲೆಯನ್ನ ತಿದ್ದುಪಡಿ ಮಾಡಿಕೊಟ್ಟಿದ್ದಾನೆ ಎಂದು ಸಂತ್ರಸ್ತರು ತಿಳಿಸಿದ್ದಾರೆ.

blg flood 5

ಇದು ಗ್ರಾಮೀಣ ಭಾಗದ ಸ್ಥಿತಿ ಆದರೆ ಅತ್ತ ನಗರದಲ್ಲೂ ಕೂಡ ಬಾಡಿಗೆ ಮನೆಯಲ್ಲಿದ್ದ ಬಹುತೇಕ ಸಂತ್ರಸ್ತರಿಗೆ ಇನ್ನೂ ಹತ್ತು ಸಾವಿರ ಚೆಕ್ ಸಿಗುತ್ತಿಲ್ಲ. ಮನೆಗಳು ಧರೆಗುರುಳಿ ಇದ್ದ ಸಾಮಾಗ್ರಿಗಳೆಲ್ಲವೂ ಮನೆಯಲ್ಲೇ ಬಿದ್ದಿವೆ. ಸರ್ವೆ ಮಾಡುವವರೆಗೂ ಅವುಗಳನ್ನ ತೆರವು ಮಾಡಬಾರದು ಎಂದಿದ್ದಕ್ಕೆ ಎರಡು ತಿಂಗಳಿಂದ ಸಾಮಾಗ್ರಿ ತೆಗೆಯದೇ ಜನರು ಸುಮ್ಮನಿದ್ದಾರೆ. ನಗರದ ಪಾಟೀಲ್ ಮಾಳದಲ್ಲಿರುವ ರಫೀಕ್ ಅವರು ಮನೆ ಕಳೆದುಕೊಂಡು, ಮನೆ ಸಾಮಾಗ್ರಿ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಆದರೆ ಇಲ್ಲಿಯವರೆಗೂ ಅಧಿಕಾರಿಗಳು ಬಂದು ಸರ್ವೆ ಮಾಡುತ್ತಿಲ್ಲ. ಇವರಿಗೆ ಪರಿಹಾರ ಕೊಡುತ್ತಿಲ್ಲ. ಈ ಕುರಿತು ಡಿಸಿಎಂ ಲಕ್ಷ್ಮಣ ಸವದಿ ಅವರನ್ನ ಕೇಳಿದರೆ ಕೆಲವರಿಗೆ ಇನ್ನೂ ಚೆಕ್ ಸಿಕ್ಕಿಲ್ಲ, ಆದಷ್ಟು ಬೇಗ ಅವರಿಗೆ ಪರಿಹಾರ ನೀಡಲಾಗುವುದು. ಯಾರಾದರು ಅಧಿಕಾರಿಗಳು ಬೇಜವಾಬ್ದಾರಿ ತೋರಿದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

blg flood 1

ಪ್ರವಾಹ ಬಂದು ಹೋದ ಮೇಲೆ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಜೊತೆಗೆ ಮೂರು ಬಾರಿ ಸಿಎಂ ಯಡಿಯೂರಪ್ಪ ಈ ಪ್ರದೇಶಕ್ಕೆ ಭೇಟಿಕೊಟ್ಟು ಹೋಗಿದ್ದಾರೆ. ಆದರೆ ಇವರು ಬಂದು ಹೋದ ಮೇಲೆಯೂ ಹತ್ತು ಸಾವಿರ ರೂ. ಕೊಡುವುದಕ್ಕೆ ಸರ್ಕಾರ ಮೀನಾಮೇಷ ಮಾಡುತ್ತಿದೆ. ಇತ್ತ ಅಧಿಕಾರಿಗಳು ಕೂಡ ಬೇಜವಾಬ್ದಾರಿ ತೋರಿ ಸಂತ್ರಸ್ತರನ್ನ ಸಂಕಷ್ಟಕ್ಕೆ ಸಿಲುಕಿಸುತ್ತಿದ್ದಾರೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಸಂತ್ರಸ್ತರಿಗೆ ಹತ್ತು ಸಾವಿರ ಜೊತೆಗೆ ಸಂಪೂರ್ಣ ಪರಿಹಾರ ಕೊಡುವ ಕೆಲಸ ಮಾಡಬೇಕಿದೆ.

TAGGED:floodflood relief checkflood relief fundFlood victimsgovernmentPublic TVಅಧಿಕಾರಿಗಳುಪಬ್ಲಿಕ್ ಟಿವಿಪರಿಹಾರ ಚೆಕ್ಪ್ರವಾಹಸಂತ್ರಸ್ತರುಸರ್ಕಾರ
Share This Article
Facebook Whatsapp Whatsapp Telegram

Cinema news

MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post

You Might Also Like

TAX
Bengaluru City

ಗ್ರಾ.ಪಂ ತೆರಿಗೆ ಸಂಗ್ರಹದಲ್ಲಿ ಹಿಂದೆ ಬಿದ್ದ ಗ್ರಾಮೀಣಾಭಿವೃದ್ಧಿ ಇಲಾಖೆ – ಈ ವರ್ಷ 71% ಮಾತ್ರ ಸಂಗ್ರಹ

Public TV
By Public TV
16 minutes ago
PM Modi AI MANAV vision sundar pichai Sam altman Dario Amode 1
Latest

ದೆಹಲಿಯಲ್ಲಿ ಎಐ ದಿಗ್ಗಜರು – ಏನಿದು ಮೋದಿಯ MANAV ವಿಷನ್‌?

Public TV
By Public TV
45 minutes ago
Shalini Rajneesh
Bengaluru City

ಮುಡಾ ಮಾಜಿ ಆಯುಕ್ತ ನಟೇಶ್‌ ಮುಂಬಡ್ತಿಗೆ ಲಂಚ ಆರೋಪ – ಆಧಾರ ರಹಿತ ಆರೋಪಕ್ಕೆ ಕ್ರಮ: ಸ್ನೇಹಮಯಿಗೆ ಸಿಎಸ್‌ ಎಚ್ಚರಿಕೆ

Public TV
By Public TV
1 hour ago
Magadi road psi koushik
Bengaluru City

ನಿರೀಕ್ಷಣಾ ಜಾಮೀನು ಪಡೆದು ಠಾಣೆಗೆ ಹೋದ ವ್ಯಕ್ತಿ ಮೇಲೆ ಪಿಎಸ್‌ಐ ಹಲ್ಲೆ – ಎಫ್‌ಐಆರ್ ದಾಖಲು

Public TV
By Public TV
1 hour ago
d.k.shivakumar
Bengaluru City

ಮತದಾರರ ಪಟ್ಟಿ ದೋಷ ಸರಿಪಡಿಸಲು ಬೀದಿ, ಮನೆವಾರು ಮ್ಯಾಪಿಂಗ್ ಮಾಡಿ: ಚುನಾವಣಾ ಆಯೋಗಕ್ಕೆ ಡಿಕೆಶಿ ಪತ್ರ

Public TV
By Public TV
2 hours ago
kumki elephants arrived Chikkamagaluru Pura capture wild elephant
Chikkamagaluru

ಚಿಕ್ಕಮಗಳೂರು | ನರಹಂತಕ ಕಾಡಾನೆ ಸೆರೆಗೆ ಸಾಕಾನೆ ಬಳಸಿ ಕಾರ್ಯಾಚರಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?