Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಕಾಂಗ್ರೆಸ್ ದೊಡ್ಡ ಸಮಸ್ಯೆ ರಾಹುಲ್ ಗಾಂಧಿ ಪಲಾಯನ, ಸೋನಿಯಾ ನಿರ್ಲಕ್ಷ್ಯ- ಸಲ್ಮಾನ್ ಖುರ್ಷಿದ್

Public TV
Last updated: October 9, 2019 6:42 pm
Public TV
Share
2 Min Read
Sonia Gandhi Rahul Gandhi
SHARE

ನವದೆಹಲಿ: ಕಾಂಗ್ರೆಸ್‍ನ ಬಹುದೊಡ್ಡ ಸಮಸ್ಯೆ ಪಕ್ಷದ ನಾಯಕ ರಾಹುಲ್ ಗಾಂಧಿ ಪಲಾಯನ ಮಾಡುತ್ತಿರುವುದು. ಅಲ್ಲದೆ, ಸೋನಿಯಾ ಗಾಂಧಿಯವರು ಪಕ್ಷದ ಅಧ್ಯಕ್ಷರ ಆಯ್ಕೆಯಲ್ಲಿ ಹಾಗೂ ಪಕ್ಷದ ಕಾರ್ಯಚಟುವಟಿಕೆಯಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವುದು ಎಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಲ್ಮಾನ್ ಖುರ್ಶಿದ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾವು ಯಾಕೆ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದೇವೆ ಎಂಬುದನ್ನು ಚರ್ಚಿಸಲು ಸಹ ಯಾರೂ ಒಟ್ಟಿಗೆ ಸೇರಿಲ್ಲ. ನಮ್ಮ ನಾಯಕರು ಪಲಾಯನ ಮಾಡಿರುವುದೇ ಬಹುದೊಡ್ಡ ಸಮಸ್ಯೆಯಾಗಿದೆ. ಅಲ್ಲದೆ ಈ ವರೆಗೆ ಪಕ್ಷದ ಅಧ್ಯಕ್ಷರನ್ನು ನೇಮಿಸಿಲ್ಲ, ಬಹುಶಃ ಅಕ್ಟೋಬರ್‍ನಲ್ಲಿ ನಡೆಯುತ್ತಿರುವ ಕೆಲವು ರಾಜ್ಯಗಳ ಚುನಾವಣೆ ನಂತರ ಆಯ್ಕೆ ಮಾಡುತ್ತಾರೋ ಗೊತ್ತಿಲ್ಲ ಎಂದು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಖುರ್ಶಿದ್  ಅಭಿಪ್ರಾಯ ವ್ಯಕ್ತಪಡಿಸಿದರು.

salman khurshid

ಸೋನಿಯಾಗಾಂಧಿಯವರು ಈ ನಿಟ್ಟಿನಲ್ಲಿ ಹೆಜ್ಜೆ ಹಾಕಿದರೂ ಸಹ ನಂತರ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸೋತಿರುವ ಕುರಿತು ನಾವು ವಿಸ್ತೃತ ಚರ್ಚೆ ನಡೆಸಬೇಕಿತ್ತು. ಆದರೆ ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಪಲಾಯನ ಮಾಡಿದರು ಎಂದು ಖುರ್ಶಿದ್ ಅಸಮಾಧಾನ ವ್ಯಕ್ತಪಡಿಸಿದರು.

ಸಂದರ್ಶನದಲ್ಲಿ ಕಾಂಗ್ರೆಸ್ ಸಮಸ್ಯೆಗಳ ಕುರಿತು ಮಾತನಾಡುವ ಮೂಲಕ ಖುರ್ಶಿದ್ ಅವರು ಅತ್ಯಂತ ಹಳೇಯ ಪಕ್ಷಕ್ಕೆ ಎದುರಾಗಿರುವ ಅಸ್ತಿತ್ವದ ಕುರಿತ ಬಿಕ್ಕಟ್ಟಿನ ಬಗ್ಗೆ ಇರುವ ಆತಂಕವನ್ನು ಇನ್ನೂ ದ್ವಿಗುಣಗೊಳಿಸಿದ್ದಾರೆ.

ನಮ್ಮ ಪಕ್ಷ ಇಂದು ಯಾವ ಮಟ್ಟದಲ್ಲಿದೆ ಎಂಬುದನ್ನು ನೆನೆದರೆ ತುಂಬಾ ನೋವಾಗುತ್ತದೆ, ಅಷ್ಟೇ ಕಾಳಜಿಯೂ ಇದೆ. ಏನೇ ಆಗಲಿ ನಾವು ಪಕ್ಷವನ್ನು ಬಿಟ್ಟು ಹೋಗುವುದಿಲ್ಲ. ಕೆಲವರು ಪಕ್ಷದಿಂದ ಎಲ್ಲವನ್ನೂ ಪಡೆದು ಇದೀಗ ಬೇರೆ ಪಕ್ಷಗಳಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಪಕ್ಷಾಂತರವಾಗುತ್ತಿದ್ದಾರೆ ಎಂದು ಹರಿಹಾಯ್ದರು.

Salman Khurshid: This is perhaps the only time in history that a major defeat has not caused the party to lose confidence in their leader. If he had stayed&was around, we would've understood better the causes of our defeat & be better prepared to fight the battles in coming times pic.twitter.com/egG0rLnTIo

— ANI (@ANI) October 9, 2019

ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡದಂತೆ ರಾಹುಲ್ ಗಾಂಧಿ ಅವರಿಗೆ ಎಷ್ಟೇ ಕೇಳಿಕೊಂಡರೂ ಅವರು ಕೇಳಲಿಲ್ಲ. ಅವರೇನಾದರೂ ಅಧ್ಯಕ್ಷರಾಗಿ ಮುಂದುವರಿದಿದ್ದರೆ ಚುನಾವಣೆಯ ನಂತರದ ಮರಣೋತ್ತರ ಪರೀಕ್ಷೆಯನ್ನು ಸರಿಯಾಗಿ ನಡೆಸಬಹುದಿತ್ತು. ರಾಹುಲ್ ಗಾಂಧಿ ಈಗ ಪಕ್ಷದ ಅಧ್ಯಕ್ಷರಲ್ಲ. ಆದರೆ ಈಗಲೂ ಅವರು ನಮ್ಮ ಪಕ್ಷದ ಪ್ರಮುಖ ನಾಯಕರು. ಒಂದು ದೊಡ್ಡ ಸೋಲಿನಿಂದ ಪಕ್ಷದ ನಾಯಕನ ಮೇಲಿನ ವಿಶ್ವಾಸ ಕಳೆದುಕೊಳ್ಳಲು ಕಾರಣವಾದ ಪ್ರಕರಣ ಇತಿಹಾಸದಲ್ಲಿ ಇದೇ ಮೊದಲು. ಅವರು ಪಕ್ಷದಲ್ಲಿ ಉಳಿದುಕೊಂಡಿದ್ದರೆ, ಚರ್ಚಿಸಿ ನಮ್ಮ ಸೋಲಿನ ಕಾರಣಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಿದ್ದೆವು. ಮುಂಬರುವ ಚುನಾವಣೆಗಳನ್ನು ಎದುರಿಸಲು ಸನ್ನದ್ಧರಾಗುತ್ತಿದ್ದೆವು. ಇದೀಗ ಸೋನಿಯಾ ಗಾಂಧಿ ಅವರು ಶಾಶ್ವತ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಬೇಕು ಎಂದು ಒತ್ತಿ ಹೇಳಿದರು.

ನಮಗೆ ಬಹಳ ಕಡಿಮೆ ಸಮಯವಿದೆ. ಅಲ್ಲದೆ, ಪಕ್ಷವು ಕೆಲವು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ನಮ್ಮ ನಾಯಕ ರಾಹುಲ್ ಗಾಂಧಿ ನಮ್ಮನ್ನು ತೊರೆದಿದ್ದರಿಂದ ನಿರ್ಧಾರ ಕೈಗೊಳ್ಳಲು ವಿಳಂಬವಾಗುತ್ತಿದೆ. ಅಧ್ಯಕ್ಷ ಸ್ಥಾನದಲ್ಲಿ ಅವರು ಇರಬೇಕೆಂಬುದು ನಮ್ಮ ಬಯಕೆಯಾಗಿದೆ ಎಂದು ತಿಳಿಸಿದರು.

Congress flag 2

66 ವರ್ಷದ ಖುರ್ಶಿದ್ ಅವರು ಉತ್ತರ ಪ್ರದೇಶದ ಕಾಂಗ್ರೆಸ್ ಹಿರಿಯ ನಾಯಕರಾಗಿದ್ದು, ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯುಪಿಯ 80 ಸ್ಥಾನಗಳ ಪೈಕಿ ಕಾಂಗ್ರೆಸ್ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಜಯಗಳಿಸಿತ್ತು. ರಾಹುಲ್ ಗಾಂಧಿ ಸಹ ಅಮೆಥಿ ಕ್ಷೇತ್ರದಲ್ಲಿ ಸೋಲುಂಡಿದ್ದರು. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ ನಡೆಸಿತ್ತು. ಆದರೂ ಸಹ ಕೇವಲ 52 ಸ್ಥಾನಗಳಲ್ಲಿ ಮಾತ್ರ ಜಯಗಳಿಸಲು ಸಾಧ್ಯವಾಗಿತ್ತು. ಬಿಜೆಪಿ 303 ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸಿತ್ತು.

TAGGED:congressLok Sabha ElectionsPublic TVRahul GandhiSalman khurshidಕಾಂಗ್ರೆಸ್ಪಬ್ಲಿಕ್ ಟಿವಿರಾಹುಲ್ ಗಾಂಧಿಲೋಕಸಭಾ ಚುನಾವಣೆಸಲ್ಮಾನ್ ಖುರ್ಶಿದ್
Share This Article
Facebook Whatsapp Whatsapp Telegram

Cinema Updates

Kamal Haasan Praveen Shetty Thug Life Movie
ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಮಾಡಿದ್ರೆ ಬೆಂಗಳೂರು ಬಂದ್: ಪ್ರವೀಣ್ ಶೆಟ್ಟಿ ಎಚ್ಚರಿಕೆ
3 hours ago
kamal haasan thug life
‘ಥಗ್‌ ಲೈಫ್‌’ ಟೀಂ ಉದ್ಧಟತನ ಬಟಾಬಯಲು – ಕನ್ನಡ ಬಿಟ್ಟು 4 ಭಾಷೆಗಳಿಗೆ ಸಿನಿಮಾ ಡಬ್‌
13 hours ago
Trisha
ಥಗ್‌ ಲೈಫ್ ಚಿತ್ರಕ್ಕೆ ʻಶುಗರ್‌ ಬೇಬಿʼ ಪಡೆದ ಸಂಭಾವನೆ ಎಷ್ಟು ಗೊತ್ತಾ?
14 hours ago
pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
18 hours ago

You Might Also Like

Auto driver Bellanduru
Bengaluru City

ಚಪ್ಪಲಿಯಿಂದ ಹೊಡೆದಿದ್ದು ತುಂಬಾ ಬೇಜಾರಾಗಿದೆ, ಯಾವ್ದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯಲ್ಲ: ಆಟೋ ಚಾಲಕ

Public TV
By Public TV
9 minutes ago
RCB Fan giving free chats
Bengaluru City

ಈ ಸಲ ಕಪ್ ನಮ್ದು, ಒನ್‌ ಡೇ ಪಾನಿಪುರಿ ನಿಮ್ದು..!- RCB ಅಭಿಮಾನಿಯಿಂದ ಫ್ರೀ ಚಾಟ್ಸ್

Public TV
By Public TV
12 minutes ago
Kalladka Prabhakar Bhat
Dakshina Kannada

ಪ್ರಚೋದನಕಾರಿ ಭಾಷಣ – ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಕೇಸ್‌ ದಾಖಲು

Public TV
By Public TV
50 minutes ago
Weather 1
Bengaluru City

ಜೂ.8ರವರೆಗೆ ರಾಜ್ಯದಲ್ಲಿ ಸಾಧಾರಣ ಮಳೆ

Public TV
By Public TV
2 hours ago
One 8 commune bar
Bengaluru City

ಕೊಹ್ಲಿ ಮಾಲೀಕತ್ವದ ಬೆಂಗ್ಳೂರು ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್

Public TV
By Public TV
2 hours ago
Shreyas Iyer
Cricket

ಮುಂಬೈ ವಿರುದ್ಧ ಪಂಜಾಬ್‌ಗೆ ಜಯ – ಐಪಿಎಲ್‌ನಲ್ಲಿ ನಾಳೆ ಆರ್‌ಸಿಬಿ Vs ಕಿಂಗ್ಸ್‌ ಫೈನಲ್‌

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?