Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‍ವೈ ಆಯ್ತು ಈಗ ಅವರ ಬೆಂಬಲಿಗರು ಕೂಡ ಟಾರ್ಗೆಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಎಸ್‍ವೈ ಆಯ್ತು ಈಗ ಅವರ ಬೆಂಬಲಿಗರು ಕೂಡ ಟಾರ್ಗೆಟ್

Bengaluru City

ಬಿಎಸ್‍ವೈ ಆಯ್ತು ಈಗ ಅವರ ಬೆಂಬಲಿಗರು ಕೂಡ ಟಾರ್ಗೆಟ್

Public TV
Last updated: October 13, 2019 5:13 pm
Public TV
Share
3 Min Read
bjp office
SHARE

-ಲಿಂಗಾಯತರು ಬಿಜೆಪಿ ಕಚೇರಿಗೆ ಬರಬೇಡಿ
-ರಾಜ್ಯ ಬಿಜೆಪಿ ಕಚೇರಿಯಲ್ಲಿ ಜಾತಿ ರಾಜಕೀಯ

ಬೆಂಗಳೂರು: ರಾಜ್ಯ ಬಿಜೆಪಿ ಕಚೇರಿಯಲ್ಲಿ ಜಾತಿ ರಾಜಕೀಯ ನಡಿಯುತ್ತಿರುವ ಆರೋಪ ಕೇಳಿಬರುತ್ತಿದ್ದು, ಸಿಎಂ ಯಡಿಯೂರಪ್ಪ ಅಷ್ಟೇ ಅಲ್ಲ ಸಿಎಂ ಬೆಂಬಲಿಗರನ್ನೂ ಕೂಡ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಬಿಜೆಪಿ ಕಾರ್ಯಕರ್ತರೊಬ್ಬರು ಆರೋಪಿಸಿದ್ದಾರೆ.

ಯಡಿಯೂರಪ್ಪನವರ ಆಪ್ತರೆಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಕೆಲವರಿಗೆ ಗೇಟ್ ಪಾಸ್ ನೀಡಲಾಗಿದೆ. ಹಾಗೆಯೇ ಲಿಂಗಾಯತರು ಬಿಜೆಪಿ ಕಚೇರಿಗೆ ಬರಬೇಡಿ ಎನ್ನುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ಹಾಗೂ ಸಿಎಂ ಬೆಂಬಲಿಗ ನಂಜುಂಡಸ್ವಾಮಿ ಆರೋಪಿಸಿದ್ದಾರೆ. ಬಹಿರಂಗವಾಗಿ ವೀಡಿಯೋದಲ್ಲಿ ಈ ಬಗ್ಗೆ ಪ್ರಸ್ತಾಪಿಸಿರುವ ನಂಜುಂಡಸ್ವಾಮಿ, ಸಿಎಂ ಬೆಂಬಲಿಗರು ಎಂಬ ಕಾರಣಕ್ಕೆ ತಮ್ಮ ಪಕ್ಷದಲ್ಲಿ ಭೇದಭಾವ ಮಾಡಲಾಗುತ್ತಿದೆ ಎಂದು ಹೇಳಿಕೊಂಡರು.

bjp activist

ಲಿಂಗಾಯತರು, ಯಡಿಯೂರಪ್ಪನವರು ಆಪ್ತರೆಂದು ನಮಗೆ ಬಿಜೆಪಿ ಕಚೇರಿಯಲ್ಲಿ ಪ್ರವೇಶ ನೀಡುತ್ತಿಲ್ಲ ಎಂದು ನಂಜುಂಡಸ್ವಾಮಿ ಬಹಿರಂಗ ಆರೋಪಿ ಮಾಡುತ್ತಿದ್ದಾರೆ. ಈ ಹಿಂದೆ ಬಿಜೆಪಿ ಕಚೇರಿಯಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಿದ್ದ ಕೆಲಸಗಾರರನ್ನು ಕೂಡ ಕೆಲಸದಿಂದ ತೆಗೆದಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿತ್ತು. ಇದೀಗ ಬಿಜೆಪಿ ಕಚೇರಿಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ನಂಜುಂಡಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

14 ವರ್ಷದಿಂದ ಬಿಜೆಪಿ ಕಾರ್ಯಕರ್ತನಾಗಿ ನಾನು ಕೆಲಸ ಮಾಡಿದ್ದು ಸಾರ್ಥಕವಾಯ್ತು ಎಂದುಕೊಂಡಿದ್ದೆ, ಆದ್ರೆ ಅದು ಸಾರ್ಥಕವಾಗಿಲ್ಲ. ಬಿಜೆಪಿ ನಮ್ಮ ಹೆತ್ತ ತಾಯಿ ಎಂದು ತಿಳಿದುಕೊಂಡಿದ್ದೆವು. ಆದ್ರೆ ಬಿಜೆಪಿಯಲ್ಲಿ ಯಡಿಯೂರಪ್ಪ ಅವರು ಅಧ್ಯಕ್ಷರಾಗಿದ್ದಾಗ ಪಕ್ಷವನ್ನು ಬೆಳೆಸಿದರು. ಆದರೆ ಪ್ರಸ್ತುತವಾಗಿ ಬಂದಿರುವ ಅಧ್ಯಕ್ಷರು ಲಿಂಗಾಯತರನ್ನ ಟಾರ್ಗೆಟ್ ಮಾಡಿಕೊಂಡು ಸುಮಾರು 5ರಿಂದ 6 ಮಂದಿ ಕೆಲಸಗಾರರನ್ನು ತೆಗೆದು ಹಾಕಿದ್ದಾರೆ. ಲಿಂಗಾಯತರು ಬಿಜೆಪಿ ಕಚೇರಿಗೆ ಬರಬೇಡಿ ಎನ್ನುತ್ತಾರೆ. 14 ವರ್ಷ ನಾವು ದುಡಿದ ಶ್ರಮ ಎಲ್ಲಿ ಹೋಯ್ತು? ಬಿಎಸ್‍ವೈ ಬೆಂಬಲಿಗರು ಎಂದು ಟಾರ್ಗೆಟ್ ಮಾಡಲಾಗುತ್ತಿದೆ. ಏಕಾಏಕಿ ಕೆಲಸದಿಂದ ಕೆಲಸಗಾರರನ್ನು ತೆಗೆದು ಹಾಕಿದರೆ ಅವರು ಹಾಗೂ ಅವರ ಕುಟುಂಬದ ಸ್ಥಿತಿ ಏನು ಎಂದು ಪ್ರಶ್ನಿಸಿದ್ದಾರೆ.

BSY 6

ಬಿಎಸ್‍ವೈ ಅಧ್ಯಕ್ಷರಾಗಿದ್ದಾಗ ಪಕ್ಷದಲ್ಲಿ ಎಲ್ಲಾ ಜಾತಿಯ ಸಿಬ್ಬಂದಿ ಕೂಡ ಕೆಲಸ ಮಾಡುತ್ತಿದ್ದರು. ಆದರೆ ಈಗ ಅವರು ಬರಬೇಡಿ, ನೀವು ಬರಬೇಡಿ ಎಂದು ಹೇಳುತ್ತಿದ್ದಾರೆ. ಹಾಗಾದರೆ ನಮ್ಮನ್ನು ಪಕ್ಷಕ್ಕೆ ಸದಸ್ಯರಾಗಿ ಮಾಡಿಕೊಂಡಿದ್ದು ಯಾಕೆ? ಎಂದು ಪ್ರಶ್ನಿಸಿ ಕಿಡಿಕಾರಿದ್ದಾರೆ. ಜೊತೆಗೆ ಕರ್ನಾಟಕದಲ್ಲಿ ಏನು ನಡೆಯುತ್ತಿದೆ ಎಂದು ಪ್ರಧಾನಿ ಮೋದಿ ಹಾಗೂ ಸಚಿವ ಅಮಿತ್ ಶಾ ಅವರಿಗೆ ಏನು ತಿಳಿಯುತ್ತೆ? ಯಡಿಯೂರಪ್ಪ ಇಲ್ಲವಾದರೆ ರಾಜ್ಯದಲ್ಲಿ ಬಿಜೆಪಿ ಸರ್ವನಾಶವಾಗಿಬಿಡುತ್ತೆ. ಉತ್ತರ ಕರ್ನಾಟಕ ನೆರೆ ಪರಿಹಾರ ಕೊಡಬೇಕು ಎಂದು ಬಿಎಸ್‍ವೈ ಮುನ್ನುಗ್ಗುತ್ತಿದ್ದಾರೆ. ಆದರೆ ಈಗ ಅಂಥವರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ತಮ್ಮ ಪಕ್ಷದ ವಿರುದ್ಧವೇ ಬಿಜೆಪಿ ಕಾರ್ಯಕರ್ತ ಕಿಡಿಕಾರಿದರು.

Nalin Kumar Kateel

ವಿಧಾನಸೌಧ, ವಿಧಾನಸಭೆಯಲ್ಲಿ ಯಾರೂ ಕೂಡ ಯಡಿಯೂರಪ್ಪ ಅವರನ್ನ ಬೈಯ್ಯುತ್ತಲ್ಲ. ಆದರೆ ನಮ್ಮ ಪಕ್ಷದಲ್ಲಿ ಸೇರಿಕೊಂಡಿರುವ ಕೆಲವು ಹುಳಗಳು ಸಿಎಂನಾ ಮೂಲೆಗುಂಪು ಮಾಡಲು ಪ್ಲಾನ್ ಹಾಕಿದ್ದಾರೆ ಎಂದರು. ಹಾಗೆಯೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಕೂಡ ಎಚ್ಚರಿಸಿದ್ದಾರೆ. ನೀವು ಹೀಗೆ ಕಚೇರಿಯಲ್ಲಿ ತಾರತಮ್ಯ ಮಾಡುತ್ತೀರಿ, ಲಿಂಗಾಯರು ಎಂದು ಬೇಧ ಮಾಡಿದರೆ ನಿಜವಾಗಿಯೂ ಮುಂದಿನ ಚುವಾವಣೆಯಲ್ಲಿ 40%ದಷ್ಟು ಕೂಡ ಮತ ಬೀಳಲ್ಲ. ಬಿಎಸ್‍ವೈ ಪಕ್ಷ ಕಟ್ಟಿದ್ದಾಗ ಬಿಜೆಪಿ ಸ್ಥಿತಿ ಹೇಗಿತ್ತು ಈಗ ಹೇಗಿದೆ ಎನ್ನುವುದನ್ನು ಮರೆಯಬೇಡಿ. ನೀವು ಹೀಗೆ ತಾರತಮ್ಯ ಮಾಡುತ್ತಿದ್ದರೆ ಬಜೆಪಿ ವಿರೋಧ ಪಕ್ಷದಲ್ಲಿ ಕೂರುವಷ್ಟು ಸೀಟು ಗೆಲ್ಲಲ್ಲ ಎಂದರು.

Amit Shah Modi

ಹಾಗೆಯೇ ಅಮಿತ್ ಶಾ ಅವರ ಬಗ್ಗೆ ಮಾತನಾಡಿ, ನೀವು ನೆರೆ ವೀಕ್ಷಣೆಗೆ ಬಂದು ಕರ್ನಾಟಕದ ಪರಿಸ್ಥಿತಿ ಬಗ್ಗೆ ತಿಳಿದಿದ್ದೀರಾ. ಆದರೂ ಪರಿಹಾರ ಬಿಡುಗಡೆ ಮಾಡಲು ಏಕೆ ತಡಮಾಡಿದ್ದೀರಾ? ಬೇರೆ ರಾಜ್ಯಗಳಿಗೆ ಎಂದು ರೀತಿ, ಕರ್ನಾಟಕ್ಕೆ ಒಂದು ರೀತಿ ಮಾಡುವುದು ಸರಿಯಲ್ಲ ಎಂದಿದ್ದಾರೆ. ಈವರೆಗೂ ಬಿಎಸ್‍ವೈ ಜಾತಿ ರಾಜಕೀಯ ಮಾಡಿಲ್ಲ, ಮುಂದೆಯೂ ಮಾಡಲ್ಲ. ಇದನ್ನು ನಳಿನ್ ಕುಮಾರ್ ಕಟೀಲ್ ತಿಳಿದುಕೊಳ್ಳಬೇಕು. ಯಡಿಯೂರಪ್ಪ ಇದ್ರೆ ಬಿಜೆಪಿ, ಈಗ ಅವರು ಬೇಡ ಎಂದು ಬೇರೆಯವರು ತಿಳಿದುಕೊಂಡಿದ್ದರೆ ಅದು ಅವರ ಮೂರ್ಖತನ. ಮೋದಿ ಅವರೊಬ್ಬರನ್ನೇ ನೋಡಿ ಬಿಜೆಪಿಗೆ ಜನ ಮತ ಹಾಕಿಲ್ಲ. ಕನಾಟಕದಲ್ಲಿ ಯಡಿಯೂರಪ್ಪ ಅವರನ್ನು ನೋಡಿ ಮತ ಹಾಕಿದ್ದಾರೆ. ಮೋದಿ ಅವರಿಗೆ ಹಳ್ಳಿಗಳ ಬಗ್ಗೆ ಏನು ಗೊತ್ತಿದೆ ಎಂದು ಹರಿಹಾಯ್ದಿದ್ದಾರೆ.

TAGGED:bjpbjp activistbjp officelingayatNalin Kumar KateelPublic TVYediyurappaನಳಿನ್ ಕುಮಾರ್ ಕಟೀಲ್ಪಬ್ಲಿಕ್ ಟಿವಿಬಿಜೆಪಿಬಿಜೆಪಿ ಕಚೇರಿಬಿಜೆಪಿ ಕಾರ್ಯಕರ್ತಯಡಿಯೂರಪ್ಪಲಿಂಗಾಯತರು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Hardik Pandya
Cricket

IPL 2026 | DC vs MI ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಆಡ್ತಿಲ್ಲ ಯಾಕೆ?

Public TV
By Public TV
5 minutes ago
Vatal Nagaraj Tamate Protest
Districts

ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ತಮಟೆ ಚಳುವಳಿ

Public TV
By Public TV
16 minutes ago
US Israeli strikes on Irans Bushehr nuclear plant
Latest

ಇರಾನ್‌ನ ಬುಶೆಹರ್‌ ಪರಮಾಣು ಸ್ಥಾವರದ ಮೇಲೆ ಯುಎಸ್‌-ಇಸ್ರೇಲ್‌ ದಾಳಿ; ಓರ್ವ ಸಾವು

Public TV
By Public TV
39 minutes ago
Auto Gas Problem
Bengaluru City

ರಾಜ್ಯದಲ್ಲಿ ತಪ್ಪದ ಗ್ಯಾಸ್ ಪ್ರಾಬ್ಲಂ – ಬಂಕ್‌ಗಳ ಎದುರು ಆಟೋಗಳ ಸರತಿಸಾಲು

Public TV
By Public TV
44 minutes ago
PSI Mangalamma
Districts

ತುಮಕೂರಲ್ಲಿ ಮಹಿಳಾ ಪಿಎಸ್‌ಐ ನಾಪತ್ತೆ – ಮಗಳಿಂದ ದೂರು ದಾಖಲು

Public TV
By Public TV
1 hour ago
Shreyas Iyer 2
Cricket

ಶ್ರೇಯಸ್‌ ಅಯ್ಯರ್‌ಗೆ 24 ಲಕ್ಷ ದಂಡ – ಪಂಜಾಬ್‌ ಕ್ಯಾಪ್ಟನ್‌ಗೆ ಕಾಡ್ತಿದೆ ಬ್ಯಾನ್‌ ಭೀತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?