Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೂಲಿಬೆಲೆ, ಡಿವಿಎಸ್ ಟ್ವೀಟ್ ವಾರ್ ರಿಪೋರ್ಟ್ ಪಡೆದ ಅಮಿತ್ ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸೂಲಿಬೆಲೆ, ಡಿವಿಎಸ್ ಟ್ವೀಟ್ ವಾರ್ ರಿಪೋರ್ಟ್ ಪಡೆದ ಅಮಿತ್ ಶಾ

Latest

ಸೂಲಿಬೆಲೆ, ಡಿವಿಎಸ್ ಟ್ವೀಟ್ ವಾರ್ ರಿಪೋರ್ಟ್ ಪಡೆದ ಅಮಿತ್ ಶಾ

Public TV
Last updated: October 3, 2019 6:45 pm
Public TV
Share
3 Min Read
Amit shah DVS
SHARE

– ಕೇಂದ್ರ ಸಚಿವರಿಗೆ ಶಾ ಕ್ಲಾಸ್

ನವದೆಹಲಿ: ಚಿಂತಕ ಚಕ್ರವರ್ತಿ ಸೂಲಿಬೆಲೆ ಹಾಗೂ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ನಡುವಿನ ವಾಕ್ ಸಮರ ಭಾರೀ ಸದ್ದು ಮಾಡಿದ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಎಚ್ಚೆತ್ತುಕೊಂಡಿದೆ.

ಬಿಜೆಪಿ ರಾಷ್ಟ್ರಾಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸೂಲಿಬೆಲೆ ಹಾಗೂ ಸದಾನಂದಗೌಡ ಅವರ ಟ್ವಿಟ್ಟರ್ ವಾರ್‍ನ ಸಂಪೂರ್ಣ ರಿಪೋರ್ಟ್ ಅನ್ನು ತರಿಸಿಕೊಂಡಿದ್ದಾರೆ. ಕನ್ನಡದಲ್ಲಿರುವ ಟ್ವೀಟ್‍ಗಳನ್ನು ಭಾಷಾಂತರ ಮಾಡಿಸಿ ಪ್ರತಿ ಪದದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಮೋದಿ ಹೆಸರೇಳದಿದ್ದರೆ ಅವರ ಭಾಷಣ ಕೇಳಲು ಯಾರು ಬರುತ್ತಾರೆ – ಸೂಲಿಬೆಲೆಗೆ ಸಿಂಹ ಟಾಂಗ್

amith shah

ಹಿರಿಯರಾಗಿ ಒಂದು ವಿಚಾರವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ವಿಫಲರಾಗಿದ್ದೀರಿ. ನಿಮ್ಮ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಗುರಿಯಾಗುತ್ತಿದೆ. ಇದಕ್ಕೆ ಯಾರು ಹೊಣೆ ಎಂದು ಅಮಿತ್ ಶಾ, ಸದಾನಂದಗೌಡ ಅವರನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಆಗಿದ್ದೇನು?:
ಪ್ರವಾಹ ಪೀಡಿತ ಪ್ರದೇಶಕ್ಕೆ ಬರಬೇಕಾದ ಪರಿಹಾರದ ಬಗ್ಗೆ ಇಲ್ಲ ಸಲ್ಲದ ಕಥೆ ಹೇಳಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿರುವವರ ಬಗ್ಗೆ ನಮಗೆ ಕನಿಕರವಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಆಗಬೇಕಾದ ತಕ್ಷಣ ಪರಿಹಾರ, ಮಧ್ಯಂತರ ಪರಿಹಾರ ಮತ್ತು ದೀರ್ಘಕಾಲೀನ ಪರಿಹಾರದ ಬಗ್ಗೆ ಬೇಕಾದ ವರದಿಗಳನ್ನು ತಯಾರಿಸಲಾಗಿದೆ ಎಂದು ಟ್ವೀಟ್ ಮಾಡಿದ್ದರು.

SULIBELE SADANANDA GOWDA 1

ಇದನ್ನು ರಿಟ್ವೀಟ್ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ, ಲಾಲ್! ಇವರು ಈಗ ಬಂದರು.. ನೊಂದಿರುವ ಉತ್ತರ ಕರ್ನಾಟಕದ ಜನರನ್ನು ದಾರಿ ತಪ್ಪಿಸುವವರು ಎನ್ನುವಷ್ಟು ಧಾಷ್ಟ್ರ್ಯ ತೋರಿರುವ ನಿಮ್ಮ ಬಗ್ಗೆ ನಾಡಿಗೆ ಕನಿಕರವಿದೆ. ನಿಮ್ಮ ಮಂತ್ರಿಗಿರಿ ಜನರ ಭಿಕ್ಷೆ ಎನ್ನುವುದನ್ನು ಮರೆಯಬೇಡಿ. ಪ್ರವಾಹ ಕಳೆದು ಜನ ಬದುಕು ಕಟ್ಟಿಕೊಳ್ಳುವ ಕಾಲಕ್ಕೂ ಬರದ ಪರಿಹಾರ ಯಾವ ಪುರುಷಾರ್ಥಕ್ಕೆ ಎಂದು ಡಿ.ವಿ ಸದಾನಂದಗೌಡರನ್ನು ಪ್ರಶ್ನಿಸಿದ್ದರು.

ಈ ವಿಚಾರವಾಗಿ ಬೆಂಗಳೂರಿನಲ್ಲಿ ಬುಧವಾರ ಅಸಮಾಧಾನ ಹೊರ ಹಾಕಿದ್ದ ಕೇಂದ್ರ ಸಚಿವರು, ಯಾರೋ ಕುಳಿತುಕೊಂಡು ಟ್ವೀಟ್ ಮಾಡುತ್ತಾರೆ. ಮಂತ್ರಿಗಿರಿ ಭಿಕ್ಷೆ ಅಂತ ನಮಗೆ ಹೇಳುವವರು, ಚಪ್ಪಾಳೆ ಗಿಟ್ಟಿಸಿಕೊಂಡು ದೇಶ ಕಟ್ಟುವವರು ಎಂದು ಹೇಳಿಕೊಳ್ಳುವವರು. ಈ ರೀತಿಯ ಮಾತುಗಳು ಸರಿಯಲ್ಲ. ಹಾರಿಕೆ ಸುದ್ದಿ ಹರಡುವವರು ದೇಶ ದ್ರೋಹಿಗಳು ಎಂದು ಗಾಂಧೀಜಿ ಹೇಳಿದ್ದಾರೆ. ಇವರೆಲ್ಲಾ ಅದೇ ಬ್ರಾಂಡ್‍ಗೆ ಸೇರುತ್ತಾರೆ. ಭಾಷಣಗಳಿಂದ, ಟ್ವೀಟ್‍ನಿಂದ ಜನರನ್ನು ಪ್ರಚೋದನೆ ಮಾಡುವುದಲ್ಲ. ಇಂತಹ ಮಾತುಗಳು ಹಾಗೂ ಜನರ ಬಗ್ಗೆ ಬಹಳ ನೋವಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

chakrvarthi

ಪರಸ್ಪರ ವಾಕ್ ಹಾಗೂ ಟ್ವೀಟ್ ಸಮರದ ಬೆನ್ನಲ್ಲೇ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಬ್ಲಾಕ್ ಮಾಡಿದ್ದರು. ಕೇಂದ್ರ ಸಚಿವರು ಬ್ಲಾಕ್ ಮಾಡಿರುವುದನ್ನು ಸ್ಕ್ರೀನ್ ಶಾರ್ಟ್ ತೆಗೆದು ಟ್ವೀಟ್ ಮಾಡಿರುವ ಚಕ್ರವರ್ತಿ ಸೂಲಿಬೆಲೆ ಅವರು, ನಿಮಗೆ ಧನ್ಯವಾದ (ಥ್ಯಾಂಕ್ ಯೂ) ಎಂದು ಬರೆದುಕೊಂಡಿದ್ದರು. ಕೇಂದ್ರ ಸಚಿವರ ನಡೆಯ ಬಗ್ಗೆ ನೆಟ್ಟಿಗರಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

DVS Tweet

ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವರು, ನಾನು ಯಾಕೆ ಬ್ಲಾಕ್ ಮಾಡಬೇಕು? ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವರ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯ ಇದೆ. ಆದರೆ ಅದಕ್ಕೊಂದು ಮಾರ್ಗವಿದೆ. ಬುಧವಾರ 3-4 ಗಂಟೆ ಟ್ವಿಟ್ಟರ್ ಸ್ಥಗಿತಗೊಂಡಿತ್ತು. ಈ ವೇಳೆ ಬ್ಲಾಕ್ ಆಗಿರಬಹುದು ಎಂದು ಹಾರಿಕೆ ಉತ್ತರ ನೀಡಿದ್ದಾರೆ.

ಡಿವಿಎಸ್ ಹೇಳಿಕೆಯ ಬೆನ್ನಲ್ಲೇ ಸೂಲಿಬೆಲೆ ಅಭಿಮಾನಿಗಳು ಸದಾನಂದಗೌಡರೇ, ಸಂಸದರನ್ನು ಪ್ರಶ್ನಿಸುವುದು ದೇಶದ್ರೋಹವಾದರೇ ನಾನು ದೇಶದ್ರೋಹಿಯೇ ಎಂದು ಬರೆದು #StopUrArroganceDVS #IamWithChakravarthySulibele #NotFairModiji  ಬಳಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

https://twitter.com/Vivekgs7555/status/1179700408396070912

TAGGED:Amit Shahchakravarthy sulibeleDV Sadananda GowdaPresident of BJPPublic TVTweet warಅಮಿತ್ ಶಾಚಕ್ರವರ್ತಿ ಸೂಲಿಬೆಲೆಟ್ವಿಟ್ಟರ್ಡಿ.ವಿ.ಸದಾನಂದಗೌಡಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

I would have banned him IPL founder Lalit Modi slams LSG owner Sanjiv Goenka over animated exchange with captain Rishabh Pant and coach after defeat
Cricket

ನಾನು ಐಪಿಎಲ್‌ ಅಧ್ಯಕ್ಷನಾಗಿದ್ದರೆ ಗೋಯೆಂಕಾ ಬ್ಯಾನ್‌ – ಲಲಿತ್‌ ಮೋದಿ ಕೆಂಡಾಮಂಡಲ

Public TV
By Public TV
10 minutes ago
Love
Latest

ಪ್ರತಿ ಮಳೆಗೂ ನೀನಿಟ್ಟ ನೆನಪು ಅದೆಷ್ಟು ಶಾಶ್ವತ..!

Public TV
By Public TV
18 minutes ago
BRT Fire
Chamarajanagar

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯಕ್ಕೆ ಮತ್ತೆ ಬೆಂಕಿ – 25ಕ್ಕೂ ಹೆಚ್ಚು ಎಕರೆ ಅಗ್ನಿಗಾಹುತಿ

Public TV
By Public TV
18 minutes ago
Mount Everest 2
Crime

ವಿಮೆ ಹಣಕ್ಕೆ ಎವರೆಸ್ಟ್ ಚಾರಣಿಗರಿಗೆ ಶೆರ್ಪಾಗಳಿಂದ `ವಿಷ’

Public TV
By Public TV
58 minutes ago
EV Vehicles
Bengaluru City

ವಾರ್ ಎಫೆಕ್ಟ್‌ನಿಂದ EVಗೆ ಹೆಚ್ಚಿದ ಡಿಮ್ಯಾಂಡ್ – ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಸೇಲ್

Public TV
By Public TV
1 hour ago
Auto gas
Bengaluru City

ಕರ್ನಾಟಕದಲ್ಲಿ ಆಟೋ ಗ್ಯಾಸ್‌ ಪೂರೈಕೆಯನ್ನು ಹೆಚ್ಚಿಸಿದ್ದೇವೆ: ಇಂಡಿಯನ್‌ ಆಯಿಲ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?