Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಜಿಯೋ ಉಚಿತ ಕರೆ ಇಲ್ಲ, ಹೊರ ಹೋಗುವ ಬೇರೆ ಟೆಲಿಕಾಂ ಕರೆಗೆ ಶುಲ್ಕ – ಏನಿದು ಐಯುಸಿ?

Public TV
Last updated: October 9, 2019 9:13 pm
Public TV
Share
3 Min Read
Reliance jio 2
SHARE

ನವದೆಹಲಿ: ಜಿಯೋ ಸೇವೆ ಆರಂಭಗೊಂಡ ಬಳಿಕ ಇಲ್ಲಿಯವರೆಗೂ ಬೇರೆ ಟೆಲಿಕಾಂ ಕಂಪನಿಗಳಿಗೆ ಉಚಿತವಾಗಿ ಲಭ್ಯವಿದ್ದ ಹೊರ ಹೋಗುವ ಕರೆಗಳಿಗೆ ದರ ಅನ್ವಯವಾಗಲಿದೆ.

ಹೌದು. ಅಚ್ಚರಿಯ ಬೆಳವಣಿಗೆಯಲ್ಲಿ ಜಿಯೋ ಬೇರೆ ಟೆಲಿಕಾಂ ಕಂಪನಿಗಳಿಗೆ ಹೊರಹೋಗುವ ಎಲ್ಲ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ದರ ವಿಧಿಸಲಾಗುವುದು ಎಂದು ಪ್ರಕಟಿಸಿದೆ. ಇಲ್ಲಿಯವರೆಗೆ ಜಿಯೋ ಇಂಟರ್ ಕನೆಕ್ಟ್ ಯೂಸೇಜ್ ಚಾರ್ಜ್ (ಐಯುಸಿ) ವಿಧಿಸುತ್ತಿರಲಿಲ್ಲ. ಆದರೆ ಈಗ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ನಿಗದಿ ಪಡಿಸಿದಂತೆ ಐಯುಸಿ ವಿಧಿಸಲು ಜಿಯೋ ಮುಂದಾಗುತ್ತಿದೆ. ಬೇರೆ ಕಂಪನಿಗಳ ನಂಬರ್ ಗಳ ಕರೆಗಳಿಗೆ ಮಾತ್ರ ಶುಲ್ಕ ವಿಧಿಸಿದ್ದು ಜಿಯೋದಿಂದ ಜಿಯೋ ನಂಬರಿಗೆ ಹೋಗುವ ಕರೆಗಳು ಎಂದಿನಂತೆ ಉಚಿತವಾಗಿ ಇರಲಿದೆ.

All you need to know about IUC. pic.twitter.com/svdSsrmT5s

— Reliance Jio (@reliancejio) October 9, 2019

ಜಿಯೋ ಸೇವೆ ಆರಂಭಗೊಂಡ ಬಳಿಕ ಈ ಐಯುಸಿಯನ್ನು ತಗೆದು ಹಾಕಬೇಕೆಂದು ಟ್ರಾಯ್ ಮುಂದೆ ವಾದ ಮಂಡಿಸುತಿತ್ತು. ಆದರೆ ಬೇರೆ ಟೆಲಿಕಾಂ ಕಂಪನಿಗಳು ಐಯುಸಿಯನ್ನು ತೆಗೆದು ಹಾಕಬಾರದು ದರವನ್ನು ಹೆಚ್ಚಿಸಬೇಕು ಎಂದು ವಾದಿಸುತ್ತಿದ್ದವು. ಆದರೆ ಟ್ರಾಯ್ ಹಂತ ಹಂತವಾಗಿ ಐಯುಸಿ ದರವನ್ನು ಕಡಿತಗೊಳಿಸುತ್ತಿದ್ದು ಮುಂದಿನ ವರ್ಷದಲ್ಲಿ ಸಂಪೂರ್ಣವಾಗಿ ತೆಗೆದು ಹಾಕುವ ಸಾಧ್ಯತೆಯಿದೆ.

ಏನಿದು ಐಯುಸಿ?
ಇಂಟರ್ ಕನೆಕ್ಟ್ ಯೂಸೇಜ್ ಚಾರ್ಜ್(ಐಯುಸಿ) ಟ್ರಾಯ್ ನಿಗದಿ ಪಡಿಸುತ್ತದೆ. ಉದಾಹರಣೆಗೆ ಜಿಯೋ ಗ್ರಾಹಕರೊಬ್ಬರು ವೊಡಾಫೋನ್ ಗ್ರಾಹಕರಿಗೆ ಕರೆ ಮಾಡಿದರೆ ಜಿಯೋ ಟ್ರಾಯ್ ನಿಗದಿ ಪಡಿಸಿದ ಐಯುಸಿಯನ್ನು ವೊಡಾಫೋನ್ ಕಂಪನಿಗೆ ಪಾವತಿಸಬೇಕಾಗುತ್ತದೆ.

jio number one

2003ರಲ್ಲಿ ಒಳಬರುವ ಕರೆಯನ್ನು ಉಚಿತವಾಗಿ ನೀಡುವ ಸಲುವಾಗಿ ಟ್ರಾಯ್ ಐಯುಸಿಯನ್ನು ತಂದಿತ್ತು. 2004ರ ಫೆಬ್ರವರಿಯಲ್ಲಿ ಟ್ರಾಯ್ ಪ್ರತಿ ನಿಮಿಷಕ್ಕೆ 30 ಪೈಸೆ, 2009ರ ಏಪ್ರಿಲ್ ನಲ್ಲಿ 20 ಪೈಸೆ, 2015ರ ಮಾರ್ಚ್ ನಲ್ಲಿ 14 ಪೈಸೆ, ಪ್ರಸ್ತುತ ಈಗ 6 ಪೈಸೆ ಐಯುಸಿ ಬೆಲೆಯನ್ನು ಟ್ರಾಯ್ ನಿಗದಿಪಡಿಸಿದೆ.

ಐಯುಸಿಯಿಂದಾಗಿ ಏರ್ ಟೆಲ್, ವೊಡಾಫೋನ್ ಕಂಪನಿಗಳು ಸಾವಿರಾರು ಕೋಟಿ ರೂ. ಆದಾಯಗಳಿಸುತ್ತಿದೆ ಎನ್ನುವುದು ಜಿಯೋ ಆರೋಪ. ಕಳೆದ 3 ವರ್ಷಗಳಲ್ಲಿ ಜಿಯೋ ಐಯುಸಿಗೆಂದು ಒಟ್ಟು 12 ಸಾವಿರ ಕೋಟಿ ರೂ. ಹಣವನ್ನು ವಿವಿಧ ಟೆಲಿಕಾಂ ಕಂಪನಿಗಳಿಗೆ ಪಾವತಿಸಿದೆ. ಹೊರ ಹೋಗುವ ಕರೆಗಳು ಉಚಿತವಾಗಿ ಇರುವ ಕಾರಣ ಬೇರೆ ಕಂಪನಿಯ ಗ್ರಾಹಕರು ನಮ್ಮ ಕಂಪನಿಯ ಗ್ರಾಹಕರಿಗೆ ಮಿಸ್ ಕಾಲ್ ನೀಡುತ್ತಿದ್ದರು. ಇದರಿಂದಾಗಿ ನಮಗೆ ಭಾರೀ ನಷ್ಟವಾಗಿದೆ ಎಂದು ಜಿಯೋ ಹೇಳಿತ್ತು.

ಈ ಹಿಂದೆ ಭಾರತಿ ಎಂಟರ್ಪ್ರೈಸಸ್ ಮುಖ್ಯಸ್ಥ ಸುನೀಲ್ ಮಿತ್ತಲ್ ಟ್ರಾಯ್ ಮುಖ್ಯಸ್ಥರಿಗೆ ಪತ್ರ ಬರೆದು ಪ್ರಸ್ತುತ ಐಯುಸಿ ಕಡಿಮೆ ಇದೆ. ಪಾರದರ್ಶಕವಾಗಿ ಹೊಸ ಬೆಲೆಯನ್ನು ನಿಗದಿಪಡಿಸಬೇಕೆಂದು ಮನವಿ ಮಾಡಿದ್ದರು.

jio airtel vodafone idea

 

ಜಿಯೋ ವಿರೋಧ ಯಾಕೆ?
ಇಲ್ಲಿಯವರೆಗೆ ಟೆಲಿಕಾಂ ಕಂಪೆನಿಗಳು ಕರೆ ಮತ್ತು ಡೇಟಾ ಸೇವೆಗಳನ್ನು ಪ್ರತ್ಯೇಕವಾಗಿ ನಿಭಾಯಿಸುತಿತ್ತು. ಆದರೆ ಜಿಯೋ ಈ ಎರಡನ್ನೂ ಒಟ್ಟಿಗೆ ನಿಭಾಯಿಸುತ್ತದೆ. ಇದರಿಂದಾಗಿ ಖರ್ಚು ಕಡಿಮೆ ಆಗುತ್ತದೆ. ಡೇಟಾವನ್ನು ಬಳಸಿಕೊಂಡು ಕರೆ ಮಾಡುವ ತಂತ್ರಜ್ಞಾನವೇ ವಾಯ್ಸ್ ಓವರ್ ಲಾಂಗ್ ಟರ್ಮ್ ಎವಲ್ಯೂಶನ್(ಎಲ್‍ಟಿಇ). ಇದರಲ್ಲಿ ಕರೆಗೆ ಬೇರೆ, ಡೇಟಾಗೆ ಬೇರೆ ಎಂದು ಹಣ ನೀಡಬೇಕಿಲ್ಲ. ಡೇಟಾಗೆ ನೀಡಿದ ಹಣದಲ್ಲೇ ಕರೆಯನ್ನೂ ಉಚಿತವಾಗಿ ಮಾಡಬಹುದು. ಈ ಕಾರಣಕ್ಕಾಗಿ ಜಿಯೋ ಸಂಪೂರ್ಣವಾಗಿ ಐಯುಸಿಯನ್ನು ತೆಗೆದು ಹಾಕಬೇಕೆಂದು ವಾದ ಮಂಡಿಸುತ್ತಿದೆ. ಐಯುಸಿಯಿಂದ ನಮಗೆ ಹೊರೆಯಾಗುತ್ತಿದೆ. ಇತರೇ ಟೆಲಿಕಾಂ ಕಂಪೆನಿಗಳು ತಮ್ಮ ಆದಾಯವನ್ನು ಹೆಚ್ಚಿಸಲು ಮಾಡಿಕೊಂಡ ತಂತ್ರ ಎಂದು ಜಿಯೋ ವಾದಿಸುತ್ತಿದೆ.

ಜಿಯೋ ಕರೆ ಪ್ಲಾನ್ ಹೀಗಿದೆ
ಐಯುಸಿ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಜಿಯೋ ಕರೆಯ ಪ್ಲಾನ್ ಬಿಡುಗಡೆ ಮಾಡಿದೆ. ಈ ಪ್ಲಾನ್ ಖರೀದಿಸಿದ ಗ್ರಾಹಕರಿಗೆ ಡೇಟಾವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಹೇಳಿದೆ. 10 ರೂ ಪ್ಲಾನ್ ಹಾಕಿದರೆ 124 ನಿಮಿಷ(1 ಜಿಬಿ ಉಚಿತ), 20 ರೂ. ಪ್ಲಾನಿಗೆ 249 ನಿಮಿಷ(2ಜಿಬಿ ಡೇಟಾ), 50 ರೂ. 656 ನಿಮಿಷ(5ಜಿಬಿ ಡೇಟಾ), 100 ರೂ. ಪ್ಲಾನ್ ಹಾಕಿದರೆ 1,362 ನಿಮಿಷ(10 ಜಿಬಿ) ಮಾತನಾಡಬಹುದಾಗಿದೆ.

TAGGED:airteliucjioreliance jiotechVodafoneಜಿಯೋಜಿಯೋ ಕರೆಮುಕೇಶ್ ಅಂಬಾನಿರಿಲಯನ್ಸ್ವೊಡಾಫೋನ್
Share This Article
Facebook Whatsapp Whatsapp Telegram

You Might Also Like

Metro Nandini Shop
Bengaluru City

ಅಮೂಲ್‌ಗೆ ಮಣೆಹಾಕಿದ್ದ BMRCLಗೆ ಮುಖಭಂಗ- ಮೆಟ್ರೋ ನಿಲ್ದಾಣಗಳಲ್ಲಿ 20 ನಂದಿನಿ ಮಳಿಗೆ ತೆರೆಯಲು ಅವಕಾಶ

Public TV
By Public TV
32 minutes ago
Vishwas Kumar Ramesh the sole survivor of the Air India plane crash
Latest

ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಸಾವು ಗೆದ್ದು ಬಂದಿದ್ದ ವಿಶ್ವಾಸ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Public TV
By Public TV
35 minutes ago
Rashmika and Vijay Devarakonda
Cinema

ಏನಿಲ್ಲ ಏನಿಲ್ಲ ಅನ್ನುತ್ತಲೇ ಒಂದೇ ಕಾರ್‌ನಲ್ಲಿ ಹೊರಟ ರಶ್ಮಿಕಾ, ದೇವರಕೊಂಡ

Public TV
By Public TV
52 minutes ago
Vidhana Soudha
Bengaluru City

ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ರದ್ದು – ವಿಧಾನಸೌಧಕ್ಕೆ ಶಿಫ್ಟ್

Public TV
By Public TV
53 minutes ago
DK Shivakumar 8
Bengaluru City

ನಾವಿರುವವರೆಗೂ ಎಸ್ಕಾಂಗಳ ಖಾಸಗೀಕರಣಕ್ಕೆ ಅವಕಾಶವಿಲ್ಲ: ಡಿ.ಕೆ ಶಿವಕುಮಾರ್

Public TV
By Public TV
60 minutes ago
Botad Flood
Crime

ಗುಜರಾತ್‌ನಲ್ಲಿ ಪ್ರವಾಹ ಪರಿಸ್ಥಿತಿ – 9 ಜನರಿದ್ದ ಇಕೋ ಕಾರು ನೀರುಪಾಲು, ನಾಲ್ವರು ಸಾವು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?